Homeಮುಖಪುಟಜಾರ್ಖಂಡ್ ನಲ್ಲಿ ಸೋಲಿನತ್ತ ಬಿಜೆಪಿ... ಕಾರಣಗಳೇನು ಗೊತ್ತೆ?

ಜಾರ್ಖಂಡ್ ನಲ್ಲಿ ಸೋಲಿನತ್ತ ಬಿಜೆಪಿ… ಕಾರಣಗಳೇನು ಗೊತ್ತೆ?

- Advertisement -
- Advertisement -

ಜಾರ್ಖಂಡ್ ರಾಜ್ಯದ ವಿಧಾನಸಭೆಯ 81 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು ಕಾಂಗ್ರೆಸ್-ಜೆಎಂಎಎಂ-ಆರ್‌ಜೆಡಿ ಮೈತ್ರಿ ಕೂಟ ಸರಳ ಬಹುಮತದತ್ತ ಹೆಜ್ಜೆ ಇಟ್ಟಿದೆ. ಕಳೆದ ಬಾರಿ ಅಧಿಕಾರ ಹಿಡಿದಿದ್ದ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದೆ.

ಜಾರ್ಖಂಡ್ ರಾಜ್ಯದಲ್ಲಿ ಐದು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಬಿಜೆಪಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಘಟಾನುಘಟಿ ನಾಯಕರೆಲ್ಲರೂ ಪ್ರಚಾರ ನಡೆಸಿದ್ದರೂ ಕಳೆದ ಸ್ಥಾನಗಳನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ವಿಫಲವಾಗಿದೆ.

ಬಿಜೆಪಿಯ ನಾಯಕರು ರಾಷ್ಟ್ರೀಯ ಪೌರತ್ವ ನೋಂದಣಿ, ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯತೆ, ಕಾಶ್ಮೀರ ಮೊದಲಾದ ರಾಷ್ಟ್ರೀಯ ವಿಷಯಗಳನ್ನು ಚುನಾವಣಾ ಸಮಯದಲ್ಲಿ ಉಲ್ಲೇಖಿಸಿ ಮತಯಾಚಿಸಿದ್ದರು. ಆದರೆ ರಾಷ್ಟ್ರೀಯ ವಿಷಯಗಳಿಗೆ ಮತದಾರ ಆಸಕ್ತಿ ವಹಿಸದೇ ಇರುವುದು ಈ ಚುನಾವಣೆಯ ಫಲಿತಾಂಶದಿಂದ ವ್ಯಕ್ತವಾಗಿದೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಯೋಜನೆಗಳು ಅಷ್ಟಾಗಿ ಜನರಿಗೆ ಇಷ್ಟವಾಗಿಲ್ಲ. ಬದಲಿಗೆ ಸ್ಥಳೀಯ ವಿಷಯಗಳಿಗೆ ಮತದಾರರು ಹೆಚ್ಚಿನ ಆದ್ಯತೆ ನೀಡಿದಂತೆ ಕಂಡು ಬಂದಿದೆ. ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದರೂ ಅಧಿಕಾರ ಹಿಡಿಯಲು ಸಾಧ್ಯವಾಗುತ್ತಿಲ್ಲ. ಈ ಬಾರಿ ಬಿಜೆಪಿ ಯಾರೊಂದಿಗೂ ಮೈತ್ರಿ ಮಾಡಿಕೊಂಡಿಲ್ಲದಿರುವುದು ಬಿಜೆಪಿ ಹಿನ್ನಡೆಗೆ ಕಾರಣವಾಗಿದೆ.

ಕಾಂಗ್ರೆಸ್-ಜೆಎಂಎಂ-ಆರ್ ಜೆಡಿ ಮೈತ್ರಿ ಕೂಡ ಸರಳ ಬಹುಮತ ಪಡೆಯುವತ್ತ ಹೆಜ್ಜೆ ಹಾಕಿದೆ. ನಾಲ್ಕನೇ ಸುತ್ತಿನ ಮತೆ ಎಣಿಕೆಯಲ್ಲಿಯೂ ಅದು ಮುನ್ನಡೆ ಸಾಧಿಸಿದೆ. ಪ್ರತಿಪಕ್ಷದಲ್ಲಿದ್ದ ಈ ಮೈತ್ರಿ ಕೂಟ ಅಧಿಕಾರಕ್ಕೆ ಏರುವ ಎಲ್ಲಾ ಲಕ್ಷಣಗಳು ಕಂಡುಬಂದಿದೆ. ಆದಿವಾಸಿಗಳು, ಅರಣ್ಯವಾಸಿಗಳ ಸ್ಥಳಾಂತರ, ಆಹಾರ ಭದ್ರತೆ ಕಾಯ್ದೆ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು ಹಸಿವಿನಿಂದ ಹಲವರು ಮೃತಪಟ್ಟಿದ್ದರು. ಈ ವಿಷಯವನ್ನು ಕಾಂಗ್ರೆಸ್-ಜೆಎಂಎಂ-ಆರ್ ಜೆಡಿ ಚುನಾವಣೆಯಲ್ಲಿ ಪ್ರಸ್ತಾಪಿಸಿದ್ದವು.

ಅಷ್ಟೇ ಅಲ್ಲ ಪಡಿತರ ಚೀಟಿ, ಪಿಂಚಣಿ ಮತ್ತು ಉದ್ಯೋಗ ಖಾತ್ರಿ ಯೋಜನೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂಬ ಕಾರಣ ನೀಡಿದ ಸರ್ಕಾರ ಸುಮಾರು 11.64 ಲಕ್ಷ ಕಾರ್ಡುಗಳನ್ನು ರದ್ದುಪಡಿಸಿತ್ತು. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಇದೊಂದು ಪ್ರಮಾದ ಎಂದು ಹೇಳಿದ್ದರು. ಈ ವಿಷಯವನ್ನು ಕೂಡ ಪ್ರತಿಪಕ್ಷಗಳು ಚುನಾವಣೆಯಲ್ಲಿ ಪ್ರಸ್ತಾಪಿಸಿ ಜನರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುವುದರಿಂದ ಜೆಎಂಎಂ ಮೈತ್ರಿ ಕೂಟ ಅಧಿಕಾರ ಹಿಡಿಯಲು ಸಾಧ್ಯವಾಗಿದೆ.

ಆದಿವಾಸಿಗಳು ಭೂಮಿಯ ಮಾಲಿಕತ್ವವನ್ನು ಹೊಂದಿದ್ದು ಅವರ ಭೂಮಿಯನ್ನು  ಕೈಗಾರಿಕೆಗಳಿಗೆ ನೀಡಲು ಮುಂದಾಗಿತ್ತು. ಇದು ಆದಿವಾಸಿಗಳು ಮತ್ತು ಅರಣ್ಯವಾಸಿಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಆದಿವಾಸಿಗಳೇ ಹೆಚ್ಚು ಸಂಖ್ಯೆಯಲ್ಲಿರುವ ಜಾರ್ಖಂಡ್ ನಲ್ಲಿ ಅವರ ಅಸಮಾಧಾನ ಜೆಎಂಎಎಂ ಮೈತ್ರಿಕೂಟಕ್ಕೆ ವರವಾಗಿ ಪಡಿಣಮಿಸಿದೆ.

ಜಾರ್ಖಂಡ್ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಆರ್ ಜೆಡಿ ಐದು ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್ ತನ್ನ ಸ್ಥಾನಗಳನ್ನು ಹೆಚ್ಚಿಸಿಕೊಂಡಿದೆ. ಜಾರ್ಖಂಡ್‌ ಮುಕ್ತಿ ಮೋರ್ಚಾ ಕೂಡ ತನ್ನ ಅಸ್ತಿತ್ವವನ್ನು ಸಾಬೀತುಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...