Homeಮುಖಪುಟಜಾರ್ಖಂಡ್‌ನಲ್ಲಿ ಹುಲ್ ಜೋಹಾರ್! ಬಿರ್ಸಾ ನೆಲ ಆಯ್ದುಕೊಂಡಿದ್ದು ಜಲ್ ಜಂಗಲ್ ಜಮೀನ್..

ಜಾರ್ಖಂಡ್‌ನಲ್ಲಿ ಹುಲ್ ಜೋಹಾರ್! ಬಿರ್ಸಾ ನೆಲ ಆಯ್ದುಕೊಂಡಿದ್ದು ಜಲ್ ಜಂಗಲ್ ಜಮೀನ್..

ದೇಶಾದ್ಯಂತ ಪೌರತ್ವ ಕಾಯಿದೆ(ಸಿಏಏ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯ ವಿರುದ್ಧ ಆಗುತ್ತಿರುವ ಪ್ರತಿಭಟನೆಗಳ ನಡುವೆಯೇ ಈ ಫಲಿತಾಂಶಗಳು ಬಂದಿವೆ. ಹಾಗಾಗಿ ಈ ಪ್ರಯೋಗದ ರೂವಾರಿಗಳಾದ ಮೋದಿ-ಶಾ ಜೋಡಿಗೆ ಇದು ಡಬಲ್ ಹಿನ್ನಡೆಯಾಗಿದೆ

- Advertisement -
- Advertisement -

ರಘುಬರ್ ದಾಸ್ ನೇತೃತ್ವದ ಬಿಜೆಪಿ ಸರಕಾರವು ಜಾರ್ಖಂಡ್‌ನಲ್ಲಿ ಸೋಲು ಕಂಡಿದೆ. ಇದನ್ನು ಆರ್‌ಎಸ್‌ಎಸ್‌ನ ಹಿಂದುತ್ವ ಪ್ರಯೋಗಶಾಲೆಗಳಲ್ಲಿ ಒಂದೆಂದೂ ಕರೆಯಲಾಗಿತ್ತು. ಹಾಗಾಗಿ ಈ ಚುನಾವಣೆ ಕೇವಲ ರಾಜ್ಯದ ಆದಿವಾಸಿ ವರ್ಗಕ್ಕೆ ಸೇರದ ಮೊದಲ ಮುಖ್ಯಮಂತ್ರಿಯ ನಿರ್ಗಮನವಷ್ಟೇ ಅಲ್ಲದೇ, ಬಿಜೆಪಿಯ ಸಾಮಾಜಿಕ ಸಮೀಕರಣದ ವಿನ್ಯಾಸಗಳಿಗೂ ಸೋಲು ಎನ್ನಬಹುದಾಗಿದೆ. ಇದು ಕೇವಲ ಬಿಜೆಪಿಯ ಬೆಂಬಲಿಗರಿಗೆ ಮಾತ್ರವಲ್ಲ, ಮೋದಿ ಮತ್ತು ಅಮಿತ್ ಶಾರ ಚಾಣಕ್ಯ ನೀತಿ ಮತ್ತು ಅವರ ಸೋಲಲಾರರು ಎಂದು ನಂಬಿದವರಿಗೂ ಆಘಾತ ತಂದುಕೊಟ್ಟಿದೆ.

ಆಡಳಿತವಿರೋಧಿ ಅಲೆ, ಆದಿವಾಸಿ ಸಮುದಾಯಕ್ಕೆ ಸೇರದ ಮುಖ್ಯಮಂತ್ರಿ ಮತ್ತು ಬುಡಕಟ್ಟು ನೀತಿಗಳು

ಜಾರ್ಖಂಡ್‌ನಲ್ಲಿ ಬುಡಕಟ್ಟು ಸಮುದಾಯಗಳ ಅನುಪಾತ 26-30%ರಷ್ಟು. ಪರಿಶಿಷ್ಟ ಸಮುದಾಯಗಳಿಗೆ ಮೀಸಲಾದ 28 ಕ್ಷೇತ್ರಗಳಲ್ಲಿ ಜೆಎಮ್‌ಎಮ್-ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಯು 25ರಲ್ಲಿ ಗೆಲುವು ಸಾಧಿಸಿದೆ. 2014ರಲ್ಲಿ ಬಿಜೆಪಿಯು 11 ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು.

ಅಲ್ಲಿ ಆಗಿದ್ದೇನು?

ಆದಿವಾಸಿಗಳ ಭೂಮಿಯನ್ನು ಕಬಳಿಸಲು ಸುಲಭವಾಗುವಂತೆ ಮಾಡಿದ ರಘುಬರ್ ದಾಸ್ ಅವರ ಕ್ರಮಗಳಿಂದ ಸಿಟ್ಟು ಮತ್ತು ತೀವ್ರ ಅಸಮಾಧಾನ ಉಂಟಾಗಿತ್ತು. ಪರಿಶಿಷ್ಟ ಸಮುದಾಯಗಳ ಭೂಕಬಳಿಕೆಯನ್ನು ತಡೆಯಲು ಇದ್ದ ಬುಡಕಟ್ಟು ಟೆನನ್ಸಿ ಕಾಯಿದೆಗೆ 2017ರಲ್ಲಿ ತಿದ್ದುಪಡಿ ತರಲು ಪ್ರಯತ್ನಿಸಿದರು. ಇದರಿಂದ ಬುಡಕಟ್ಟು ಸಮುದಾಯಗಳ ವಿಶ್ವಾಸವನ್ನು ಕಳೆದುಕೊಳ್ಳವಂತಾಯಿತು. ಈ ಕಾಯಿದೆಯನ್ನು ಬದಲಿಸಿ, ಆದಿವಾಸಿ ಭೂಮಿಯ ವಾಣಿಜ್ಯ ಬಳಕೆಗಾಗಿ ಛೋಟಾನಾಗಪುರ್ ಟೆನನ್ಸಿ ಕಾಯಿದೆ (ಸಿಎನ್‌ಟಿಏ) ಮತ್ತು ಸಂಥಲ್ ಪರಗನಾಸ್ ಟೆನನ್ಸಿ ಕಾಯಿದೆ (ಎಸ್‌ಪಿಟಿಏ)ಗಳಿಗೆ ತಿದ್ದುಪಡಿ ತರಲು ಪ್ರಯತ್ನಿಸಿದರು. ಈ ಕ್ರಮವನ್ನು ಕಾರ್ಪೋರೇಟ್ ಪರ ಮತ್ತು ಆದಿವಾಸಿ ವಿರೋಧಿ ಎಂದು ನೋಡಲಾಯಿತು. ಕಾಂಗ್ರೆಸ್-ಜೆಮ್‌ಎಮ್ಎಮ್‌ ಪಕ್ಷಗಳು ಅಲ್ಲಿಯ ಚರ್ಚಿನೊಂದಿಗೆ ಸೇರಿಕೊಂಡು ಈ ತಿದ್ದುಪಡಿಗಳನ್ನು ವಿರೋಧಿಸಿದವು. ಆದಿವಾಸಿ ಸಮುದಾಯಗಳ ವಿರೋಧ ಮತ್ತು ಸಿಟ್ಟನ್ನು ನೋಡಿ ಲೋಕಸಭೆ ಚುನಾವಣೆಗೆ ಮುನ್ನ ಈ ತಿದ್ದುಪಡಿಗಳನ್ನು ಕೈಬಿಡಲಾಯಿತು. ಆದರೆ ಅಷ್ಟರಲ್ಲಿ ಅಲೆ ತಿರುಗಿತ್ತು.

ಹೇಮಂತ್‌ ಸೊರೆನ್‌ ಮತ್ತು ಶಿಬು ಸೊರೆನ್‌

ಈ ತಿದ್ದುಪಡಿಗಳು ಸೃಷ್ಟಿಸಿದ ಆತಂಕಗಳು ‘ಪಥಾಲ್‌ರ‍್ಹಿ ಆಂದೋಲನ’ ಎಂಬ ಚಳವಳಿ (ಹುಲ್ ಜೋಹಾರ್ ಎಂಬುದು ಅವರ ಘೋಷವಾಕ್ಯ) ಹುಟ್ಟಲು ಕಾರಣವಾದವು. ಈ ಚಳವಳಿಯನ್ನು ಹತ್ತಿಕ್ಕಲು ದಾಸ್ ಸರಕಾರವು ಕನಿಷ್ಠ 10,000 ಜನರ ಮೇಲೆ ಪ್ರಕರಣ ದಾಖಲಿಸಿತು; ಅವರಲ್ಲಿ ಅನೇಕರು ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಹೋರಾಟಗಾರ್ತಿ ದಯಾಮಣಿ ಬಾರ್ಲಾ ಚುನಾವಣೆಗೆ ಸ್ಪರ್ಧಿಸಿದ ಕ್ಷೇತ್ರದ ಜಿಲ್ಲೆ ಖುಂಟಿಯಲ್ಲಿಯೇ 26 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅವುಗಳಲ್ಲಿ ದೇಶದ್ರೋಹ, ಅಪಹರಣ, ಬಲಾತ್ಕಾರ ಮತ್ತು ಇತರ ಗಂಭೀರ ಆರೋಪಗಳನ್ನು ಆದಿವಾಸಿ ಮುಖಂಡರ ವಿರುದ್ಧ ದಾಖಲಿಸಲಾಗಿದೆ. ಪೊಲೀಸ್ ದಬ್ಬಾಳಿಕೆಯ ವಿರುದ್ಧ ಪ್ರತಿಭಟಿಸುತ್ತ ತಮ್ಮ ಆಧಾರ್ ಕಾರ್ಡಗಳನ್ನು ನೆಲದಲ್ಲಿ ಹೂತು, ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ್ದರು. ಮೀಸಲು ಕ್ಷೇತ್ರದಿಂದಲೇ ಬಿಜೆಪಿಯ ರಾಜ್ಯ ಅಧ್ಯಕ್ಷ ಲಕ್ಷ್ಮಣ ಗಿಲುವಾ ಸೋತಿರುವುದು ಆದಿವಾಸಿಗಳ ಸಿಟ್ಟಿನ ಪ್ರಮಾಣವನ್ನು ತೋರಿಸುತ್ತದೆ. ಪಥಾಲ್‌ರ‍್ಹಿ ಆಂದೋಲನದಲ್ಲಿ ಪಾಲ್ಗೊಂಡ ಜನರ ಮೇಲೆ ಪೊಲೀಸರು ಕೈಗೊಂಡ ಕ್ರಮಕ್ಕೆ ಅವರು ಗಟ್ಟಿಯಾಗಿ ಸಮರ್ಥಕರಾಗಿದ್ದರು.

ದಯಾಮಣಿ ಬಾರ್ಲಾ

ದೇಶದಲ್ಲೇ ಅತಿ ಹೆಚ್ಚು ಗುಂಪು ಹಲ್ಲೆ (ಮಾಬ್ ಲಿಂಚಿಂಗ್)ಗಳು ಆದ ರಾಜ್ಯ ಝಾರ್ಖಂಡ್; 20 ಇಂತಹ ಪ್ರಕರಣಗಳು ದಾಖಲಾಗಿವೆ. ಮತಾಂತರ ಮತ್ತು ಗೋ ಸಂಬಂಧಿತ ವಿಷಯಗಳ ಬಗ್ಗೆ ಮುಖ್ಯಮಂತ್ರಿ ತೋರಿದ ಸೈದ್ಧಾಂತಿಕ ಪ್ರತಿಪಾದನೆಯೂ ಅಲ್ಲಿಯ ಹಿಂದು, ಕ್ರಿಶ್ಚಿಯನ್ ಮತ್ತು ಆದಿವಾಸಿ ಸಮುದಾಯಗಳಿಗೆ ಒಪ್ಪಿಗೆಯಾಗಲಿಲ್ಲ.

ಮೋದಿ ಅಲೆ ಕಣ್ಮರೆಯಾಗುತ್ತಿದೆಯೇ?

ಇದು ಕೇವಲ ಜನಪ್ರಿಯತೆ ಕಳೆದುಕೊಂಡ ಮುಖ್ಯಮಂತ್ರಿಯ ಸೋಲೇ ಹೊರತು ಮೋದಿ ಅಲೆಯ ಬಗ್ಗೆ ಇದು ಏನನ್ನೂ ಹೇಳುವುದಿಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಪ್ರಚಾರವನ್ನು ನೋಡಿದಾಗ, ಮೋದಿ ಮತ್ತು ಶಾ ಇಬ್ಬರೂ ಪ್ರತ್ಯೇಕವಾಗಿ 9 ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು. ರಾಮ ಮಂದಿರದ ಬಗ್ಗೆ, ಆರ್ಟಿಕಲ್ 370ಅನ್ನು ಹಿಂಪಡೆದ ಬಗ್ಗೆ ತಮ್ಮ ಸಾಧನೆಗಳ ಬಗ್ಗೆ ಮತ್ತು ಕಾಂಗ್ರೆಸ್‌ನ ವಿಫಲತೆಗಳ ಬಗ್ಗೆ ಭಾಷಣ ಬಿಗಿದರು. ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದಾಗಲೇ ಕೆಲವು ರ‍್ಯಾಲಿಗಳಾದವು. ‘ಗಲಭೆ ಮಾಡುವವರನ್ನು ಅವರ ಬಟ್ಟೆ ನೋಡಿ ಗುರುತಿಸಬಹುದು’ ಎಂದು ಮೋದಿ ಧಾರ್ಮಿಕ ನೆಲೆಯ ಮೇಲೆ ವಿಭಜನಾ ತಂತ್ರವನ್ನೂ ಬಳಸಿದರು. ಈ ರ‍್ಯಾಲಿಗಳಲ್ಲಿ ಇವರು ತಲುಪಿದ 16 ಕ್ಷೇತ್ರಗಳಲ್ಲಿ 11 ಕ್ಷೇತ್ರಗಳಲ್ಲಿ ಸೋಲನ್ನು ಕಂಡಿದ್ದಾರೆ.

ಇದರೊಂದಿಗೆ ದೇಶಾದ್ಯಂತ ಪೌರತ್ವ ಕಾಯಿದೆ(ಸಿಏಏ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯ ವಿರುದ್ಧ ಆಗುತ್ತಿರುವ ಪ್ರತಿಭಟನೆಗಳ ನಡುವೆಯೇ ಈ ಫಲಿತಾಂಶಗಳು ಬಂದಿವೆ. ಹಾಗಾಗಿ ಈ ಪ್ರಯೋಗದ ರೂವಾರಿಗಳಾದ ಮೋದಿ-ಶಾ ಜೋಡಿಗೆ ಇದು ಡಬಲ್ ಹಿನ್ನಡೆಯಾಗಿದೆ.

ಇದರೊಂದಿಗೆ, ಅಸೆಂಬ್ಲಿ ಚುನಾವಣೆಗಳಲ್ಲಿ ಸ್ಥಳೀಯ ವಿಷಯಗಳ ಮೇಲೆಯೇ ಜನರು ಮತ ಚಲಾಯಿಸುತ್ತಾರೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಭೂಮಿ ಹಕ್ಕುಗಳು ಮತ್ತು ನಿರುದ್ಯೋಗದ ಸಮಸ್ಯೆಗಳನ್ನು ನಿರ್ಲಕ್ಷಿಸಿ ಆರ್ಟಿಕಲ್ 370, ರಾಮಮಂದಿರದಂತಹ ವಿಷಯಗಳನ್ನಿಟ್ಟುಕೊಂಡು ಪ್ರಚಾರ ಮಾಡಿದ ಬಿಜೆಪಿಗೆ ಇದು ಉತ್ತರವೇ ಎಂಬ ಪ್ರಶ್ನೆಯೂ ಎದ್ದಿದೆ. ಅಂತಿಮವಾಗಿ ಒಂದಂತೂ ಸತ್ಯ; ರಾಜ್ಯಗಳಿಗೆ ಒಂದು ರೀತಿಯಲ್ಲಿ, ಲೋಕಸಭೆಗೆ ಇನ್ನೊಂದು ರೀತಿಯಲ್ಲಿ ಮತದಾರರು ಮತ ಚಲಾಯಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...