Homeಮುಖಪುಟಜಾರ್ಖಂಡ್‌ನಲ್ಲಿ ಹುಲ್ ಜೋಹಾರ್! ಬಿರ್ಸಾ ನೆಲ ಆಯ್ದುಕೊಂಡಿದ್ದು ಜಲ್ ಜಂಗಲ್ ಜಮೀನ್..

ಜಾರ್ಖಂಡ್‌ನಲ್ಲಿ ಹುಲ್ ಜೋಹಾರ್! ಬಿರ್ಸಾ ನೆಲ ಆಯ್ದುಕೊಂಡಿದ್ದು ಜಲ್ ಜಂಗಲ್ ಜಮೀನ್..

ದೇಶಾದ್ಯಂತ ಪೌರತ್ವ ಕಾಯಿದೆ(ಸಿಏಏ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯ ವಿರುದ್ಧ ಆಗುತ್ತಿರುವ ಪ್ರತಿಭಟನೆಗಳ ನಡುವೆಯೇ ಈ ಫಲಿತಾಂಶಗಳು ಬಂದಿವೆ. ಹಾಗಾಗಿ ಈ ಪ್ರಯೋಗದ ರೂವಾರಿಗಳಾದ ಮೋದಿ-ಶಾ ಜೋಡಿಗೆ ಇದು ಡಬಲ್ ಹಿನ್ನಡೆಯಾಗಿದೆ

- Advertisement -
- Advertisement -

ರಘುಬರ್ ದಾಸ್ ನೇತೃತ್ವದ ಬಿಜೆಪಿ ಸರಕಾರವು ಜಾರ್ಖಂಡ್‌ನಲ್ಲಿ ಸೋಲು ಕಂಡಿದೆ. ಇದನ್ನು ಆರ್‌ಎಸ್‌ಎಸ್‌ನ ಹಿಂದುತ್ವ ಪ್ರಯೋಗಶಾಲೆಗಳಲ್ಲಿ ಒಂದೆಂದೂ ಕರೆಯಲಾಗಿತ್ತು. ಹಾಗಾಗಿ ಈ ಚುನಾವಣೆ ಕೇವಲ ರಾಜ್ಯದ ಆದಿವಾಸಿ ವರ್ಗಕ್ಕೆ ಸೇರದ ಮೊದಲ ಮುಖ್ಯಮಂತ್ರಿಯ ನಿರ್ಗಮನವಷ್ಟೇ ಅಲ್ಲದೇ, ಬಿಜೆಪಿಯ ಸಾಮಾಜಿಕ ಸಮೀಕರಣದ ವಿನ್ಯಾಸಗಳಿಗೂ ಸೋಲು ಎನ್ನಬಹುದಾಗಿದೆ. ಇದು ಕೇವಲ ಬಿಜೆಪಿಯ ಬೆಂಬಲಿಗರಿಗೆ ಮಾತ್ರವಲ್ಲ, ಮೋದಿ ಮತ್ತು ಅಮಿತ್ ಶಾರ ಚಾಣಕ್ಯ ನೀತಿ ಮತ್ತು ಅವರ ಸೋಲಲಾರರು ಎಂದು ನಂಬಿದವರಿಗೂ ಆಘಾತ ತಂದುಕೊಟ್ಟಿದೆ.

ಆಡಳಿತವಿರೋಧಿ ಅಲೆ, ಆದಿವಾಸಿ ಸಮುದಾಯಕ್ಕೆ ಸೇರದ ಮುಖ್ಯಮಂತ್ರಿ ಮತ್ತು ಬುಡಕಟ್ಟು ನೀತಿಗಳು

ಜಾರ್ಖಂಡ್‌ನಲ್ಲಿ ಬುಡಕಟ್ಟು ಸಮುದಾಯಗಳ ಅನುಪಾತ 26-30%ರಷ್ಟು. ಪರಿಶಿಷ್ಟ ಸಮುದಾಯಗಳಿಗೆ ಮೀಸಲಾದ 28 ಕ್ಷೇತ್ರಗಳಲ್ಲಿ ಜೆಎಮ್‌ಎಮ್-ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಯು 25ರಲ್ಲಿ ಗೆಲುವು ಸಾಧಿಸಿದೆ. 2014ರಲ್ಲಿ ಬಿಜೆಪಿಯು 11 ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು.

ಅಲ್ಲಿ ಆಗಿದ್ದೇನು?

ಆದಿವಾಸಿಗಳ ಭೂಮಿಯನ್ನು ಕಬಳಿಸಲು ಸುಲಭವಾಗುವಂತೆ ಮಾಡಿದ ರಘುಬರ್ ದಾಸ್ ಅವರ ಕ್ರಮಗಳಿಂದ ಸಿಟ್ಟು ಮತ್ತು ತೀವ್ರ ಅಸಮಾಧಾನ ಉಂಟಾಗಿತ್ತು. ಪರಿಶಿಷ್ಟ ಸಮುದಾಯಗಳ ಭೂಕಬಳಿಕೆಯನ್ನು ತಡೆಯಲು ಇದ್ದ ಬುಡಕಟ್ಟು ಟೆನನ್ಸಿ ಕಾಯಿದೆಗೆ 2017ರಲ್ಲಿ ತಿದ್ದುಪಡಿ ತರಲು ಪ್ರಯತ್ನಿಸಿದರು. ಇದರಿಂದ ಬುಡಕಟ್ಟು ಸಮುದಾಯಗಳ ವಿಶ್ವಾಸವನ್ನು ಕಳೆದುಕೊಳ್ಳವಂತಾಯಿತು. ಈ ಕಾಯಿದೆಯನ್ನು ಬದಲಿಸಿ, ಆದಿವಾಸಿ ಭೂಮಿಯ ವಾಣಿಜ್ಯ ಬಳಕೆಗಾಗಿ ಛೋಟಾನಾಗಪುರ್ ಟೆನನ್ಸಿ ಕಾಯಿದೆ (ಸಿಎನ್‌ಟಿಏ) ಮತ್ತು ಸಂಥಲ್ ಪರಗನಾಸ್ ಟೆನನ್ಸಿ ಕಾಯಿದೆ (ಎಸ್‌ಪಿಟಿಏ)ಗಳಿಗೆ ತಿದ್ದುಪಡಿ ತರಲು ಪ್ರಯತ್ನಿಸಿದರು. ಈ ಕ್ರಮವನ್ನು ಕಾರ್ಪೋರೇಟ್ ಪರ ಮತ್ತು ಆದಿವಾಸಿ ವಿರೋಧಿ ಎಂದು ನೋಡಲಾಯಿತು. ಕಾಂಗ್ರೆಸ್-ಜೆಮ್‌ಎಮ್ಎಮ್‌ ಪಕ್ಷಗಳು ಅಲ್ಲಿಯ ಚರ್ಚಿನೊಂದಿಗೆ ಸೇರಿಕೊಂಡು ಈ ತಿದ್ದುಪಡಿಗಳನ್ನು ವಿರೋಧಿಸಿದವು. ಆದಿವಾಸಿ ಸಮುದಾಯಗಳ ವಿರೋಧ ಮತ್ತು ಸಿಟ್ಟನ್ನು ನೋಡಿ ಲೋಕಸಭೆ ಚುನಾವಣೆಗೆ ಮುನ್ನ ಈ ತಿದ್ದುಪಡಿಗಳನ್ನು ಕೈಬಿಡಲಾಯಿತು. ಆದರೆ ಅಷ್ಟರಲ್ಲಿ ಅಲೆ ತಿರುಗಿತ್ತು.

ಹೇಮಂತ್‌ ಸೊರೆನ್‌ ಮತ್ತು ಶಿಬು ಸೊರೆನ್‌

ಈ ತಿದ್ದುಪಡಿಗಳು ಸೃಷ್ಟಿಸಿದ ಆತಂಕಗಳು ‘ಪಥಾಲ್‌ರ‍್ಹಿ ಆಂದೋಲನ’ ಎಂಬ ಚಳವಳಿ (ಹುಲ್ ಜೋಹಾರ್ ಎಂಬುದು ಅವರ ಘೋಷವಾಕ್ಯ) ಹುಟ್ಟಲು ಕಾರಣವಾದವು. ಈ ಚಳವಳಿಯನ್ನು ಹತ್ತಿಕ್ಕಲು ದಾಸ್ ಸರಕಾರವು ಕನಿಷ್ಠ 10,000 ಜನರ ಮೇಲೆ ಪ್ರಕರಣ ದಾಖಲಿಸಿತು; ಅವರಲ್ಲಿ ಅನೇಕರು ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಹೋರಾಟಗಾರ್ತಿ ದಯಾಮಣಿ ಬಾರ್ಲಾ ಚುನಾವಣೆಗೆ ಸ್ಪರ್ಧಿಸಿದ ಕ್ಷೇತ್ರದ ಜಿಲ್ಲೆ ಖುಂಟಿಯಲ್ಲಿಯೇ 26 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅವುಗಳಲ್ಲಿ ದೇಶದ್ರೋಹ, ಅಪಹರಣ, ಬಲಾತ್ಕಾರ ಮತ್ತು ಇತರ ಗಂಭೀರ ಆರೋಪಗಳನ್ನು ಆದಿವಾಸಿ ಮುಖಂಡರ ವಿರುದ್ಧ ದಾಖಲಿಸಲಾಗಿದೆ. ಪೊಲೀಸ್ ದಬ್ಬಾಳಿಕೆಯ ವಿರುದ್ಧ ಪ್ರತಿಭಟಿಸುತ್ತ ತಮ್ಮ ಆಧಾರ್ ಕಾರ್ಡಗಳನ್ನು ನೆಲದಲ್ಲಿ ಹೂತು, ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ್ದರು. ಮೀಸಲು ಕ್ಷೇತ್ರದಿಂದಲೇ ಬಿಜೆಪಿಯ ರಾಜ್ಯ ಅಧ್ಯಕ್ಷ ಲಕ್ಷ್ಮಣ ಗಿಲುವಾ ಸೋತಿರುವುದು ಆದಿವಾಸಿಗಳ ಸಿಟ್ಟಿನ ಪ್ರಮಾಣವನ್ನು ತೋರಿಸುತ್ತದೆ. ಪಥಾಲ್‌ರ‍್ಹಿ ಆಂದೋಲನದಲ್ಲಿ ಪಾಲ್ಗೊಂಡ ಜನರ ಮೇಲೆ ಪೊಲೀಸರು ಕೈಗೊಂಡ ಕ್ರಮಕ್ಕೆ ಅವರು ಗಟ್ಟಿಯಾಗಿ ಸಮರ್ಥಕರಾಗಿದ್ದರು.

ದಯಾಮಣಿ ಬಾರ್ಲಾ

ದೇಶದಲ್ಲೇ ಅತಿ ಹೆಚ್ಚು ಗುಂಪು ಹಲ್ಲೆ (ಮಾಬ್ ಲಿಂಚಿಂಗ್)ಗಳು ಆದ ರಾಜ್ಯ ಝಾರ್ಖಂಡ್; 20 ಇಂತಹ ಪ್ರಕರಣಗಳು ದಾಖಲಾಗಿವೆ. ಮತಾಂತರ ಮತ್ತು ಗೋ ಸಂಬಂಧಿತ ವಿಷಯಗಳ ಬಗ್ಗೆ ಮುಖ್ಯಮಂತ್ರಿ ತೋರಿದ ಸೈದ್ಧಾಂತಿಕ ಪ್ರತಿಪಾದನೆಯೂ ಅಲ್ಲಿಯ ಹಿಂದು, ಕ್ರಿಶ್ಚಿಯನ್ ಮತ್ತು ಆದಿವಾಸಿ ಸಮುದಾಯಗಳಿಗೆ ಒಪ್ಪಿಗೆಯಾಗಲಿಲ್ಲ.

ಮೋದಿ ಅಲೆ ಕಣ್ಮರೆಯಾಗುತ್ತಿದೆಯೇ?

ಇದು ಕೇವಲ ಜನಪ್ರಿಯತೆ ಕಳೆದುಕೊಂಡ ಮುಖ್ಯಮಂತ್ರಿಯ ಸೋಲೇ ಹೊರತು ಮೋದಿ ಅಲೆಯ ಬಗ್ಗೆ ಇದು ಏನನ್ನೂ ಹೇಳುವುದಿಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಪ್ರಚಾರವನ್ನು ನೋಡಿದಾಗ, ಮೋದಿ ಮತ್ತು ಶಾ ಇಬ್ಬರೂ ಪ್ರತ್ಯೇಕವಾಗಿ 9 ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು. ರಾಮ ಮಂದಿರದ ಬಗ್ಗೆ, ಆರ್ಟಿಕಲ್ 370ಅನ್ನು ಹಿಂಪಡೆದ ಬಗ್ಗೆ ತಮ್ಮ ಸಾಧನೆಗಳ ಬಗ್ಗೆ ಮತ್ತು ಕಾಂಗ್ರೆಸ್‌ನ ವಿಫಲತೆಗಳ ಬಗ್ಗೆ ಭಾಷಣ ಬಿಗಿದರು. ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದಾಗಲೇ ಕೆಲವು ರ‍್ಯಾಲಿಗಳಾದವು. ‘ಗಲಭೆ ಮಾಡುವವರನ್ನು ಅವರ ಬಟ್ಟೆ ನೋಡಿ ಗುರುತಿಸಬಹುದು’ ಎಂದು ಮೋದಿ ಧಾರ್ಮಿಕ ನೆಲೆಯ ಮೇಲೆ ವಿಭಜನಾ ತಂತ್ರವನ್ನೂ ಬಳಸಿದರು. ಈ ರ‍್ಯಾಲಿಗಳಲ್ಲಿ ಇವರು ತಲುಪಿದ 16 ಕ್ಷೇತ್ರಗಳಲ್ಲಿ 11 ಕ್ಷೇತ್ರಗಳಲ್ಲಿ ಸೋಲನ್ನು ಕಂಡಿದ್ದಾರೆ.

ಇದರೊಂದಿಗೆ ದೇಶಾದ್ಯಂತ ಪೌರತ್ವ ಕಾಯಿದೆ(ಸಿಏಏ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯ ವಿರುದ್ಧ ಆಗುತ್ತಿರುವ ಪ್ರತಿಭಟನೆಗಳ ನಡುವೆಯೇ ಈ ಫಲಿತಾಂಶಗಳು ಬಂದಿವೆ. ಹಾಗಾಗಿ ಈ ಪ್ರಯೋಗದ ರೂವಾರಿಗಳಾದ ಮೋದಿ-ಶಾ ಜೋಡಿಗೆ ಇದು ಡಬಲ್ ಹಿನ್ನಡೆಯಾಗಿದೆ.

ಇದರೊಂದಿಗೆ, ಅಸೆಂಬ್ಲಿ ಚುನಾವಣೆಗಳಲ್ಲಿ ಸ್ಥಳೀಯ ವಿಷಯಗಳ ಮೇಲೆಯೇ ಜನರು ಮತ ಚಲಾಯಿಸುತ್ತಾರೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಭೂಮಿ ಹಕ್ಕುಗಳು ಮತ್ತು ನಿರುದ್ಯೋಗದ ಸಮಸ್ಯೆಗಳನ್ನು ನಿರ್ಲಕ್ಷಿಸಿ ಆರ್ಟಿಕಲ್ 370, ರಾಮಮಂದಿರದಂತಹ ವಿಷಯಗಳನ್ನಿಟ್ಟುಕೊಂಡು ಪ್ರಚಾರ ಮಾಡಿದ ಬಿಜೆಪಿಗೆ ಇದು ಉತ್ತರವೇ ಎಂಬ ಪ್ರಶ್ನೆಯೂ ಎದ್ದಿದೆ. ಅಂತಿಮವಾಗಿ ಒಂದಂತೂ ಸತ್ಯ; ರಾಜ್ಯಗಳಿಗೆ ಒಂದು ರೀತಿಯಲ್ಲಿ, ಲೋಕಸಭೆಗೆ ಇನ್ನೊಂದು ರೀತಿಯಲ್ಲಿ ಮತದಾರರು ಮತ ಚಲಾಯಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...