Homeಮುಖಪುಟಜಾರ್ಖಂಡ್‌ನಲ್ಲಿ ಹುಲ್ ಜೋಹಾರ್! ಬಿರ್ಸಾ ನೆಲ ಆಯ್ದುಕೊಂಡಿದ್ದು ಜಲ್ ಜಂಗಲ್ ಜಮೀನ್..

ಜಾರ್ಖಂಡ್‌ನಲ್ಲಿ ಹುಲ್ ಜೋಹಾರ್! ಬಿರ್ಸಾ ನೆಲ ಆಯ್ದುಕೊಂಡಿದ್ದು ಜಲ್ ಜಂಗಲ್ ಜಮೀನ್..

ದೇಶಾದ್ಯಂತ ಪೌರತ್ವ ಕಾಯಿದೆ(ಸಿಏಏ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯ ವಿರುದ್ಧ ಆಗುತ್ತಿರುವ ಪ್ರತಿಭಟನೆಗಳ ನಡುವೆಯೇ ಈ ಫಲಿತಾಂಶಗಳು ಬಂದಿವೆ. ಹಾಗಾಗಿ ಈ ಪ್ರಯೋಗದ ರೂವಾರಿಗಳಾದ ಮೋದಿ-ಶಾ ಜೋಡಿಗೆ ಇದು ಡಬಲ್ ಹಿನ್ನಡೆಯಾಗಿದೆ

- Advertisement -
- Advertisement -

ರಘುಬರ್ ದಾಸ್ ನೇತೃತ್ವದ ಬಿಜೆಪಿ ಸರಕಾರವು ಜಾರ್ಖಂಡ್‌ನಲ್ಲಿ ಸೋಲು ಕಂಡಿದೆ. ಇದನ್ನು ಆರ್‌ಎಸ್‌ಎಸ್‌ನ ಹಿಂದುತ್ವ ಪ್ರಯೋಗಶಾಲೆಗಳಲ್ಲಿ ಒಂದೆಂದೂ ಕರೆಯಲಾಗಿತ್ತು. ಹಾಗಾಗಿ ಈ ಚುನಾವಣೆ ಕೇವಲ ರಾಜ್ಯದ ಆದಿವಾಸಿ ವರ್ಗಕ್ಕೆ ಸೇರದ ಮೊದಲ ಮುಖ್ಯಮಂತ್ರಿಯ ನಿರ್ಗಮನವಷ್ಟೇ ಅಲ್ಲದೇ, ಬಿಜೆಪಿಯ ಸಾಮಾಜಿಕ ಸಮೀಕರಣದ ವಿನ್ಯಾಸಗಳಿಗೂ ಸೋಲು ಎನ್ನಬಹುದಾಗಿದೆ. ಇದು ಕೇವಲ ಬಿಜೆಪಿಯ ಬೆಂಬಲಿಗರಿಗೆ ಮಾತ್ರವಲ್ಲ, ಮೋದಿ ಮತ್ತು ಅಮಿತ್ ಶಾರ ಚಾಣಕ್ಯ ನೀತಿ ಮತ್ತು ಅವರ ಸೋಲಲಾರರು ಎಂದು ನಂಬಿದವರಿಗೂ ಆಘಾತ ತಂದುಕೊಟ್ಟಿದೆ.

ಆಡಳಿತವಿರೋಧಿ ಅಲೆ, ಆದಿವಾಸಿ ಸಮುದಾಯಕ್ಕೆ ಸೇರದ ಮುಖ್ಯಮಂತ್ರಿ ಮತ್ತು ಬುಡಕಟ್ಟು ನೀತಿಗಳು

ಜಾರ್ಖಂಡ್‌ನಲ್ಲಿ ಬುಡಕಟ್ಟು ಸಮುದಾಯಗಳ ಅನುಪಾತ 26-30%ರಷ್ಟು. ಪರಿಶಿಷ್ಟ ಸಮುದಾಯಗಳಿಗೆ ಮೀಸಲಾದ 28 ಕ್ಷೇತ್ರಗಳಲ್ಲಿ ಜೆಎಮ್‌ಎಮ್-ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಯು 25ರಲ್ಲಿ ಗೆಲುವು ಸಾಧಿಸಿದೆ. 2014ರಲ್ಲಿ ಬಿಜೆಪಿಯು 11 ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು.

ಅಲ್ಲಿ ಆಗಿದ್ದೇನು?

ಆದಿವಾಸಿಗಳ ಭೂಮಿಯನ್ನು ಕಬಳಿಸಲು ಸುಲಭವಾಗುವಂತೆ ಮಾಡಿದ ರಘುಬರ್ ದಾಸ್ ಅವರ ಕ್ರಮಗಳಿಂದ ಸಿಟ್ಟು ಮತ್ತು ತೀವ್ರ ಅಸಮಾಧಾನ ಉಂಟಾಗಿತ್ತು. ಪರಿಶಿಷ್ಟ ಸಮುದಾಯಗಳ ಭೂಕಬಳಿಕೆಯನ್ನು ತಡೆಯಲು ಇದ್ದ ಬುಡಕಟ್ಟು ಟೆನನ್ಸಿ ಕಾಯಿದೆಗೆ 2017ರಲ್ಲಿ ತಿದ್ದುಪಡಿ ತರಲು ಪ್ರಯತ್ನಿಸಿದರು. ಇದರಿಂದ ಬುಡಕಟ್ಟು ಸಮುದಾಯಗಳ ವಿಶ್ವಾಸವನ್ನು ಕಳೆದುಕೊಳ್ಳವಂತಾಯಿತು. ಈ ಕಾಯಿದೆಯನ್ನು ಬದಲಿಸಿ, ಆದಿವಾಸಿ ಭೂಮಿಯ ವಾಣಿಜ್ಯ ಬಳಕೆಗಾಗಿ ಛೋಟಾನಾಗಪುರ್ ಟೆನನ್ಸಿ ಕಾಯಿದೆ (ಸಿಎನ್‌ಟಿಏ) ಮತ್ತು ಸಂಥಲ್ ಪರಗನಾಸ್ ಟೆನನ್ಸಿ ಕಾಯಿದೆ (ಎಸ್‌ಪಿಟಿಏ)ಗಳಿಗೆ ತಿದ್ದುಪಡಿ ತರಲು ಪ್ರಯತ್ನಿಸಿದರು. ಈ ಕ್ರಮವನ್ನು ಕಾರ್ಪೋರೇಟ್ ಪರ ಮತ್ತು ಆದಿವಾಸಿ ವಿರೋಧಿ ಎಂದು ನೋಡಲಾಯಿತು. ಕಾಂಗ್ರೆಸ್-ಜೆಮ್‌ಎಮ್ಎಮ್‌ ಪಕ್ಷಗಳು ಅಲ್ಲಿಯ ಚರ್ಚಿನೊಂದಿಗೆ ಸೇರಿಕೊಂಡು ಈ ತಿದ್ದುಪಡಿಗಳನ್ನು ವಿರೋಧಿಸಿದವು. ಆದಿವಾಸಿ ಸಮುದಾಯಗಳ ವಿರೋಧ ಮತ್ತು ಸಿಟ್ಟನ್ನು ನೋಡಿ ಲೋಕಸಭೆ ಚುನಾವಣೆಗೆ ಮುನ್ನ ಈ ತಿದ್ದುಪಡಿಗಳನ್ನು ಕೈಬಿಡಲಾಯಿತು. ಆದರೆ ಅಷ್ಟರಲ್ಲಿ ಅಲೆ ತಿರುಗಿತ್ತು.

ಹೇಮಂತ್‌ ಸೊರೆನ್‌ ಮತ್ತು ಶಿಬು ಸೊರೆನ್‌

ಈ ತಿದ್ದುಪಡಿಗಳು ಸೃಷ್ಟಿಸಿದ ಆತಂಕಗಳು ‘ಪಥಾಲ್‌ರ‍್ಹಿ ಆಂದೋಲನ’ ಎಂಬ ಚಳವಳಿ (ಹುಲ್ ಜೋಹಾರ್ ಎಂಬುದು ಅವರ ಘೋಷವಾಕ್ಯ) ಹುಟ್ಟಲು ಕಾರಣವಾದವು. ಈ ಚಳವಳಿಯನ್ನು ಹತ್ತಿಕ್ಕಲು ದಾಸ್ ಸರಕಾರವು ಕನಿಷ್ಠ 10,000 ಜನರ ಮೇಲೆ ಪ್ರಕರಣ ದಾಖಲಿಸಿತು; ಅವರಲ್ಲಿ ಅನೇಕರು ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಹೋರಾಟಗಾರ್ತಿ ದಯಾಮಣಿ ಬಾರ್ಲಾ ಚುನಾವಣೆಗೆ ಸ್ಪರ್ಧಿಸಿದ ಕ್ಷೇತ್ರದ ಜಿಲ್ಲೆ ಖುಂಟಿಯಲ್ಲಿಯೇ 26 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅವುಗಳಲ್ಲಿ ದೇಶದ್ರೋಹ, ಅಪಹರಣ, ಬಲಾತ್ಕಾರ ಮತ್ತು ಇತರ ಗಂಭೀರ ಆರೋಪಗಳನ್ನು ಆದಿವಾಸಿ ಮುಖಂಡರ ವಿರುದ್ಧ ದಾಖಲಿಸಲಾಗಿದೆ. ಪೊಲೀಸ್ ದಬ್ಬಾಳಿಕೆಯ ವಿರುದ್ಧ ಪ್ರತಿಭಟಿಸುತ್ತ ತಮ್ಮ ಆಧಾರ್ ಕಾರ್ಡಗಳನ್ನು ನೆಲದಲ್ಲಿ ಹೂತು, ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ್ದರು. ಮೀಸಲು ಕ್ಷೇತ್ರದಿಂದಲೇ ಬಿಜೆಪಿಯ ರಾಜ್ಯ ಅಧ್ಯಕ್ಷ ಲಕ್ಷ್ಮಣ ಗಿಲುವಾ ಸೋತಿರುವುದು ಆದಿವಾಸಿಗಳ ಸಿಟ್ಟಿನ ಪ್ರಮಾಣವನ್ನು ತೋರಿಸುತ್ತದೆ. ಪಥಾಲ್‌ರ‍್ಹಿ ಆಂದೋಲನದಲ್ಲಿ ಪಾಲ್ಗೊಂಡ ಜನರ ಮೇಲೆ ಪೊಲೀಸರು ಕೈಗೊಂಡ ಕ್ರಮಕ್ಕೆ ಅವರು ಗಟ್ಟಿಯಾಗಿ ಸಮರ್ಥಕರಾಗಿದ್ದರು.

ದಯಾಮಣಿ ಬಾರ್ಲಾ

ದೇಶದಲ್ಲೇ ಅತಿ ಹೆಚ್ಚು ಗುಂಪು ಹಲ್ಲೆ (ಮಾಬ್ ಲಿಂಚಿಂಗ್)ಗಳು ಆದ ರಾಜ್ಯ ಝಾರ್ಖಂಡ್; 20 ಇಂತಹ ಪ್ರಕರಣಗಳು ದಾಖಲಾಗಿವೆ. ಮತಾಂತರ ಮತ್ತು ಗೋ ಸಂಬಂಧಿತ ವಿಷಯಗಳ ಬಗ್ಗೆ ಮುಖ್ಯಮಂತ್ರಿ ತೋರಿದ ಸೈದ್ಧಾಂತಿಕ ಪ್ರತಿಪಾದನೆಯೂ ಅಲ್ಲಿಯ ಹಿಂದು, ಕ್ರಿಶ್ಚಿಯನ್ ಮತ್ತು ಆದಿವಾಸಿ ಸಮುದಾಯಗಳಿಗೆ ಒಪ್ಪಿಗೆಯಾಗಲಿಲ್ಲ.

ಮೋದಿ ಅಲೆ ಕಣ್ಮರೆಯಾಗುತ್ತಿದೆಯೇ?

ಇದು ಕೇವಲ ಜನಪ್ರಿಯತೆ ಕಳೆದುಕೊಂಡ ಮುಖ್ಯಮಂತ್ರಿಯ ಸೋಲೇ ಹೊರತು ಮೋದಿ ಅಲೆಯ ಬಗ್ಗೆ ಇದು ಏನನ್ನೂ ಹೇಳುವುದಿಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಪ್ರಚಾರವನ್ನು ನೋಡಿದಾಗ, ಮೋದಿ ಮತ್ತು ಶಾ ಇಬ್ಬರೂ ಪ್ರತ್ಯೇಕವಾಗಿ 9 ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು. ರಾಮ ಮಂದಿರದ ಬಗ್ಗೆ, ಆರ್ಟಿಕಲ್ 370ಅನ್ನು ಹಿಂಪಡೆದ ಬಗ್ಗೆ ತಮ್ಮ ಸಾಧನೆಗಳ ಬಗ್ಗೆ ಮತ್ತು ಕಾಂಗ್ರೆಸ್‌ನ ವಿಫಲತೆಗಳ ಬಗ್ಗೆ ಭಾಷಣ ಬಿಗಿದರು. ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದಾಗಲೇ ಕೆಲವು ರ‍್ಯಾಲಿಗಳಾದವು. ‘ಗಲಭೆ ಮಾಡುವವರನ್ನು ಅವರ ಬಟ್ಟೆ ನೋಡಿ ಗುರುತಿಸಬಹುದು’ ಎಂದು ಮೋದಿ ಧಾರ್ಮಿಕ ನೆಲೆಯ ಮೇಲೆ ವಿಭಜನಾ ತಂತ್ರವನ್ನೂ ಬಳಸಿದರು. ಈ ರ‍್ಯಾಲಿಗಳಲ್ಲಿ ಇವರು ತಲುಪಿದ 16 ಕ್ಷೇತ್ರಗಳಲ್ಲಿ 11 ಕ್ಷೇತ್ರಗಳಲ್ಲಿ ಸೋಲನ್ನು ಕಂಡಿದ್ದಾರೆ.

ಇದರೊಂದಿಗೆ ದೇಶಾದ್ಯಂತ ಪೌರತ್ವ ಕಾಯಿದೆ(ಸಿಏಏ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯ ವಿರುದ್ಧ ಆಗುತ್ತಿರುವ ಪ್ರತಿಭಟನೆಗಳ ನಡುವೆಯೇ ಈ ಫಲಿತಾಂಶಗಳು ಬಂದಿವೆ. ಹಾಗಾಗಿ ಈ ಪ್ರಯೋಗದ ರೂವಾರಿಗಳಾದ ಮೋದಿ-ಶಾ ಜೋಡಿಗೆ ಇದು ಡಬಲ್ ಹಿನ್ನಡೆಯಾಗಿದೆ.

ಇದರೊಂದಿಗೆ, ಅಸೆಂಬ್ಲಿ ಚುನಾವಣೆಗಳಲ್ಲಿ ಸ್ಥಳೀಯ ವಿಷಯಗಳ ಮೇಲೆಯೇ ಜನರು ಮತ ಚಲಾಯಿಸುತ್ತಾರೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಭೂಮಿ ಹಕ್ಕುಗಳು ಮತ್ತು ನಿರುದ್ಯೋಗದ ಸಮಸ್ಯೆಗಳನ್ನು ನಿರ್ಲಕ್ಷಿಸಿ ಆರ್ಟಿಕಲ್ 370, ರಾಮಮಂದಿರದಂತಹ ವಿಷಯಗಳನ್ನಿಟ್ಟುಕೊಂಡು ಪ್ರಚಾರ ಮಾಡಿದ ಬಿಜೆಪಿಗೆ ಇದು ಉತ್ತರವೇ ಎಂಬ ಪ್ರಶ್ನೆಯೂ ಎದ್ದಿದೆ. ಅಂತಿಮವಾಗಿ ಒಂದಂತೂ ಸತ್ಯ; ರಾಜ್ಯಗಳಿಗೆ ಒಂದು ರೀತಿಯಲ್ಲಿ, ಲೋಕಸಭೆಗೆ ಇನ್ನೊಂದು ರೀತಿಯಲ್ಲಿ ಮತದಾರರು ಮತ ಚಲಾಯಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...