Homeಮುಖಪುಟಜಾರ್ಖಂಡ್‌ನಲ್ಲಿ ಹುಲ್ ಜೋಹಾರ್! ಬಿರ್ಸಾ ನೆಲ ಆಯ್ದುಕೊಂಡಿದ್ದು ಜಲ್ ಜಂಗಲ್ ಜಮೀನ್..

ಜಾರ್ಖಂಡ್‌ನಲ್ಲಿ ಹುಲ್ ಜೋಹಾರ್! ಬಿರ್ಸಾ ನೆಲ ಆಯ್ದುಕೊಂಡಿದ್ದು ಜಲ್ ಜಂಗಲ್ ಜಮೀನ್..

ದೇಶಾದ್ಯಂತ ಪೌರತ್ವ ಕಾಯಿದೆ(ಸಿಏಏ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯ ವಿರುದ್ಧ ಆಗುತ್ತಿರುವ ಪ್ರತಿಭಟನೆಗಳ ನಡುವೆಯೇ ಈ ಫಲಿತಾಂಶಗಳು ಬಂದಿವೆ. ಹಾಗಾಗಿ ಈ ಪ್ರಯೋಗದ ರೂವಾರಿಗಳಾದ ಮೋದಿ-ಶಾ ಜೋಡಿಗೆ ಇದು ಡಬಲ್ ಹಿನ್ನಡೆಯಾಗಿದೆ

- Advertisement -
- Advertisement -

ರಘುಬರ್ ದಾಸ್ ನೇತೃತ್ವದ ಬಿಜೆಪಿ ಸರಕಾರವು ಜಾರ್ಖಂಡ್‌ನಲ್ಲಿ ಸೋಲು ಕಂಡಿದೆ. ಇದನ್ನು ಆರ್‌ಎಸ್‌ಎಸ್‌ನ ಹಿಂದುತ್ವ ಪ್ರಯೋಗಶಾಲೆಗಳಲ್ಲಿ ಒಂದೆಂದೂ ಕರೆಯಲಾಗಿತ್ತು. ಹಾಗಾಗಿ ಈ ಚುನಾವಣೆ ಕೇವಲ ರಾಜ್ಯದ ಆದಿವಾಸಿ ವರ್ಗಕ್ಕೆ ಸೇರದ ಮೊದಲ ಮುಖ್ಯಮಂತ್ರಿಯ ನಿರ್ಗಮನವಷ್ಟೇ ಅಲ್ಲದೇ, ಬಿಜೆಪಿಯ ಸಾಮಾಜಿಕ ಸಮೀಕರಣದ ವಿನ್ಯಾಸಗಳಿಗೂ ಸೋಲು ಎನ್ನಬಹುದಾಗಿದೆ. ಇದು ಕೇವಲ ಬಿಜೆಪಿಯ ಬೆಂಬಲಿಗರಿಗೆ ಮಾತ್ರವಲ್ಲ, ಮೋದಿ ಮತ್ತು ಅಮಿತ್ ಶಾರ ಚಾಣಕ್ಯ ನೀತಿ ಮತ್ತು ಅವರ ಸೋಲಲಾರರು ಎಂದು ನಂಬಿದವರಿಗೂ ಆಘಾತ ತಂದುಕೊಟ್ಟಿದೆ.

ಆಡಳಿತವಿರೋಧಿ ಅಲೆ, ಆದಿವಾಸಿ ಸಮುದಾಯಕ್ಕೆ ಸೇರದ ಮುಖ್ಯಮಂತ್ರಿ ಮತ್ತು ಬುಡಕಟ್ಟು ನೀತಿಗಳು

ಜಾರ್ಖಂಡ್‌ನಲ್ಲಿ ಬುಡಕಟ್ಟು ಸಮುದಾಯಗಳ ಅನುಪಾತ 26-30%ರಷ್ಟು. ಪರಿಶಿಷ್ಟ ಸಮುದಾಯಗಳಿಗೆ ಮೀಸಲಾದ 28 ಕ್ಷೇತ್ರಗಳಲ್ಲಿ ಜೆಎಮ್‌ಎಮ್-ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಯು 25ರಲ್ಲಿ ಗೆಲುವು ಸಾಧಿಸಿದೆ. 2014ರಲ್ಲಿ ಬಿಜೆಪಿಯು 11 ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು.

ಅಲ್ಲಿ ಆಗಿದ್ದೇನು?

ಆದಿವಾಸಿಗಳ ಭೂಮಿಯನ್ನು ಕಬಳಿಸಲು ಸುಲಭವಾಗುವಂತೆ ಮಾಡಿದ ರಘುಬರ್ ದಾಸ್ ಅವರ ಕ್ರಮಗಳಿಂದ ಸಿಟ್ಟು ಮತ್ತು ತೀವ್ರ ಅಸಮಾಧಾನ ಉಂಟಾಗಿತ್ತು. ಪರಿಶಿಷ್ಟ ಸಮುದಾಯಗಳ ಭೂಕಬಳಿಕೆಯನ್ನು ತಡೆಯಲು ಇದ್ದ ಬುಡಕಟ್ಟು ಟೆನನ್ಸಿ ಕಾಯಿದೆಗೆ 2017ರಲ್ಲಿ ತಿದ್ದುಪಡಿ ತರಲು ಪ್ರಯತ್ನಿಸಿದರು. ಇದರಿಂದ ಬುಡಕಟ್ಟು ಸಮುದಾಯಗಳ ವಿಶ್ವಾಸವನ್ನು ಕಳೆದುಕೊಳ್ಳವಂತಾಯಿತು. ಈ ಕಾಯಿದೆಯನ್ನು ಬದಲಿಸಿ, ಆದಿವಾಸಿ ಭೂಮಿಯ ವಾಣಿಜ್ಯ ಬಳಕೆಗಾಗಿ ಛೋಟಾನಾಗಪುರ್ ಟೆನನ್ಸಿ ಕಾಯಿದೆ (ಸಿಎನ್‌ಟಿಏ) ಮತ್ತು ಸಂಥಲ್ ಪರಗನಾಸ್ ಟೆನನ್ಸಿ ಕಾಯಿದೆ (ಎಸ್‌ಪಿಟಿಏ)ಗಳಿಗೆ ತಿದ್ದುಪಡಿ ತರಲು ಪ್ರಯತ್ನಿಸಿದರು. ಈ ಕ್ರಮವನ್ನು ಕಾರ್ಪೋರೇಟ್ ಪರ ಮತ್ತು ಆದಿವಾಸಿ ವಿರೋಧಿ ಎಂದು ನೋಡಲಾಯಿತು. ಕಾಂಗ್ರೆಸ್-ಜೆಮ್‌ಎಮ್ಎಮ್‌ ಪಕ್ಷಗಳು ಅಲ್ಲಿಯ ಚರ್ಚಿನೊಂದಿಗೆ ಸೇರಿಕೊಂಡು ಈ ತಿದ್ದುಪಡಿಗಳನ್ನು ವಿರೋಧಿಸಿದವು. ಆದಿವಾಸಿ ಸಮುದಾಯಗಳ ವಿರೋಧ ಮತ್ತು ಸಿಟ್ಟನ್ನು ನೋಡಿ ಲೋಕಸಭೆ ಚುನಾವಣೆಗೆ ಮುನ್ನ ಈ ತಿದ್ದುಪಡಿಗಳನ್ನು ಕೈಬಿಡಲಾಯಿತು. ಆದರೆ ಅಷ್ಟರಲ್ಲಿ ಅಲೆ ತಿರುಗಿತ್ತು.

ಹೇಮಂತ್‌ ಸೊರೆನ್‌ ಮತ್ತು ಶಿಬು ಸೊರೆನ್‌

ಈ ತಿದ್ದುಪಡಿಗಳು ಸೃಷ್ಟಿಸಿದ ಆತಂಕಗಳು ‘ಪಥಾಲ್‌ರ‍್ಹಿ ಆಂದೋಲನ’ ಎಂಬ ಚಳವಳಿ (ಹುಲ್ ಜೋಹಾರ್ ಎಂಬುದು ಅವರ ಘೋಷವಾಕ್ಯ) ಹುಟ್ಟಲು ಕಾರಣವಾದವು. ಈ ಚಳವಳಿಯನ್ನು ಹತ್ತಿಕ್ಕಲು ದಾಸ್ ಸರಕಾರವು ಕನಿಷ್ಠ 10,000 ಜನರ ಮೇಲೆ ಪ್ರಕರಣ ದಾಖಲಿಸಿತು; ಅವರಲ್ಲಿ ಅನೇಕರು ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಹೋರಾಟಗಾರ್ತಿ ದಯಾಮಣಿ ಬಾರ್ಲಾ ಚುನಾವಣೆಗೆ ಸ್ಪರ್ಧಿಸಿದ ಕ್ಷೇತ್ರದ ಜಿಲ್ಲೆ ಖುಂಟಿಯಲ್ಲಿಯೇ 26 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅವುಗಳಲ್ಲಿ ದೇಶದ್ರೋಹ, ಅಪಹರಣ, ಬಲಾತ್ಕಾರ ಮತ್ತು ಇತರ ಗಂಭೀರ ಆರೋಪಗಳನ್ನು ಆದಿವಾಸಿ ಮುಖಂಡರ ವಿರುದ್ಧ ದಾಖಲಿಸಲಾಗಿದೆ. ಪೊಲೀಸ್ ದಬ್ಬಾಳಿಕೆಯ ವಿರುದ್ಧ ಪ್ರತಿಭಟಿಸುತ್ತ ತಮ್ಮ ಆಧಾರ್ ಕಾರ್ಡಗಳನ್ನು ನೆಲದಲ್ಲಿ ಹೂತು, ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ್ದರು. ಮೀಸಲು ಕ್ಷೇತ್ರದಿಂದಲೇ ಬಿಜೆಪಿಯ ರಾಜ್ಯ ಅಧ್ಯಕ್ಷ ಲಕ್ಷ್ಮಣ ಗಿಲುವಾ ಸೋತಿರುವುದು ಆದಿವಾಸಿಗಳ ಸಿಟ್ಟಿನ ಪ್ರಮಾಣವನ್ನು ತೋರಿಸುತ್ತದೆ. ಪಥಾಲ್‌ರ‍್ಹಿ ಆಂದೋಲನದಲ್ಲಿ ಪಾಲ್ಗೊಂಡ ಜನರ ಮೇಲೆ ಪೊಲೀಸರು ಕೈಗೊಂಡ ಕ್ರಮಕ್ಕೆ ಅವರು ಗಟ್ಟಿಯಾಗಿ ಸಮರ್ಥಕರಾಗಿದ್ದರು.

ದಯಾಮಣಿ ಬಾರ್ಲಾ

ದೇಶದಲ್ಲೇ ಅತಿ ಹೆಚ್ಚು ಗುಂಪು ಹಲ್ಲೆ (ಮಾಬ್ ಲಿಂಚಿಂಗ್)ಗಳು ಆದ ರಾಜ್ಯ ಝಾರ್ಖಂಡ್; 20 ಇಂತಹ ಪ್ರಕರಣಗಳು ದಾಖಲಾಗಿವೆ. ಮತಾಂತರ ಮತ್ತು ಗೋ ಸಂಬಂಧಿತ ವಿಷಯಗಳ ಬಗ್ಗೆ ಮುಖ್ಯಮಂತ್ರಿ ತೋರಿದ ಸೈದ್ಧಾಂತಿಕ ಪ್ರತಿಪಾದನೆಯೂ ಅಲ್ಲಿಯ ಹಿಂದು, ಕ್ರಿಶ್ಚಿಯನ್ ಮತ್ತು ಆದಿವಾಸಿ ಸಮುದಾಯಗಳಿಗೆ ಒಪ್ಪಿಗೆಯಾಗಲಿಲ್ಲ.

ಮೋದಿ ಅಲೆ ಕಣ್ಮರೆಯಾಗುತ್ತಿದೆಯೇ?

ಇದು ಕೇವಲ ಜನಪ್ರಿಯತೆ ಕಳೆದುಕೊಂಡ ಮುಖ್ಯಮಂತ್ರಿಯ ಸೋಲೇ ಹೊರತು ಮೋದಿ ಅಲೆಯ ಬಗ್ಗೆ ಇದು ಏನನ್ನೂ ಹೇಳುವುದಿಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಪ್ರಚಾರವನ್ನು ನೋಡಿದಾಗ, ಮೋದಿ ಮತ್ತು ಶಾ ಇಬ್ಬರೂ ಪ್ರತ್ಯೇಕವಾಗಿ 9 ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು. ರಾಮ ಮಂದಿರದ ಬಗ್ಗೆ, ಆರ್ಟಿಕಲ್ 370ಅನ್ನು ಹಿಂಪಡೆದ ಬಗ್ಗೆ ತಮ್ಮ ಸಾಧನೆಗಳ ಬಗ್ಗೆ ಮತ್ತು ಕಾಂಗ್ರೆಸ್‌ನ ವಿಫಲತೆಗಳ ಬಗ್ಗೆ ಭಾಷಣ ಬಿಗಿದರು. ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದಾಗಲೇ ಕೆಲವು ರ‍್ಯಾಲಿಗಳಾದವು. ‘ಗಲಭೆ ಮಾಡುವವರನ್ನು ಅವರ ಬಟ್ಟೆ ನೋಡಿ ಗುರುತಿಸಬಹುದು’ ಎಂದು ಮೋದಿ ಧಾರ್ಮಿಕ ನೆಲೆಯ ಮೇಲೆ ವಿಭಜನಾ ತಂತ್ರವನ್ನೂ ಬಳಸಿದರು. ಈ ರ‍್ಯಾಲಿಗಳಲ್ಲಿ ಇವರು ತಲುಪಿದ 16 ಕ್ಷೇತ್ರಗಳಲ್ಲಿ 11 ಕ್ಷೇತ್ರಗಳಲ್ಲಿ ಸೋಲನ್ನು ಕಂಡಿದ್ದಾರೆ.

ಇದರೊಂದಿಗೆ ದೇಶಾದ್ಯಂತ ಪೌರತ್ವ ಕಾಯಿದೆ(ಸಿಏಏ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯ ವಿರುದ್ಧ ಆಗುತ್ತಿರುವ ಪ್ರತಿಭಟನೆಗಳ ನಡುವೆಯೇ ಈ ಫಲಿತಾಂಶಗಳು ಬಂದಿವೆ. ಹಾಗಾಗಿ ಈ ಪ್ರಯೋಗದ ರೂವಾರಿಗಳಾದ ಮೋದಿ-ಶಾ ಜೋಡಿಗೆ ಇದು ಡಬಲ್ ಹಿನ್ನಡೆಯಾಗಿದೆ.

ಇದರೊಂದಿಗೆ, ಅಸೆಂಬ್ಲಿ ಚುನಾವಣೆಗಳಲ್ಲಿ ಸ್ಥಳೀಯ ವಿಷಯಗಳ ಮೇಲೆಯೇ ಜನರು ಮತ ಚಲಾಯಿಸುತ್ತಾರೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಭೂಮಿ ಹಕ್ಕುಗಳು ಮತ್ತು ನಿರುದ್ಯೋಗದ ಸಮಸ್ಯೆಗಳನ್ನು ನಿರ್ಲಕ್ಷಿಸಿ ಆರ್ಟಿಕಲ್ 370, ರಾಮಮಂದಿರದಂತಹ ವಿಷಯಗಳನ್ನಿಟ್ಟುಕೊಂಡು ಪ್ರಚಾರ ಮಾಡಿದ ಬಿಜೆಪಿಗೆ ಇದು ಉತ್ತರವೇ ಎಂಬ ಪ್ರಶ್ನೆಯೂ ಎದ್ದಿದೆ. ಅಂತಿಮವಾಗಿ ಒಂದಂತೂ ಸತ್ಯ; ರಾಜ್ಯಗಳಿಗೆ ಒಂದು ರೀತಿಯಲ್ಲಿ, ಲೋಕಸಭೆಗೆ ಇನ್ನೊಂದು ರೀತಿಯಲ್ಲಿ ಮತದಾರರು ಮತ ಚಲಾಯಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....