Homeಮುಖಪುಟಜಾರ್ಖಂಡ್‌: ಮಗನಿಗಾಗಿ ಸೈಕಲ್‌ನಲ್ಲಿ 400 ಕಿ.ಮೀ ಪ್ರಯಾಣ ಮಾಡುತ್ತಿದ್ದ ತಂದೆ, ನೆರವಾದ ಬೆಂಗಳೂರಿನ ಸಂಸ್ಥೆ

ಜಾರ್ಖಂಡ್‌: ಮಗನಿಗಾಗಿ ಸೈಕಲ್‌ನಲ್ಲಿ 400 ಕಿ.ಮೀ ಪ್ರಯಾಣ ಮಾಡುತ್ತಿದ್ದ ತಂದೆ, ನೆರವಾದ ಬೆಂಗಳೂರಿನ ಸಂಸ್ಥೆ

- Advertisement -
- Advertisement -

ಥಾಲಸ್ಸೆಮಿಯಾ (Thalassemia) ರೋಗಕ್ಕೆ ಒಳಗಾಗಿದ್ದ ತನ್ನ ಮಗನಿಗೆ ರಕ್ತ ವರ್ಗಾವಣೆಯ ವ್ಯವಸ್ಥೆ ಮಾಡಲು ತಂದೆಯೊಬ್ಬರು ಪ್ರತಿ ತಿಂಗಳು ಸೈಕಲ್‌ನಲ್ಲಿ 400 ಕಿ.ಮೀ ಪ್ರಯಾಣ ಮಾಡುತ್ತಿದ್ದ ಘಟನೆ ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ನಡೆದಿದೆ.

ಜಾರ್ಖಂಡ್‌ನ ಕೂಲಿ ಕೆಲಸಗಾರ ದಿಲೀಪ್‌ ಯಾದವ್‌, ತನ್ನ ಐದೂವರೆ ವರ್ಷದ ಮಗ ವಿವೇಕ್‌ಗೆ ರಕ್ತ ವರ್ಗಾವಣೆಯ ವ್ಯವಸ್ಥೆ ಮಾಡಲು ಅವರು ಬೈಸಿಕಲ್‌ನಲ್ಲಿ ಪ್ರತಿ ತಿಂಗಳು 400 ಕಿ.ಮೀ ಪ್ರಯಾಣ ಮಾಡುತ್ತಿದ್ದರು. ಅವರ ಕಷ್ಟವನ್ನು ಗಮನಿಸಿದ್ದ ಬೆಂಗಳೂರು ಮೂಲದ ಕ್ರೌಡ್‌ಫಂಡಿಂಗ್ ಪ್ಲಾಟ್‌ಫಾರ್ಮ್‌, ಬೆಂಗಳೂರಿನ ಆಸ್ಟರ್‌ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದೆ.

ಥಾಲಸ್ಸೆಮಿಯಾ (Thalassemia) ಅನುವಂಶಿಕವಾಗಿ ರಕ್ತದ ಕಾಯಿಲೆಯಾಗಿದ್ದು, ಈ ರೊಗದಿಂದ ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಅಗತ್ಯಕ್ಕಿಂತ ಕಡಿಮೆಯಾಗುತ್ತಿರುತ್ತದೆ. ಐದೂವರೆ ವರ್ಷದ ಬಾಲಕ ವಿವೇಕ್‌ಗೆ ಈ ಕಾಯಿಲೆಯಿಂದ ಬಳಲುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ಆಸ್ಪತ್ರೆಗೆ ತೆರಳಲು ಲಾಕ್‌ಡೌನ್ ನಡುವೆ ಪ್ರತಿ ತಿಂಗಳು ಬೈಸಿಕಲ್‌ನಲ್ಲಿ 400 ಕಿ.ಮೀ ಪ್ರಯಾಣಿಸುತ್ತಿದ್ದ ದಿಲೀಪ್‌ ಯಾದವ್‌ ಅವರ  ಕಷ್ಟದ ಬಗ್ಗೆ ಪತ್ರಿಕಾ ವರದಿಗಳಿಂದ ತಿಳಿದ, ಮಿಲಾಪ್‌ ಸಂಸ್ಥೆ ಸಂಸ್ಥಾಪಕ-ನಿರ್ದೇಶಕ ಸಂಜಯ್ ಪಾಂಡೆ ಅವರು ಯಾದವ್ ಅವರನ್ನು ಭೇಟಿಯಾಗಲು ಅವರ ಊರು ಗೊಡ್ಡಾಗೆ ಪ್ರಯಾಣಿಸಿದ್ದರು.

ದಿಲೀಪ್‌ ಯಾದವ್‌ ಅವರನ್ನು ಭೇಟಿ ಮಾಡಿದ ಸಂಜಯ್‌ ಪಾಂಡೆ ಅವರು, “ಯಾದವ್ ಅವರ ಮಗನಿಗೆ ಉಚಿತವಾಗಿ ಚಿಕಿತ್ಸೆ ಕೊಡಿಸಲು ಸಹಾಯ ಮಾಡಬೇಕು ಎಂದು ನಾವು ನಿರ್ಧರಿಸಿದ್ದೇವೆ. ಯಾದವ್ ಅವರ ಮಗನ ವೈದ್ಯಕೀಯ ಪರೀಕ್ಷೆಯ ನಂತರ, ಆತನ ಅಸ್ಥಿಮಜ್ಜೆಯ ಕಸಿಗೆ ಒಟ್ಟು 18 ರಿಂದ 20 ಲಕ್ಷ ರೂ. ವೆಚ್ಚವಾಗಲಿದೆ ಎಂದು ತಿಳಿದುಬಂದಿದೆ. ಅದನ್ನು ಮಿಲಾಪ್ ಸಂಸ್ಥೆ ಸಂಪೂರ್ಣವಾಗಿ ಭರಿಸಲಿದೆ” ಎಂದು ಹೇಳಿದ್ದಾರೆ.

ಮಗನ ಚಿಕಿತ್ಸೆಗಾಗಿ ಕಷ್ಟ ಪಡುತ್ತಿದ್ದ ದಿಲೀಪ್ ಯಾದವ್ ಅವರ ಕುಟುಂಬದ ನಾಲ್ಕು ಮಕ್ಕಳು ಸೇರಿದಂತೆ ಆರು ಸದಸ್ಯರಿಗೂ ವಿಮಾನ ಟಿಕೆಟ್‌ಗಳನ್ನು ಕಳುಹಿಸಲಾಗಿದೆ. ಇದರಿಂದ ಅವರು ಬೆಂಗಳೂರಿಗೆ ಬರಲು ಅನುಕೂಲವಾಗಿದೆ ಎಂದು ಮಿಲಾಪ್‌ ಸಂಸ್ಥೆ ಸಂಸ್ಥಾಪಕ-ನಿರ್ದೇಶಕ ಸಂಜಯ್ ಪಾಂಡೆ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಭಯ:15 ತಿಂಗಳಿಂದ ಗುಡಿಸಿಲಿನಲ್ಲೇ ಸ್ವಯಂ ಕ್ವಾರಂಟೈನ್ ಆದ ಕುಟುಂಬ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...