Homeಮುಖಪುಟ‘ಮಾಬ್‌ ಲಿಂಚಿಂಗ್‌ ವಿರೋಧಿ ಮಸೂದೆ’ಗೆ ಸಹಿ ಹಾಕಲು ನಿರಾಕರಿಸಿದ ಜಾರ್ಖಂಡ್‌ ರಾಜ್ಯಪಾಲ

‘ಮಾಬ್‌ ಲಿಂಚಿಂಗ್‌ ವಿರೋಧಿ ಮಸೂದೆ’ಗೆ ಸಹಿ ಹಾಕಲು ನಿರಾಕರಿಸಿದ ಜಾರ್ಖಂಡ್‌ ರಾಜ್ಯಪಾಲ

- Advertisement -
- Advertisement -

ಮೂರು ತಿಂಗಳ ಹಿಂದೆ ಅಂಗೀಕರಿಸಿದ ‘ಲಿಂಚಿಂಗ್‌ ವಿರೋಧಿ ಮಸೂದೆ’ಯನ್ನು ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಅವರು ಸಹಿ ಹಾಕಲು ನಿರಾಕರಿಸಿದ್ದು ರಾಜ್ಯ ಸರ್ಕಾರಕ್ಕೆ ವಾಪಾಸು ಕಳುಹಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಶುಕ್ರವಾರ ವರದಿ ಮಾಡಿದೆ. ಜಾರ್ಖಂಡ್‌ ವಿಧಾನಸಭೆಯು ಡಿಸೆಂಬರ್‌ 12 ರಂದು ಗುಂಪು ಹಿಂಸಾಚಾರ ಮತ್ತು ಗುಂಪು ಹತ್ಯೆ ತಡೆ ಮಸೂದೆ, 2021 ಅನ್ನು ಅಂಗೀಕರಿಸಿತ್ತು.

ಆದರೆ, ‘ಗುಂಪು’ (Mob-ಗುಂಪು) ಪದದ ವ್ಯಾಖ್ಯಾನವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲ ರಮೇಶ್‌‌‌ ಬೈಸ್‌‌ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. (ಮಾಬ್‌ ಲಿಂಚಿಂಗ್ ಅನ್ನು ಕನ್ನಡದಲ್ಲಿ ‘ಗುಂಪು ಹತ್ಯೆ’ ಎಂದು ಬರೆಯಲಾಗುತ್ತದೆ)

ಇದನ್ನೂ ಓದಿ: ಕರ್ನಾಟಕಕ್ಕೂ ಕಾಲಿಟ್ಟ ಮಾಬ್ ಲಿಂಚಿಂಗ್: ಲಿಂಗಸಗೂರಿನಲ್ಲಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕಳೆದ ಡಿಸೆಂಬರ್‌ನಲ್ಲಿ, ಬಿಜೆಪಿ ಶಾಸಕ ಅಮಿತ್ ಕುಮಾರ್ ಮಂಡಲ್ ಅವರು ‘ಗುಂಪು’ ಎಂಬ ಪದವನ್ನು ಸರಿಯಾಗಿ ವ್ಯಾಖ್ಯಾನಿಸಲಾಗಿಲ್ಲ ಮತ್ತು ಅದನ್ನು ದುರುಪಯೋಗಪಡಿಸಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವಿಧೇಯಕವನ್ನು ವಿಧಾನಸಭೆಯಲ್ಲಿ ಚರ್ಚೆ ನಡೆಸುತ್ತಿದ್ದಾಗ ಬಿಜೆಪಿ ಅದನ್ನು ವಿರೋಧಿಸಿ, ತುಷ್ಟೀಕರಣ ರಾಜಕಾರಣ ಮಾಡುವ ಯತ್ನ ಎಂದು ಆರೋಪಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ್ದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್‌ ಅವರು, ಬಿಜೆಪಿ ಜನರಲ್ಲಿ ಗೊಂದಲ ಮೂಡಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದರಯ. ‘ನಾವು ಗುಂಪು ಹತ್ಯೆ(ಮಾಬ್‌ ಲಿಂಚ್‌) ಕಾಯಿದೆಯ ಬಗ್ಗೆ ಮಾತನಾಡುತ್ತಿದ್ದೇವೆ, ಅದು ಮುಸ್ಲಿಂ ಹತ್ಯೆ ಕಾಯಿದೆಯೊ, ಆದಿವಾಸಿ ಹತ್ಯೆ ಕಾಯಿದೆಯೊ ಅಥವಾ ಹಿಂದೂ ಹತ್ಯೆ ಕಾಯಿದೆಯೊ ಅಲ್ಲ…ಗುಂಪು ಅಂದರೆ ಗುಂಪು ಅಷ್ಟೆ” ಎಂದು ಅವರು ಕೇಳಿದ್ದರು.

ಫೆಬ್ರವರಿ 11 ರಂದು, ಬುಡಕಟ್ಟು ಸಮುದಾಯಗಳ ಪ್ರತಿನಿಧಿಯಾಗಿ ‘ಜಂಜಾಟಿ ಸುರಕ್ಷಾ ಮಂಚ್’ ಎಂಬ ಸಂಘಟನೆಯ ಕೆಲವು ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಈ ವೇಳೆ ಅವರು ರಾಜ್ಯಪಾಲರೊಂದಿಗೆ ಮಸೂದೆಯನ್ನು ಅನುಮೋದಿಸದಂತೆ ಕೇಳಿಕೊಂಡಿದ್ದರು. ಈ ಮಸೂದೆಯು ಬುಡಕಟ್ಟು ಸಮುದಾಯದ ವಿಶೇಷ ಕಾನೂನು ನಿಬಂಧನೆಗಳನ್ನು ದುರ್ಬಲಗೊಳಿಸಿದೆ ಎಂದು ಪ್ರತಿಪಾದಿಸಿದ್ದರು.

ಇದನ್ನೂ ಓದಿ: ಹೈಕೋರ್ಟ್ ಹಿರಿಯ ವಕೀಲ ಎಸ್.ಬಾಲನ್ ಅವರೊಂದಿಗೆ ಸಂದರ್ಶನ; ಮನುವಾದಕ್ಕೆ ಅಂಬೇಡ್ಕರ್ ಎಂದರೆ ಅಸಹನೆ 

ಈ ಮಸೂದೆಯು ‘ಲಿಂಚಿಗ್‌‌’ ಅನ್ನು, “ಧರ್ಮ, ಜನಾಂಗ, ಜಾತಿ, ಲಿಂಗ, ಹುಟ್ಟಿದ ಸ್ಥಳ, ಭಾಷೆ, ಆಹಾರ ಪದ್ಧತಿಗಳು, ಲೈಂಗಿಕ ದೃಷ್ಟಿಕೋನ, ರಾಜಕೀಯ ಸಂಬಂಧ, ಜನಾಂಗೀಯತೆ ಅಥವಾ ಯಾವುದೇ ಇತರ ಹಿನ್ನಲೆಯ ಆಧಾರದ ಮೇಲೆ ಜನರ ಗುಂಪು ನಡೆಸುವ ಏಕಾಏಕಿ ಅಥವಾ ಯೋಜಿತವಾಗಿರುವ ಯಾವುದೇ ಹಿಂಸಾಚಾರದ ಅಥವಾ ಹತ್ಯೆಯ ಕೃತ್ಯ ಅಥವಾ ಸರಣಿ ಕೃತ್ಯ” ಎಂದು ವ್ಯಾಖ್ಯಾನಿಸಿತ್ತು.

ಮಾಬ್‌ ಲಿಂಚಿಂಗ್‌ ಅಲ್ಲಿ ತೊಡಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಬಹುದು ಮತ್ತು ಅಪರಾಧದ ತೀವ್ರತೆಗೆ ಅನುಗುಣವಾಗಿ 3 ಲಕ್ಷ ರೂ. ನಿಂದ 5 ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ. ಒಂದು ವೇಳೆ ಮಾಬ್‌ ಲಿಂಚ್‌ ಸಮಯದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟರೆ, ಅಪರಾಧಿಗಳಿಗೆ 25 ಲಕ್ಷ ರೂ. ದಂಡ ವಿಧಸಬಹುದಾಗಿದೆ.

ಮಸೂದೆಯ ಅಡಿಯಲ್ಲಿರುವ ಎಲ್ಲಾ ಅಪರಾಧಗಳನ್ನು ಕಾಗ್‌‌ನೈಸಬಲ್, ಜಾಮೀನು ರಹಿತ ಮತ್ತು ಸಂಯೋಜಿತವಲ್ಲದಂತೆ ಮಾಡಲಾಗಿದೆ. ಮಾಬ್‌ ಲಿಂಚಿಂ‌ಗ್‌ ಅನ್ನು ಯೋಜಿಸುವ, ಬೆಂಬಲಿಸುವ ಅಥವಾ ಪ್ರಯತ್ನಿಸುವ ವ್ಯಕ್ತಿಗಳನ್ನು ಶಿಕ್ಷಿಸಲು ಇದು ಅವಕಾಶ ನೀಡಿದೆ.

ಮಸೂದೆಗೆ ರಾಜ್ಯಪಾಲರ ಒಪ್ಪಿಗೆ ದೊರೆತರೆ, ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಮಣಿಪುರದ ನಂತರ ಗುಂಪು ಹಿಂಸಾಚಾರದ ವಿರುದ್ಧ ಕಾನೂನನ್ನು ಅಂಗೀಕರಿಸಿದ ಭಾರತದ ನಾಲ್ಕನೇ ರಾಜ್ಯವಾಗಿ ಜಾರ್ಖಂಡ್ ಆಗಲಿದೆ.

ಇದನ್ನೂ ಓದಿ: ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಕೇಂದ್ರ ಸಮಿತಿ; ಅಬ್ಜೆಕ್ಶನ್, ಮೈ ಲಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...