Homeಮುಖಪುಟ‘ಮಾಬ್‌ ಲಿಂಚಿಂಗ್‌ ವಿರೋಧಿ ಮಸೂದೆ’ಗೆ ಸಹಿ ಹಾಕಲು ನಿರಾಕರಿಸಿದ ಜಾರ್ಖಂಡ್‌ ರಾಜ್ಯಪಾಲ

‘ಮಾಬ್‌ ಲಿಂಚಿಂಗ್‌ ವಿರೋಧಿ ಮಸೂದೆ’ಗೆ ಸಹಿ ಹಾಕಲು ನಿರಾಕರಿಸಿದ ಜಾರ್ಖಂಡ್‌ ರಾಜ್ಯಪಾಲ

- Advertisement -
- Advertisement -

ಮೂರು ತಿಂಗಳ ಹಿಂದೆ ಅಂಗೀಕರಿಸಿದ ‘ಲಿಂಚಿಂಗ್‌ ವಿರೋಧಿ ಮಸೂದೆ’ಯನ್ನು ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಅವರು ಸಹಿ ಹಾಕಲು ನಿರಾಕರಿಸಿದ್ದು ರಾಜ್ಯ ಸರ್ಕಾರಕ್ಕೆ ವಾಪಾಸು ಕಳುಹಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಶುಕ್ರವಾರ ವರದಿ ಮಾಡಿದೆ. ಜಾರ್ಖಂಡ್‌ ವಿಧಾನಸಭೆಯು ಡಿಸೆಂಬರ್‌ 12 ರಂದು ಗುಂಪು ಹಿಂಸಾಚಾರ ಮತ್ತು ಗುಂಪು ಹತ್ಯೆ ತಡೆ ಮಸೂದೆ, 2021 ಅನ್ನು ಅಂಗೀಕರಿಸಿತ್ತು.

ಆದರೆ, ‘ಗುಂಪು’ (Mob-ಗುಂಪು) ಪದದ ವ್ಯಾಖ್ಯಾನವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲ ರಮೇಶ್‌‌‌ ಬೈಸ್‌‌ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. (ಮಾಬ್‌ ಲಿಂಚಿಂಗ್ ಅನ್ನು ಕನ್ನಡದಲ್ಲಿ ‘ಗುಂಪು ಹತ್ಯೆ’ ಎಂದು ಬರೆಯಲಾಗುತ್ತದೆ)

ಇದನ್ನೂ ಓದಿ: ಕರ್ನಾಟಕಕ್ಕೂ ಕಾಲಿಟ್ಟ ಮಾಬ್ ಲಿಂಚಿಂಗ್: ಲಿಂಗಸಗೂರಿನಲ್ಲಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕಳೆದ ಡಿಸೆಂಬರ್‌ನಲ್ಲಿ, ಬಿಜೆಪಿ ಶಾಸಕ ಅಮಿತ್ ಕುಮಾರ್ ಮಂಡಲ್ ಅವರು ‘ಗುಂಪು’ ಎಂಬ ಪದವನ್ನು ಸರಿಯಾಗಿ ವ್ಯಾಖ್ಯಾನಿಸಲಾಗಿಲ್ಲ ಮತ್ತು ಅದನ್ನು ದುರುಪಯೋಗಪಡಿಸಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವಿಧೇಯಕವನ್ನು ವಿಧಾನಸಭೆಯಲ್ಲಿ ಚರ್ಚೆ ನಡೆಸುತ್ತಿದ್ದಾಗ ಬಿಜೆಪಿ ಅದನ್ನು ವಿರೋಧಿಸಿ, ತುಷ್ಟೀಕರಣ ರಾಜಕಾರಣ ಮಾಡುವ ಯತ್ನ ಎಂದು ಆರೋಪಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ್ದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್‌ ಅವರು, ಬಿಜೆಪಿ ಜನರಲ್ಲಿ ಗೊಂದಲ ಮೂಡಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದರಯ. ‘ನಾವು ಗುಂಪು ಹತ್ಯೆ(ಮಾಬ್‌ ಲಿಂಚ್‌) ಕಾಯಿದೆಯ ಬಗ್ಗೆ ಮಾತನಾಡುತ್ತಿದ್ದೇವೆ, ಅದು ಮುಸ್ಲಿಂ ಹತ್ಯೆ ಕಾಯಿದೆಯೊ, ಆದಿವಾಸಿ ಹತ್ಯೆ ಕಾಯಿದೆಯೊ ಅಥವಾ ಹಿಂದೂ ಹತ್ಯೆ ಕಾಯಿದೆಯೊ ಅಲ್ಲ…ಗುಂಪು ಅಂದರೆ ಗುಂಪು ಅಷ್ಟೆ” ಎಂದು ಅವರು ಕೇಳಿದ್ದರು.

ಫೆಬ್ರವರಿ 11 ರಂದು, ಬುಡಕಟ್ಟು ಸಮುದಾಯಗಳ ಪ್ರತಿನಿಧಿಯಾಗಿ ‘ಜಂಜಾಟಿ ಸುರಕ್ಷಾ ಮಂಚ್’ ಎಂಬ ಸಂಘಟನೆಯ ಕೆಲವು ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಈ ವೇಳೆ ಅವರು ರಾಜ್ಯಪಾಲರೊಂದಿಗೆ ಮಸೂದೆಯನ್ನು ಅನುಮೋದಿಸದಂತೆ ಕೇಳಿಕೊಂಡಿದ್ದರು. ಈ ಮಸೂದೆಯು ಬುಡಕಟ್ಟು ಸಮುದಾಯದ ವಿಶೇಷ ಕಾನೂನು ನಿಬಂಧನೆಗಳನ್ನು ದುರ್ಬಲಗೊಳಿಸಿದೆ ಎಂದು ಪ್ರತಿಪಾದಿಸಿದ್ದರು.

ಇದನ್ನೂ ಓದಿ: ಹೈಕೋರ್ಟ್ ಹಿರಿಯ ವಕೀಲ ಎಸ್.ಬಾಲನ್ ಅವರೊಂದಿಗೆ ಸಂದರ್ಶನ; ಮನುವಾದಕ್ಕೆ ಅಂಬೇಡ್ಕರ್ ಎಂದರೆ ಅಸಹನೆ 

ಈ ಮಸೂದೆಯು ‘ಲಿಂಚಿಗ್‌‌’ ಅನ್ನು, “ಧರ್ಮ, ಜನಾಂಗ, ಜಾತಿ, ಲಿಂಗ, ಹುಟ್ಟಿದ ಸ್ಥಳ, ಭಾಷೆ, ಆಹಾರ ಪದ್ಧತಿಗಳು, ಲೈಂಗಿಕ ದೃಷ್ಟಿಕೋನ, ರಾಜಕೀಯ ಸಂಬಂಧ, ಜನಾಂಗೀಯತೆ ಅಥವಾ ಯಾವುದೇ ಇತರ ಹಿನ್ನಲೆಯ ಆಧಾರದ ಮೇಲೆ ಜನರ ಗುಂಪು ನಡೆಸುವ ಏಕಾಏಕಿ ಅಥವಾ ಯೋಜಿತವಾಗಿರುವ ಯಾವುದೇ ಹಿಂಸಾಚಾರದ ಅಥವಾ ಹತ್ಯೆಯ ಕೃತ್ಯ ಅಥವಾ ಸರಣಿ ಕೃತ್ಯ” ಎಂದು ವ್ಯಾಖ್ಯಾನಿಸಿತ್ತು.

ಮಾಬ್‌ ಲಿಂಚಿಂಗ್‌ ಅಲ್ಲಿ ತೊಡಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಬಹುದು ಮತ್ತು ಅಪರಾಧದ ತೀವ್ರತೆಗೆ ಅನುಗುಣವಾಗಿ 3 ಲಕ್ಷ ರೂ. ನಿಂದ 5 ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ. ಒಂದು ವೇಳೆ ಮಾಬ್‌ ಲಿಂಚ್‌ ಸಮಯದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟರೆ, ಅಪರಾಧಿಗಳಿಗೆ 25 ಲಕ್ಷ ರೂ. ದಂಡ ವಿಧಸಬಹುದಾಗಿದೆ.

ಮಸೂದೆಯ ಅಡಿಯಲ್ಲಿರುವ ಎಲ್ಲಾ ಅಪರಾಧಗಳನ್ನು ಕಾಗ್‌‌ನೈಸಬಲ್, ಜಾಮೀನು ರಹಿತ ಮತ್ತು ಸಂಯೋಜಿತವಲ್ಲದಂತೆ ಮಾಡಲಾಗಿದೆ. ಮಾಬ್‌ ಲಿಂಚಿಂ‌ಗ್‌ ಅನ್ನು ಯೋಜಿಸುವ, ಬೆಂಬಲಿಸುವ ಅಥವಾ ಪ್ರಯತ್ನಿಸುವ ವ್ಯಕ್ತಿಗಳನ್ನು ಶಿಕ್ಷಿಸಲು ಇದು ಅವಕಾಶ ನೀಡಿದೆ.

ಮಸೂದೆಗೆ ರಾಜ್ಯಪಾಲರ ಒಪ್ಪಿಗೆ ದೊರೆತರೆ, ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಮಣಿಪುರದ ನಂತರ ಗುಂಪು ಹಿಂಸಾಚಾರದ ವಿರುದ್ಧ ಕಾನೂನನ್ನು ಅಂಗೀಕರಿಸಿದ ಭಾರತದ ನಾಲ್ಕನೇ ರಾಜ್ಯವಾಗಿ ಜಾರ್ಖಂಡ್ ಆಗಲಿದೆ.

ಇದನ್ನೂ ಓದಿ: ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಕೇಂದ್ರ ಸಮಿತಿ; ಅಬ್ಜೆಕ್ಶನ್, ಮೈ ಲಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...