Homeಮುಖಪುಟ‘ಮಾಬ್‌ ಲಿಂಚಿಂಗ್‌ ವಿರೋಧಿ ಮಸೂದೆ’ಗೆ ಸಹಿ ಹಾಕಲು ನಿರಾಕರಿಸಿದ ಜಾರ್ಖಂಡ್‌ ರಾಜ್ಯಪಾಲ

‘ಮಾಬ್‌ ಲಿಂಚಿಂಗ್‌ ವಿರೋಧಿ ಮಸೂದೆ’ಗೆ ಸಹಿ ಹಾಕಲು ನಿರಾಕರಿಸಿದ ಜಾರ್ಖಂಡ್‌ ರಾಜ್ಯಪಾಲ

- Advertisement -
- Advertisement -

ಮೂರು ತಿಂಗಳ ಹಿಂದೆ ಅಂಗೀಕರಿಸಿದ ‘ಲಿಂಚಿಂಗ್‌ ವಿರೋಧಿ ಮಸೂದೆ’ಯನ್ನು ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಅವರು ಸಹಿ ಹಾಕಲು ನಿರಾಕರಿಸಿದ್ದು ರಾಜ್ಯ ಸರ್ಕಾರಕ್ಕೆ ವಾಪಾಸು ಕಳುಹಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಶುಕ್ರವಾರ ವರದಿ ಮಾಡಿದೆ. ಜಾರ್ಖಂಡ್‌ ವಿಧಾನಸಭೆಯು ಡಿಸೆಂಬರ್‌ 12 ರಂದು ಗುಂಪು ಹಿಂಸಾಚಾರ ಮತ್ತು ಗುಂಪು ಹತ್ಯೆ ತಡೆ ಮಸೂದೆ, 2021 ಅನ್ನು ಅಂಗೀಕರಿಸಿತ್ತು.

ಆದರೆ, ‘ಗುಂಪು’ (Mob-ಗುಂಪು) ಪದದ ವ್ಯಾಖ್ಯಾನವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲ ರಮೇಶ್‌‌‌ ಬೈಸ್‌‌ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. (ಮಾಬ್‌ ಲಿಂಚಿಂಗ್ ಅನ್ನು ಕನ್ನಡದಲ್ಲಿ ‘ಗುಂಪು ಹತ್ಯೆ’ ಎಂದು ಬರೆಯಲಾಗುತ್ತದೆ)

ಇದನ್ನೂ ಓದಿ: ಕರ್ನಾಟಕಕ್ಕೂ ಕಾಲಿಟ್ಟ ಮಾಬ್ ಲಿಂಚಿಂಗ್: ಲಿಂಗಸಗೂರಿನಲ್ಲಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕಳೆದ ಡಿಸೆಂಬರ್‌ನಲ್ಲಿ, ಬಿಜೆಪಿ ಶಾಸಕ ಅಮಿತ್ ಕುಮಾರ್ ಮಂಡಲ್ ಅವರು ‘ಗುಂಪು’ ಎಂಬ ಪದವನ್ನು ಸರಿಯಾಗಿ ವ್ಯಾಖ್ಯಾನಿಸಲಾಗಿಲ್ಲ ಮತ್ತು ಅದನ್ನು ದುರುಪಯೋಗಪಡಿಸಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವಿಧೇಯಕವನ್ನು ವಿಧಾನಸಭೆಯಲ್ಲಿ ಚರ್ಚೆ ನಡೆಸುತ್ತಿದ್ದಾಗ ಬಿಜೆಪಿ ಅದನ್ನು ವಿರೋಧಿಸಿ, ತುಷ್ಟೀಕರಣ ರಾಜಕಾರಣ ಮಾಡುವ ಯತ್ನ ಎಂದು ಆರೋಪಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ್ದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್‌ ಅವರು, ಬಿಜೆಪಿ ಜನರಲ್ಲಿ ಗೊಂದಲ ಮೂಡಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದರಯ. ‘ನಾವು ಗುಂಪು ಹತ್ಯೆ(ಮಾಬ್‌ ಲಿಂಚ್‌) ಕಾಯಿದೆಯ ಬಗ್ಗೆ ಮಾತನಾಡುತ್ತಿದ್ದೇವೆ, ಅದು ಮುಸ್ಲಿಂ ಹತ್ಯೆ ಕಾಯಿದೆಯೊ, ಆದಿವಾಸಿ ಹತ್ಯೆ ಕಾಯಿದೆಯೊ ಅಥವಾ ಹಿಂದೂ ಹತ್ಯೆ ಕಾಯಿದೆಯೊ ಅಲ್ಲ…ಗುಂಪು ಅಂದರೆ ಗುಂಪು ಅಷ್ಟೆ” ಎಂದು ಅವರು ಕೇಳಿದ್ದರು.

ಫೆಬ್ರವರಿ 11 ರಂದು, ಬುಡಕಟ್ಟು ಸಮುದಾಯಗಳ ಪ್ರತಿನಿಧಿಯಾಗಿ ‘ಜಂಜಾಟಿ ಸುರಕ್ಷಾ ಮಂಚ್’ ಎಂಬ ಸಂಘಟನೆಯ ಕೆಲವು ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಈ ವೇಳೆ ಅವರು ರಾಜ್ಯಪಾಲರೊಂದಿಗೆ ಮಸೂದೆಯನ್ನು ಅನುಮೋದಿಸದಂತೆ ಕೇಳಿಕೊಂಡಿದ್ದರು. ಈ ಮಸೂದೆಯು ಬುಡಕಟ್ಟು ಸಮುದಾಯದ ವಿಶೇಷ ಕಾನೂನು ನಿಬಂಧನೆಗಳನ್ನು ದುರ್ಬಲಗೊಳಿಸಿದೆ ಎಂದು ಪ್ರತಿಪಾದಿಸಿದ್ದರು.

ಇದನ್ನೂ ಓದಿ: ಹೈಕೋರ್ಟ್ ಹಿರಿಯ ವಕೀಲ ಎಸ್.ಬಾಲನ್ ಅವರೊಂದಿಗೆ ಸಂದರ್ಶನ; ಮನುವಾದಕ್ಕೆ ಅಂಬೇಡ್ಕರ್ ಎಂದರೆ ಅಸಹನೆ 

ಈ ಮಸೂದೆಯು ‘ಲಿಂಚಿಗ್‌‌’ ಅನ್ನು, “ಧರ್ಮ, ಜನಾಂಗ, ಜಾತಿ, ಲಿಂಗ, ಹುಟ್ಟಿದ ಸ್ಥಳ, ಭಾಷೆ, ಆಹಾರ ಪದ್ಧತಿಗಳು, ಲೈಂಗಿಕ ದೃಷ್ಟಿಕೋನ, ರಾಜಕೀಯ ಸಂಬಂಧ, ಜನಾಂಗೀಯತೆ ಅಥವಾ ಯಾವುದೇ ಇತರ ಹಿನ್ನಲೆಯ ಆಧಾರದ ಮೇಲೆ ಜನರ ಗುಂಪು ನಡೆಸುವ ಏಕಾಏಕಿ ಅಥವಾ ಯೋಜಿತವಾಗಿರುವ ಯಾವುದೇ ಹಿಂಸಾಚಾರದ ಅಥವಾ ಹತ್ಯೆಯ ಕೃತ್ಯ ಅಥವಾ ಸರಣಿ ಕೃತ್ಯ” ಎಂದು ವ್ಯಾಖ್ಯಾನಿಸಿತ್ತು.

ಮಾಬ್‌ ಲಿಂಚಿಂಗ್‌ ಅಲ್ಲಿ ತೊಡಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಬಹುದು ಮತ್ತು ಅಪರಾಧದ ತೀವ್ರತೆಗೆ ಅನುಗುಣವಾಗಿ 3 ಲಕ್ಷ ರೂ. ನಿಂದ 5 ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ. ಒಂದು ವೇಳೆ ಮಾಬ್‌ ಲಿಂಚ್‌ ಸಮಯದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟರೆ, ಅಪರಾಧಿಗಳಿಗೆ 25 ಲಕ್ಷ ರೂ. ದಂಡ ವಿಧಸಬಹುದಾಗಿದೆ.

ಮಸೂದೆಯ ಅಡಿಯಲ್ಲಿರುವ ಎಲ್ಲಾ ಅಪರಾಧಗಳನ್ನು ಕಾಗ್‌‌ನೈಸಬಲ್, ಜಾಮೀನು ರಹಿತ ಮತ್ತು ಸಂಯೋಜಿತವಲ್ಲದಂತೆ ಮಾಡಲಾಗಿದೆ. ಮಾಬ್‌ ಲಿಂಚಿಂ‌ಗ್‌ ಅನ್ನು ಯೋಜಿಸುವ, ಬೆಂಬಲಿಸುವ ಅಥವಾ ಪ್ರಯತ್ನಿಸುವ ವ್ಯಕ್ತಿಗಳನ್ನು ಶಿಕ್ಷಿಸಲು ಇದು ಅವಕಾಶ ನೀಡಿದೆ.

ಮಸೂದೆಗೆ ರಾಜ್ಯಪಾಲರ ಒಪ್ಪಿಗೆ ದೊರೆತರೆ, ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಮಣಿಪುರದ ನಂತರ ಗುಂಪು ಹಿಂಸಾಚಾರದ ವಿರುದ್ಧ ಕಾನೂನನ್ನು ಅಂಗೀಕರಿಸಿದ ಭಾರತದ ನಾಲ್ಕನೇ ರಾಜ್ಯವಾಗಿ ಜಾರ್ಖಂಡ್ ಆಗಲಿದೆ.

ಇದನ್ನೂ ಓದಿ: ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಕೇಂದ್ರ ಸಮಿತಿ; ಅಬ್ಜೆಕ್ಶನ್, ಮೈ ಲಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...