Homeಮುಖಪುಟಜಾರ್ಖಂಡ್: ವಿಶ್ವಾಸಮತ ಯಾಚನೆಯಲ್ಲಿ ಹೇಮಂತ್ ಸೊರೇನ್ ಭಾಗಿ; ಕೋರ್ಟ್ ಅನುಮತಿ

ಜಾರ್ಖಂಡ್: ವಿಶ್ವಾಸಮತ ಯಾಚನೆಯಲ್ಲಿ ಹೇಮಂತ್ ಸೊರೇನ್ ಭಾಗಿ; ಕೋರ್ಟ್ ಅನುಮತಿ

- Advertisement -
- Advertisement -

ಜಾರ್ಖಂಡ್ ರಾಜ್ಯದ ನೂತನ ಮುಖ್ಯಮಂತ್ರಿ ಚಂಪೈ ಸೊರೇನ್ ನೇತೃತ್ವದಲ್ಲಿ ಹೊಸದಾಗಿ ರಚನೆಯಾದ ಮಹಾಘಟಬಂಧನ್ (ಮಹಾ ಮೈತ್ರಿ) ಫೆಬ್ರವರಿ 5 ರಂದು ವಿಶ್ವಾಸಮತ ಪರೀಕ್ಷೆಯನ್ನು ಎದುರಿಸಲಿದೆ ಎಂದು ಕಾಂಗ್ರೆಸ್ ನಾಯಕ ಗುಲಾಮ್ ಅಹ್ಮದ್ ಮಿರ್ ಹೇಳಿದ್ದಾರೆ.

ಇಡಿ ಬಂಧನದಲ್ಲಿರುವ ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೆನ್‌ಗೆ ಫೆಬ್ರವರಿ 5 ರಂದು ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಯಲ್ಲಿ ಭಾಗವಹಿಸಲು ರಾಂಚಿಯ ವಿಶೇಷ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬುಧವಾರ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಸೊರೇನ್ ಅವರು ಹೊಸ ಸರ್ಕಾರ ಕೋರಿರುವ ವಿಶ್ವಾಸ ಮತದಲ್ಲಿ ಭಾಗವಹಿಸಲು ಅನುಮತಿ ಕೋರಿ ವಿಶೇಷ ಪಿಎಂಎಲ್ಎ (ಹಣ ಲಾಂಡರಿಂಗ್ ತಡೆ ಕಾಯ್ದೆ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ಮಾತನಾಡಿದ ಜಾರ್ಖಂಡ್‌ನ ಕಾಂಗ್ರೆಸ್ ಉಸ್ತುವಾರಿ ಮೀರ್, ವಿಶ್ವಾಸ ಮತ ಪರೀಕ್ಷೆ ಮುಗಿಯುವವರೆಗೆ ನಮ್ಮ ಶಾಸಕರು ‘ಸುರಕ್ಷಿತ ಸ್ಥಳದಲ್ಲಿ’ ಬಿಡಾರ ಹೂಡುತ್ತಾರೆ ಎಂದು ಹೇಳಿದರು.

ಚಂಪೈ ಸೊರೇನ್ ಪ್ರಮಾಣ ವಚನ ಸ್ವೀಕಾರದ ನಂತರ ಹೈದರಾಬಾದ್‌ಗೆ ತೆರಳಿರುವ ಆಡಳಿತಾರೂಢ ಮೈತ್ರಿಕೂಟದ ಹಲವು ಶಾಸಕರು, ಪ್ರಸ್ತುತ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಗೆ ಮುನ್ನ ತೆಲಂಗಾಣ ರಾಜಧಾನಿಯ ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದಾರೆ.

‘ಹಾಲಿ ಮುಖ್ಯಮಂತ್ರಿಯೊಬ್ಬರು ಕೆಳಗಿಳಿದು ಪಕ್ಷದ ಸಹೋದ್ಯೋಗಿಗೆ ಅಧಿಕಾರ ಹಸ್ತಾಂತರಿಸುವುದು ಅನಿರೀಕ್ಷಿತ ಬೆಳವಣಿಗೆ. ಇಡೀ ಮೈತ್ರಿ ಕೂಟವು ಅವಿರೋಧವಾಗಿ ಹೇಮಂತ್ ಸೊರೇನ್ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದೆ. ಔಪಚಾರಿಕವಾಗಿ ಮುಂದಿನ ಮುಖ್ಯಮಂತ್ರಿಯಾಗಿ ಅವರ ಹೆಸರನ್ನು ರಾಜ್ಯಪಾಲರಿಗೆ ಪ್ರಸ್ತಾಪಿಸಿದೆ. ನಿನ್ನೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅವಕಾಶ ನೀಡಿದ್ದಕ್ಕಾಗಿ ನಾವು ರಾಜ್ಯಪಾಲರಿಗೆ ಕೃತಜ್ಞರಾಗಿರುತ್ತೇವೆ. ಫೆಬ್ರವರಿ 5 ರಂದು ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಗೆ ಮೈತ್ರಿಕೂಟವನ್ನು ಆಹ್ವಾನಿಸಲಾಗುವುದು. ಅಲ್ಲಿಯವರೆಗೆ ನಮ್ಮ ಎಲ್ಲ ಶಾಸಕರು ಸಂರಕ್ಷಿತ ಸ್ಥಳದಲ್ಲಿಯೇ ಇರುತ್ತಾರೆ’ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಆಪಾದಿತ ಭೂ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಿಎಂ ಹೇಮಂತ್ ಸೊರೇನ್ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಅಶಾಂತಿಯ ನಡುವೆ, ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೇನ್ ಅವರು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸೊರೇನ್ ಜೊತೆಗೆ ಕಾಂಗ್ರೆಸ್‌ನ ಅಲಂಗೀರ್ ಆಲಂ ಮತ್ತು ಆರ್‌ಜೆಡಿಯ ಸತ್ಯಾನಂದ್ ಭೋಕ್ತಾ ಕೂಡ ಜಾರ್ಖಂಡ್ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ 29, ಅದರ ಮಿತ್ರ ಪಕ್ಷ ಕಾಂಗ್ರೆಸ್ 17 ಸ್ಥಾನಗಳನ್ನು ಹೊಂದಿದ್ದರೆ. ಆರ್‌ಜೆಡಿ ಮತ್ತು ಸಿಪಿಐ (ಎಂಎಲ್) ತಲಾ 1 ಸ್ಥಾನಗಳನ್ನು ಹೊಂದಿವೆ.

ಜೆಎಂಎಂ ನಾಯಕ ಹೇಮಂತ್ ಸೊರೇನ್ ಅವರ ನಿಷ್ಠಾವಂತ ಚಂಪೈ ಸೊರೇನ್ ಮತ್ತು 43 ಶಾಸಕರು ಗುರುವಾರ ರಾಜಭವನದಲ್ಲಿ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು.

ರಾಜ್ಯದ ಸಾರಿಗೆ ಸಚಿವರಾಗಿರುವ ಚಂಪೈ ಅವರು ಏಳು ಬಾರಿ ಶಾಸಕರಾಗಿದ್ದಾರೆ ಮತ್ತು ಅವರು ಜಾರ್ಖಂಡ್‌ನ ಸೆರೈಕೆಲ್ಲಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಜೆಎಂಎಂ ಸೇರುವ ಮುನ್ನ ಸ್ವತಂತ್ರ ಶಾಸಕರಾಗಿದ್ದರು.

ಹೇಮಂತ್ ಸೊರೇನ್‌ಗೆ ಕೋರ್ಟ್ ಅನುಮತಿ:

ಕಳೆದ ಬುಧವಾರ ಬಂಧಿತರಾಗಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಫೆಬ್ರವರಿ 5 ರಂದು ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಯಲ್ಲಿ ಭಾಗವಹಿಸಲು ರಾಂಚಿಯ ವಿಶೇಷ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸೊರೇನ್ ಅವರು ಹೊಸ ಸರ್ಕಾರ ಕೋರಿರುವ ವಿಶ್ವಾಸ ಮತದಲ್ಲಿ ಭಾಗವಹಿಸಲು ಅನುಮತಿ ಕೋರಿ ವಿಶೇಷ ಪಿಎಂಎಲ್ಎ (ಹಣ ಲಾಂಡರಿಂಗ್ ತಡೆ ಕಾಯ್ದೆ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಶುಕ್ರವಾರ ನ್ಯಾಯಾಲಯ ಅವರನ್ನು ಐದು ದಿನಗಳ ಕಾಲ ಇಡಿ ವಶಕ್ಕೆ ಒಪ್ಪಿಸಿದೆ. ತಾನು ವಿಧಾನಸಭೆಯ ಸದಸ್ಯರಾಗಿದ್ದು, ವಿಶೇಷ ಅಧಿವೇಶನದಲ್ಲಿ ಭಾಗವಹಿಸುವ ಹಕ್ಕಿದೆ ಎಂದು ಸೊರೇನ್ ನ್ಯಾಯಾಲಯದ ಮುಂದೆ ಮನವಿ ಮಾಡಿದರು.

ಇದನ್ನೂ ಓದಿ; ಬಿಜೆಪಿ ಪರ ಪ್ರಚಾರಕ್ಕೆ ತೆರಳಲು ಸಾರ್ವಜನಿಕ ಬೊಕ್ಕಸದ ಕೋಟ್ಯಾಂತರ ರೂ. ಹಣ ಬಳಸಿದ ಅಸ್ಸಾಂ ಸಿಎಂ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...