Homeಮುಖಪುಟಜಾರ್ಖಂಡ್: ವಿಶ್ವಾಸಮತ ಯಾಚನೆಯಲ್ಲಿ ಹೇಮಂತ್ ಸೊರೇನ್ ಭಾಗಿ; ಕೋರ್ಟ್ ಅನುಮತಿ

ಜಾರ್ಖಂಡ್: ವಿಶ್ವಾಸಮತ ಯಾಚನೆಯಲ್ಲಿ ಹೇಮಂತ್ ಸೊರೇನ್ ಭಾಗಿ; ಕೋರ್ಟ್ ಅನುಮತಿ

- Advertisement -
- Advertisement -

ಜಾರ್ಖಂಡ್ ರಾಜ್ಯದ ನೂತನ ಮುಖ್ಯಮಂತ್ರಿ ಚಂಪೈ ಸೊರೇನ್ ನೇತೃತ್ವದಲ್ಲಿ ಹೊಸದಾಗಿ ರಚನೆಯಾದ ಮಹಾಘಟಬಂಧನ್ (ಮಹಾ ಮೈತ್ರಿ) ಫೆಬ್ರವರಿ 5 ರಂದು ವಿಶ್ವಾಸಮತ ಪರೀಕ್ಷೆಯನ್ನು ಎದುರಿಸಲಿದೆ ಎಂದು ಕಾಂಗ್ರೆಸ್ ನಾಯಕ ಗುಲಾಮ್ ಅಹ್ಮದ್ ಮಿರ್ ಹೇಳಿದ್ದಾರೆ.

ಇಡಿ ಬಂಧನದಲ್ಲಿರುವ ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೆನ್‌ಗೆ ಫೆಬ್ರವರಿ 5 ರಂದು ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಯಲ್ಲಿ ಭಾಗವಹಿಸಲು ರಾಂಚಿಯ ವಿಶೇಷ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬುಧವಾರ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಸೊರೇನ್ ಅವರು ಹೊಸ ಸರ್ಕಾರ ಕೋರಿರುವ ವಿಶ್ವಾಸ ಮತದಲ್ಲಿ ಭಾಗವಹಿಸಲು ಅನುಮತಿ ಕೋರಿ ವಿಶೇಷ ಪಿಎಂಎಲ್ಎ (ಹಣ ಲಾಂಡರಿಂಗ್ ತಡೆ ಕಾಯ್ದೆ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ಮಾತನಾಡಿದ ಜಾರ್ಖಂಡ್‌ನ ಕಾಂಗ್ರೆಸ್ ಉಸ್ತುವಾರಿ ಮೀರ್, ವಿಶ್ವಾಸ ಮತ ಪರೀಕ್ಷೆ ಮುಗಿಯುವವರೆಗೆ ನಮ್ಮ ಶಾಸಕರು ‘ಸುರಕ್ಷಿತ ಸ್ಥಳದಲ್ಲಿ’ ಬಿಡಾರ ಹೂಡುತ್ತಾರೆ ಎಂದು ಹೇಳಿದರು.

ಚಂಪೈ ಸೊರೇನ್ ಪ್ರಮಾಣ ವಚನ ಸ್ವೀಕಾರದ ನಂತರ ಹೈದರಾಬಾದ್‌ಗೆ ತೆರಳಿರುವ ಆಡಳಿತಾರೂಢ ಮೈತ್ರಿಕೂಟದ ಹಲವು ಶಾಸಕರು, ಪ್ರಸ್ತುತ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಗೆ ಮುನ್ನ ತೆಲಂಗಾಣ ರಾಜಧಾನಿಯ ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದಾರೆ.

‘ಹಾಲಿ ಮುಖ್ಯಮಂತ್ರಿಯೊಬ್ಬರು ಕೆಳಗಿಳಿದು ಪಕ್ಷದ ಸಹೋದ್ಯೋಗಿಗೆ ಅಧಿಕಾರ ಹಸ್ತಾಂತರಿಸುವುದು ಅನಿರೀಕ್ಷಿತ ಬೆಳವಣಿಗೆ. ಇಡೀ ಮೈತ್ರಿ ಕೂಟವು ಅವಿರೋಧವಾಗಿ ಹೇಮಂತ್ ಸೊರೇನ್ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದೆ. ಔಪಚಾರಿಕವಾಗಿ ಮುಂದಿನ ಮುಖ್ಯಮಂತ್ರಿಯಾಗಿ ಅವರ ಹೆಸರನ್ನು ರಾಜ್ಯಪಾಲರಿಗೆ ಪ್ರಸ್ತಾಪಿಸಿದೆ. ನಿನ್ನೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅವಕಾಶ ನೀಡಿದ್ದಕ್ಕಾಗಿ ನಾವು ರಾಜ್ಯಪಾಲರಿಗೆ ಕೃತಜ್ಞರಾಗಿರುತ್ತೇವೆ. ಫೆಬ್ರವರಿ 5 ರಂದು ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಗೆ ಮೈತ್ರಿಕೂಟವನ್ನು ಆಹ್ವಾನಿಸಲಾಗುವುದು. ಅಲ್ಲಿಯವರೆಗೆ ನಮ್ಮ ಎಲ್ಲ ಶಾಸಕರು ಸಂರಕ್ಷಿತ ಸ್ಥಳದಲ್ಲಿಯೇ ಇರುತ್ತಾರೆ’ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಆಪಾದಿತ ಭೂ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಿಎಂ ಹೇಮಂತ್ ಸೊರೇನ್ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಅಶಾಂತಿಯ ನಡುವೆ, ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೇನ್ ಅವರು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸೊರೇನ್ ಜೊತೆಗೆ ಕಾಂಗ್ರೆಸ್‌ನ ಅಲಂಗೀರ್ ಆಲಂ ಮತ್ತು ಆರ್‌ಜೆಡಿಯ ಸತ್ಯಾನಂದ್ ಭೋಕ್ತಾ ಕೂಡ ಜಾರ್ಖಂಡ್ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ 29, ಅದರ ಮಿತ್ರ ಪಕ್ಷ ಕಾಂಗ್ರೆಸ್ 17 ಸ್ಥಾನಗಳನ್ನು ಹೊಂದಿದ್ದರೆ. ಆರ್‌ಜೆಡಿ ಮತ್ತು ಸಿಪಿಐ (ಎಂಎಲ್) ತಲಾ 1 ಸ್ಥಾನಗಳನ್ನು ಹೊಂದಿವೆ.

ಜೆಎಂಎಂ ನಾಯಕ ಹೇಮಂತ್ ಸೊರೇನ್ ಅವರ ನಿಷ್ಠಾವಂತ ಚಂಪೈ ಸೊರೇನ್ ಮತ್ತು 43 ಶಾಸಕರು ಗುರುವಾರ ರಾಜಭವನದಲ್ಲಿ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು.

ರಾಜ್ಯದ ಸಾರಿಗೆ ಸಚಿವರಾಗಿರುವ ಚಂಪೈ ಅವರು ಏಳು ಬಾರಿ ಶಾಸಕರಾಗಿದ್ದಾರೆ ಮತ್ತು ಅವರು ಜಾರ್ಖಂಡ್‌ನ ಸೆರೈಕೆಲ್ಲಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಜೆಎಂಎಂ ಸೇರುವ ಮುನ್ನ ಸ್ವತಂತ್ರ ಶಾಸಕರಾಗಿದ್ದರು.

ಹೇಮಂತ್ ಸೊರೇನ್‌ಗೆ ಕೋರ್ಟ್ ಅನುಮತಿ:

ಕಳೆದ ಬುಧವಾರ ಬಂಧಿತರಾಗಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಫೆಬ್ರವರಿ 5 ರಂದು ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಯಲ್ಲಿ ಭಾಗವಹಿಸಲು ರಾಂಚಿಯ ವಿಶೇಷ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸೊರೇನ್ ಅವರು ಹೊಸ ಸರ್ಕಾರ ಕೋರಿರುವ ವಿಶ್ವಾಸ ಮತದಲ್ಲಿ ಭಾಗವಹಿಸಲು ಅನುಮತಿ ಕೋರಿ ವಿಶೇಷ ಪಿಎಂಎಲ್ಎ (ಹಣ ಲಾಂಡರಿಂಗ್ ತಡೆ ಕಾಯ್ದೆ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಶುಕ್ರವಾರ ನ್ಯಾಯಾಲಯ ಅವರನ್ನು ಐದು ದಿನಗಳ ಕಾಲ ಇಡಿ ವಶಕ್ಕೆ ಒಪ್ಪಿಸಿದೆ. ತಾನು ವಿಧಾನಸಭೆಯ ಸದಸ್ಯರಾಗಿದ್ದು, ವಿಶೇಷ ಅಧಿವೇಶನದಲ್ಲಿ ಭಾಗವಹಿಸುವ ಹಕ್ಕಿದೆ ಎಂದು ಸೊರೇನ್ ನ್ಯಾಯಾಲಯದ ಮುಂದೆ ಮನವಿ ಮಾಡಿದರು.

ಇದನ್ನೂ ಓದಿ; ಬಿಜೆಪಿ ಪರ ಪ್ರಚಾರಕ್ಕೆ ತೆರಳಲು ಸಾರ್ವಜನಿಕ ಬೊಕ್ಕಸದ ಕೋಟ್ಯಾಂತರ ರೂ. ಹಣ ಬಳಸಿದ ಅಸ್ಸಾಂ ಸಿಎಂ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...