Homeಮುಖಪುಟಜಾರ್ಖಂಡ್: ನ್ಯಾಯಾಂಗ ಬಂಧನಕ್ಕೆ ಹೇಮಂತ್, ಸರ್ಕಾರ ರಚಿಸುವಂತೆ ಚಂಪೈಗೆ ರಾಜ್ಯಪಾಲರಿಂದ ಆಹ್ವಾನ

ಜಾರ್ಖಂಡ್: ನ್ಯಾಯಾಂಗ ಬಂಧನಕ್ಕೆ ಹೇಮಂತ್, ಸರ್ಕಾರ ರಚಿಸುವಂತೆ ಚಂಪೈಗೆ ರಾಜ್ಯಪಾಲರಿಂದ ಆಹ್ವಾನ

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯದಿಂದ (ಇಡಿ) ಬುಧವಾರ ತಡರಾತ್ರಿ ಬಂಧಿಸಲ್ಪಟ್ಟ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಒಂದು ದಿನದ ಅವಧಿಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೇಂದ್ರ ತನಿಖಾ ಸಂಸ್ಥೆಯ ಕೋರಿಕೆಯ ಕುರಿತು ತೀರ್ಪು ಶುಕ್ರವಾರ ಮಧ್ಯಾಹ್ನ ಹೊರಬೀಳುವ ನಿರೀಕ್ಷೆ ಇದೆ. ಮತ್ತೊಂದು ಕಡೆ, ಹೊಸ ಜಾರ್ಖಂಡ್ ಸರ್ಕಾರ ರಚಿಸಲು ರಾಜ್ಯಪಾಲರು ತಮ್ಮನ್ನು ಆಹ್ವಾನಿಸಿದ್ದಾರೆ ಎಂದು ಸಾರಿಗೆ ಸಚಿವ ಚಂಪೈ ಸೊರೇನ್ ಹೇಳಿದ್ದಾರೆ.

₹600 ಕೋಟಿ ಭೂ ಹಗರಣದಲ್ಲಿ ಹೇಮಂತ್ ಸೊರೇನ್ ನೇರವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಆರೋಪಿಸಿದ್ದು, ರಾಂಚಿ ವಿಶೇಷ ನ್ಯಾಯಾಲಯದ ಮುಂದೆ ಇಂದು ಬೆಳಗ್ಗೆ ಹಾಜರುಪಡಿಸಿದ್ದರು. ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸೊರೇನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಂಡ ಕಾರಣ ಅಂತಿಮ ಆದೇಶವನ್ನು ನೀಡುವಲ್ಲಿ ವಿಳಂಬವಾಗಿದೆ.

ಸೊರೇನ್ ಅವರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವ ಕೆಲವೇ ಗಂಟೆಗಳ ಮೊದಲು, ಜಾರಿ ನಿರ್ದೇಶನಾಲಯವು ತನ್ನ ಬಂಧನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ತನ್ನ ಅರ್ಜಿಯಲ್ಲಿ, ಸಂಸ್ಥೆಯು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ದುರುಪಯೋಗಪಡಿಸಿಕೊಂಡಿದೆ ಎಂದು ಹೇಳಿದರು.

ತನ್ನ ಬಂಧನವು ‘ಕಾನೂನುಬಾಹಿರ ಮತ್ತು ಕಾನೂನು ವ್ಯಾಪ್ತಿ ಮೀರಿದೆ’ ಎಂದು ಹೇಳಿದ್ದಾರೆ. ಸೊರೇನ್ ಅವರು ಈಗಾಗಲೇ ತನಿಖಾ ಸಂಸ್ಥೆಯ ಹಿರಿಯ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

‘ಇಡಿ ಕೇಂದ್ರ ಸರ್ಕಾರದ (ಆದೇಶ) ಅಡಿಯಲ್ಲಿ ನಿರ್ಲಜ್ಜವಾಗಿ ವರ್ತಿಸುತ್ತಿದೆ ಮತ್ತು ಅರ್ಜಿದಾರರ ನೇತೃತ್ವದ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಬೇಟೆಯಾಡುತ್ತಿದೆ…” ಎಂದು ಅವರು ದೂರಿದರು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಅರ್ಜಿಯ ವಿಚಾರಣೆಗೆ ಸಮ್ಮತಿಸಿದೆ.

ಸರ್ಕಾರ ರಚನೆಗೆ ಚಂಪೈ ಸೊರೇನ್‌ಗೆ ಆಹ್ವಾನ:

ಜಾರ್ಖಂಡ್ ಗವರ್ನರ್ ಸಿಪಿ ರಾಧಾಕೃಷ್ಣನ್ ಅವರು ರಾಜ್ಯದ ಸಾರಿಗೆ ಸಚಿವ ಚಂಪೈ ಸೊರೇನ್ ಅವರನ್ನು ಮುಂದಿನ ಸರ್ಕಾರ ರಚಿಸಲು ಗುರುವಾರ ಸಂಜೆ ಆಹ್ವಾನಿಸಿದ್ದಾರೆ. ಆದರೆ, ರಾಧಾಕೃಷ್ಣನ್ ಅವರು ಸೋರೆನ್ ಅವರ ಪ್ರಮಾಣವಚನಕ್ಕೆ ಸಮಯ ಮತ್ತು ದಿನಾಂಕವನ್ನು ನಿಗದಿಪಡಿಸಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಮೈತ್ರಿಕೂಟದ 43 ಶಾಸಕರ ಬೆಂಬಲವನ್ನು ಹೊಂದಿರುವ ಚಂಪೈ ಸೊರೇನ್ ಅವರು ಇಂದು ಸಂಜೆ ರಾಂಚಿಯ ಅವರ ನಿವಾಸದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಹೊಸ ಸರ್ಕಾರ ರಚನೆಗೆ ತಮ್ಮನ್ನು ಕರೆಯುವಂತೆ ಒತ್ತಾಯಿಸಿದರು.

ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಹೇಮಂತ್ ಸೊರೇನ್ ಅವರನ್ನು ನಿನ್ನೆ ಸಂಜೆ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧಿಸಿದ ನಂತರ, ಚಂಪೈ ಸೊರೇನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ; ಬಿಜೆಪಿಗೆ ಸಹಾಯ ಮಾಡಲು ಕಾಂಗ್ರೆಸ್ -ಸಿಪಿಐ(ಎಂ) ಮೈತ್ರಿ ಮಾಡಿಕೊಂಡಿವೆ: ಮಮತಾ ಬ್ಯಾನರ್ಜಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...