Homeಮುಖಪುಟಕೌಟುಂಬಿಕ ಪ್ರಕರಣ: ಮನುಸ್ಮೃತಿ ಉಲ್ಲೇಖಿಸಿ ತೀರ್ಪು ನೀಡಿದ ಜಾರ್ಖಂಡ್ ಹೈಕೋರ್ಟ್

ಕೌಟುಂಬಿಕ ಪ್ರಕರಣ: ಮನುಸ್ಮೃತಿ ಉಲ್ಲೇಖಿಸಿ ತೀರ್ಪು ನೀಡಿದ ಜಾರ್ಖಂಡ್ ಹೈಕೋರ್ಟ್

- Advertisement -
- Advertisement -

ಪತಿಯಿಂದ ಜೀವನಾಂಶ ಕೇಳಿ ಕೋರ್ಟ್‌ ಮೊರೆ ಹೋಗಿದ್ದ ಮಹಿಳೆಯ ಅರ್ಜಿಯನ್ನು ತಳ್ಳಿಹಾಕಿದ ಜಾರ್ಖಂಡ್ ಹೈಕೋರ್ಟ್, ಮನುಸ್ಮೃತಿಯನ್ನು ಉಲ್ಲೇಖಿಸಿ ತೀರ್ಪನ್ನು ನೀಡಿದೆ. ಭಾರತೀಯ ಸಂಸ್ಕೃತಿ ಪ್ರಕಾರ, ಪತ್ನಿಯು ತನ್ನ ಗಂಡನ ಕುಟುಂಬದ ಹಿರಿಯ ಸದಸ್ಯರ ಸೇವೆ ಮಾಡುವುದು ಕಡ್ಡಾಯವಾಗಿದೆ ಮತ್ತು ಆಕೆ ಪ್ರತ್ಯೇಕವಾಗಿ ವಾಸಿಸುವ ಕುರಿತ ಬೇಡಿಕೆಯನ್ನು ಈಡೇರಿಸುವುದಿಲ್ಲ ಎಂದು ಜಾರ್ಖಂಡ್ ಹೈಕೋರ್ಟ್ ಹೇಳಿ ಅರ್ಜಿದಾರ ಮಹಿಳೆಗೆ ಜೀವನಾಂಶವನ್ನು ನಿರಾಕರಿಸಿದೆ.

ಜಾರ್ಖಂಡ್ ಹೈಕೋರ್ಟ್ ನ್ಯಾಯಮೂರ್ತಿ ಸುಭಾಷ್ ಚಂದ್ ಅವರ ಪೀಠದ 25 ಪುಟಗಳ ತೀರ್ಪಿನಲ್ಲಿ, ಸುಪ್ರೀಂಕೋರ್ಟ್‌ ಈ ಮೊದಲು ಮಾಡಿರುವ ಅವಲೋಕನಗಳನ್ನು ಉಲ್ಲೇಖಿಸಲಾಗಿದೆ ಮತ್ತು ಆದರ್ಶ ವಿವಾಹಿತ ಸಂಬಂಧ ಮತ್ತು ದಂಪತಿಗಳ ಜವಾಬ್ಧಾರಿ ಮತ್ತು ಕರ್ತವ್ಯಗಳ ಬಗ್ಗೆ ಮನುಸ್ಮೃತಿ ಸೇರಿದಂತೆ ಪ್ರಾಚೀನ ಪಠ್ಯಗಳನ್ನು ಉಲ್ಲೇಖಿಸಲಾಗಿದೆ.

ಪಾಶ್ಚಿಮಾತ್ಯ ದೇಶಗಳಲ್ಲಿ ವಿವಾಹಿತ ಮಗ ತನ್ನ ಹೆತ್ತವರಿಂದ ಪ್ರತ್ಯೇಕವಾಗಿ ವಾಸಿಸುತ್ತಾರೆ, ಭಾರತಕ್ಕೆ ಹೋಲಿಕೆ ಮಾಡಿದರೆ ಕುಟುಂಬದ ಸಮೀಕರಣಗಳು ವಿಭಿನ್ನವಾಗಿ ಕಾರ್ಯನಿರ್ವಹಿಸುತ್ತವೆ. ಸಾಮಾನ್ಯ ಪರಿಸ್ಥಿತಿಯಲ್ಲಿ ಮಹಿಳೆಯು ಮದುವೆಯ ನಂತರ ಗಂಡನ ಕುಟುಂಬದೊಂದಿಗೆ ಇರಬೇಕೆಂದು ನಿರೀಕ್ಷಿಸಲಾಗಿದೆ. ಅವಳು ಕುಟುಂಬದ ಅವಿಭಾಜ್ಯ  ಭಾಗವಾಗುತ್ತಾಳೆ. ಸಾಮಾನ್ಯವಾಗಿ ಯಾವುದೇ ಬಲವಾದ ಕಾರಣವಿಲ್ಲದೆ, ತನ್ನ ಪತಿ ಕುಟುಂಬದಿಂದ ಬೇರ್ಪಟ್ಟು ತನ್ನೊಂದಿಗೆ ಮಾತ್ರ ಬದುಕಬೇಕು ಎಂದು ಅವಳು ಎಂದಿಗೂ ಒತ್ತಾಯಿಸುವಂತಿಲ್ಲ ಎಂದು ಕೋರ್ಟ್‌ ತನ್ನ ತೀರ್ಪಿನಲ್ಲಿ ಹೇಳಿದೆ.

ಥೆರೇಸಾ ಚಾಕೋ ಅವರ ಇಂಟ್ರೊಡಕ್ಷನ್ ಟೂ ಫ್ಯಾಮಿಲಿ ಲೈಫ್ ಎಜ್ಯುಕೇಶನ್ ಕೃತಿಯ ಅಂಶಗಳನ್ನು ಉಲ್ಲೇಖಿಸಿ ಆದೇಶ ನೀಡಿದ ನ್ಯಾಯಾಧೀಶರು, ಪುರುಷರು ಮತ್ತು ಮಹಿಳೆಯರ ಸೂಕ್ತ ನಡವಳಿಕೆ ಬಗ್ಗೆ ಹಲವು ಸಾಂಸ್ಕೃತಿಕ ಹಾಗೂ ಸಾಮಾಜಿಕ ನಿರೀಕ್ಷೆಗಳು ಇರುತ್ತವೆ. ಪತ್ನಿ ದಾಂಪತ್ಯದ ಸಾಮಾಜಿಕ ಜೀವನದ ಹೊಣೆ ವಹಿಸಿಕೊಳ್ಳಬೇಕು. ಪತಿಯ ಕೆಲಸದಲ್ಲಿ ಆಸಕ್ತಿ ವಹಿಸಬೇಕು. ಪತ್ನಿ-ಪತಿಯ ಚಟುವಟಿಕೆಗಳ ಜಗತ್ತನ್ನು ಅರ್ಥ ಮಾಡಿಕೊಳ್ಳಬೇಕು. ಪತಿಯ ಜೊತೆ ಉತ್ತಮ ಸಂಬಂಧವನ್ನು ಬೆಳೆಸಿಕೊಳ್ಳಬೇಕು. ಸಂವಿಧಾನವನ್ನು ಉಲ್ಲೇಖಿಸುತ್ತಾ, ಪ್ರತಿಯೊಬ್ಬ ನಾಗರಿಕನು ನಮ್ಮ ಸಂಯೋಜಿತ ಸಂಸ್ಕೃತಿಯ ಶ್ರೀಮಂತ ಪರಂಪರೆಯನ್ನು ಗೌರವಿಸಬೇಕು ಮತ್ತು ಸಂರಕ್ಷಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ಆದೇಶದಲ್ಲಿ ಮನುಸ್ಮೃತಿಯನ್ನು ಉಲ್ಲೇಖಿಸಿ, ಒಂದು ಕುಟುಂಬದ ಮಹಿಳೆಯರು ಸರಿಯಾಗಿಲ್ಲದಿದ್ದರೆ, ನೆಮ್ಮದಿಯಿಂದಿರದಿದ್ದರೆ, ಆ ಕುಟುಂಬವು ಶೀಘ್ರದಲ್ಲೇ ನಾಶವಾಗುತ್ತದೆ ಮತ್ತು ಮಹಿಳೆಯರು ತೃಪ್ತರಾಗಿರುವಲ್ಲಿ ಯಾವಾಗಲೂ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಲಾಗಿದೆ.

ದುಮ್ಕಾದಲ್ಲಿನ ಕೌಟುಂಬಿಕ ನ್ಯಾಯಾಲಯವು ತನ್ನ ಪತ್ನಿ ಮತ್ತು ಅಪ್ರಾಪ್ತ ಮಗನಿಗೆ ಜೀವನಾಂಶವನ್ನು ಪಾವತಿಸುವ ಆದೇಶವನ್ನು ಪ್ರಶ್ನಿಸಿ ವಿಚ್ಛೇದಿತ ಪತಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸುತ್ತಿದೆ. ನ್ಯಾಯಮೂರ್ತಿ ಸುಭಾಷ್ ಚಂದ್ ಅವರು ವಿಚ್ಛೇದಿತ ದಂಪತಿಗಳ ಮಗುವಿನ ಪೋಷಣೆಗಾಗಿ ಪಾವತಿಸಬೇಕಾದ ಮೊತ್ತವನ್ನು ತಿಂಗಳಿಗೆ 15,000 ರೂ.ಗಳಿಂದ 25,000 ರೂ.ಗಳಿಗೆ ಹೆಚ್ಚಿಸಿ ಆದೇಶವನ್ನು ನೀಡಿದೆ. ಆದರೆ ಪತ್ನಿಗೆ ಜೀವನಾಂಶಕ್ಕೆ ನಿರಾಕರಿಸಿದೆ.

ಇದನ್ನು ಓದಿ: “ದಾಳಿ ವೇಳೆ ಪೊಲೀಸರು ನೋಡುತ್ತಾ ನಿಂತಿದ್ದರು”: ಮುಂಬೈ ಹಿಂದುತ್ವ ಹಿಂಸಾಚಾರ ಸಂತ್ರಸ್ತರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...