Homeಮುಖಪುಟಕೌಟುಂಬಿಕ ಪ್ರಕರಣ: ಮನುಸ್ಮೃತಿ ಉಲ್ಲೇಖಿಸಿ ತೀರ್ಪು ನೀಡಿದ ಜಾರ್ಖಂಡ್ ಹೈಕೋರ್ಟ್

ಕೌಟುಂಬಿಕ ಪ್ರಕರಣ: ಮನುಸ್ಮೃತಿ ಉಲ್ಲೇಖಿಸಿ ತೀರ್ಪು ನೀಡಿದ ಜಾರ್ಖಂಡ್ ಹೈಕೋರ್ಟ್

- Advertisement -
- Advertisement -

ಪತಿಯಿಂದ ಜೀವನಾಂಶ ಕೇಳಿ ಕೋರ್ಟ್‌ ಮೊರೆ ಹೋಗಿದ್ದ ಮಹಿಳೆಯ ಅರ್ಜಿಯನ್ನು ತಳ್ಳಿಹಾಕಿದ ಜಾರ್ಖಂಡ್ ಹೈಕೋರ್ಟ್, ಮನುಸ್ಮೃತಿಯನ್ನು ಉಲ್ಲೇಖಿಸಿ ತೀರ್ಪನ್ನು ನೀಡಿದೆ. ಭಾರತೀಯ ಸಂಸ್ಕೃತಿ ಪ್ರಕಾರ, ಪತ್ನಿಯು ತನ್ನ ಗಂಡನ ಕುಟುಂಬದ ಹಿರಿಯ ಸದಸ್ಯರ ಸೇವೆ ಮಾಡುವುದು ಕಡ್ಡಾಯವಾಗಿದೆ ಮತ್ತು ಆಕೆ ಪ್ರತ್ಯೇಕವಾಗಿ ವಾಸಿಸುವ ಕುರಿತ ಬೇಡಿಕೆಯನ್ನು ಈಡೇರಿಸುವುದಿಲ್ಲ ಎಂದು ಜಾರ್ಖಂಡ್ ಹೈಕೋರ್ಟ್ ಹೇಳಿ ಅರ್ಜಿದಾರ ಮಹಿಳೆಗೆ ಜೀವನಾಂಶವನ್ನು ನಿರಾಕರಿಸಿದೆ.

ಜಾರ್ಖಂಡ್ ಹೈಕೋರ್ಟ್ ನ್ಯಾಯಮೂರ್ತಿ ಸುಭಾಷ್ ಚಂದ್ ಅವರ ಪೀಠದ 25 ಪುಟಗಳ ತೀರ್ಪಿನಲ್ಲಿ, ಸುಪ್ರೀಂಕೋರ್ಟ್‌ ಈ ಮೊದಲು ಮಾಡಿರುವ ಅವಲೋಕನಗಳನ್ನು ಉಲ್ಲೇಖಿಸಲಾಗಿದೆ ಮತ್ತು ಆದರ್ಶ ವಿವಾಹಿತ ಸಂಬಂಧ ಮತ್ತು ದಂಪತಿಗಳ ಜವಾಬ್ಧಾರಿ ಮತ್ತು ಕರ್ತವ್ಯಗಳ ಬಗ್ಗೆ ಮನುಸ್ಮೃತಿ ಸೇರಿದಂತೆ ಪ್ರಾಚೀನ ಪಠ್ಯಗಳನ್ನು ಉಲ್ಲೇಖಿಸಲಾಗಿದೆ.

ಪಾಶ್ಚಿಮಾತ್ಯ ದೇಶಗಳಲ್ಲಿ ವಿವಾಹಿತ ಮಗ ತನ್ನ ಹೆತ್ತವರಿಂದ ಪ್ರತ್ಯೇಕವಾಗಿ ವಾಸಿಸುತ್ತಾರೆ, ಭಾರತಕ್ಕೆ ಹೋಲಿಕೆ ಮಾಡಿದರೆ ಕುಟುಂಬದ ಸಮೀಕರಣಗಳು ವಿಭಿನ್ನವಾಗಿ ಕಾರ್ಯನಿರ್ವಹಿಸುತ್ತವೆ. ಸಾಮಾನ್ಯ ಪರಿಸ್ಥಿತಿಯಲ್ಲಿ ಮಹಿಳೆಯು ಮದುವೆಯ ನಂತರ ಗಂಡನ ಕುಟುಂಬದೊಂದಿಗೆ ಇರಬೇಕೆಂದು ನಿರೀಕ್ಷಿಸಲಾಗಿದೆ. ಅವಳು ಕುಟುಂಬದ ಅವಿಭಾಜ್ಯ  ಭಾಗವಾಗುತ್ತಾಳೆ. ಸಾಮಾನ್ಯವಾಗಿ ಯಾವುದೇ ಬಲವಾದ ಕಾರಣವಿಲ್ಲದೆ, ತನ್ನ ಪತಿ ಕುಟುಂಬದಿಂದ ಬೇರ್ಪಟ್ಟು ತನ್ನೊಂದಿಗೆ ಮಾತ್ರ ಬದುಕಬೇಕು ಎಂದು ಅವಳು ಎಂದಿಗೂ ಒತ್ತಾಯಿಸುವಂತಿಲ್ಲ ಎಂದು ಕೋರ್ಟ್‌ ತನ್ನ ತೀರ್ಪಿನಲ್ಲಿ ಹೇಳಿದೆ.

ಥೆರೇಸಾ ಚಾಕೋ ಅವರ ಇಂಟ್ರೊಡಕ್ಷನ್ ಟೂ ಫ್ಯಾಮಿಲಿ ಲೈಫ್ ಎಜ್ಯುಕೇಶನ್ ಕೃತಿಯ ಅಂಶಗಳನ್ನು ಉಲ್ಲೇಖಿಸಿ ಆದೇಶ ನೀಡಿದ ನ್ಯಾಯಾಧೀಶರು, ಪುರುಷರು ಮತ್ತು ಮಹಿಳೆಯರ ಸೂಕ್ತ ನಡವಳಿಕೆ ಬಗ್ಗೆ ಹಲವು ಸಾಂಸ್ಕೃತಿಕ ಹಾಗೂ ಸಾಮಾಜಿಕ ನಿರೀಕ್ಷೆಗಳು ಇರುತ್ತವೆ. ಪತ್ನಿ ದಾಂಪತ್ಯದ ಸಾಮಾಜಿಕ ಜೀವನದ ಹೊಣೆ ವಹಿಸಿಕೊಳ್ಳಬೇಕು. ಪತಿಯ ಕೆಲಸದಲ್ಲಿ ಆಸಕ್ತಿ ವಹಿಸಬೇಕು. ಪತ್ನಿ-ಪತಿಯ ಚಟುವಟಿಕೆಗಳ ಜಗತ್ತನ್ನು ಅರ್ಥ ಮಾಡಿಕೊಳ್ಳಬೇಕು. ಪತಿಯ ಜೊತೆ ಉತ್ತಮ ಸಂಬಂಧವನ್ನು ಬೆಳೆಸಿಕೊಳ್ಳಬೇಕು. ಸಂವಿಧಾನವನ್ನು ಉಲ್ಲೇಖಿಸುತ್ತಾ, ಪ್ರತಿಯೊಬ್ಬ ನಾಗರಿಕನು ನಮ್ಮ ಸಂಯೋಜಿತ ಸಂಸ್ಕೃತಿಯ ಶ್ರೀಮಂತ ಪರಂಪರೆಯನ್ನು ಗೌರವಿಸಬೇಕು ಮತ್ತು ಸಂರಕ್ಷಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ಆದೇಶದಲ್ಲಿ ಮನುಸ್ಮೃತಿಯನ್ನು ಉಲ್ಲೇಖಿಸಿ, ಒಂದು ಕುಟುಂಬದ ಮಹಿಳೆಯರು ಸರಿಯಾಗಿಲ್ಲದಿದ್ದರೆ, ನೆಮ್ಮದಿಯಿಂದಿರದಿದ್ದರೆ, ಆ ಕುಟುಂಬವು ಶೀಘ್ರದಲ್ಲೇ ನಾಶವಾಗುತ್ತದೆ ಮತ್ತು ಮಹಿಳೆಯರು ತೃಪ್ತರಾಗಿರುವಲ್ಲಿ ಯಾವಾಗಲೂ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಲಾಗಿದೆ.

ದುಮ್ಕಾದಲ್ಲಿನ ಕೌಟುಂಬಿಕ ನ್ಯಾಯಾಲಯವು ತನ್ನ ಪತ್ನಿ ಮತ್ತು ಅಪ್ರಾಪ್ತ ಮಗನಿಗೆ ಜೀವನಾಂಶವನ್ನು ಪಾವತಿಸುವ ಆದೇಶವನ್ನು ಪ್ರಶ್ನಿಸಿ ವಿಚ್ಛೇದಿತ ಪತಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸುತ್ತಿದೆ. ನ್ಯಾಯಮೂರ್ತಿ ಸುಭಾಷ್ ಚಂದ್ ಅವರು ವಿಚ್ಛೇದಿತ ದಂಪತಿಗಳ ಮಗುವಿನ ಪೋಷಣೆಗಾಗಿ ಪಾವತಿಸಬೇಕಾದ ಮೊತ್ತವನ್ನು ತಿಂಗಳಿಗೆ 15,000 ರೂ.ಗಳಿಂದ 25,000 ರೂ.ಗಳಿಗೆ ಹೆಚ್ಚಿಸಿ ಆದೇಶವನ್ನು ನೀಡಿದೆ. ಆದರೆ ಪತ್ನಿಗೆ ಜೀವನಾಂಶಕ್ಕೆ ನಿರಾಕರಿಸಿದೆ.

ಇದನ್ನು ಓದಿ: “ದಾಳಿ ವೇಳೆ ಪೊಲೀಸರು ನೋಡುತ್ತಾ ನಿಂತಿದ್ದರು”: ಮುಂಬೈ ಹಿಂದುತ್ವ ಹಿಂಸಾಚಾರ ಸಂತ್ರಸ್ತರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...