Homeಮುಖಪುಟಕೌಟುಂಬಿಕ ಪ್ರಕರಣ: ಮನುಸ್ಮೃತಿ ಉಲ್ಲೇಖಿಸಿ ತೀರ್ಪು ನೀಡಿದ ಜಾರ್ಖಂಡ್ ಹೈಕೋರ್ಟ್

ಕೌಟುಂಬಿಕ ಪ್ರಕರಣ: ಮನುಸ್ಮೃತಿ ಉಲ್ಲೇಖಿಸಿ ತೀರ್ಪು ನೀಡಿದ ಜಾರ್ಖಂಡ್ ಹೈಕೋರ್ಟ್

- Advertisement -
- Advertisement -

ಪತಿಯಿಂದ ಜೀವನಾಂಶ ಕೇಳಿ ಕೋರ್ಟ್‌ ಮೊರೆ ಹೋಗಿದ್ದ ಮಹಿಳೆಯ ಅರ್ಜಿಯನ್ನು ತಳ್ಳಿಹಾಕಿದ ಜಾರ್ಖಂಡ್ ಹೈಕೋರ್ಟ್, ಮನುಸ್ಮೃತಿಯನ್ನು ಉಲ್ಲೇಖಿಸಿ ತೀರ್ಪನ್ನು ನೀಡಿದೆ. ಭಾರತೀಯ ಸಂಸ್ಕೃತಿ ಪ್ರಕಾರ, ಪತ್ನಿಯು ತನ್ನ ಗಂಡನ ಕುಟುಂಬದ ಹಿರಿಯ ಸದಸ್ಯರ ಸೇವೆ ಮಾಡುವುದು ಕಡ್ಡಾಯವಾಗಿದೆ ಮತ್ತು ಆಕೆ ಪ್ರತ್ಯೇಕವಾಗಿ ವಾಸಿಸುವ ಕುರಿತ ಬೇಡಿಕೆಯನ್ನು ಈಡೇರಿಸುವುದಿಲ್ಲ ಎಂದು ಜಾರ್ಖಂಡ್ ಹೈಕೋರ್ಟ್ ಹೇಳಿ ಅರ್ಜಿದಾರ ಮಹಿಳೆಗೆ ಜೀವನಾಂಶವನ್ನು ನಿರಾಕರಿಸಿದೆ.

ಜಾರ್ಖಂಡ್ ಹೈಕೋರ್ಟ್ ನ್ಯಾಯಮೂರ್ತಿ ಸುಭಾಷ್ ಚಂದ್ ಅವರ ಪೀಠದ 25 ಪುಟಗಳ ತೀರ್ಪಿನಲ್ಲಿ, ಸುಪ್ರೀಂಕೋರ್ಟ್‌ ಈ ಮೊದಲು ಮಾಡಿರುವ ಅವಲೋಕನಗಳನ್ನು ಉಲ್ಲೇಖಿಸಲಾಗಿದೆ ಮತ್ತು ಆದರ್ಶ ವಿವಾಹಿತ ಸಂಬಂಧ ಮತ್ತು ದಂಪತಿಗಳ ಜವಾಬ್ಧಾರಿ ಮತ್ತು ಕರ್ತವ್ಯಗಳ ಬಗ್ಗೆ ಮನುಸ್ಮೃತಿ ಸೇರಿದಂತೆ ಪ್ರಾಚೀನ ಪಠ್ಯಗಳನ್ನು ಉಲ್ಲೇಖಿಸಲಾಗಿದೆ.

ಪಾಶ್ಚಿಮಾತ್ಯ ದೇಶಗಳಲ್ಲಿ ವಿವಾಹಿತ ಮಗ ತನ್ನ ಹೆತ್ತವರಿಂದ ಪ್ರತ್ಯೇಕವಾಗಿ ವಾಸಿಸುತ್ತಾರೆ, ಭಾರತಕ್ಕೆ ಹೋಲಿಕೆ ಮಾಡಿದರೆ ಕುಟುಂಬದ ಸಮೀಕರಣಗಳು ವಿಭಿನ್ನವಾಗಿ ಕಾರ್ಯನಿರ್ವಹಿಸುತ್ತವೆ. ಸಾಮಾನ್ಯ ಪರಿಸ್ಥಿತಿಯಲ್ಲಿ ಮಹಿಳೆಯು ಮದುವೆಯ ನಂತರ ಗಂಡನ ಕುಟುಂಬದೊಂದಿಗೆ ಇರಬೇಕೆಂದು ನಿರೀಕ್ಷಿಸಲಾಗಿದೆ. ಅವಳು ಕುಟುಂಬದ ಅವಿಭಾಜ್ಯ  ಭಾಗವಾಗುತ್ತಾಳೆ. ಸಾಮಾನ್ಯವಾಗಿ ಯಾವುದೇ ಬಲವಾದ ಕಾರಣವಿಲ್ಲದೆ, ತನ್ನ ಪತಿ ಕುಟುಂಬದಿಂದ ಬೇರ್ಪಟ್ಟು ತನ್ನೊಂದಿಗೆ ಮಾತ್ರ ಬದುಕಬೇಕು ಎಂದು ಅವಳು ಎಂದಿಗೂ ಒತ್ತಾಯಿಸುವಂತಿಲ್ಲ ಎಂದು ಕೋರ್ಟ್‌ ತನ್ನ ತೀರ್ಪಿನಲ್ಲಿ ಹೇಳಿದೆ.

ಥೆರೇಸಾ ಚಾಕೋ ಅವರ ಇಂಟ್ರೊಡಕ್ಷನ್ ಟೂ ಫ್ಯಾಮಿಲಿ ಲೈಫ್ ಎಜ್ಯುಕೇಶನ್ ಕೃತಿಯ ಅಂಶಗಳನ್ನು ಉಲ್ಲೇಖಿಸಿ ಆದೇಶ ನೀಡಿದ ನ್ಯಾಯಾಧೀಶರು, ಪುರುಷರು ಮತ್ತು ಮಹಿಳೆಯರ ಸೂಕ್ತ ನಡವಳಿಕೆ ಬಗ್ಗೆ ಹಲವು ಸಾಂಸ್ಕೃತಿಕ ಹಾಗೂ ಸಾಮಾಜಿಕ ನಿರೀಕ್ಷೆಗಳು ಇರುತ್ತವೆ. ಪತ್ನಿ ದಾಂಪತ್ಯದ ಸಾಮಾಜಿಕ ಜೀವನದ ಹೊಣೆ ವಹಿಸಿಕೊಳ್ಳಬೇಕು. ಪತಿಯ ಕೆಲಸದಲ್ಲಿ ಆಸಕ್ತಿ ವಹಿಸಬೇಕು. ಪತ್ನಿ-ಪತಿಯ ಚಟುವಟಿಕೆಗಳ ಜಗತ್ತನ್ನು ಅರ್ಥ ಮಾಡಿಕೊಳ್ಳಬೇಕು. ಪತಿಯ ಜೊತೆ ಉತ್ತಮ ಸಂಬಂಧವನ್ನು ಬೆಳೆಸಿಕೊಳ್ಳಬೇಕು. ಸಂವಿಧಾನವನ್ನು ಉಲ್ಲೇಖಿಸುತ್ತಾ, ಪ್ರತಿಯೊಬ್ಬ ನಾಗರಿಕನು ನಮ್ಮ ಸಂಯೋಜಿತ ಸಂಸ್ಕೃತಿಯ ಶ್ರೀಮಂತ ಪರಂಪರೆಯನ್ನು ಗೌರವಿಸಬೇಕು ಮತ್ತು ಸಂರಕ್ಷಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ಆದೇಶದಲ್ಲಿ ಮನುಸ್ಮೃತಿಯನ್ನು ಉಲ್ಲೇಖಿಸಿ, ಒಂದು ಕುಟುಂಬದ ಮಹಿಳೆಯರು ಸರಿಯಾಗಿಲ್ಲದಿದ್ದರೆ, ನೆಮ್ಮದಿಯಿಂದಿರದಿದ್ದರೆ, ಆ ಕುಟುಂಬವು ಶೀಘ್ರದಲ್ಲೇ ನಾಶವಾಗುತ್ತದೆ ಮತ್ತು ಮಹಿಳೆಯರು ತೃಪ್ತರಾಗಿರುವಲ್ಲಿ ಯಾವಾಗಲೂ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಲಾಗಿದೆ.

ದುಮ್ಕಾದಲ್ಲಿನ ಕೌಟುಂಬಿಕ ನ್ಯಾಯಾಲಯವು ತನ್ನ ಪತ್ನಿ ಮತ್ತು ಅಪ್ರಾಪ್ತ ಮಗನಿಗೆ ಜೀವನಾಂಶವನ್ನು ಪಾವತಿಸುವ ಆದೇಶವನ್ನು ಪ್ರಶ್ನಿಸಿ ವಿಚ್ಛೇದಿತ ಪತಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸುತ್ತಿದೆ. ನ್ಯಾಯಮೂರ್ತಿ ಸುಭಾಷ್ ಚಂದ್ ಅವರು ವಿಚ್ಛೇದಿತ ದಂಪತಿಗಳ ಮಗುವಿನ ಪೋಷಣೆಗಾಗಿ ಪಾವತಿಸಬೇಕಾದ ಮೊತ್ತವನ್ನು ತಿಂಗಳಿಗೆ 15,000 ರೂ.ಗಳಿಂದ 25,000 ರೂ.ಗಳಿಗೆ ಹೆಚ್ಚಿಸಿ ಆದೇಶವನ್ನು ನೀಡಿದೆ. ಆದರೆ ಪತ್ನಿಗೆ ಜೀವನಾಂಶಕ್ಕೆ ನಿರಾಕರಿಸಿದೆ.

ಇದನ್ನು ಓದಿ: “ದಾಳಿ ವೇಳೆ ಪೊಲೀಸರು ನೋಡುತ್ತಾ ನಿಂತಿದ್ದರು”: ಮುಂಬೈ ಹಿಂದುತ್ವ ಹಿಂಸಾಚಾರ ಸಂತ್ರಸ್ತರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...