Homeಮುಖಪುಟಕೌಟುಂಬಿಕ ಪ್ರಕರಣ: ಮನುಸ್ಮೃತಿ ಉಲ್ಲೇಖಿಸಿ ತೀರ್ಪು ನೀಡಿದ ಜಾರ್ಖಂಡ್ ಹೈಕೋರ್ಟ್

ಕೌಟುಂಬಿಕ ಪ್ರಕರಣ: ಮನುಸ್ಮೃತಿ ಉಲ್ಲೇಖಿಸಿ ತೀರ್ಪು ನೀಡಿದ ಜಾರ್ಖಂಡ್ ಹೈಕೋರ್ಟ್

- Advertisement -
- Advertisement -

ಪತಿಯಿಂದ ಜೀವನಾಂಶ ಕೇಳಿ ಕೋರ್ಟ್‌ ಮೊರೆ ಹೋಗಿದ್ದ ಮಹಿಳೆಯ ಅರ್ಜಿಯನ್ನು ತಳ್ಳಿಹಾಕಿದ ಜಾರ್ಖಂಡ್ ಹೈಕೋರ್ಟ್, ಮನುಸ್ಮೃತಿಯನ್ನು ಉಲ್ಲೇಖಿಸಿ ತೀರ್ಪನ್ನು ನೀಡಿದೆ. ಭಾರತೀಯ ಸಂಸ್ಕೃತಿ ಪ್ರಕಾರ, ಪತ್ನಿಯು ತನ್ನ ಗಂಡನ ಕುಟುಂಬದ ಹಿರಿಯ ಸದಸ್ಯರ ಸೇವೆ ಮಾಡುವುದು ಕಡ್ಡಾಯವಾಗಿದೆ ಮತ್ತು ಆಕೆ ಪ್ರತ್ಯೇಕವಾಗಿ ವಾಸಿಸುವ ಕುರಿತ ಬೇಡಿಕೆಯನ್ನು ಈಡೇರಿಸುವುದಿಲ್ಲ ಎಂದು ಜಾರ್ಖಂಡ್ ಹೈಕೋರ್ಟ್ ಹೇಳಿ ಅರ್ಜಿದಾರ ಮಹಿಳೆಗೆ ಜೀವನಾಂಶವನ್ನು ನಿರಾಕರಿಸಿದೆ.

ಜಾರ್ಖಂಡ್ ಹೈಕೋರ್ಟ್ ನ್ಯಾಯಮೂರ್ತಿ ಸುಭಾಷ್ ಚಂದ್ ಅವರ ಪೀಠದ 25 ಪುಟಗಳ ತೀರ್ಪಿನಲ್ಲಿ, ಸುಪ್ರೀಂಕೋರ್ಟ್‌ ಈ ಮೊದಲು ಮಾಡಿರುವ ಅವಲೋಕನಗಳನ್ನು ಉಲ್ಲೇಖಿಸಲಾಗಿದೆ ಮತ್ತು ಆದರ್ಶ ವಿವಾಹಿತ ಸಂಬಂಧ ಮತ್ತು ದಂಪತಿಗಳ ಜವಾಬ್ಧಾರಿ ಮತ್ತು ಕರ್ತವ್ಯಗಳ ಬಗ್ಗೆ ಮನುಸ್ಮೃತಿ ಸೇರಿದಂತೆ ಪ್ರಾಚೀನ ಪಠ್ಯಗಳನ್ನು ಉಲ್ಲೇಖಿಸಲಾಗಿದೆ.

ಪಾಶ್ಚಿಮಾತ್ಯ ದೇಶಗಳಲ್ಲಿ ವಿವಾಹಿತ ಮಗ ತನ್ನ ಹೆತ್ತವರಿಂದ ಪ್ರತ್ಯೇಕವಾಗಿ ವಾಸಿಸುತ್ತಾರೆ, ಭಾರತಕ್ಕೆ ಹೋಲಿಕೆ ಮಾಡಿದರೆ ಕುಟುಂಬದ ಸಮೀಕರಣಗಳು ವಿಭಿನ್ನವಾಗಿ ಕಾರ್ಯನಿರ್ವಹಿಸುತ್ತವೆ. ಸಾಮಾನ್ಯ ಪರಿಸ್ಥಿತಿಯಲ್ಲಿ ಮಹಿಳೆಯು ಮದುವೆಯ ನಂತರ ಗಂಡನ ಕುಟುಂಬದೊಂದಿಗೆ ಇರಬೇಕೆಂದು ನಿರೀಕ್ಷಿಸಲಾಗಿದೆ. ಅವಳು ಕುಟುಂಬದ ಅವಿಭಾಜ್ಯ  ಭಾಗವಾಗುತ್ತಾಳೆ. ಸಾಮಾನ್ಯವಾಗಿ ಯಾವುದೇ ಬಲವಾದ ಕಾರಣವಿಲ್ಲದೆ, ತನ್ನ ಪತಿ ಕುಟುಂಬದಿಂದ ಬೇರ್ಪಟ್ಟು ತನ್ನೊಂದಿಗೆ ಮಾತ್ರ ಬದುಕಬೇಕು ಎಂದು ಅವಳು ಎಂದಿಗೂ ಒತ್ತಾಯಿಸುವಂತಿಲ್ಲ ಎಂದು ಕೋರ್ಟ್‌ ತನ್ನ ತೀರ್ಪಿನಲ್ಲಿ ಹೇಳಿದೆ.

ಥೆರೇಸಾ ಚಾಕೋ ಅವರ ಇಂಟ್ರೊಡಕ್ಷನ್ ಟೂ ಫ್ಯಾಮಿಲಿ ಲೈಫ್ ಎಜ್ಯುಕೇಶನ್ ಕೃತಿಯ ಅಂಶಗಳನ್ನು ಉಲ್ಲೇಖಿಸಿ ಆದೇಶ ನೀಡಿದ ನ್ಯಾಯಾಧೀಶರು, ಪುರುಷರು ಮತ್ತು ಮಹಿಳೆಯರ ಸೂಕ್ತ ನಡವಳಿಕೆ ಬಗ್ಗೆ ಹಲವು ಸಾಂಸ್ಕೃತಿಕ ಹಾಗೂ ಸಾಮಾಜಿಕ ನಿರೀಕ್ಷೆಗಳು ಇರುತ್ತವೆ. ಪತ್ನಿ ದಾಂಪತ್ಯದ ಸಾಮಾಜಿಕ ಜೀವನದ ಹೊಣೆ ವಹಿಸಿಕೊಳ್ಳಬೇಕು. ಪತಿಯ ಕೆಲಸದಲ್ಲಿ ಆಸಕ್ತಿ ವಹಿಸಬೇಕು. ಪತ್ನಿ-ಪತಿಯ ಚಟುವಟಿಕೆಗಳ ಜಗತ್ತನ್ನು ಅರ್ಥ ಮಾಡಿಕೊಳ್ಳಬೇಕು. ಪತಿಯ ಜೊತೆ ಉತ್ತಮ ಸಂಬಂಧವನ್ನು ಬೆಳೆಸಿಕೊಳ್ಳಬೇಕು. ಸಂವಿಧಾನವನ್ನು ಉಲ್ಲೇಖಿಸುತ್ತಾ, ಪ್ರತಿಯೊಬ್ಬ ನಾಗರಿಕನು ನಮ್ಮ ಸಂಯೋಜಿತ ಸಂಸ್ಕೃತಿಯ ಶ್ರೀಮಂತ ಪರಂಪರೆಯನ್ನು ಗೌರವಿಸಬೇಕು ಮತ್ತು ಸಂರಕ್ಷಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ಆದೇಶದಲ್ಲಿ ಮನುಸ್ಮೃತಿಯನ್ನು ಉಲ್ಲೇಖಿಸಿ, ಒಂದು ಕುಟುಂಬದ ಮಹಿಳೆಯರು ಸರಿಯಾಗಿಲ್ಲದಿದ್ದರೆ, ನೆಮ್ಮದಿಯಿಂದಿರದಿದ್ದರೆ, ಆ ಕುಟುಂಬವು ಶೀಘ್ರದಲ್ಲೇ ನಾಶವಾಗುತ್ತದೆ ಮತ್ತು ಮಹಿಳೆಯರು ತೃಪ್ತರಾಗಿರುವಲ್ಲಿ ಯಾವಾಗಲೂ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಲಾಗಿದೆ.

ದುಮ್ಕಾದಲ್ಲಿನ ಕೌಟುಂಬಿಕ ನ್ಯಾಯಾಲಯವು ತನ್ನ ಪತ್ನಿ ಮತ್ತು ಅಪ್ರಾಪ್ತ ಮಗನಿಗೆ ಜೀವನಾಂಶವನ್ನು ಪಾವತಿಸುವ ಆದೇಶವನ್ನು ಪ್ರಶ್ನಿಸಿ ವಿಚ್ಛೇದಿತ ಪತಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸುತ್ತಿದೆ. ನ್ಯಾಯಮೂರ್ತಿ ಸುಭಾಷ್ ಚಂದ್ ಅವರು ವಿಚ್ಛೇದಿತ ದಂಪತಿಗಳ ಮಗುವಿನ ಪೋಷಣೆಗಾಗಿ ಪಾವತಿಸಬೇಕಾದ ಮೊತ್ತವನ್ನು ತಿಂಗಳಿಗೆ 15,000 ರೂ.ಗಳಿಂದ 25,000 ರೂ.ಗಳಿಗೆ ಹೆಚ್ಚಿಸಿ ಆದೇಶವನ್ನು ನೀಡಿದೆ. ಆದರೆ ಪತ್ನಿಗೆ ಜೀವನಾಂಶಕ್ಕೆ ನಿರಾಕರಿಸಿದೆ.

ಇದನ್ನು ಓದಿ: “ದಾಳಿ ವೇಳೆ ಪೊಲೀಸರು ನೋಡುತ್ತಾ ನಿಂತಿದ್ದರು”: ಮುಂಬೈ ಹಿಂದುತ್ವ ಹಿಂಸಾಚಾರ ಸಂತ್ರಸ್ತರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...