Homeಮುಖಪುಟಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

- Advertisement -
- Advertisement -

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಕಳೆದ ಶನಿವಾರ ನಡೆದಿದೆ ಎನ್ನಲಾದ ಘಟನೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಚಕ್ರಧರಪುರದ ಉಪವಿಭಾಗೀಯ ಆಸ್ಪತ್ರೆಯ ಅಧಿಕಾರಿಗಳು 35 ವರ್ಷದ ದಿನಗೂಲಿ ಕೆಲಸಗಾರನೊಬ್ಬನಿಗೆ ಆಂಬ್ಯುಲೆನ್ಸ್ ನಿರಾಕರಿಸಿದ್ದಾರೆ. ಕಾರ್ಡ್‌ಬೋರ್ಡ್‌ನಲ್ಲೇ ಮಗುವಿನ ಶವ ತೆಗೆದುಕೊಂಡು ಹೋಗುವಂತೆ ಸಿಬ್ಬಂದಿ ಒತ್ತಾಯಿಸಿದ್ದಾರೆ. ಸದ್ಯ. ಆರೋಗ್ಯ ಇಲಾಖೆಯು ಘಟನೆ ಕುರಿತು ತನಿಖೆಗೆ ಆದೇಶಿಸಿದೆ.

ಕಾರ್ಡ್‌ಬೋರ್ಡ್ ಪೆಟ್ಟಿಗೆಯಲ್ಲಿ ಶವವನ್ನು ಹೊತ್ತೊಯ್ಯುತ್ತಿರುವ ವ್ಯಕ್ತಿಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ, ಆರೋಗ್ಯ ಇಲಾಖೆ ತನಿಖಗೆ ಆದೇಶಿಸಿದೆ.

ವರದಿಗಳ ಪ್ರಕಾರ, ಬಂಗಾರಸಾಯಿ ಗ್ರಾಮದ ರಾಮಕೃಷ್ಣ ಹೆಂಬ್ರಾಮ್ ತನ್ನ ಗರ್ಭಿಣಿ ಪತ್ನಿ 28 ವರ್ಷದ ರೀಟಾ ತಿರಿಯಾ ಅವರನ್ನು ಮಾರ್ಚ್ 5 ರಂದು ಆಸ್ಪತ್ರೆಗೆ ದಾಖಲಿಸಿದರು. ಶನಿವಾರ ತಪಾಸಣೆಯ ಸಮಯದಲ್ಲಿ, ಸಿಬ್ಬಂದಿ ಮಗುವಿನ ಹೃದಯ ಬಡಿತವನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ರೀಟಾ ಅವರನ್ನು ಅಲ್ಟ್ರಾಸೌಂಡ್‌ ಮಾಡಿಸಿಕೊಳ್ಳುವಂತೆ ವೈದ್ಯರು ತಿಳಿಸಿದ್ದಾರೆ. ಪರೀಕ್ಷೆ ಪೂರ್ಣಗೊಳ್ಳುವ ಮೊದಲೇ ಆಕೆ ಹೆರಿಗೆ ನೋವು ಅನುಭವಿಸಲು ಪ್ರಾರಂಭಿಸಿದ್ದು, ಸತ್ತ ಮಗುವನ್ನು ಹೆತ್ತಿದ್ದಾರೆ.

ಮಗುವಿನ ದೇಹವನ್ನು ಸುಮಾರು 12 ಕಿಮೀ ದೂರದಲ್ಲಿರುವ ತನ್ನ ಮನೆಗೆ ಸಾಗಿಸಲು ಆಂಬ್ಯುಲೆನ್ಸ್ ನೀಡುವಂತೆ ಮೃತ ಮಗುವಿನ ತಂದೆ ಮನವಿ ಮಾಡಿದ್ದಾರೆ. ಆದರೆ, ಅಧಿಕಾರಿಗಳು ಅವರ ವಿನಂತಿಯನ್ನು ಪರಿಗಣಿಸಿಲ್ಲ. ಶವವನ್ನು ತಕ್ಷಣ ಹೊರಗೆ ತೆಗೆದುಕೊಂಡು ಹೋಗುವಂತೆ ಒತ್ತಾಯಿಸಿದ ವಾರ್ಡ್ ಬಾಯ್‌ಗಳು, ಆಸ್ಪತ್ರೆಯ ಆವರಣದಲ್ಲಿ ಎಸೆದಿದ್ದ ರಟ್ಟಿನ ಪೆಟ್ಟಿಗೆಯನ್ನು ತಂದೆಗೆ ನೀಡಿದ್ದಾರೆ. ಹೆಂಬ್ರಾಮ್ ಅವರು ಶವವನ್ನು ಪೆಟ್ಟಿಗೆಯಲ್ಲಿ ಇರಿಸಿ, ದಿನಸಿ ಚೀಲದಲ್ಲಿ ಪ್ಯಾಕ್ ಮಾಡಿ ರಿಕ್ಷಾ ಮೂಲಕ ಮನೆ ತಲುಪಿದ್ದಾರೆ.

“ಮಹಿಳೆಯನ್ನು ಆಸ್ಪತ್ರೆಯಲ್ಲಿ ಇರಿಸಲಾಗಿತ್ತು, ಮಗುವಿನ ಅಂತ್ಯಕ್ರಿಯೆಯನ್ನು ಪೂರ್ಣಗೊಳಿಸಲು ಕುಟುಂಬಕ್ಕೆ ಸೂಚಿಸಿದ್ದೆವು” ಎಂದು ಆಸ್ಪತ್ರೆಯ ಉಸ್ತುವಾರಿ ಡಾ. ಅಂಶುಮಾನ್ ಶರ್ಮಾ ಹೇಳಿದರು.

“ರೋಗಿಯ ಕುಟುಂಬವು ಆಂಬ್ಯುಲೆನ್ಸ್‌ಗಾಗಿ ಯಾವುದೇ ವಿನಂತಿ ಮಾಡಿಲ್ಲ. ಒಂದು ವೇಳೆ ಕೇಳಿಕೊಂಡಿದ್ದರೆ ನಾವು ಆಸ್ಪತ್ರೆಯಲ್ಲಿ ಲಭ್ಯವಿರುವ ಮಮತಾ ವಾಹನ (ಆಂಬ್ಯುಲೆನ್ಸ್) ವ್ಯವಸ್ಥೆ ಮಾಡುತ್ತಿದ್ದೆವು” ಎಂದು ಹೇಳಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ಅಜಯ್ ಕುಮಾರ್ ಸಿಂಗ್, ಆರೋಪಗಳ ತನಿಖೆಗಾಗಿ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಹೇಳಿದರು. “ಆರೋಪಗಳು ನಿಜವೆಂದು ಕಂಡುಬಂದರೆ, ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಬಹು ಪಾಸ್‌ಪೋರ್ಟ್ ಆರೋಪ : ಪವನ್ ಖೇರಾ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿದ್ದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ಬುಧವಾರ (ಏ.15) ತಡೆ ನೀಡಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ...

ಒಡಿಶಾ ಬುಡಕಟ್ಟು ಶಾಲೆಯಲ್ಲಿ ಊಟ ಸೇವಿಸಿ 5ನೇ ತರಗತಿ ವಿದ್ಯಾರ್ಥಿನಿ ಸಾವು, 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸರ್ಕಾರಿ ಬುಡಕಟ್ಟು ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 5 ನೇ ತರಗತಿಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಕಾಕಬಂಧ ​​ಆಶ್ರಮ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ...

ಡೆಹ್ರಾಡೂನ್‌| ಮುಸ್ಲಿಂ ಯುವಕನ ಮೇಲೆ ಕಾಳಿ ಸೇನಾ ನಾಯಕನಿಂದ ಹಲ್ಲೆ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಆರೋಪಿ

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ಹಿಂದುತ್ವ ನಾಯಕನೊಬ್ಬ ಹಲ್ಲೆ ನಡೆಸಿದ್ದಾನೆ ಎಂಬ ಆತಂಕಕಾರಿ ಘಟನೆ ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ಕಾಳಿ...

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...