Homeಮುಖಪುಟಜಾರ್ಖಂಡ್‌ | ಮಾನವ - ವನ್ಯಜೀವಿ ಸಂಘರ್ಷ ತಪ್ಪಿಸಲು ಆನೆ ದಾರಿಯ ಅಪ್ಲಿಕೇಶನ್ ಸಿದ್ಧ

ಜಾರ್ಖಂಡ್‌ | ಮಾನವ – ವನ್ಯಜೀವಿ ಸಂಘರ್ಷ ತಪ್ಪಿಸಲು ಆನೆ ದಾರಿಯ ಅಪ್ಲಿಕೇಶನ್ ಸಿದ್ಧ

- Advertisement -
- Advertisement -

ಮಾನವ ಮತ್ತು ವನ್ಯಜೀವಿಗಳ ಸಂಘರ್ಷವನ್ನು ಕಡಿಮೆ ಮಾಡಲು ಜಾರ್ಖಂಡ್‌ ಅರಣ್ಯ ಇಲಾಖೆಯು ‘ಎಲಿಫೆಂಟ್ ರೂಟ್ ಪ್ರಿಡಿಕ್ಟರ್’ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಆಪ್ಲಿಕೇಷನ್ ಹವಾಮಾನ ಮುನ್ಸೂಚನೆಗಳಂತೆಯೇ ಸಂಭಾವ್ಯ ಆನೆಗಳ ದಾರಿಗಳನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾಗಿದೆ.

ನಿರ್ದಿಷ್ಟ ಕಾರಿಡಾರ್‌ನಲ್ಲಿ ಆನೆಗಳ ಚಲನೆಯ ಬಗ್ಗೆಗಿನ ಪರಂಪರೆಯ ದತ್ತಾಂಶದ ಸಂಶೋಧನಾ ಅಧ್ಯಯನಗಳ ಆಧಾರದ ಮೇಲೆ ಈ ಅಪ್ಲಿಕೇಶನ್ ಅನ್ನು ಸಿದ್ಧಪಡಿಸಲಾಗಿದೆ ಎಂದು ವರದಿಯಾಗಿದೆ. ಜಾರ್ಖಂಡ್‌

ಅಪ್ಲಿಕೇಶನ್‌ನ ಹಿಂದಿನ ವ್ಯಕ್ತಿ ಹಜಾರಿಬಾಗ್ ಡಿಎಫ್‌ಒ (ಪೂರ್ವ) ವಿಕಾಸ್ ಕುಮಾರ್ ಉಜ್ವಲ್ ಕಳೆದ ಕೆಲವು ತಿಂಗಳುಗಳಿಂದ ಇದರ ಮೇಲೆ ಕೆಲಸ ಮಾಡುತ್ತಿದ್ದು, ಈಗಾಗಲೆ ಈ ಅಪ್ಲಿಕೇಶನ್‌ನ ಸೀಮಿತ ಪರೀಕ್ಷೆಯನ್ನು ಸಹ ಮಾಡಲಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅಪ್ಲಿಕೇಶನ್ ಈಗ ಅಂತಿಮ ಹಂತದಲ್ಲಿದೆ. ಅದನ್ನು ಶೀಘ್ರದಲ್ಲೇ ಜಾರ್ಖಾಂಡ್‌ನ ಹಜಾರಿಬಾಗ್‌ನಲ್ಲಿಯೇ ಪ್ರಾಯೋಗಿಕ ಆಧಾರದ ಮೇಲೆ ಪ್ರಾರಂಭಿಸಲಾಗುವುದು. ಎರಡನೇ ಹಂತದಲ್ಲಿ, ಇದನ್ನು ತಳಮಟ್ಟದ ಅರಣ್ಯ ಸಿಬ್ಬಂದಿಗೆ ಮತ್ತು ನಂತರ ಜಾರ್ಖಂಡ್ ಅರಣ್ಯ ನಿರ್ವಹಣಾ ಸಮಿತಿಗಳಿಗೆ (ಜೆಎಫ್‌ಎಂಸಿ) ಲಭ್ಯವಾಗುವಂತೆ ಮಾಡಲಾಗುತ್ತದೆ” ಎಂದು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ವೆಬ್ ಆಧಾರಿತ ಅಪ್ಲಿಕೇಶನ್ ಅನ್ನು ಅದರ ವಲಸೆ ಮಾರ್ಗದ ಬಗ್ಗೆ ಆಯ್ಕೆ ಮಾಡುವ ಮೊದಲು ಆನೆಯಂತೆ ಯೋಚಿಸಲು ಪ್ರೋಗ್ರಾಮ್ ಮಾಡಲಾಗಿದೆ.

ಇದು ಇಲ್ಲಿಯವರೆಗೆ 80% ಕ್ಕಿಂತ ಹೆಚ್ಚು ನಿಖರವಾಗಿದೆ ಎಂದು ಸಾಬೀತಾಗಿದೆ ಮತ್ತು ತಳಮಟ್ಟದಲ್ಲಿರುವ ಅರಣ್ಯ ಸಿಬ್ಬಂದಿ ಗ್ರಾಮಸ್ಥರನ್ನು ಮುಂಚಿತವಾಗಿ ಎಚ್ಚರಿಸಲು, ಸಂಘರ್ಷದ ನಿರೀಕ್ಷೆಯಲ್ಲಿ ತ್ವರಿತ ಪ್ರತಿಕ್ರಿಯೆ ತಂಡಗಳನ್ನು ಇರಿಸಲು ಮತ್ತು (ಅಗತ್ಯವಿದ್ದರೆ) ಅವುಗಳನ್ನು ಎಚ್ಚರಿಕೆಯಿಂದ ಓಡಿಸಲು ಸಹಾಯ ಮಾಡುತ್ತದೆ ಎಂದು ಅವರು ಅರಣ್ಯ ಅಧಿಕಾರಿ ಹೇಳಿದ್ದಾರೆ.

ಕೊನೆಯದಾಗಿ ನೋಡಿದ ಸ್ಥಳದಿಂದ ರಾತ್ರಿಯಲ್ಲಿ ಆನೆಗಳು ಎಲ್ಲಿವೆ ಎಂಬುದರ ಬಗ್ಗೆಯೂ ಇದು ಸುಳಿವು ನೀಡುತ್ತದೆ ಎಂದು ಅವರು ಹೇಳಿದ್ದಾರೆ. ಮಾನವ-ಆನೆ ಸಂಘರ್ಷ (HEC) ನಿರ್ವಹಣೆ ಮತ್ತು ಅರಣ್ಯ ಸಿಬ್ಬಂದಿ (ಮತ್ತು ಆನೆ ಚಾಲನಾ ತಂಡಗಳು) ಸುರಕ್ಷತೆಯಲ್ಲಿ ಇದು ಬಹಳ ಸಹಾಯಕವಾದ ಸಾಧನವಾಗಿದೆ ಎಂದು ಸಾಬೀತಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಮುಖ್ಯ ಚುನಾವಣಾ ಆಯುಕ್ತರ ಆಯ್ಕೆಗೆ ಸಭೆ ಸೇರಲಿರುವ ಮೋದಿ, ರಾಹುಲ್!

ಮುಖ್ಯ ಚುನಾವಣಾ ಆಯುಕ್ತರ ಆಯ್ಕೆಗೆ ಸಭೆ ಸೇರಲಿರುವ ಮೋದಿ, ರಾಹುಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...