Homeಮುಖಪುಟಜಾರ್ಖಂಡ್ | ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ; 'ಏಕಪಕ್ಷೀಯ' ನಿರ್ಧಾರ ಎಂದ ಆರ್‌ಜೆಡಿ!

ಜಾರ್ಖಂಡ್ | ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ; ‘ಏಕಪಕ್ಷೀಯ’ ನಿರ್ಧಾರ ಎಂದ ಆರ್‌ಜೆಡಿ!

- Advertisement -
- Advertisement -

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್ ಶನಿವಾರದಂದು 81 ವಿಧಾನಸಭಾ ಸ್ಥಾನಗಳಲ್ಲಿ 70 ಸ್ಥಾನಗಳಲ್ಲಿ ಒಟ್ಟಾಗಿ ಸ್ಪರ್ಧಿಸುವ ನಿರ್ಧಾರವನ್ನು ಪ್ರಕಟಿಸುತ್ತಿದ್ದಂತೆ ಇಂಡಿಯಾ ಒಕ್ಕೂಟದಲ್ಲಿ ಬಿರುಕುಗಳು ಬಹಿರಂಗವಾಗಿದೆ. ಉಳಿದ 11 ಸ್ಥಾನಗಳನ್ನು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಎಡಪಕ್ಷಗಳ ನಡುವೆ ಹಂಚಲಾಗುವುದು ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಜಾರ್ಖಂಡ್ ಕಾಂಗ್ರೆಸ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್ ಮತ್ತು ರಾಜ್ಯದ ಹಿರಿಯ ಸಚಿವ ರಾಮೇಶ್ವರ್ ಓರಾನ್ ಅವರ ಸಮ್ಮುಖದಲ್ಲಿ ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ನವೆಂಬರ್ 13 ಮತ್ತು 20 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 23 ರಂದು ಮತಗಳ ಎಣಿಕೆ ನಡೆಯಲಿದೆ. ಆಡಳಿತಾರೂಢ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ಜೆಎಂಎಂ ಮತ್ತು ಕಾಂಗ್ರೆಸ್‌ನ ಹಿರಿಯ ನಾಯಕರ ನಡುವೆ ನಡೆದ ಸಭೆಯ ನಂತರ ಈ ಘೋಷಣೆ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರ್‌ಜೆಡಿ ಮತ್ತು ಎಡಪಕ್ಷಗಳಿಗೆ ಮೀಸಲಾದ 11 ಸ್ಥಾನಗಳು ಅವರು ಪ್ರಬಲವಾಗಿರುವ ಕ್ಷೇತ್ರಗಳಿಗೆ ಮೀಸಲಿಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಆದಾಗ್ಯೂ, ಇಂಡಿಯಾ ಒಕ್ಕೂಟದ ಪಕ್ಷವಾಗಿರುವ ಆರ್‌ಜೆಡಿ ಈ ಸೀಟು ಹಂಚಿಕೆಯ ಘೋಷಣೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ. ರಾಂಚಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆರ್‌ಜೆಡಿ ರಾಜ್ಯಸಭಾ ಸಂಸದ ಮನೋಜ್ ಝಾ, ಮೈತ್ರಿ ಕುರಿತು ಜೆಎಂಎಂ ಮತ್ತು ಕಾಂಗ್ರೆಸ್ ಏಕಪಕ್ಷೀಯವಾಗಿ ನಿರ್ಧರಿಸಿದ ರೀತಿ ಸರಿಯಲ್ಲ ಎಂದು ಹೇಳಿದ್ದಾರೆ.

ಆರ್‌ಜೆಡಿ ಪಕ್ಷದ ಮುಖಂಡ ತೇಜಸ್ವಿ ಯಾದವ್ ರಾಂಚಿಯಲ್ಲಿ ಉಪಸ್ಥಿತರಿದ್ದರೂ, ಮೈತ್ರಿ ಬಗ್ಗೆ ಮಾಡಬೇಕಾದ ಘೋಷಣೆಯ ಬಗ್ಗೆ ಅವರಿಗೆ ತಿಳಿಸಲಾಗಿಲ್ಲ ಎಂದು ಮನೋಜ್ ಝಾ ಹೇಳಿದ್ದಾರೆ. ರಾಜ್ಯದಲ್ಲಿ ಆರ್‌ಜೆಡಿ ಪಕ್ಷವೂ ಏಕಾಂಗಿಯಾಗಿ 12 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಾರ್ಮರ್ಥ್ಯ ಇದೆ ಎಂದು ಅವರು ಹೇಳಿದ್ದಾರೆ.

“ಕಾಂಗ್ರೆಸ್ ಮತ್ತು ಜೆಎಂಎಂ ಏಕಪಕ್ಷೀಯವಾಗಿ 70 ಸ್ಥಾನಗಳಲ್ಲಿ ಮೈತ್ರಿಯನ್ನು ಘೋಷಿಸಿ ನಮಗೆ ಕೇವಲ 5 ಸ್ಥಾನಗಳನ್ನು ನೀಡುತ್ತೇವೆ ಎಂದು ಹೇಳಿದ್ದಾರೆ. ಆದರೆ 2019 ರಲ್ಲಿ ನಮ್ಮ ಅಭ್ಯರ್ಥಿಗಳು 5 ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿ ಇದ್ದರು. ನಾವು ಜಾರ್ಖಂಡ್‌ನಲ್ಲಿ ಒಂದು ಡಜನ್‌ಗಿಂತಲೂ ಹೆಚ್ಚು ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಸಮರ್ಥರಾಗಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮುನ್ನ ಶುಕ್ರವಾರ ಜಾರ್ಖಂಡ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸೀಟು ಹಂಚಿಕೆ ಸೂತ್ರದ ಬಗ್ಗೆ ಒಮ್ಮತಕ್ಕೆ ಬಂದಿದೆ. ಸೂತ್ರದ ಪ್ರಕಾರ, ಎಜೆಎಸ್‌ಯು ಪಕ್ಷ 10 ಸ್ಥಾನಗಳಲ್ಲಿ, ಜೆಡಿ (ಯು) ಎರಡು ಸ್ಥಾನಗಳಲ್ಲಿ ಮತ್ತು ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಬಣ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿದೆ. ಉಳಿದ 68 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ.

ರಾಂಚಿಯ ರಾಜ್ಯ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಮತ್ತು ಜಾರ್ಖಂಡ್‌ನ ಸಹ-ಚುನಾವಣೆ ಉಸ್ತುವಾರಿ ಆಗಿರುವ ಹಿಮಂತ ಬಿಸ್ವಾ ಶರ್ಮಾ ಅವರು ಇನ್ನು ಮುಂದೆ ಎನ್‌ಡಿಎಯಾಗಿ ಒಟ್ಟಾಗಿ ಕೆಲಸ ಮಾಡಲಿದ್ದೇವೆಯೇ ಹೊರತು ಬಿಜೆಪಿ ಅಥವಾ ಎಜೆಎಸ್‌ಯುನಂತಹ ವೈಯಕ್ತಿಕ ಪಕ್ಷಗಳಾಗಿ ಅಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವಹೇಳನ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್

ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವಹೇಳನ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...