Homeಮುಖಪುಟಜಾರ್ಖಂಡ್ | ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ; 'ಏಕಪಕ್ಷೀಯ' ನಿರ್ಧಾರ ಎಂದ ಆರ್‌ಜೆಡಿ!

ಜಾರ್ಖಂಡ್ | ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ; ‘ಏಕಪಕ್ಷೀಯ’ ನಿರ್ಧಾರ ಎಂದ ಆರ್‌ಜೆಡಿ!

- Advertisement -
- Advertisement -

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್ ಶನಿವಾರದಂದು 81 ವಿಧಾನಸಭಾ ಸ್ಥಾನಗಳಲ್ಲಿ 70 ಸ್ಥಾನಗಳಲ್ಲಿ ಒಟ್ಟಾಗಿ ಸ್ಪರ್ಧಿಸುವ ನಿರ್ಧಾರವನ್ನು ಪ್ರಕಟಿಸುತ್ತಿದ್ದಂತೆ ಇಂಡಿಯಾ ಒಕ್ಕೂಟದಲ್ಲಿ ಬಿರುಕುಗಳು ಬಹಿರಂಗವಾಗಿದೆ. ಉಳಿದ 11 ಸ್ಥಾನಗಳನ್ನು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಎಡಪಕ್ಷಗಳ ನಡುವೆ ಹಂಚಲಾಗುವುದು ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಜಾರ್ಖಂಡ್ ಕಾಂಗ್ರೆಸ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್ ಮತ್ತು ರಾಜ್ಯದ ಹಿರಿಯ ಸಚಿವ ರಾಮೇಶ್ವರ್ ಓರಾನ್ ಅವರ ಸಮ್ಮುಖದಲ್ಲಿ ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ನವೆಂಬರ್ 13 ಮತ್ತು 20 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 23 ರಂದು ಮತಗಳ ಎಣಿಕೆ ನಡೆಯಲಿದೆ. ಆಡಳಿತಾರೂಢ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ಜೆಎಂಎಂ ಮತ್ತು ಕಾಂಗ್ರೆಸ್‌ನ ಹಿರಿಯ ನಾಯಕರ ನಡುವೆ ನಡೆದ ಸಭೆಯ ನಂತರ ಈ ಘೋಷಣೆ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರ್‌ಜೆಡಿ ಮತ್ತು ಎಡಪಕ್ಷಗಳಿಗೆ ಮೀಸಲಾದ 11 ಸ್ಥಾನಗಳು ಅವರು ಪ್ರಬಲವಾಗಿರುವ ಕ್ಷೇತ್ರಗಳಿಗೆ ಮೀಸಲಿಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಆದಾಗ್ಯೂ, ಇಂಡಿಯಾ ಒಕ್ಕೂಟದ ಪಕ್ಷವಾಗಿರುವ ಆರ್‌ಜೆಡಿ ಈ ಸೀಟು ಹಂಚಿಕೆಯ ಘೋಷಣೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ. ರಾಂಚಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆರ್‌ಜೆಡಿ ರಾಜ್ಯಸಭಾ ಸಂಸದ ಮನೋಜ್ ಝಾ, ಮೈತ್ರಿ ಕುರಿತು ಜೆಎಂಎಂ ಮತ್ತು ಕಾಂಗ್ರೆಸ್ ಏಕಪಕ್ಷೀಯವಾಗಿ ನಿರ್ಧರಿಸಿದ ರೀತಿ ಸರಿಯಲ್ಲ ಎಂದು ಹೇಳಿದ್ದಾರೆ.

ಆರ್‌ಜೆಡಿ ಪಕ್ಷದ ಮುಖಂಡ ತೇಜಸ್ವಿ ಯಾದವ್ ರಾಂಚಿಯಲ್ಲಿ ಉಪಸ್ಥಿತರಿದ್ದರೂ, ಮೈತ್ರಿ ಬಗ್ಗೆ ಮಾಡಬೇಕಾದ ಘೋಷಣೆಯ ಬಗ್ಗೆ ಅವರಿಗೆ ತಿಳಿಸಲಾಗಿಲ್ಲ ಎಂದು ಮನೋಜ್ ಝಾ ಹೇಳಿದ್ದಾರೆ. ರಾಜ್ಯದಲ್ಲಿ ಆರ್‌ಜೆಡಿ ಪಕ್ಷವೂ ಏಕಾಂಗಿಯಾಗಿ 12 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಾರ್ಮರ್ಥ್ಯ ಇದೆ ಎಂದು ಅವರು ಹೇಳಿದ್ದಾರೆ.

“ಕಾಂಗ್ರೆಸ್ ಮತ್ತು ಜೆಎಂಎಂ ಏಕಪಕ್ಷೀಯವಾಗಿ 70 ಸ್ಥಾನಗಳಲ್ಲಿ ಮೈತ್ರಿಯನ್ನು ಘೋಷಿಸಿ ನಮಗೆ ಕೇವಲ 5 ಸ್ಥಾನಗಳನ್ನು ನೀಡುತ್ತೇವೆ ಎಂದು ಹೇಳಿದ್ದಾರೆ. ಆದರೆ 2019 ರಲ್ಲಿ ನಮ್ಮ ಅಭ್ಯರ್ಥಿಗಳು 5 ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿ ಇದ್ದರು. ನಾವು ಜಾರ್ಖಂಡ್‌ನಲ್ಲಿ ಒಂದು ಡಜನ್‌ಗಿಂತಲೂ ಹೆಚ್ಚು ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಸಮರ್ಥರಾಗಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮುನ್ನ ಶುಕ್ರವಾರ ಜಾರ್ಖಂಡ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸೀಟು ಹಂಚಿಕೆ ಸೂತ್ರದ ಬಗ್ಗೆ ಒಮ್ಮತಕ್ಕೆ ಬಂದಿದೆ. ಸೂತ್ರದ ಪ್ರಕಾರ, ಎಜೆಎಸ್‌ಯು ಪಕ್ಷ 10 ಸ್ಥಾನಗಳಲ್ಲಿ, ಜೆಡಿ (ಯು) ಎರಡು ಸ್ಥಾನಗಳಲ್ಲಿ ಮತ್ತು ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಬಣ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿದೆ. ಉಳಿದ 68 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ.

ರಾಂಚಿಯ ರಾಜ್ಯ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಮತ್ತು ಜಾರ್ಖಂಡ್‌ನ ಸಹ-ಚುನಾವಣೆ ಉಸ್ತುವಾರಿ ಆಗಿರುವ ಹಿಮಂತ ಬಿಸ್ವಾ ಶರ್ಮಾ ಅವರು ಇನ್ನು ಮುಂದೆ ಎನ್‌ಡಿಎಯಾಗಿ ಒಟ್ಟಾಗಿ ಕೆಲಸ ಮಾಡಲಿದ್ದೇವೆಯೇ ಹೊರತು ಬಿಜೆಪಿ ಅಥವಾ ಎಜೆಎಸ್‌ಯುನಂತಹ ವೈಯಕ್ತಿಕ ಪಕ್ಷಗಳಾಗಿ ಅಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವಹೇಳನ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್

ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವಹೇಳನ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...