Homeಮುಖಪುಟಜಾರ್ಖಂಡ್: ಜೆಎಂಎಂ ಶಾಸಕ ದಿಢೀರ್ ರಾಜೀನಾಮೆ; ಸೊರೇನ್ ಪತ್ನಿಗೆ ಸಿಎಂ ಪಟ್ಟ?

ಜಾರ್ಖಂಡ್: ಜೆಎಂಎಂ ಶಾಸಕ ದಿಢೀರ್ ರಾಜೀನಾಮೆ; ಸೊರೇನ್ ಪತ್ನಿಗೆ ಸಿಎಂ ಪಟ್ಟ?

- Advertisement -
- Advertisement -

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಶಾಸಕ ಸರ್ಫರಾಝ್ ಅಹ್ಮದ್ ಅವರು ವಿಧಾನಸಭೆಗೆ ದಿಢೀರ್ ರಾಜೀನಾಮೆ ನೀಡಿರುವುದು ಜಾರ್ಖಂಡ್‌ನಲ್ಲಿ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಏಳನೇ ಸಮನ್ಸ್ ನಿರ್ಲಕ್ಷಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಸರ್ಫರಾಝ್ ಅವರಿಂದ ತೆರವಾದ ಸ್ಥಾನದ ಮೂಲಕ ಸಿಎಂ ಸೊರೇನ್ ಪತ್ನಿ ಕಲ್ಪನಾ ಅವರನ್ನು ವಿಧಾನಸಭೆಗೆ ಆಯ್ಕೆ ಮಾಡಿ ಸಿಎಂ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಬಿಜೆಪಿ ಅಂದಾಜಿಸಿದೆ.

ಬಿಜೆಪಿಯ ಗೊಡ್ಡಾ ಸಂಸದ ನಿಶಿಕಾಂತ್ ದುಬೆ ಎಕ್ಸ್ ಪೋಸ್ಟ್ ನಲ್ಲಿ, “ಜೆಎಂಎಂ ಶಾಸಕನ ರಾಜೀನಾಮೆ ಅಧಿಕಾರದ ಬಲವಂತದ ಬದಲಾವಣೆಗೆ ಸಿದ್ಧತೆ. ಸಿಎಂ ಹೇಮಂತ್ ಸೊರೇನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದಾಗ, ಅವರ ಪತ್ನಿ ಕಲ್ಪನಾ ಮುಂದಿನ ಸಿಎಂ ಆಗಲಿದ್ದಾರೆ. ಸೊರೇನ್ ಕುಟುಂಬಕ್ಕೆ ಹೊಸ ವರ್ಷ ಯಾತನಾಮಯವಾಗಲಿದೆ” ಎಂದು ಹೇಳಿದ್ದಾರೆ.

 

ವಿಧಾನಸಭೆಯ ಸ್ಪೀಕರ್ ರವೀಂದ್ರನಾಥ್ ಮಹ್ತೋ ಅವರ ಪ್ರಕಟನೆಯ ಪ್ರಕಾರ, ಗಂಡೇ ಶಾಸಕ ಸರ್ಪರಾಝ್ ಅಹ್ಮದ್ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. “ಜಾರ್ಖಂಡ್ ವಿಧಾನಸಭಾ ಸ್ಪೀಕರ್ ಅವರು ಗಂಡೇ ಕ್ಷೇತ್ರದ ಶಾಸಕ ಸರ್ಫರಾಝ್ ಅಹ್ಮದ್ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ ಎಂದು ಸಾರ್ವಜನಿಕರಿಗೆ ತಿಳಿಸಲಾಗುತ್ತಿದೆ. ಡಿಸೆಂಬರ್ 31, 2023 ರಿಂದ ಜಾರಿಗೆ ಬರುವಂತೆ ಅವರ ಕ್ಷೇತ್ರವು ಖಾಲಿಯಾಗಿದೆ” ಎಂದು ವಿಧಾನಸಭೆ ಸಚಿವಾಲಯದ ಪ್ರಕಟನೆ ತಿಳಿಸಿದೆ.

“ಸರ್ಪರಾಜ್ ಅಹ್ಮದ್‌ರವರು ಭಾನುವಾರ ನನ್ನನ್ನು ಭೇಟಿಯಾಗಿ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ರಾಜೀನಾಮೆಗೆ ಕಾರಣ ತಿಳಿಸಿಲ್ಲ. ಆ ಬಗ್ಗೆ ಕೇಳಬೇಕೆಂದು ನನಗೆ ಅನಿಸಿಲ್ಲ” ಎಂದು ಸ್ಪೀಕರ್ ಮಹ್ತೋ ಹೇಳಿದ್ದಾಗಿ ವರದಿಗಳು ತಿಳಿಸಿವೆ.

ಜೆಎಂಎಂ ಪಕ್ಷದ ಮೂಲಗಳು, ಶಾಸಕ ಸರ್ಫರಾಝ್ ತನ್ನ ವೈಯುಕ್ತಿಕ ಕಾರಣಕ್ಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿಸಿದೆ. ಆದರೆ, ಸಿಎಂ ಸೊರೇನ್ ಅವರನ್ನು ಇಡಿ ಬಂಧಿಸಿದರೆ, ಮುಖ್ಯಮಂತ್ರಿಯಾಗಿ ಸೊರೇನ್ ಪತ್ನಿ ಕಲ್ಪನಾ ಅವರನ್ನು ನೇಮಕ ಮಾಡಲು ಸರ್ಫರಾಝ್ ಅವರಿಂದ ರಾಜೀನಾಮೆ ಪಡೆಯಲಾಗಿದೆ. ಸರ್ಫರಾಝ್ ಅವರಿಂದ ತೆರವಾದ ಸ್ಥಾನಕ್ಕೆ ಕಲ್ಪನಾ ಅವರನ್ನು ನಿಲ್ಲಿಸಿ ವಿಧಾನಸಭೆಗೆ ಕರೆತಂದು ಬಳಿಕ ಸಿಎಂ ಮಾಡುವ ಯೋಜನೆ ಇದೆ ಎಂದು ಪಕ್ಷದ ನಾಯಕರೊಬ್ಬರನ್ನು ಉಲ್ಲೇಖಿಸಿ ಹಿಂದುಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಗಂಡೇ ವಿಧಾನಸಭಾ ಕ್ಷೇತ್ರ ಮುಸ್ಲಿಮರು ಮತ್ತು ಆದಿವಾಸಿಗಳ ಪ್ರಾಬಲ್ಯದ ಪ್ರದೇಶ. ಇಲ್ಲಿ ಜೆಎಂಎಂ ಪಕ್ಷದ ಸಲ್ಕೇನ್ ಸೊರೇನ್ ಮತ್ತು ಸರ್ಫರಾಝ್ ಅಹ್ಮದ್ ಎರಡು ದಶಕಗಳಿಂದ ಸತತವಾಗಿ ಗೆಲ್ಲುತ್ತಾ ಬಂದಿದ್ದಾರೆ. ಈ ಕ್ಷೇತ್ರದಲ್ಲಿ ಜೆಎಂಎಂನ ಯಾವುದೇ ಅಭ್ಯರ್ಥಿ ಚುನಾವಣೆಗೆ ನಿಂತರೂ ಗೆಲ್ಲುವುದು ಖಚಿತ. ಈ ಕಾರಣಕ್ಕೆ ಕಲ್ಪನಾ ಅವರನ್ನು ಅಲ್ಲಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ರಾಂಚಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಇತ್ತೀಚೆಗೆ ಸಿಎಂ ಸೊರೇನ್ ಅವರಿಗೆ ಇಡಿ ಏಳನೇ ಸಮನ್ಸ್ ನೀಡಿದೆ. ಆದರೆ, ಸೊರೇನ್ ಇದುವರೆಗೆ ಇಡಿ ಮುಂದೆ ಹಾಜರಾಗಿಲ್ಲ. ಅಕ್ರಮ ಹಣ ವರ್ಗಾವಣೆ(ಪಿಎಂಎಲ್‌) ಪ್ರಕರಣ ಸೊರೇನ್ ವಿರುದ್ಧ ದಾಖಲಾಗಿರುವುದರಿಂದ ಅವರನ್ನು ಇಡಿ ಯಾವುದೇ ಸಮಯದಲ್ಲೂ ಬಂಧಿಸುವ ಸಾಧ್ಯತೆ ಇದೆ. ಹಾಗೇನಾದರೂ ಆದರೆ, ಸಿಎಂ ಪತ್ನಿಗೆ ಪಟ್ಟ ಕಟ್ಟಲು ಪ್ಲ್ಯಾನ್ ಮಾಡಲಾಗಿದೆ ಎಂದು ಹೇಳಲಾಗ್ತಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡಿನ ದಾಳಿಗೆ ನಾಲ್ವರು ಬಲಿ, 5 ಜಿಲ್ಲೆಗಳಲ್ಲಿ ಕರ್ಫ್ಯೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...