Homeಮುಖಪುಟಜಾರ್ಖಂಡ್: ಜೆಎಂಎಂ ಶಾಸಕ ದಿಢೀರ್ ರಾಜೀನಾಮೆ; ಸೊರೇನ್ ಪತ್ನಿಗೆ ಸಿಎಂ ಪಟ್ಟ?

ಜಾರ್ಖಂಡ್: ಜೆಎಂಎಂ ಶಾಸಕ ದಿಢೀರ್ ರಾಜೀನಾಮೆ; ಸೊರೇನ್ ಪತ್ನಿಗೆ ಸಿಎಂ ಪಟ್ಟ?

- Advertisement -
- Advertisement -

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಶಾಸಕ ಸರ್ಫರಾಝ್ ಅಹ್ಮದ್ ಅವರು ವಿಧಾನಸಭೆಗೆ ದಿಢೀರ್ ರಾಜೀನಾಮೆ ನೀಡಿರುವುದು ಜಾರ್ಖಂಡ್‌ನಲ್ಲಿ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಏಳನೇ ಸಮನ್ಸ್ ನಿರ್ಲಕ್ಷಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಸರ್ಫರಾಝ್ ಅವರಿಂದ ತೆರವಾದ ಸ್ಥಾನದ ಮೂಲಕ ಸಿಎಂ ಸೊರೇನ್ ಪತ್ನಿ ಕಲ್ಪನಾ ಅವರನ್ನು ವಿಧಾನಸಭೆಗೆ ಆಯ್ಕೆ ಮಾಡಿ ಸಿಎಂ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಬಿಜೆಪಿ ಅಂದಾಜಿಸಿದೆ.

ಬಿಜೆಪಿಯ ಗೊಡ್ಡಾ ಸಂಸದ ನಿಶಿಕಾಂತ್ ದುಬೆ ಎಕ್ಸ್ ಪೋಸ್ಟ್ ನಲ್ಲಿ, “ಜೆಎಂಎಂ ಶಾಸಕನ ರಾಜೀನಾಮೆ ಅಧಿಕಾರದ ಬಲವಂತದ ಬದಲಾವಣೆಗೆ ಸಿದ್ಧತೆ. ಸಿಎಂ ಹೇಮಂತ್ ಸೊರೇನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದಾಗ, ಅವರ ಪತ್ನಿ ಕಲ್ಪನಾ ಮುಂದಿನ ಸಿಎಂ ಆಗಲಿದ್ದಾರೆ. ಸೊರೇನ್ ಕುಟುಂಬಕ್ಕೆ ಹೊಸ ವರ್ಷ ಯಾತನಾಮಯವಾಗಲಿದೆ” ಎಂದು ಹೇಳಿದ್ದಾರೆ.

 

ವಿಧಾನಸಭೆಯ ಸ್ಪೀಕರ್ ರವೀಂದ್ರನಾಥ್ ಮಹ್ತೋ ಅವರ ಪ್ರಕಟನೆಯ ಪ್ರಕಾರ, ಗಂಡೇ ಶಾಸಕ ಸರ್ಪರಾಝ್ ಅಹ್ಮದ್ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. “ಜಾರ್ಖಂಡ್ ವಿಧಾನಸಭಾ ಸ್ಪೀಕರ್ ಅವರು ಗಂಡೇ ಕ್ಷೇತ್ರದ ಶಾಸಕ ಸರ್ಫರಾಝ್ ಅಹ್ಮದ್ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ ಎಂದು ಸಾರ್ವಜನಿಕರಿಗೆ ತಿಳಿಸಲಾಗುತ್ತಿದೆ. ಡಿಸೆಂಬರ್ 31, 2023 ರಿಂದ ಜಾರಿಗೆ ಬರುವಂತೆ ಅವರ ಕ್ಷೇತ್ರವು ಖಾಲಿಯಾಗಿದೆ” ಎಂದು ವಿಧಾನಸಭೆ ಸಚಿವಾಲಯದ ಪ್ರಕಟನೆ ತಿಳಿಸಿದೆ.

“ಸರ್ಪರಾಜ್ ಅಹ್ಮದ್‌ರವರು ಭಾನುವಾರ ನನ್ನನ್ನು ಭೇಟಿಯಾಗಿ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ರಾಜೀನಾಮೆಗೆ ಕಾರಣ ತಿಳಿಸಿಲ್ಲ. ಆ ಬಗ್ಗೆ ಕೇಳಬೇಕೆಂದು ನನಗೆ ಅನಿಸಿಲ್ಲ” ಎಂದು ಸ್ಪೀಕರ್ ಮಹ್ತೋ ಹೇಳಿದ್ದಾಗಿ ವರದಿಗಳು ತಿಳಿಸಿವೆ.

ಜೆಎಂಎಂ ಪಕ್ಷದ ಮೂಲಗಳು, ಶಾಸಕ ಸರ್ಫರಾಝ್ ತನ್ನ ವೈಯುಕ್ತಿಕ ಕಾರಣಕ್ಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿಸಿದೆ. ಆದರೆ, ಸಿಎಂ ಸೊರೇನ್ ಅವರನ್ನು ಇಡಿ ಬಂಧಿಸಿದರೆ, ಮುಖ್ಯಮಂತ್ರಿಯಾಗಿ ಸೊರೇನ್ ಪತ್ನಿ ಕಲ್ಪನಾ ಅವರನ್ನು ನೇಮಕ ಮಾಡಲು ಸರ್ಫರಾಝ್ ಅವರಿಂದ ರಾಜೀನಾಮೆ ಪಡೆಯಲಾಗಿದೆ. ಸರ್ಫರಾಝ್ ಅವರಿಂದ ತೆರವಾದ ಸ್ಥಾನಕ್ಕೆ ಕಲ್ಪನಾ ಅವರನ್ನು ನಿಲ್ಲಿಸಿ ವಿಧಾನಸಭೆಗೆ ಕರೆತಂದು ಬಳಿಕ ಸಿಎಂ ಮಾಡುವ ಯೋಜನೆ ಇದೆ ಎಂದು ಪಕ್ಷದ ನಾಯಕರೊಬ್ಬರನ್ನು ಉಲ್ಲೇಖಿಸಿ ಹಿಂದುಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಗಂಡೇ ವಿಧಾನಸಭಾ ಕ್ಷೇತ್ರ ಮುಸ್ಲಿಮರು ಮತ್ತು ಆದಿವಾಸಿಗಳ ಪ್ರಾಬಲ್ಯದ ಪ್ರದೇಶ. ಇಲ್ಲಿ ಜೆಎಂಎಂ ಪಕ್ಷದ ಸಲ್ಕೇನ್ ಸೊರೇನ್ ಮತ್ತು ಸರ್ಫರಾಝ್ ಅಹ್ಮದ್ ಎರಡು ದಶಕಗಳಿಂದ ಸತತವಾಗಿ ಗೆಲ್ಲುತ್ತಾ ಬಂದಿದ್ದಾರೆ. ಈ ಕ್ಷೇತ್ರದಲ್ಲಿ ಜೆಎಂಎಂನ ಯಾವುದೇ ಅಭ್ಯರ್ಥಿ ಚುನಾವಣೆಗೆ ನಿಂತರೂ ಗೆಲ್ಲುವುದು ಖಚಿತ. ಈ ಕಾರಣಕ್ಕೆ ಕಲ್ಪನಾ ಅವರನ್ನು ಅಲ್ಲಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ರಾಂಚಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಇತ್ತೀಚೆಗೆ ಸಿಎಂ ಸೊರೇನ್ ಅವರಿಗೆ ಇಡಿ ಏಳನೇ ಸಮನ್ಸ್ ನೀಡಿದೆ. ಆದರೆ, ಸೊರೇನ್ ಇದುವರೆಗೆ ಇಡಿ ಮುಂದೆ ಹಾಜರಾಗಿಲ್ಲ. ಅಕ್ರಮ ಹಣ ವರ್ಗಾವಣೆ(ಪಿಎಂಎಲ್‌) ಪ್ರಕರಣ ಸೊರೇನ್ ವಿರುದ್ಧ ದಾಖಲಾಗಿರುವುದರಿಂದ ಅವರನ್ನು ಇಡಿ ಯಾವುದೇ ಸಮಯದಲ್ಲೂ ಬಂಧಿಸುವ ಸಾಧ್ಯತೆ ಇದೆ. ಹಾಗೇನಾದರೂ ಆದರೆ, ಸಿಎಂ ಪತ್ನಿಗೆ ಪಟ್ಟ ಕಟ್ಟಲು ಪ್ಲ್ಯಾನ್ ಮಾಡಲಾಗಿದೆ ಎಂದು ಹೇಳಲಾಗ್ತಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡಿನ ದಾಳಿಗೆ ನಾಲ್ವರು ಬಲಿ, 5 ಜಿಲ್ಲೆಗಳಲ್ಲಿ ಕರ್ಫ್ಯೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...