Homeಮುಖಪುಟಜಾರ್ಖಂಡ್: ಜೆಎಂಎಂ ಶಾಸಕ ದಿಢೀರ್ ರಾಜೀನಾಮೆ; ಸೊರೇನ್ ಪತ್ನಿಗೆ ಸಿಎಂ ಪಟ್ಟ?

ಜಾರ್ಖಂಡ್: ಜೆಎಂಎಂ ಶಾಸಕ ದಿಢೀರ್ ರಾಜೀನಾಮೆ; ಸೊರೇನ್ ಪತ್ನಿಗೆ ಸಿಎಂ ಪಟ್ಟ?

- Advertisement -
- Advertisement -

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಶಾಸಕ ಸರ್ಫರಾಝ್ ಅಹ್ಮದ್ ಅವರು ವಿಧಾನಸಭೆಗೆ ದಿಢೀರ್ ರಾಜೀನಾಮೆ ನೀಡಿರುವುದು ಜಾರ್ಖಂಡ್‌ನಲ್ಲಿ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಏಳನೇ ಸಮನ್ಸ್ ನಿರ್ಲಕ್ಷಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಸರ್ಫರಾಝ್ ಅವರಿಂದ ತೆರವಾದ ಸ್ಥಾನದ ಮೂಲಕ ಸಿಎಂ ಸೊರೇನ್ ಪತ್ನಿ ಕಲ್ಪನಾ ಅವರನ್ನು ವಿಧಾನಸಭೆಗೆ ಆಯ್ಕೆ ಮಾಡಿ ಸಿಎಂ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಬಿಜೆಪಿ ಅಂದಾಜಿಸಿದೆ.

ಬಿಜೆಪಿಯ ಗೊಡ್ಡಾ ಸಂಸದ ನಿಶಿಕಾಂತ್ ದುಬೆ ಎಕ್ಸ್ ಪೋಸ್ಟ್ ನಲ್ಲಿ, “ಜೆಎಂಎಂ ಶಾಸಕನ ರಾಜೀನಾಮೆ ಅಧಿಕಾರದ ಬಲವಂತದ ಬದಲಾವಣೆಗೆ ಸಿದ್ಧತೆ. ಸಿಎಂ ಹೇಮಂತ್ ಸೊರೇನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದಾಗ, ಅವರ ಪತ್ನಿ ಕಲ್ಪನಾ ಮುಂದಿನ ಸಿಎಂ ಆಗಲಿದ್ದಾರೆ. ಸೊರೇನ್ ಕುಟುಂಬಕ್ಕೆ ಹೊಸ ವರ್ಷ ಯಾತನಾಮಯವಾಗಲಿದೆ” ಎಂದು ಹೇಳಿದ್ದಾರೆ.

 

ವಿಧಾನಸಭೆಯ ಸ್ಪೀಕರ್ ರವೀಂದ್ರನಾಥ್ ಮಹ್ತೋ ಅವರ ಪ್ರಕಟನೆಯ ಪ್ರಕಾರ, ಗಂಡೇ ಶಾಸಕ ಸರ್ಪರಾಝ್ ಅಹ್ಮದ್ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. “ಜಾರ್ಖಂಡ್ ವಿಧಾನಸಭಾ ಸ್ಪೀಕರ್ ಅವರು ಗಂಡೇ ಕ್ಷೇತ್ರದ ಶಾಸಕ ಸರ್ಫರಾಝ್ ಅಹ್ಮದ್ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ ಎಂದು ಸಾರ್ವಜನಿಕರಿಗೆ ತಿಳಿಸಲಾಗುತ್ತಿದೆ. ಡಿಸೆಂಬರ್ 31, 2023 ರಿಂದ ಜಾರಿಗೆ ಬರುವಂತೆ ಅವರ ಕ್ಷೇತ್ರವು ಖಾಲಿಯಾಗಿದೆ” ಎಂದು ವಿಧಾನಸಭೆ ಸಚಿವಾಲಯದ ಪ್ರಕಟನೆ ತಿಳಿಸಿದೆ.

“ಸರ್ಪರಾಜ್ ಅಹ್ಮದ್‌ರವರು ಭಾನುವಾರ ನನ್ನನ್ನು ಭೇಟಿಯಾಗಿ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ರಾಜೀನಾಮೆಗೆ ಕಾರಣ ತಿಳಿಸಿಲ್ಲ. ಆ ಬಗ್ಗೆ ಕೇಳಬೇಕೆಂದು ನನಗೆ ಅನಿಸಿಲ್ಲ” ಎಂದು ಸ್ಪೀಕರ್ ಮಹ್ತೋ ಹೇಳಿದ್ದಾಗಿ ವರದಿಗಳು ತಿಳಿಸಿವೆ.

ಜೆಎಂಎಂ ಪಕ್ಷದ ಮೂಲಗಳು, ಶಾಸಕ ಸರ್ಫರಾಝ್ ತನ್ನ ವೈಯುಕ್ತಿಕ ಕಾರಣಕ್ಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿಸಿದೆ. ಆದರೆ, ಸಿಎಂ ಸೊರೇನ್ ಅವರನ್ನು ಇಡಿ ಬಂಧಿಸಿದರೆ, ಮುಖ್ಯಮಂತ್ರಿಯಾಗಿ ಸೊರೇನ್ ಪತ್ನಿ ಕಲ್ಪನಾ ಅವರನ್ನು ನೇಮಕ ಮಾಡಲು ಸರ್ಫರಾಝ್ ಅವರಿಂದ ರಾಜೀನಾಮೆ ಪಡೆಯಲಾಗಿದೆ. ಸರ್ಫರಾಝ್ ಅವರಿಂದ ತೆರವಾದ ಸ್ಥಾನಕ್ಕೆ ಕಲ್ಪನಾ ಅವರನ್ನು ನಿಲ್ಲಿಸಿ ವಿಧಾನಸಭೆಗೆ ಕರೆತಂದು ಬಳಿಕ ಸಿಎಂ ಮಾಡುವ ಯೋಜನೆ ಇದೆ ಎಂದು ಪಕ್ಷದ ನಾಯಕರೊಬ್ಬರನ್ನು ಉಲ್ಲೇಖಿಸಿ ಹಿಂದುಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಗಂಡೇ ವಿಧಾನಸಭಾ ಕ್ಷೇತ್ರ ಮುಸ್ಲಿಮರು ಮತ್ತು ಆದಿವಾಸಿಗಳ ಪ್ರಾಬಲ್ಯದ ಪ್ರದೇಶ. ಇಲ್ಲಿ ಜೆಎಂಎಂ ಪಕ್ಷದ ಸಲ್ಕೇನ್ ಸೊರೇನ್ ಮತ್ತು ಸರ್ಫರಾಝ್ ಅಹ್ಮದ್ ಎರಡು ದಶಕಗಳಿಂದ ಸತತವಾಗಿ ಗೆಲ್ಲುತ್ತಾ ಬಂದಿದ್ದಾರೆ. ಈ ಕ್ಷೇತ್ರದಲ್ಲಿ ಜೆಎಂಎಂನ ಯಾವುದೇ ಅಭ್ಯರ್ಥಿ ಚುನಾವಣೆಗೆ ನಿಂತರೂ ಗೆಲ್ಲುವುದು ಖಚಿತ. ಈ ಕಾರಣಕ್ಕೆ ಕಲ್ಪನಾ ಅವರನ್ನು ಅಲ್ಲಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ರಾಂಚಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಇತ್ತೀಚೆಗೆ ಸಿಎಂ ಸೊರೇನ್ ಅವರಿಗೆ ಇಡಿ ಏಳನೇ ಸಮನ್ಸ್ ನೀಡಿದೆ. ಆದರೆ, ಸೊರೇನ್ ಇದುವರೆಗೆ ಇಡಿ ಮುಂದೆ ಹಾಜರಾಗಿಲ್ಲ. ಅಕ್ರಮ ಹಣ ವರ್ಗಾವಣೆ(ಪಿಎಂಎಲ್‌) ಪ್ರಕರಣ ಸೊರೇನ್ ವಿರುದ್ಧ ದಾಖಲಾಗಿರುವುದರಿಂದ ಅವರನ್ನು ಇಡಿ ಯಾವುದೇ ಸಮಯದಲ್ಲೂ ಬಂಧಿಸುವ ಸಾಧ್ಯತೆ ಇದೆ. ಹಾಗೇನಾದರೂ ಆದರೆ, ಸಿಎಂ ಪತ್ನಿಗೆ ಪಟ್ಟ ಕಟ್ಟಲು ಪ್ಲ್ಯಾನ್ ಮಾಡಲಾಗಿದೆ ಎಂದು ಹೇಳಲಾಗ್ತಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡಿನ ದಾಳಿಗೆ ನಾಲ್ವರು ಬಲಿ, 5 ಜಿಲ್ಲೆಗಳಲ್ಲಿ ಕರ್ಫ್ಯೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...