Homeಮುಖಪುಟಜಾರ್ಖಂಡ್ : ಸಿಎಎ, ಎನ್‌ಆರ್‌ಸಿ, ಯುಸಿಸಿ ವಿರುದ್ಧ ನಿರ್ಣಯ ಕೈಗೊಂಡ ಜೆಎಂಎಂ

ಜಾರ್ಖಂಡ್ : ಸಿಎಎ, ಎನ್‌ಆರ್‌ಸಿ, ಯುಸಿಸಿ ವಿರುದ್ಧ ನಿರ್ಣಯ ಕೈಗೊಂಡ ಜೆಎಂಎಂ

- Advertisement -
- Advertisement -

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷ ಭಾನುವಾರ (ಫೆ.2) ರಾತ್ರಿ ಡುಮ್ಕಾದ ಗಾಂಧಿ ಮೈದಾನದಲ್ಲಿ ನಡೆದ 46ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಗಳನ್ನು ದೃಢವಾಗಿ ವಿರೋಧಿಸುವ 50 ಅಂಶಗಳ ನಿರ್ಣಯವನ್ನು ಅಂಗೀಕರಿಸಿದೆ.

ಈ ನೀತಿಗಳನ್ನು ಜಾರ್ಖಂಡ್‌ ಸಂಪೂರ್ಣವಾಗಿ ತಿರಸ್ಕರಿಸಬೇಕು ಎಂದು ಪಕ್ಷ ಮನವಿ ಮಾಡಿದೆ.

ಇದರ ಜೊತೆಗೆ, ಛೋಟಾನಾಗಪುರ ಒಕ್ಕಲು (ಸಿಎನ್‌ಟಿ) ಕಾಯ್ದೆ ಮತ್ತು ಸಂತಾಲ್ ಪ್ರಜ್ಞಾ ಒಕ್ಕಲು (ಎಸ್‌ಪಿಟಿ) ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜೆಎಂಎಂ ಕರೆ ನೀಡಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಲು ಬಾಕಿ ಇರುವ 1.36 ಲಕ್ಷ ಕೋಟಿ ರೂ.ಗಳನ್ನು ಪಾವತಿಸಬೇಕೆಂದು ಒತ್ತಾಯಿಸಿದೆ.

ಕಾರ್ಯಕ್ರಮದಲ್ಲಿ ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಹೇಮಂತ್ ಸೊರೇನ್, ಕೇಂದ್ರ ಸರ್ಕಾರವನ್ನು ಟೀಕಿಸಿದರು. ಈ ಬಾರಿಯ ಬಜೆಟ್‌ನಲ್ಲಿ ಜಾರ್ಖಂಡ್ ಅನ್ನು ಕಡೆಗಣಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. “ಊಳಿಗಮಾನ್ಯ ಮನಸ್ಥಿತಿ” ಹೊಂದಿರುವ ಕೆಲವು ಗುಂಪುಗಳು ರಾಜ್ಯದ ಬುಡಕಟ್ಟು ಜನಸಂಖ್ಯೆಯ ಪ್ರಗತಿಯನ್ನು ತಡೆಯಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ.

“ಖನಿಜ ಸಂಪನ್ಮೂಲಗಳಿಂದ ಸಮೃದ್ಧವಾಗಿದ್ದರೂ, ರಾಷ್ಟ್ರೀಯ ಖಜಾನೆಗೆ ಗಣನೀಯ ಕೊಡುಗೆ ನೀಡುತ್ತಿದ್ದರೂ ಜಾರ್ಖಂಡ್ ಅತ್ಯಂತ ಹಿಂದುಳಿದ ರಾಜ್ಯಗಳಲ್ಲಿ ಒಂದಾಗಿದೆ” ಎಂದು ಹೇಮಂತ್ ಸೊರೇನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲಾ ರಾಜ್ಯಗಳು, ವಿಶೇಷವಾಗಿ ಅಭಿವೃದ್ಧಿಯಾಗದ ರಾಜ್ಯಗಳು ಕೇಂದ್ರದಿಂದ ಸಮಾನ ಪರಿಗಣನೆ ಪಡೆಯಬೇಕು” ಎಂದು ಅವರು ಒತ್ತಿ ಹೇಳಿದ್ದಾರೆ.

ಕೇಂದ್ರದ ಬಜೆಟ್ ಅನ್ನು ಟೀಕಿಸಿದ ಸೊರೇನ್, “ಇದು ಶ್ರೀಮಂತರ ಪರ ಮತ್ತು ಬಡವರ ಪ್ರಯೋಜನವಿಲ್ಲದ ಬಜೆಟ್ ಎಂದು ಹೇಳಿದ್ದಾರೆ. “ಹಣದುಬ್ಬರವು ಗಗನಕ್ಕೇರುತ್ತಿರುವಾಗ ಮತ್ತು ಜಿಎಸ್‌ಟಿಯಲ್ಲಿ ಯಾವುದೇ ಪರಿಹಾರವಿಲ್ಲದಿದ್ದಾಗ ತೆರಿಗೆ ರಿಯಾಯಿತಿಗಳು ಸಹಾಯ ಮಾಡುವುದಿಲ್ಲ” ಎಂದಿದ್ದಾರೆ. ಸರ್ಕಾರದ ಹೊಸ ಉಪಕ್ರಮವಾದ ಗ್ಯಾನ್ (ಗರಿಬ್, ಯುವ, ಅನ್ನದಾತ, ನಾರಿ), ನೇರ ಆರ್ಥಿಕ ಬೆಂಬಲಕ್ಕಿಂತ ಹೆಚ್ಚಾಗಿ ಸಾಲಗಳನ್ನು ನೀಡುವ ತಂತ್ರವಾಗಿದೆ ಎಂದು ಆರೋಪಿಸಿದ್ದಾರೆ.

ಜಾರ್ಖಂಡ್‌ನ ಕಲ್ಯಾಣ ಯೋಜನೆಗಳನ್ನು ಎತ್ತಿ ತೋರಿಸಿದ ಸೊರೇನ್, ಮಹಿಳೆಯರಿಗೆ ಮಾಸಿಕ 2,500ರೂಪಾಯಿ ಆರ್ಥಿಕ ನೆರವು ನೀಡಿದ ಮೊದಲ ರಾಜ್ಯ ನಮ್ಮದು ಹೇಳಿದರು. ಬಿಜೆಪಿಯನ್ನು ಟೀಕಿಸಿದ ಅವರು, “ಅವರು ನಮ್ಮ ಯೋಜನೆಗಳನ್ನು ಬಿಟ್ಟಿ ಎಂದು ಕರೆದರು. ಆದರೆ, ಈಗ ಅವರೇ ದೆಹಲಿಯಲ್ಲಿ ಉಚಿತ ಭರವಸೆಗಳನ್ನು ನೀಡಿದ್ದಾರೆ. ನಾವು ಮಾಡಿದಾಗ ತಪ್ಪು ಎಂದದ್ದು ಅವರು ಮಾಡಿದಾಗ ಸರಿಯಾಗುತ್ತಾ? ಎಂದು ಪ್ರಶ್ನಿಸಿದ್ದಾರೆ.

ದೆಹಲಿ ಚುನಾವಣೆ: ಹೈ-ವೋಲ್ಟೇಜ್ ಪ್ರಚಾರ ಇಂದು ಅಂತ್ಯ; ರಾಜಧಾನಿಯ ಗದ್ದುಗೆ ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...