Homeಮುಖಪುಟಜಾರ್ಖಂಡ್ : ಸಿಎಎ, ಎನ್‌ಆರ್‌ಸಿ, ಯುಸಿಸಿ ವಿರುದ್ಧ ನಿರ್ಣಯ ಕೈಗೊಂಡ ಜೆಎಂಎಂ

ಜಾರ್ಖಂಡ್ : ಸಿಎಎ, ಎನ್‌ಆರ್‌ಸಿ, ಯುಸಿಸಿ ವಿರುದ್ಧ ನಿರ್ಣಯ ಕೈಗೊಂಡ ಜೆಎಂಎಂ

- Advertisement -
- Advertisement -

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷ ಭಾನುವಾರ (ಫೆ.2) ರಾತ್ರಿ ಡುಮ್ಕಾದ ಗಾಂಧಿ ಮೈದಾನದಲ್ಲಿ ನಡೆದ 46ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಗಳನ್ನು ದೃಢವಾಗಿ ವಿರೋಧಿಸುವ 50 ಅಂಶಗಳ ನಿರ್ಣಯವನ್ನು ಅಂಗೀಕರಿಸಿದೆ.

ಈ ನೀತಿಗಳನ್ನು ಜಾರ್ಖಂಡ್‌ ಸಂಪೂರ್ಣವಾಗಿ ತಿರಸ್ಕರಿಸಬೇಕು ಎಂದು ಪಕ್ಷ ಮನವಿ ಮಾಡಿದೆ.

ಇದರ ಜೊತೆಗೆ, ಛೋಟಾನಾಗಪುರ ಒಕ್ಕಲು (ಸಿಎನ್‌ಟಿ) ಕಾಯ್ದೆ ಮತ್ತು ಸಂತಾಲ್ ಪ್ರಜ್ಞಾ ಒಕ್ಕಲು (ಎಸ್‌ಪಿಟಿ) ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜೆಎಂಎಂ ಕರೆ ನೀಡಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಲು ಬಾಕಿ ಇರುವ 1.36 ಲಕ್ಷ ಕೋಟಿ ರೂ.ಗಳನ್ನು ಪಾವತಿಸಬೇಕೆಂದು ಒತ್ತಾಯಿಸಿದೆ.

ಕಾರ್ಯಕ್ರಮದಲ್ಲಿ ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಹೇಮಂತ್ ಸೊರೇನ್, ಕೇಂದ್ರ ಸರ್ಕಾರವನ್ನು ಟೀಕಿಸಿದರು. ಈ ಬಾರಿಯ ಬಜೆಟ್‌ನಲ್ಲಿ ಜಾರ್ಖಂಡ್ ಅನ್ನು ಕಡೆಗಣಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. “ಊಳಿಗಮಾನ್ಯ ಮನಸ್ಥಿತಿ” ಹೊಂದಿರುವ ಕೆಲವು ಗುಂಪುಗಳು ರಾಜ್ಯದ ಬುಡಕಟ್ಟು ಜನಸಂಖ್ಯೆಯ ಪ್ರಗತಿಯನ್ನು ತಡೆಯಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ.

“ಖನಿಜ ಸಂಪನ್ಮೂಲಗಳಿಂದ ಸಮೃದ್ಧವಾಗಿದ್ದರೂ, ರಾಷ್ಟ್ರೀಯ ಖಜಾನೆಗೆ ಗಣನೀಯ ಕೊಡುಗೆ ನೀಡುತ್ತಿದ್ದರೂ ಜಾರ್ಖಂಡ್ ಅತ್ಯಂತ ಹಿಂದುಳಿದ ರಾಜ್ಯಗಳಲ್ಲಿ ಒಂದಾಗಿದೆ” ಎಂದು ಹೇಮಂತ್ ಸೊರೇನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲಾ ರಾಜ್ಯಗಳು, ವಿಶೇಷವಾಗಿ ಅಭಿವೃದ್ಧಿಯಾಗದ ರಾಜ್ಯಗಳು ಕೇಂದ್ರದಿಂದ ಸಮಾನ ಪರಿಗಣನೆ ಪಡೆಯಬೇಕು” ಎಂದು ಅವರು ಒತ್ತಿ ಹೇಳಿದ್ದಾರೆ.

ಕೇಂದ್ರದ ಬಜೆಟ್ ಅನ್ನು ಟೀಕಿಸಿದ ಸೊರೇನ್, “ಇದು ಶ್ರೀಮಂತರ ಪರ ಮತ್ತು ಬಡವರ ಪ್ರಯೋಜನವಿಲ್ಲದ ಬಜೆಟ್ ಎಂದು ಹೇಳಿದ್ದಾರೆ. “ಹಣದುಬ್ಬರವು ಗಗನಕ್ಕೇರುತ್ತಿರುವಾಗ ಮತ್ತು ಜಿಎಸ್‌ಟಿಯಲ್ಲಿ ಯಾವುದೇ ಪರಿಹಾರವಿಲ್ಲದಿದ್ದಾಗ ತೆರಿಗೆ ರಿಯಾಯಿತಿಗಳು ಸಹಾಯ ಮಾಡುವುದಿಲ್ಲ” ಎಂದಿದ್ದಾರೆ. ಸರ್ಕಾರದ ಹೊಸ ಉಪಕ್ರಮವಾದ ಗ್ಯಾನ್ (ಗರಿಬ್, ಯುವ, ಅನ್ನದಾತ, ನಾರಿ), ನೇರ ಆರ್ಥಿಕ ಬೆಂಬಲಕ್ಕಿಂತ ಹೆಚ್ಚಾಗಿ ಸಾಲಗಳನ್ನು ನೀಡುವ ತಂತ್ರವಾಗಿದೆ ಎಂದು ಆರೋಪಿಸಿದ್ದಾರೆ.

ಜಾರ್ಖಂಡ್‌ನ ಕಲ್ಯಾಣ ಯೋಜನೆಗಳನ್ನು ಎತ್ತಿ ತೋರಿಸಿದ ಸೊರೇನ್, ಮಹಿಳೆಯರಿಗೆ ಮಾಸಿಕ 2,500ರೂಪಾಯಿ ಆರ್ಥಿಕ ನೆರವು ನೀಡಿದ ಮೊದಲ ರಾಜ್ಯ ನಮ್ಮದು ಹೇಳಿದರು. ಬಿಜೆಪಿಯನ್ನು ಟೀಕಿಸಿದ ಅವರು, “ಅವರು ನಮ್ಮ ಯೋಜನೆಗಳನ್ನು ಬಿಟ್ಟಿ ಎಂದು ಕರೆದರು. ಆದರೆ, ಈಗ ಅವರೇ ದೆಹಲಿಯಲ್ಲಿ ಉಚಿತ ಭರವಸೆಗಳನ್ನು ನೀಡಿದ್ದಾರೆ. ನಾವು ಮಾಡಿದಾಗ ತಪ್ಪು ಎಂದದ್ದು ಅವರು ಮಾಡಿದಾಗ ಸರಿಯಾಗುತ್ತಾ? ಎಂದು ಪ್ರಶ್ನಿಸಿದ್ದಾರೆ.

ದೆಹಲಿ ಚುನಾವಣೆ: ಹೈ-ವೋಲ್ಟೇಜ್ ಪ್ರಚಾರ ಇಂದು ಅಂತ್ಯ; ರಾಜಧಾನಿಯ ಗದ್ದುಗೆ ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...