Homeಮುಖಪುಟಪೆಗಾಸಸ್ ಪಟ್ಟಿಯಲ್ಲಿದ್ದ ಜಾರ್ಖಂಡ್ ಪತ್ರಕರ್ತನ ಬಂಧನ; ದಿಟ್ಟ ವರದಿಗಾರಿಕೆಯೇ ಮುಳುವಾಯಿತೆ?

ಪೆಗಾಸಸ್ ಪಟ್ಟಿಯಲ್ಲಿದ್ದ ಜಾರ್ಖಂಡ್ ಪತ್ರಕರ್ತನ ಬಂಧನ; ದಿಟ್ಟ ವರದಿಗಾರಿಕೆಯೇ ಮುಳುವಾಯಿತೆ?

- Advertisement -
- Advertisement -

ಪೆಗಾಸಸ್ ಸ್ನೂಪಿಂಗ್ ಪಟ್ಟಿಯಲ್ಲಿ ತನ್ನ ಹೆಸರು ಕಾಣಿಸಿಕೊಂಡಿದ್ದರಿಂದ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಸ್ವತಂತ್ರ ಪತ್ರಕರ್ತ ರೂಪೇಶ್ ಕುಮಾರ್ ಸಿಂಗ್ ಅವರನ್ನು ಜಾರ್ಖಾಂಡ್‌ ಪೊಲೀಸರು ಬಂಧಿಸಲಾಗಿದೆ. ಕಳೆದ ವರ್ಷ ಮಾವೋವಾದಿ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ರೂಪೇಶ್ ಹೆಸರನ್ನು ಸೇರಿಸಲಾಗಿದೆ.

ಪತ್ರಕರ್ತ ರೂಪೇಶ್‌ ಮಾವೋವಾದಿಗಳಿಗಾಗಿ ನಿಧಿ ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ಆದರೆ ರೂಪೇಶ್ ಕುಟುಂಬ ಹಾಗೂ ಹಲವಾರು ಪತ್ರಕರ್ತರು ಆರೋಪಗಳನ್ನು ಅಲ್ಲಗಳೆದಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಕಟ್ಟಕಡೆಯ ಸಮುದಾಯಗಳಿಗೆ ಸಂಬಂಧಿಸಿದ ವಿಷಯಗಳನ್ನು ನಿರಂತರ ವರದಿ ಮಾಡುತ್ತಿದ್ದರಿಂದ ರೂಪೇಶ್ ಅವರನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಸಿಪಿಐ (ಮಾವೋವಾದಿ) ಪಕ್ಷದ ಪ್ರಶಾಂತ್ ಬೋಸ್ ಅಲಿಯಾಸ್ ಕಿಶಾಂದಾ ಸೇರಿದಂತೆ ಜಾರ್ಖಂಡ್‌ನ ಸರೈಕೆಲಾ ಜಿಲ್ಲೆಯ ಮಾವೋವಾದಿ ನಾಯಕರ ವಿರುದ್ಧ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರೂಪೇಶ್ ಬಂಧನವಾಗಿದೆ.

ಮಾವೋವಾದಿ ಸಂಪರ್ಕಗಳ ಆರೋಪದ ಮೇಲೆ ರೂಪೇಶ್‌ ಅವರನ್ನು 2019ರಲ್ಲಿ ಗಯಾ ಪೊಲೀಸರು ಬಂಧಿಸಿದ್ದರು. ಆದರೆ ಪೊಲೀಸರು ಆರೋಪಪಟ್ಟಿ ಸಲ್ಲಿಸಲು ಸಾಧ್ಯವಾಗದ ಕಾರಣ ಜಾಮೀನು ಪಡೆದಿದ್ದರು ಎಂದು ‘ದಿ ವೈರ್’ ವರದಿ ಮಾಡಿತ್ತು. ‘ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ’ ಎಂದು ರೂಪೇಶ್ ಹೇಳಿದ್ದರು.

ಇದನ್ನೂ ಓದಿರಿ: ಲುಲುಮಾಲ್: ಬೇಕಂತಲೇ ನಮಾಜ್‌ ಮಾಡಿ ವಿವಾದ ಸೃಷ್ಟಿ; ಪಿತೂರಿಯ ಹಿಂದೆ ಯಾರಿದ್ದಾರೆ?

ರೂಪೇಶ್‌ ಅವರ ಪತ್ನಿ ಇಪ್ಸಾ ಶತಾಕ್ಷಿ ಅವರೂ ದಿಟ್ಟ ಹೋರಾಟಗಾರ್ತಿ. ಬುಡಕಟ್ಟು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಶತಾಕ್ಷಿ ಅವರ ಹೆಸರು ಕೂಡ ಪೆಗಾಸಸ್ ಸ್ನೂಪಿಂಗ್ ಪಟ್ಟಿಯಲ್ಲಿತ್ತು. ದಿ ವೈರ್‌ಗೆ ಪ್ರತಿಕ್ರಿಯೆ ನೀಡಿರುವ ಅವರು, “ಖಾರ್ಸಾವಾನ್ ಜಿಲ್ಲೆಯ ಪೊಲೀಸರು ರಾಮಗಢ್‌ನಲ್ಲಿರುವ ನಮ್ಮ ಮನೆಯನ್ನು ಒಂಬತ್ತು ಗಂಟೆಗಳ ಕಾಲ ಸರ್ಚ್ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ಬೆಡ್ ಶೀಟ್, ಒಂಬತ್ತು ಪುಟಗಳ ನೋಟ್‌ಬುಕ್, ಮೋಟರ್‌ ಸೈಕಲ್ ದಾಖಲೆ, ಎರಡು ಮೊಬೈಲ್ ಫೋನ್‌ಗಳು, ಒಂದು ಹಾರ್ಡ್ ಡಿಸ್ಕ್, ಕಾರಿನ ದಾಖಲೆ, ಎರಡು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸರ್ಚ್ ವೇಳೆ ಸುಮಾರು ಅರ್ಧಗಂಟೆ ಕಾಲ ಪೊಲೀಸರು ನಮ್ಮನ್ನು ಮನೆಯಿಂದ ಹೊರಗೆ ಕಳುಹಿಸಿದರು. ಒಳಗಿನಿಂದ ಬಾಗಿಲು ಲಾಕ್‌ ಮಾಡಿದ್ದರು” ಎಂದು ತಿಳಿಸಿದ್ದಾರೆ.

“ನಿರ್ಭೀತವಾಗಿ ಪತ್ರಿಕೋದ್ಯಮ ವೃತ್ತಿ ಮಾಡುತ್ತಿದ್ದ ಕಾರಣ ನನ್ನ ಗಂಡನನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ಇಪ್ಸಾ ತಿಳಿಸಿದ್ದಾರೆ.

ರೂಪೇಶ್‌ ಇತ್ತೀಚೆಗೆ ಗಿರಿದಿಹ್‌ಗೆ ಭೇಟಿ ನೀಡಿದ್ದರು. ಕೈಗಾರಿಕಾ ಮಾಲಿನ್ಯದಿಂದಾಗಿ ಸ್ಥಳೀಯ ಜನರ ಜೀವನ ಎಷ್ಟು ಹದಗೆಟ್ಟಿದೆ ಎಂಬುದರ ಕುರಿತು ವರದಿ ಮಾಡಿದ್ದರು. ಮುಖದ ಮೇಲೆ ವಿಕಾರವಾದ ಗಡ್ಡೆ ಬೆಳೆದಿರುವ, ನಡೆಯಲೂ ಕೂಡ ಸಾಧ್ಯವಾಗದೆ ಇರುವ ಸ್ಥಳೀಯ ಹೆಣ್ಣುಮಗಳೊಬ್ಬಳ ವೀಡಿಯೊವನ್ನು ಅವರು ಟ್ವೀಟ್ ಮಾಡಿದ್ದಾರೆ. ವೀಡಿಯೊ ವೈರಲ್ ಕೂಡ ಆಗಿತ್ತು. ಕೆಲವು ವೈದ್ಯರು, ನಟ ಸೋನು ಸೂದ್ ಅವರ ತಂಡವು ಟ್ವೀಟ್‌ಗೆ ಪ್ರತಿಕ್ರಿಯಿಸಿ, ಆ ಹೆಣ್ಣುಮಗುವಿಗೆ ಸಹಾಯಹಸ್ತ ನೀಡಿದ್ದರು.

ಹಲವಾರು ಪತ್ರಕರ್ತರು ಸಾಮಾಜಿಕ ಮಾಧ್ಯಮದಲ್ಲಿ ರೂಪೇಶ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ಹಿಂಸಾಚಾರ

“ಕೈಗಾರಿಕೆಗಳು ಉಂಟು ಮಾಡುತ್ತಿರುವ ಮಾಲಿನ್ಯದಿಂದಾಗಿ ಹಳ್ಳಿಗಳ ಮೇಲಾಗುತ್ತಿರುವ ದುಷ್ಪರಿಣಾಮದ ಕುರಿತು, ಸುದ್ದಿಮನೆಗಳು ಸಾಮಾನ್ಯವಾಗಿ ನಿರ್ಲಕ್ಷಿಸಲ್ಪಡುವ ಗ್ರೌಂಡ್‌ ರಿಪೋರ್ಟ್‌ ಅನ್ನು ರೂಪೇಶ್ ಕುಮಾರ್ ಸಿಂಗ್ ಮಾಡಿದ್ದಾರೆ. ಅದು ಅವರ ಕೊನೆಯ ವರದಿಯೂ ಆಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು ವರದಿ ಮಾಡುವ ಪತ್ರಕರ್ತರು ಸರ್ಕಾರದ ಕಣ್ಗಾವಲನ್ನು, ಸೆರೆಮನೆ ವಾಸವನ್ನು ಇನ್ನು ಮುಂದೆ ನಿರ್ಲಕ್ಷಿಸಲು ಸಾಧ್ಯವಾಗದು” ಎಂದು ಸ್ವತಂತ್ರ ಪತ್ರಕರ್ತೆ ಶಾಲಿನಿ ನಾಯರ್ ಟ್ವೀಟ್ ಮಾಡಿದ್ದಾರೆ.

“ನಿಮಗೆ ವಾಕ್ ಸ್ವಾತಂತ್ರ್ಯದ ಬಗ್ಗೆ ಕಾಳಜಿ ಇದ್ದರೆ, ಪ್ರಚಾರವನ್ನು ಪಡೆಯದೆ ಗ್ರೌಂಡ್ ರಿಪೋರ್ಟ್ ಮಾಡುವ ಪತ್ರಕರ್ತರನ್ನು ಬೆಂಬಲಿಸಿ” ಎಂದು ಸ್ವತಂತ್ರ ಪತ್ರಕರ್ತೆ ನೇಹಾ ದೀಕ್ಷಿತ್ ಟ್ವೀಟ್ ಮಾಡಿದ್ದಾರೆ. ದಿಟ್ಟ ಪತ್ರಕರ್ತರಾದ ರೂಪೇಶ್‌ ಸಿಂಗ್‌, ಮೊಹಮ್ಮದ್‌ ಜುಬೇರ್‌, ಸಿದ್ದಿಕ್‌ ಕಪ್ಪನ್‌, ಆಸಿಫ್‌ ಸುಲ್ತಾನ್‌ ಅವರ ಹೆಸರುಗಳನ್ನು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...