Homeಮುಖಪುಟಪೆಗಾಸಸ್ ಪಟ್ಟಿಯಲ್ಲಿದ್ದ ಜಾರ್ಖಂಡ್ ಪತ್ರಕರ್ತನ ಬಂಧನ; ದಿಟ್ಟ ವರದಿಗಾರಿಕೆಯೇ ಮುಳುವಾಯಿತೆ?

ಪೆಗಾಸಸ್ ಪಟ್ಟಿಯಲ್ಲಿದ್ದ ಜಾರ್ಖಂಡ್ ಪತ್ರಕರ್ತನ ಬಂಧನ; ದಿಟ್ಟ ವರದಿಗಾರಿಕೆಯೇ ಮುಳುವಾಯಿತೆ?

- Advertisement -
- Advertisement -

ಪೆಗಾಸಸ್ ಸ್ನೂಪಿಂಗ್ ಪಟ್ಟಿಯಲ್ಲಿ ತನ್ನ ಹೆಸರು ಕಾಣಿಸಿಕೊಂಡಿದ್ದರಿಂದ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಸ್ವತಂತ್ರ ಪತ್ರಕರ್ತ ರೂಪೇಶ್ ಕುಮಾರ್ ಸಿಂಗ್ ಅವರನ್ನು ಜಾರ್ಖಾಂಡ್‌ ಪೊಲೀಸರು ಬಂಧಿಸಲಾಗಿದೆ. ಕಳೆದ ವರ್ಷ ಮಾವೋವಾದಿ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ರೂಪೇಶ್ ಹೆಸರನ್ನು ಸೇರಿಸಲಾಗಿದೆ.

ಪತ್ರಕರ್ತ ರೂಪೇಶ್‌ ಮಾವೋವಾದಿಗಳಿಗಾಗಿ ನಿಧಿ ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ಆದರೆ ರೂಪೇಶ್ ಕುಟುಂಬ ಹಾಗೂ ಹಲವಾರು ಪತ್ರಕರ್ತರು ಆರೋಪಗಳನ್ನು ಅಲ್ಲಗಳೆದಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಕಟ್ಟಕಡೆಯ ಸಮುದಾಯಗಳಿಗೆ ಸಂಬಂಧಿಸಿದ ವಿಷಯಗಳನ್ನು ನಿರಂತರ ವರದಿ ಮಾಡುತ್ತಿದ್ದರಿಂದ ರೂಪೇಶ್ ಅವರನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಸಿಪಿಐ (ಮಾವೋವಾದಿ) ಪಕ್ಷದ ಪ್ರಶಾಂತ್ ಬೋಸ್ ಅಲಿಯಾಸ್ ಕಿಶಾಂದಾ ಸೇರಿದಂತೆ ಜಾರ್ಖಂಡ್‌ನ ಸರೈಕೆಲಾ ಜಿಲ್ಲೆಯ ಮಾವೋವಾದಿ ನಾಯಕರ ವಿರುದ್ಧ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರೂಪೇಶ್ ಬಂಧನವಾಗಿದೆ.

ಮಾವೋವಾದಿ ಸಂಪರ್ಕಗಳ ಆರೋಪದ ಮೇಲೆ ರೂಪೇಶ್‌ ಅವರನ್ನು 2019ರಲ್ಲಿ ಗಯಾ ಪೊಲೀಸರು ಬಂಧಿಸಿದ್ದರು. ಆದರೆ ಪೊಲೀಸರು ಆರೋಪಪಟ್ಟಿ ಸಲ್ಲಿಸಲು ಸಾಧ್ಯವಾಗದ ಕಾರಣ ಜಾಮೀನು ಪಡೆದಿದ್ದರು ಎಂದು ‘ದಿ ವೈರ್’ ವರದಿ ಮಾಡಿತ್ತು. ‘ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ’ ಎಂದು ರೂಪೇಶ್ ಹೇಳಿದ್ದರು.

ಇದನ್ನೂ ಓದಿರಿ: ಲುಲುಮಾಲ್: ಬೇಕಂತಲೇ ನಮಾಜ್‌ ಮಾಡಿ ವಿವಾದ ಸೃಷ್ಟಿ; ಪಿತೂರಿಯ ಹಿಂದೆ ಯಾರಿದ್ದಾರೆ?

ರೂಪೇಶ್‌ ಅವರ ಪತ್ನಿ ಇಪ್ಸಾ ಶತಾಕ್ಷಿ ಅವರೂ ದಿಟ್ಟ ಹೋರಾಟಗಾರ್ತಿ. ಬುಡಕಟ್ಟು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಶತಾಕ್ಷಿ ಅವರ ಹೆಸರು ಕೂಡ ಪೆಗಾಸಸ್ ಸ್ನೂಪಿಂಗ್ ಪಟ್ಟಿಯಲ್ಲಿತ್ತು. ದಿ ವೈರ್‌ಗೆ ಪ್ರತಿಕ್ರಿಯೆ ನೀಡಿರುವ ಅವರು, “ಖಾರ್ಸಾವಾನ್ ಜಿಲ್ಲೆಯ ಪೊಲೀಸರು ರಾಮಗಢ್‌ನಲ್ಲಿರುವ ನಮ್ಮ ಮನೆಯನ್ನು ಒಂಬತ್ತು ಗಂಟೆಗಳ ಕಾಲ ಸರ್ಚ್ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ಬೆಡ್ ಶೀಟ್, ಒಂಬತ್ತು ಪುಟಗಳ ನೋಟ್‌ಬುಕ್, ಮೋಟರ್‌ ಸೈಕಲ್ ದಾಖಲೆ, ಎರಡು ಮೊಬೈಲ್ ಫೋನ್‌ಗಳು, ಒಂದು ಹಾರ್ಡ್ ಡಿಸ್ಕ್, ಕಾರಿನ ದಾಖಲೆ, ಎರಡು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸರ್ಚ್ ವೇಳೆ ಸುಮಾರು ಅರ್ಧಗಂಟೆ ಕಾಲ ಪೊಲೀಸರು ನಮ್ಮನ್ನು ಮನೆಯಿಂದ ಹೊರಗೆ ಕಳುಹಿಸಿದರು. ಒಳಗಿನಿಂದ ಬಾಗಿಲು ಲಾಕ್‌ ಮಾಡಿದ್ದರು” ಎಂದು ತಿಳಿಸಿದ್ದಾರೆ.

“ನಿರ್ಭೀತವಾಗಿ ಪತ್ರಿಕೋದ್ಯಮ ವೃತ್ತಿ ಮಾಡುತ್ತಿದ್ದ ಕಾರಣ ನನ್ನ ಗಂಡನನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ಇಪ್ಸಾ ತಿಳಿಸಿದ್ದಾರೆ.

ರೂಪೇಶ್‌ ಇತ್ತೀಚೆಗೆ ಗಿರಿದಿಹ್‌ಗೆ ಭೇಟಿ ನೀಡಿದ್ದರು. ಕೈಗಾರಿಕಾ ಮಾಲಿನ್ಯದಿಂದಾಗಿ ಸ್ಥಳೀಯ ಜನರ ಜೀವನ ಎಷ್ಟು ಹದಗೆಟ್ಟಿದೆ ಎಂಬುದರ ಕುರಿತು ವರದಿ ಮಾಡಿದ್ದರು. ಮುಖದ ಮೇಲೆ ವಿಕಾರವಾದ ಗಡ್ಡೆ ಬೆಳೆದಿರುವ, ನಡೆಯಲೂ ಕೂಡ ಸಾಧ್ಯವಾಗದೆ ಇರುವ ಸ್ಥಳೀಯ ಹೆಣ್ಣುಮಗಳೊಬ್ಬಳ ವೀಡಿಯೊವನ್ನು ಅವರು ಟ್ವೀಟ್ ಮಾಡಿದ್ದಾರೆ. ವೀಡಿಯೊ ವೈರಲ್ ಕೂಡ ಆಗಿತ್ತು. ಕೆಲವು ವೈದ್ಯರು, ನಟ ಸೋನು ಸೂದ್ ಅವರ ತಂಡವು ಟ್ವೀಟ್‌ಗೆ ಪ್ರತಿಕ್ರಿಯಿಸಿ, ಆ ಹೆಣ್ಣುಮಗುವಿಗೆ ಸಹಾಯಹಸ್ತ ನೀಡಿದ್ದರು.

ಹಲವಾರು ಪತ್ರಕರ್ತರು ಸಾಮಾಜಿಕ ಮಾಧ್ಯಮದಲ್ಲಿ ರೂಪೇಶ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ಹಿಂಸಾಚಾರ

“ಕೈಗಾರಿಕೆಗಳು ಉಂಟು ಮಾಡುತ್ತಿರುವ ಮಾಲಿನ್ಯದಿಂದಾಗಿ ಹಳ್ಳಿಗಳ ಮೇಲಾಗುತ್ತಿರುವ ದುಷ್ಪರಿಣಾಮದ ಕುರಿತು, ಸುದ್ದಿಮನೆಗಳು ಸಾಮಾನ್ಯವಾಗಿ ನಿರ್ಲಕ್ಷಿಸಲ್ಪಡುವ ಗ್ರೌಂಡ್‌ ರಿಪೋರ್ಟ್‌ ಅನ್ನು ರೂಪೇಶ್ ಕುಮಾರ್ ಸಿಂಗ್ ಮಾಡಿದ್ದಾರೆ. ಅದು ಅವರ ಕೊನೆಯ ವರದಿಯೂ ಆಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು ವರದಿ ಮಾಡುವ ಪತ್ರಕರ್ತರು ಸರ್ಕಾರದ ಕಣ್ಗಾವಲನ್ನು, ಸೆರೆಮನೆ ವಾಸವನ್ನು ಇನ್ನು ಮುಂದೆ ನಿರ್ಲಕ್ಷಿಸಲು ಸಾಧ್ಯವಾಗದು” ಎಂದು ಸ್ವತಂತ್ರ ಪತ್ರಕರ್ತೆ ಶಾಲಿನಿ ನಾಯರ್ ಟ್ವೀಟ್ ಮಾಡಿದ್ದಾರೆ.

“ನಿಮಗೆ ವಾಕ್ ಸ್ವಾತಂತ್ರ್ಯದ ಬಗ್ಗೆ ಕಾಳಜಿ ಇದ್ದರೆ, ಪ್ರಚಾರವನ್ನು ಪಡೆಯದೆ ಗ್ರೌಂಡ್ ರಿಪೋರ್ಟ್ ಮಾಡುವ ಪತ್ರಕರ್ತರನ್ನು ಬೆಂಬಲಿಸಿ” ಎಂದು ಸ್ವತಂತ್ರ ಪತ್ರಕರ್ತೆ ನೇಹಾ ದೀಕ್ಷಿತ್ ಟ್ವೀಟ್ ಮಾಡಿದ್ದಾರೆ. ದಿಟ್ಟ ಪತ್ರಕರ್ತರಾದ ರೂಪೇಶ್‌ ಸಿಂಗ್‌, ಮೊಹಮ್ಮದ್‌ ಜುಬೇರ್‌, ಸಿದ್ದಿಕ್‌ ಕಪ್ಪನ್‌, ಆಸಿಫ್‌ ಸುಲ್ತಾನ್‌ ಅವರ ಹೆಸರುಗಳನ್ನು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...