Homeಮುಖಪುಟಪೆಗಾಸಸ್ ಪಟ್ಟಿಯಲ್ಲಿದ್ದ ಜಾರ್ಖಂಡ್ ಪತ್ರಕರ್ತನ ಬಂಧನ; ದಿಟ್ಟ ವರದಿಗಾರಿಕೆಯೇ ಮುಳುವಾಯಿತೆ?

ಪೆಗಾಸಸ್ ಪಟ್ಟಿಯಲ್ಲಿದ್ದ ಜಾರ್ಖಂಡ್ ಪತ್ರಕರ್ತನ ಬಂಧನ; ದಿಟ್ಟ ವರದಿಗಾರಿಕೆಯೇ ಮುಳುವಾಯಿತೆ?

- Advertisement -
- Advertisement -

ಪೆಗಾಸಸ್ ಸ್ನೂಪಿಂಗ್ ಪಟ್ಟಿಯಲ್ಲಿ ತನ್ನ ಹೆಸರು ಕಾಣಿಸಿಕೊಂಡಿದ್ದರಿಂದ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಸ್ವತಂತ್ರ ಪತ್ರಕರ್ತ ರೂಪೇಶ್ ಕುಮಾರ್ ಸಿಂಗ್ ಅವರನ್ನು ಜಾರ್ಖಾಂಡ್‌ ಪೊಲೀಸರು ಬಂಧಿಸಲಾಗಿದೆ. ಕಳೆದ ವರ್ಷ ಮಾವೋವಾದಿ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ರೂಪೇಶ್ ಹೆಸರನ್ನು ಸೇರಿಸಲಾಗಿದೆ.

ಪತ್ರಕರ್ತ ರೂಪೇಶ್‌ ಮಾವೋವಾದಿಗಳಿಗಾಗಿ ನಿಧಿ ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ಆದರೆ ರೂಪೇಶ್ ಕುಟುಂಬ ಹಾಗೂ ಹಲವಾರು ಪತ್ರಕರ್ತರು ಆರೋಪಗಳನ್ನು ಅಲ್ಲಗಳೆದಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಕಟ್ಟಕಡೆಯ ಸಮುದಾಯಗಳಿಗೆ ಸಂಬಂಧಿಸಿದ ವಿಷಯಗಳನ್ನು ನಿರಂತರ ವರದಿ ಮಾಡುತ್ತಿದ್ದರಿಂದ ರೂಪೇಶ್ ಅವರನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಸಿಪಿಐ (ಮಾವೋವಾದಿ) ಪಕ್ಷದ ಪ್ರಶಾಂತ್ ಬೋಸ್ ಅಲಿಯಾಸ್ ಕಿಶಾಂದಾ ಸೇರಿದಂತೆ ಜಾರ್ಖಂಡ್‌ನ ಸರೈಕೆಲಾ ಜಿಲ್ಲೆಯ ಮಾವೋವಾದಿ ನಾಯಕರ ವಿರುದ್ಧ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರೂಪೇಶ್ ಬಂಧನವಾಗಿದೆ.

ಮಾವೋವಾದಿ ಸಂಪರ್ಕಗಳ ಆರೋಪದ ಮೇಲೆ ರೂಪೇಶ್‌ ಅವರನ್ನು 2019ರಲ್ಲಿ ಗಯಾ ಪೊಲೀಸರು ಬಂಧಿಸಿದ್ದರು. ಆದರೆ ಪೊಲೀಸರು ಆರೋಪಪಟ್ಟಿ ಸಲ್ಲಿಸಲು ಸಾಧ್ಯವಾಗದ ಕಾರಣ ಜಾಮೀನು ಪಡೆದಿದ್ದರು ಎಂದು ‘ದಿ ವೈರ್’ ವರದಿ ಮಾಡಿತ್ತು. ‘ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ’ ಎಂದು ರೂಪೇಶ್ ಹೇಳಿದ್ದರು.

ಇದನ್ನೂ ಓದಿರಿ: ಲುಲುಮಾಲ್: ಬೇಕಂತಲೇ ನಮಾಜ್‌ ಮಾಡಿ ವಿವಾದ ಸೃಷ್ಟಿ; ಪಿತೂರಿಯ ಹಿಂದೆ ಯಾರಿದ್ದಾರೆ?

ರೂಪೇಶ್‌ ಅವರ ಪತ್ನಿ ಇಪ್ಸಾ ಶತಾಕ್ಷಿ ಅವರೂ ದಿಟ್ಟ ಹೋರಾಟಗಾರ್ತಿ. ಬುಡಕಟ್ಟು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಶತಾಕ್ಷಿ ಅವರ ಹೆಸರು ಕೂಡ ಪೆಗಾಸಸ್ ಸ್ನೂಪಿಂಗ್ ಪಟ್ಟಿಯಲ್ಲಿತ್ತು. ದಿ ವೈರ್‌ಗೆ ಪ್ರತಿಕ್ರಿಯೆ ನೀಡಿರುವ ಅವರು, “ಖಾರ್ಸಾವಾನ್ ಜಿಲ್ಲೆಯ ಪೊಲೀಸರು ರಾಮಗಢ್‌ನಲ್ಲಿರುವ ನಮ್ಮ ಮನೆಯನ್ನು ಒಂಬತ್ತು ಗಂಟೆಗಳ ಕಾಲ ಸರ್ಚ್ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ಬೆಡ್ ಶೀಟ್, ಒಂಬತ್ತು ಪುಟಗಳ ನೋಟ್‌ಬುಕ್, ಮೋಟರ್‌ ಸೈಕಲ್ ದಾಖಲೆ, ಎರಡು ಮೊಬೈಲ್ ಫೋನ್‌ಗಳು, ಒಂದು ಹಾರ್ಡ್ ಡಿಸ್ಕ್, ಕಾರಿನ ದಾಖಲೆ, ಎರಡು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸರ್ಚ್ ವೇಳೆ ಸುಮಾರು ಅರ್ಧಗಂಟೆ ಕಾಲ ಪೊಲೀಸರು ನಮ್ಮನ್ನು ಮನೆಯಿಂದ ಹೊರಗೆ ಕಳುಹಿಸಿದರು. ಒಳಗಿನಿಂದ ಬಾಗಿಲು ಲಾಕ್‌ ಮಾಡಿದ್ದರು” ಎಂದು ತಿಳಿಸಿದ್ದಾರೆ.

“ನಿರ್ಭೀತವಾಗಿ ಪತ್ರಿಕೋದ್ಯಮ ವೃತ್ತಿ ಮಾಡುತ್ತಿದ್ದ ಕಾರಣ ನನ್ನ ಗಂಡನನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ಇಪ್ಸಾ ತಿಳಿಸಿದ್ದಾರೆ.

ರೂಪೇಶ್‌ ಇತ್ತೀಚೆಗೆ ಗಿರಿದಿಹ್‌ಗೆ ಭೇಟಿ ನೀಡಿದ್ದರು. ಕೈಗಾರಿಕಾ ಮಾಲಿನ್ಯದಿಂದಾಗಿ ಸ್ಥಳೀಯ ಜನರ ಜೀವನ ಎಷ್ಟು ಹದಗೆಟ್ಟಿದೆ ಎಂಬುದರ ಕುರಿತು ವರದಿ ಮಾಡಿದ್ದರು. ಮುಖದ ಮೇಲೆ ವಿಕಾರವಾದ ಗಡ್ಡೆ ಬೆಳೆದಿರುವ, ನಡೆಯಲೂ ಕೂಡ ಸಾಧ್ಯವಾಗದೆ ಇರುವ ಸ್ಥಳೀಯ ಹೆಣ್ಣುಮಗಳೊಬ್ಬಳ ವೀಡಿಯೊವನ್ನು ಅವರು ಟ್ವೀಟ್ ಮಾಡಿದ್ದಾರೆ. ವೀಡಿಯೊ ವೈರಲ್ ಕೂಡ ಆಗಿತ್ತು. ಕೆಲವು ವೈದ್ಯರು, ನಟ ಸೋನು ಸೂದ್ ಅವರ ತಂಡವು ಟ್ವೀಟ್‌ಗೆ ಪ್ರತಿಕ್ರಿಯಿಸಿ, ಆ ಹೆಣ್ಣುಮಗುವಿಗೆ ಸಹಾಯಹಸ್ತ ನೀಡಿದ್ದರು.

ಹಲವಾರು ಪತ್ರಕರ್ತರು ಸಾಮಾಜಿಕ ಮಾಧ್ಯಮದಲ್ಲಿ ರೂಪೇಶ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ಹಿಂಸಾಚಾರ

“ಕೈಗಾರಿಕೆಗಳು ಉಂಟು ಮಾಡುತ್ತಿರುವ ಮಾಲಿನ್ಯದಿಂದಾಗಿ ಹಳ್ಳಿಗಳ ಮೇಲಾಗುತ್ತಿರುವ ದುಷ್ಪರಿಣಾಮದ ಕುರಿತು, ಸುದ್ದಿಮನೆಗಳು ಸಾಮಾನ್ಯವಾಗಿ ನಿರ್ಲಕ್ಷಿಸಲ್ಪಡುವ ಗ್ರೌಂಡ್‌ ರಿಪೋರ್ಟ್‌ ಅನ್ನು ರೂಪೇಶ್ ಕುಮಾರ್ ಸಿಂಗ್ ಮಾಡಿದ್ದಾರೆ. ಅದು ಅವರ ಕೊನೆಯ ವರದಿಯೂ ಆಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು ವರದಿ ಮಾಡುವ ಪತ್ರಕರ್ತರು ಸರ್ಕಾರದ ಕಣ್ಗಾವಲನ್ನು, ಸೆರೆಮನೆ ವಾಸವನ್ನು ಇನ್ನು ಮುಂದೆ ನಿರ್ಲಕ್ಷಿಸಲು ಸಾಧ್ಯವಾಗದು” ಎಂದು ಸ್ವತಂತ್ರ ಪತ್ರಕರ್ತೆ ಶಾಲಿನಿ ನಾಯರ್ ಟ್ವೀಟ್ ಮಾಡಿದ್ದಾರೆ.

“ನಿಮಗೆ ವಾಕ್ ಸ್ವಾತಂತ್ರ್ಯದ ಬಗ್ಗೆ ಕಾಳಜಿ ಇದ್ದರೆ, ಪ್ರಚಾರವನ್ನು ಪಡೆಯದೆ ಗ್ರೌಂಡ್ ರಿಪೋರ್ಟ್ ಮಾಡುವ ಪತ್ರಕರ್ತರನ್ನು ಬೆಂಬಲಿಸಿ” ಎಂದು ಸ್ವತಂತ್ರ ಪತ್ರಕರ್ತೆ ನೇಹಾ ದೀಕ್ಷಿತ್ ಟ್ವೀಟ್ ಮಾಡಿದ್ದಾರೆ. ದಿಟ್ಟ ಪತ್ರಕರ್ತರಾದ ರೂಪೇಶ್‌ ಸಿಂಗ್‌, ಮೊಹಮ್ಮದ್‌ ಜುಬೇರ್‌, ಸಿದ್ದಿಕ್‌ ಕಪ್ಪನ್‌, ಆಸಿಫ್‌ ಸುಲ್ತಾನ್‌ ಅವರ ಹೆಸರುಗಳನ್ನು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...