Homeಮುಖಪುಟಪೆಗಾಸಸ್ ಪಟ್ಟಿಯಲ್ಲಿದ್ದ ಜಾರ್ಖಂಡ್ ಪತ್ರಕರ್ತನ ಬಂಧನ; ದಿಟ್ಟ ವರದಿಗಾರಿಕೆಯೇ ಮುಳುವಾಯಿತೆ?

ಪೆಗಾಸಸ್ ಪಟ್ಟಿಯಲ್ಲಿದ್ದ ಜಾರ್ಖಂಡ್ ಪತ್ರಕರ್ತನ ಬಂಧನ; ದಿಟ್ಟ ವರದಿಗಾರಿಕೆಯೇ ಮುಳುವಾಯಿತೆ?

- Advertisement -
- Advertisement -

ಪೆಗಾಸಸ್ ಸ್ನೂಪಿಂಗ್ ಪಟ್ಟಿಯಲ್ಲಿ ತನ್ನ ಹೆಸರು ಕಾಣಿಸಿಕೊಂಡಿದ್ದರಿಂದ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಸ್ವತಂತ್ರ ಪತ್ರಕರ್ತ ರೂಪೇಶ್ ಕುಮಾರ್ ಸಿಂಗ್ ಅವರನ್ನು ಜಾರ್ಖಾಂಡ್‌ ಪೊಲೀಸರು ಬಂಧಿಸಲಾಗಿದೆ. ಕಳೆದ ವರ್ಷ ಮಾವೋವಾದಿ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ರೂಪೇಶ್ ಹೆಸರನ್ನು ಸೇರಿಸಲಾಗಿದೆ.

ಪತ್ರಕರ್ತ ರೂಪೇಶ್‌ ಮಾವೋವಾದಿಗಳಿಗಾಗಿ ನಿಧಿ ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ಆದರೆ ರೂಪೇಶ್ ಕುಟುಂಬ ಹಾಗೂ ಹಲವಾರು ಪತ್ರಕರ್ತರು ಆರೋಪಗಳನ್ನು ಅಲ್ಲಗಳೆದಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಕಟ್ಟಕಡೆಯ ಸಮುದಾಯಗಳಿಗೆ ಸಂಬಂಧಿಸಿದ ವಿಷಯಗಳನ್ನು ನಿರಂತರ ವರದಿ ಮಾಡುತ್ತಿದ್ದರಿಂದ ರೂಪೇಶ್ ಅವರನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಸಿಪಿಐ (ಮಾವೋವಾದಿ) ಪಕ್ಷದ ಪ್ರಶಾಂತ್ ಬೋಸ್ ಅಲಿಯಾಸ್ ಕಿಶಾಂದಾ ಸೇರಿದಂತೆ ಜಾರ್ಖಂಡ್‌ನ ಸರೈಕೆಲಾ ಜಿಲ್ಲೆಯ ಮಾವೋವಾದಿ ನಾಯಕರ ವಿರುದ್ಧ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರೂಪೇಶ್ ಬಂಧನವಾಗಿದೆ.

ಮಾವೋವಾದಿ ಸಂಪರ್ಕಗಳ ಆರೋಪದ ಮೇಲೆ ರೂಪೇಶ್‌ ಅವರನ್ನು 2019ರಲ್ಲಿ ಗಯಾ ಪೊಲೀಸರು ಬಂಧಿಸಿದ್ದರು. ಆದರೆ ಪೊಲೀಸರು ಆರೋಪಪಟ್ಟಿ ಸಲ್ಲಿಸಲು ಸಾಧ್ಯವಾಗದ ಕಾರಣ ಜಾಮೀನು ಪಡೆದಿದ್ದರು ಎಂದು ‘ದಿ ವೈರ್’ ವರದಿ ಮಾಡಿತ್ತು. ‘ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ’ ಎಂದು ರೂಪೇಶ್ ಹೇಳಿದ್ದರು.

ಇದನ್ನೂ ಓದಿರಿ: ಲುಲುಮಾಲ್: ಬೇಕಂತಲೇ ನಮಾಜ್‌ ಮಾಡಿ ವಿವಾದ ಸೃಷ್ಟಿ; ಪಿತೂರಿಯ ಹಿಂದೆ ಯಾರಿದ್ದಾರೆ?

ರೂಪೇಶ್‌ ಅವರ ಪತ್ನಿ ಇಪ್ಸಾ ಶತಾಕ್ಷಿ ಅವರೂ ದಿಟ್ಟ ಹೋರಾಟಗಾರ್ತಿ. ಬುಡಕಟ್ಟು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಶತಾಕ್ಷಿ ಅವರ ಹೆಸರು ಕೂಡ ಪೆಗಾಸಸ್ ಸ್ನೂಪಿಂಗ್ ಪಟ್ಟಿಯಲ್ಲಿತ್ತು. ದಿ ವೈರ್‌ಗೆ ಪ್ರತಿಕ್ರಿಯೆ ನೀಡಿರುವ ಅವರು, “ಖಾರ್ಸಾವಾನ್ ಜಿಲ್ಲೆಯ ಪೊಲೀಸರು ರಾಮಗಢ್‌ನಲ್ಲಿರುವ ನಮ್ಮ ಮನೆಯನ್ನು ಒಂಬತ್ತು ಗಂಟೆಗಳ ಕಾಲ ಸರ್ಚ್ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ಬೆಡ್ ಶೀಟ್, ಒಂಬತ್ತು ಪುಟಗಳ ನೋಟ್‌ಬುಕ್, ಮೋಟರ್‌ ಸೈಕಲ್ ದಾಖಲೆ, ಎರಡು ಮೊಬೈಲ್ ಫೋನ್‌ಗಳು, ಒಂದು ಹಾರ್ಡ್ ಡಿಸ್ಕ್, ಕಾರಿನ ದಾಖಲೆ, ಎರಡು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸರ್ಚ್ ವೇಳೆ ಸುಮಾರು ಅರ್ಧಗಂಟೆ ಕಾಲ ಪೊಲೀಸರು ನಮ್ಮನ್ನು ಮನೆಯಿಂದ ಹೊರಗೆ ಕಳುಹಿಸಿದರು. ಒಳಗಿನಿಂದ ಬಾಗಿಲು ಲಾಕ್‌ ಮಾಡಿದ್ದರು” ಎಂದು ತಿಳಿಸಿದ್ದಾರೆ.

“ನಿರ್ಭೀತವಾಗಿ ಪತ್ರಿಕೋದ್ಯಮ ವೃತ್ತಿ ಮಾಡುತ್ತಿದ್ದ ಕಾರಣ ನನ್ನ ಗಂಡನನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ಇಪ್ಸಾ ತಿಳಿಸಿದ್ದಾರೆ.

ರೂಪೇಶ್‌ ಇತ್ತೀಚೆಗೆ ಗಿರಿದಿಹ್‌ಗೆ ಭೇಟಿ ನೀಡಿದ್ದರು. ಕೈಗಾರಿಕಾ ಮಾಲಿನ್ಯದಿಂದಾಗಿ ಸ್ಥಳೀಯ ಜನರ ಜೀವನ ಎಷ್ಟು ಹದಗೆಟ್ಟಿದೆ ಎಂಬುದರ ಕುರಿತು ವರದಿ ಮಾಡಿದ್ದರು. ಮುಖದ ಮೇಲೆ ವಿಕಾರವಾದ ಗಡ್ಡೆ ಬೆಳೆದಿರುವ, ನಡೆಯಲೂ ಕೂಡ ಸಾಧ್ಯವಾಗದೆ ಇರುವ ಸ್ಥಳೀಯ ಹೆಣ್ಣುಮಗಳೊಬ್ಬಳ ವೀಡಿಯೊವನ್ನು ಅವರು ಟ್ವೀಟ್ ಮಾಡಿದ್ದಾರೆ. ವೀಡಿಯೊ ವೈರಲ್ ಕೂಡ ಆಗಿತ್ತು. ಕೆಲವು ವೈದ್ಯರು, ನಟ ಸೋನು ಸೂದ್ ಅವರ ತಂಡವು ಟ್ವೀಟ್‌ಗೆ ಪ್ರತಿಕ್ರಿಯಿಸಿ, ಆ ಹೆಣ್ಣುಮಗುವಿಗೆ ಸಹಾಯಹಸ್ತ ನೀಡಿದ್ದರು.

ಹಲವಾರು ಪತ್ರಕರ್ತರು ಸಾಮಾಜಿಕ ಮಾಧ್ಯಮದಲ್ಲಿ ರೂಪೇಶ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ಹಿಂಸಾಚಾರ

“ಕೈಗಾರಿಕೆಗಳು ಉಂಟು ಮಾಡುತ್ತಿರುವ ಮಾಲಿನ್ಯದಿಂದಾಗಿ ಹಳ್ಳಿಗಳ ಮೇಲಾಗುತ್ತಿರುವ ದುಷ್ಪರಿಣಾಮದ ಕುರಿತು, ಸುದ್ದಿಮನೆಗಳು ಸಾಮಾನ್ಯವಾಗಿ ನಿರ್ಲಕ್ಷಿಸಲ್ಪಡುವ ಗ್ರೌಂಡ್‌ ರಿಪೋರ್ಟ್‌ ಅನ್ನು ರೂಪೇಶ್ ಕುಮಾರ್ ಸಿಂಗ್ ಮಾಡಿದ್ದಾರೆ. ಅದು ಅವರ ಕೊನೆಯ ವರದಿಯೂ ಆಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು ವರದಿ ಮಾಡುವ ಪತ್ರಕರ್ತರು ಸರ್ಕಾರದ ಕಣ್ಗಾವಲನ್ನು, ಸೆರೆಮನೆ ವಾಸವನ್ನು ಇನ್ನು ಮುಂದೆ ನಿರ್ಲಕ್ಷಿಸಲು ಸಾಧ್ಯವಾಗದು” ಎಂದು ಸ್ವತಂತ್ರ ಪತ್ರಕರ್ತೆ ಶಾಲಿನಿ ನಾಯರ್ ಟ್ವೀಟ್ ಮಾಡಿದ್ದಾರೆ.

“ನಿಮಗೆ ವಾಕ್ ಸ್ವಾತಂತ್ರ್ಯದ ಬಗ್ಗೆ ಕಾಳಜಿ ಇದ್ದರೆ, ಪ್ರಚಾರವನ್ನು ಪಡೆಯದೆ ಗ್ರೌಂಡ್ ರಿಪೋರ್ಟ್ ಮಾಡುವ ಪತ್ರಕರ್ತರನ್ನು ಬೆಂಬಲಿಸಿ” ಎಂದು ಸ್ವತಂತ್ರ ಪತ್ರಕರ್ತೆ ನೇಹಾ ದೀಕ್ಷಿತ್ ಟ್ವೀಟ್ ಮಾಡಿದ್ದಾರೆ. ದಿಟ್ಟ ಪತ್ರಕರ್ತರಾದ ರೂಪೇಶ್‌ ಸಿಂಗ್‌, ಮೊಹಮ್ಮದ್‌ ಜುಬೇರ್‌, ಸಿದ್ದಿಕ್‌ ಕಪ್ಪನ್‌, ಆಸಿಫ್‌ ಸುಲ್ತಾನ್‌ ಅವರ ಹೆಸರುಗಳನ್ನು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....