Homeಮುಖಪುಟಜಾರ್ಖಂಡ್ ನ್ಯಾಯಾಧೀಶರಿಗೆ ಆಟೋದಿಂದ ಗುದ್ದಿ ಸಾಯಿಸಿದ ದುಷ್ಕರ್ಮಿಗಳು: ಸಿಸಿಟಿವಿಯಲ್ಲಿ ಸೆರೆ

ಜಾರ್ಖಂಡ್ ನ್ಯಾಯಾಧೀಶರಿಗೆ ಆಟೋದಿಂದ ಗುದ್ದಿ ಸಾಯಿಸಿದ ದುಷ್ಕರ್ಮಿಗಳು: ಸಿಸಿಟಿವಿಯಲ್ಲಿ ಸೆರೆ

- Advertisement -
- Advertisement -

ಜಾರ್ಖಂಡ್ ರಾಜ್ಯದ ಧನಬಾದ್‌ನ ಜಿಲ್ಲಾ ಮತ್ತು ಹೆಚ್ಚುವರಿ ನ್ಯಾಯಾಧೀಶರಾದ ಉತ್ತಮ್ ಆನಂದ್‌ರವರಿಗೆ ದುಷ್ಕರ್ಮಿಗಳು ಆಟೋದಿಂದ ಗುದ್ದಿದ ಸಿಸಿಟಿವಿ ವಿಡಿಯೋ ದೊರಕಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ನಂತರ ಆಸ್ಪತ್ರೆಗೆ ಸೇರಿಸಿದರೂ ಸಹ ಅವರು ಬದುಕುಳಿಯಲಿಲ್ಲ.

ಉತ್ತಮ್ ಆನಂದ್‌ರವರು ಬುಧವಾರ ಬೆಳಿಗ್ಗೆ 5 ಗಂಟೆಯ ಸಮಯದಲ್ಲಿ ಜಾಗಿಂಗ್ ಮಾಡುತ್ತಿದ್ದರು. ಅವರ ಮನೆಯಿಂದ ಕೇವಲ ಅರ್ಧ ಕಿ.ಮೀ ಅಂತರದಲ್ಲಿ ಅವರು ರಸ್ತೆ ಬದಿಯಲ್ಲಿ ಜಾಗ್ ಮಾಡುತ್ತಿರುವಾಗಿ ಹಿಂದಿನಿಂದ ಬಂದ ಆಟೋವೊಂದು ಅವರನ್ನೇ ಗುರಿಯಾಗಿಸಿಕೊಂಡು ಗುದ್ದಿದೆ. ಅವರು ಕುಸಿದುಬಿದ್ದ ನಂತರ ದುಷ್ಕರ್ಮಿಗಳು ಪರಾರಿಯಾಗಿರುವುದು ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

ಸಿಸಿಕ್ಯಾಮರ ದೃಶ್ಯಾವಳಿಗಳು ದೊರೆತ ನಂತರ ಇದು ಪೂರ್ವನಿಯೋಜಿತ ಹತ್ಯೆ ಎಂಬುದು ಸಾಬೀತಾಗಿದೆ. ನ್ಯಾಯಾಂಗದ ಮೇಲಿನ ಕ್ರೂರ ಹಲ್ಲೆ ಎಂದು ಕರೆದಿರುವ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ನ್ಯಾಯಾಧೀಶರನ್ನು ಕೊಂದ ಆಟೋ ಯಾರದೆಂಬುದು ಇನ್ನು ಪತ್ತೆಯಾಗಿಲ್ಲ. ನ್ಯಾಯಾಧೀಶರನ್ನು ಆಸ್ಪತ್ರೆಗೆ ಸೇರಿಸಿದಾಗ ಆತ ಯಾರೆಂಬುದು ಸಹ ಗೊತ್ತಿರಲಿಲ್ಲ ಎನ್ನಲಾಗಿದೆ. ಅವರ ಕುಟುಂಬ 7 ಗಂಟೆಯಾದರೂ ಅವರು ಮನೆಗೆ ಬಾರದಿದ್ದಾಗ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಪೊಲೀಸ್ ಹುಡುಕಾಟದಲ್ಲಿ ಅವರು ಆಸ್ಪತ್ರೆಯಲ್ಲಿ ಸಾವನಪ್ಪಿರುವುದು ಪತ್ತೆಯಾಗಿದೆ.

ನ್ಯಾಯಾಧೀಶರ ಕೊಲೆಯ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳಿರುವುದನ್ನು ಸಿಸಿಟಿವಿ ಸಾಕ್ಷಿಗಳು ದೃಢಪಡಿಸಿವೆ. ಆರಂಭಿಕ ತನಿಖೆಯಲ್ಲಿ ಹತ್ಯೆಯ ಕೆಲವೇ ಗಂಟೆಗಳ ಹಿಂದೆ ಆಟೋವನ್ನು ಅಪಹರಿಸಿರುವುದು ಬೆಳಕಿಗೆ ಬಂದಿದೆ. ಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಉನ್ನತ ಮಟ್ಟದ ತನಿಖೆಗೆ ಒತ್ತಡ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಾಧೀಶರಾದ ಆನಂದ್‌ರವರು ಧನಬಾದ್ ನಗರದ ಮಾಫಿಯಾ ಕೊಲೆಗಳ ವಿಚಾರಣೆ ನಡೆಸುತ್ತಿದ್ದರು ಮತ್ತು ಇತ್ತೀಚೆಗೆ ಇಬ್ಬರು ಗ್ಯಾಂಗ್‌ಸ್ಟರ್‌ಗಳಿಗೆ ಜಾಮೀನು ನೀಡಲು ನಿರಾಕರಿಸಿದ್ದರು. ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠದ ಮುಂದೆ ಈ ಘಟನೆಯನ್ನು ವಿವರಿಸಿರುವ ವಕೀಲ ವಿಕಾಸ್ ಸಿಂಗ್ “ಇದು ನ್ಯಾಯಾಂಗದ ಮೇಲಿನ ಲಜ್ಜೆಗೆಟ್ಟ ದಾಳಿ. ಈ ಕುರಿತು ಸಿಬಿಐ ತನಿಖೆ ನಡೆಸಬೇಕಾಗಿದೆ. ಬೆಳಿಗ್ಗೆ ವಾಕಿಂಗ್ ಮಾಡುವಾಗ ನ್ಯಾಯಾಧೀಶರನ್ನು ಆಟೋದಲ್ಲಿ ಗುದ್ದಿ ಸಾಯಿಸುವುದು ಎಂದರೆ ಏನರ್ಥ? ಅವರು ಗ್ಯಾಂಗ್‌ಸ್ಟರ್‌ಗಳ ಜಾಮೀನು ವಿಚಾರಣೆ ನಡೆಸುತ್ತಿದ್ದರು. ಇದು ನ್ಯಾಯಾಂಗ ಸ್ವಾತಂತ್ರ್ಯದ ಮೇಲಿನ ದಾಳಿ” ಎಂದು ನೋವು ತೋಡಿಕೊಂಡಿದ್ದಾರೆ. ನ್ಯಾಯಮೂರ್ತಿ ಚಂದ್ರಚೂಡ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಮುಂದೆ ಈ ಪ್ರಕರಣವನ್ನು ಪ್ರಸ್ತಾಪಿಸುವಂತೆ ಸೂಚಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ: ರಸ್ತೆಯಲ್ಲಿ ಮಲಗಿದ್ದ 18 ಕಾರ್ಮಿಕರ ದುರ್ಮರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...