HomeUncategorizedಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ

ಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ

- Advertisement -
- Advertisement -

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (ಇಸಿ) ಮಂಗಳವಾರ ಪ್ರಕಟಿಸಲಿದೆ. ಆಯೋಗವು ಮಧ್ಯಾಹ್ನ 3.30ಕ್ಕೆ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಕರೆದು ವಿವರಗಳನ್ನು ಪ್ರಕಟಿಸಿದೆ. ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಂಡರೆ, ಜಾರ್ಖಂಡ್ ಮುಂದಿನ ವರ್ಷ ಜನವರಿ 5 ರಂದು ಕೊನೆಗೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಾರ್ಖಂಡ್‌ನಲ್ಲಿ ಹೆಮಂತ್ ಸೊರೆನ್ ನೇತೃತ್ವದ ಜೆಎಂಎಂ ಪಕ್ಷ ಆಡಳಿತದಲ್ಲಿದ್ದು, ಅಲ್ಲಿ ಬಿಜೆಪಿ ಅವರಿಗೆ ಸವಾಲು ಹಾಕುತ್ತಿದೆ. ಇತ್ತಿಚೆಗಷ್ಟೆ ಪ್ರಕಣವೊಂದಲ್ಲಿ ಕೇಂದ್ರ ತನಿಖಾ ಸಂಸ್ಥೆ ಸೊರೆನ್ ಅವರನ್ನು ಬಂಧಿಸಿತ್ತು. ಈ ವೇಳೆ ಅವರು ರಾಜೀನಾಮೆ ನೀಡಿದ್ದ ಅವರು ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಮತ್ತೆ ಅಧಿಕಾರಕ್ಕೆ ಏರಿದ್ದರು.

ಮಹಾರಾಷ್ಟ್ರದಲ್ಲಿ ಶಿವಸೇನೆ, ಬಿಜೆಪಿ ಮತ್ತು ಎನ್‌ಸಿಪಿ ಅಧಿಕಾರದಲ್ಲಿದೆ. ಅದಾಗ್ಯೂ ಬಿಜೆಪಿ ಆಪಾದಿತ ಆಪರೇಷನ್ ಕಮಲ ರಾಜ್ಯದಲ್ಲಿ ಅಧಿಕಾರಕ್ಕೆ ಏರಿತ್ತು. ಅಲ್ಲದೆ, ಎನ್‌ಸಿಪಿ ಮತ್ತು ಶಿವಸೇನೆ ಪಕ್ಷಗಳು ಒಡೆದುಹೋಗುವಂತೆ ಕೂಡಾ ಬಿಜೆಪಿ ಮಾಡಿತ್ತು ಎಂದು ಆರೋಪಿಸಲಾಗಿದೆ. ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ಮೈತ್ರಿಯಿಂದ ಅಧಿಕಾರನ್ನು ಕಿತ್ತ ಬಿಜೆಪಿ ಶಿವಸೇನೆಯನ್ನು ಶಿವಸೇನೆ ಮತ್ತು ಶಿವಸೇನೆ(ಉದ್ಧವ್ ಠಾಕ್ರೆ) ಮತ್ತು ಎನ್‌ಸಿಪಿಯನ್ನು ಎನ್‌ಸಿಪಿ(ಶರದ್ ಪವಾರ್) ಎಂದು ವಿಭಜನೆ ಮಾಡುವಂತೆ ರಾಜಕೀಯ ತಂತ್ರ ಮಾಡಿತ್ತು.

ಇದನ್ನೂ ಓದಿ: ಬಂಗಾಳದ ಪ್ರತಿಭಟನಾನಿರತ ಕಿರಿಯ ವೈದ್ಯರ ಬೆಂಬಲಕ್ಕೆ ನಿಂತ ಐಎಂಎ; ರಾಷ್ಟ್ರವ್ಯಾಪಿ ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ

288 ವಿಧಾನಸಭಾ ಕ್ಷೇತ್ರಗಳಿರುವ ಮಹಾರಾಷ್ಟ್ರದಲ್ಲಿ ಪ್ರಸ್ತುತ ಆಡಳಿತರೂಢ ಮಹಾ ಯುತಿ ಮೈತ್ರಿಯಲ್ಲಿ 202 ಶಾಸಕರಿದ್ದಾರೆ. ಇದರಲ್ಲಿ ಬಿಜೆಪಿ 102, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 40, ಮುಖ್ಯಮಂತ್ರಿ ಶಿಂಧೆ ನೇತೃತ್ವದ ಶಿವಸೇನೆ 38 ಹಾಗೂ ಇತರ ಪಕ್ಷಗಳ ಮತ್ತು ಪಕ್ಷೇತರರ 22 ಶಾಸಕರ ಬೆಂಬಲವಿದೆ.

ವಿಪಕ್ಷ ಮಹಾ ವಿಕಾಸ್ ಅಘಾಡಿಯಲ್ಲಿ 69 ಸ್ಥಾನಗಳಿದ್ದು, ಇದರಲ್ಲಿ ಕಾಂಗ್ರೆಸ್ 37, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 16, ಶರಾದ್ ಪವಾರ್ ನೇತೃತ್ವದ ಎನ್‌ಸಿಪಿ 12, ಸಮಾಜವಾದಿ ಪಕ್ಷದ 2, ಸಿಪಿಐ(ಎಂ) 1 ಪಿಡಬ್ಲ್ಯೂಪಿಐ ಪಕ್ಷದ 1 ಶಾಸಕರಿದ್ದಾರೆ. ಇಷ್ಟೆ ಅಲ್ಲದೆ, ಎಂಐಎಂ ಪಕ್ಷದ ಇಬ್ಬರು ಶಾಸಕರು ಕೂಡಾ ವಿಪಕ್ಷದಲ್ಲಿದ್ದಾರೆ. ಅದಾಗ್ಯೂ, ರಾಜ್ಯದ 15 ಸ್ಥಾನಗಳು ವಿವಿಧ ಕಾರಣಗಳಿಗೆ ತೆರವುಗೊಂಡಿದೆ.

81 ವಿಧಾನಸಭಾ ಕ್ಷೇತ್ರಗಳಿರುವ ಜಾರ್ಖಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಸರ್ಕಾರವಿದ್ದು, ಹೇಮಂತ್ ಸೋರೆನ್ ಅವರ ಜೆಎಂಎಂ ನೇತೃತ್ವದವಿದೆ. ರಾಜ್ಯದಲ್ಲಿ ಜೆಎಂಎಂ 25, ಕಾಂಗ್ರೆಸ್17, ಸಿಪಿಐಎಂಲ್ 1 ಮತ್ತು ಆರ್‌ಜೆಡಿಗೆ ಒಬ್ಬ ಶಾಸಕರಿದ್ದಾರೆ. ವಿಪಕ್ಷದಲ್ಲಿ ಬಿಜೆಪಿ 25, ಎಜೆಎಸ್‌ಯು 3, ಜೆಡಿಯು 1 ಮತ್ತು ಒಬ್ಬ ಪಕ್ಷೇತರ ಶಾಸಕರಿದ್ದಾರೆ. ಇದಲ್ಲದೆ ಜಾರ್ಖಂಡ್ ವಿಧಾನಸಭೆಯಲ್ಲಿ 7 ಸ್ಥಾನಗಳು ತೆರವುಗೊಂಡಿದೆ.

ಇದನ್ನೂ ಓದಿ: ತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ. ಚಂದ್ರು

ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲದೆ, ವಿವಿಧ ಕಾರಣಗಳಿಂದ ತೆರವಾಗಿರುವ ಮೂರು ಲೋಕಸಭೆ ಮತ್ತು ಕನಿಷ್ಠ 47 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಯನ್ನೂ ಆಯೋಗ ಇಂದು ಘೋಷಿಸುವ ಸಂಭವವಿದೆ.

ಕೇರಳದ ವಯನಾಡ್, ಮಹಾರಾಷ್ಟ್ರದ ನಾಂದೇಡ್ ಮತ್ತು ಪಶ್ಚಿಮ ಬಂಗಾಳದ ಬಸಿರ್ಹತ್ ಮೂರು ಲೋಕಸಭಾ ಸ್ಥಾನಗಳು ಖಾಲಿ ಇವೆ. ವಯನಾಡ್ ಕ್ಷೇತ್ರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದರಿಂದ ತೆರವಾಗಿತ್ತು. ಅವರು ಲೋಕಸಭೆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು.

ನಾಂದೇಡ್ ಪ್ರತಿನಿಧಿಸಿದ್ದ ಕಾಂಗ್ರೆಸ್ ಸಂಸದ ವಸಂತ್ ಚವಾಣ್ ಮತ್ತು ಬಸಿರ್ ಹತ್ ಪ್ರತಿನಿಧಿಸಿದ್ದ ಟಿಎಂಸಿ ಸಂಸದ ಹಾಜಿ ಶೇಖ್ ನೂರುಲ್ ಇಸ್ಲಾಂ ಇತ್ತೀಚೆಗೆ ನಿಧನರಾಗಿದ್ದರಿಂದ ಕ್ಷೇತ್ರವು ತೆರವುಗೊಂಡಿತ್ತು.

ವಿಡಿಯೊ ನೋಡಿ: ನೋಡಬನ್ನಿ ಬಸವನಗುಡಿ ಕಡ್ಲೇಕಾಯಿ ಪರಿಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...