HomeUncategorizedಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ

ಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ

- Advertisement -
- Advertisement -

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (ಇಸಿ) ಮಂಗಳವಾರ ಪ್ರಕಟಿಸಲಿದೆ. ಆಯೋಗವು ಮಧ್ಯಾಹ್ನ 3.30ಕ್ಕೆ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಕರೆದು ವಿವರಗಳನ್ನು ಪ್ರಕಟಿಸಿದೆ. ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಂಡರೆ, ಜಾರ್ಖಂಡ್ ಮುಂದಿನ ವರ್ಷ ಜನವರಿ 5 ರಂದು ಕೊನೆಗೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಾರ್ಖಂಡ್‌ನಲ್ಲಿ ಹೆಮಂತ್ ಸೊರೆನ್ ನೇತೃತ್ವದ ಜೆಎಂಎಂ ಪಕ್ಷ ಆಡಳಿತದಲ್ಲಿದ್ದು, ಅಲ್ಲಿ ಬಿಜೆಪಿ ಅವರಿಗೆ ಸವಾಲು ಹಾಕುತ್ತಿದೆ. ಇತ್ತಿಚೆಗಷ್ಟೆ ಪ್ರಕಣವೊಂದಲ್ಲಿ ಕೇಂದ್ರ ತನಿಖಾ ಸಂಸ್ಥೆ ಸೊರೆನ್ ಅವರನ್ನು ಬಂಧಿಸಿತ್ತು. ಈ ವೇಳೆ ಅವರು ರಾಜೀನಾಮೆ ನೀಡಿದ್ದ ಅವರು ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಮತ್ತೆ ಅಧಿಕಾರಕ್ಕೆ ಏರಿದ್ದರು.

ಮಹಾರಾಷ್ಟ್ರದಲ್ಲಿ ಶಿವಸೇನೆ, ಬಿಜೆಪಿ ಮತ್ತು ಎನ್‌ಸಿಪಿ ಅಧಿಕಾರದಲ್ಲಿದೆ. ಅದಾಗ್ಯೂ ಬಿಜೆಪಿ ಆಪಾದಿತ ಆಪರೇಷನ್ ಕಮಲ ರಾಜ್ಯದಲ್ಲಿ ಅಧಿಕಾರಕ್ಕೆ ಏರಿತ್ತು. ಅಲ್ಲದೆ, ಎನ್‌ಸಿಪಿ ಮತ್ತು ಶಿವಸೇನೆ ಪಕ್ಷಗಳು ಒಡೆದುಹೋಗುವಂತೆ ಕೂಡಾ ಬಿಜೆಪಿ ಮಾಡಿತ್ತು ಎಂದು ಆರೋಪಿಸಲಾಗಿದೆ. ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ಮೈತ್ರಿಯಿಂದ ಅಧಿಕಾರನ್ನು ಕಿತ್ತ ಬಿಜೆಪಿ ಶಿವಸೇನೆಯನ್ನು ಶಿವಸೇನೆ ಮತ್ತು ಶಿವಸೇನೆ(ಉದ್ಧವ್ ಠಾಕ್ರೆ) ಮತ್ತು ಎನ್‌ಸಿಪಿಯನ್ನು ಎನ್‌ಸಿಪಿ(ಶರದ್ ಪವಾರ್) ಎಂದು ವಿಭಜನೆ ಮಾಡುವಂತೆ ರಾಜಕೀಯ ತಂತ್ರ ಮಾಡಿತ್ತು.

ಇದನ್ನೂ ಓದಿ: ಬಂಗಾಳದ ಪ್ರತಿಭಟನಾನಿರತ ಕಿರಿಯ ವೈದ್ಯರ ಬೆಂಬಲಕ್ಕೆ ನಿಂತ ಐಎಂಎ; ರಾಷ್ಟ್ರವ್ಯಾಪಿ ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ

288 ವಿಧಾನಸಭಾ ಕ್ಷೇತ್ರಗಳಿರುವ ಮಹಾರಾಷ್ಟ್ರದಲ್ಲಿ ಪ್ರಸ್ತುತ ಆಡಳಿತರೂಢ ಮಹಾ ಯುತಿ ಮೈತ್ರಿಯಲ್ಲಿ 202 ಶಾಸಕರಿದ್ದಾರೆ. ಇದರಲ್ಲಿ ಬಿಜೆಪಿ 102, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 40, ಮುಖ್ಯಮಂತ್ರಿ ಶಿಂಧೆ ನೇತೃತ್ವದ ಶಿವಸೇನೆ 38 ಹಾಗೂ ಇತರ ಪಕ್ಷಗಳ ಮತ್ತು ಪಕ್ಷೇತರರ 22 ಶಾಸಕರ ಬೆಂಬಲವಿದೆ.

ವಿಪಕ್ಷ ಮಹಾ ವಿಕಾಸ್ ಅಘಾಡಿಯಲ್ಲಿ 69 ಸ್ಥಾನಗಳಿದ್ದು, ಇದರಲ್ಲಿ ಕಾಂಗ್ರೆಸ್ 37, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 16, ಶರಾದ್ ಪವಾರ್ ನೇತೃತ್ವದ ಎನ್‌ಸಿಪಿ 12, ಸಮಾಜವಾದಿ ಪಕ್ಷದ 2, ಸಿಪಿಐ(ಎಂ) 1 ಪಿಡಬ್ಲ್ಯೂಪಿಐ ಪಕ್ಷದ 1 ಶಾಸಕರಿದ್ದಾರೆ. ಇಷ್ಟೆ ಅಲ್ಲದೆ, ಎಂಐಎಂ ಪಕ್ಷದ ಇಬ್ಬರು ಶಾಸಕರು ಕೂಡಾ ವಿಪಕ್ಷದಲ್ಲಿದ್ದಾರೆ. ಅದಾಗ್ಯೂ, ರಾಜ್ಯದ 15 ಸ್ಥಾನಗಳು ವಿವಿಧ ಕಾರಣಗಳಿಗೆ ತೆರವುಗೊಂಡಿದೆ.

81 ವಿಧಾನಸಭಾ ಕ್ಷೇತ್ರಗಳಿರುವ ಜಾರ್ಖಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಸರ್ಕಾರವಿದ್ದು, ಹೇಮಂತ್ ಸೋರೆನ್ ಅವರ ಜೆಎಂಎಂ ನೇತೃತ್ವದವಿದೆ. ರಾಜ್ಯದಲ್ಲಿ ಜೆಎಂಎಂ 25, ಕಾಂಗ್ರೆಸ್17, ಸಿಪಿಐಎಂಲ್ 1 ಮತ್ತು ಆರ್‌ಜೆಡಿಗೆ ಒಬ್ಬ ಶಾಸಕರಿದ್ದಾರೆ. ವಿಪಕ್ಷದಲ್ಲಿ ಬಿಜೆಪಿ 25, ಎಜೆಎಸ್‌ಯು 3, ಜೆಡಿಯು 1 ಮತ್ತು ಒಬ್ಬ ಪಕ್ಷೇತರ ಶಾಸಕರಿದ್ದಾರೆ. ಇದಲ್ಲದೆ ಜಾರ್ಖಂಡ್ ವಿಧಾನಸಭೆಯಲ್ಲಿ 7 ಸ್ಥಾನಗಳು ತೆರವುಗೊಂಡಿದೆ.

ಇದನ್ನೂ ಓದಿ: ತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ. ಚಂದ್ರು

ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲದೆ, ವಿವಿಧ ಕಾರಣಗಳಿಂದ ತೆರವಾಗಿರುವ ಮೂರು ಲೋಕಸಭೆ ಮತ್ತು ಕನಿಷ್ಠ 47 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಯನ್ನೂ ಆಯೋಗ ಇಂದು ಘೋಷಿಸುವ ಸಂಭವವಿದೆ.

ಕೇರಳದ ವಯನಾಡ್, ಮಹಾರಾಷ್ಟ್ರದ ನಾಂದೇಡ್ ಮತ್ತು ಪಶ್ಚಿಮ ಬಂಗಾಳದ ಬಸಿರ್ಹತ್ ಮೂರು ಲೋಕಸಭಾ ಸ್ಥಾನಗಳು ಖಾಲಿ ಇವೆ. ವಯನಾಡ್ ಕ್ಷೇತ್ರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದರಿಂದ ತೆರವಾಗಿತ್ತು. ಅವರು ಲೋಕಸಭೆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು.

ನಾಂದೇಡ್ ಪ್ರತಿನಿಧಿಸಿದ್ದ ಕಾಂಗ್ರೆಸ್ ಸಂಸದ ವಸಂತ್ ಚವಾಣ್ ಮತ್ತು ಬಸಿರ್ ಹತ್ ಪ್ರತಿನಿಧಿಸಿದ್ದ ಟಿಎಂಸಿ ಸಂಸದ ಹಾಜಿ ಶೇಖ್ ನೂರುಲ್ ಇಸ್ಲಾಂ ಇತ್ತೀಚೆಗೆ ನಿಧನರಾಗಿದ್ದರಿಂದ ಕ್ಷೇತ್ರವು ತೆರವುಗೊಂಡಿತ್ತು.

ವಿಡಿಯೊ ನೋಡಿ: ನೋಡಬನ್ನಿ ಬಸವನಗುಡಿ ಕಡ್ಲೇಕಾಯಿ ಪರಿಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...