Homeಮುಖಪುಟಗುಂಪು ಹಿಂಸಾಚಾರ ವಿರೋಧಿ ಮಸೂದೆ ಅಂಗೀಕರಿಸಿದ ಜಾರ್ಖಂಡ್‌

ಗುಂಪು ಹಿಂಸಾಚಾರ ವಿರೋಧಿ ಮಸೂದೆ ಅಂಗೀಕರಿಸಿದ ಜಾರ್ಖಂಡ್‌

- Advertisement -
- Advertisement -

ಜಾರ್ಖಂಡ್ ವಿಧಾನಸಭೆಯು ಮಂಗಳವಾರದಂದು ‘ಗುಂಪು ಹತ್ಯೆ ಮತ್ತು ಗುಂಪು ಹಿಂಸಾಚಾರ’ದ ವಿರುದ್ಧ ಮಸೂದೆಯನ್ನು ಅಂಗೀಕರಿಸಿದೆ. ಸುದ್ದಿ ಸಂಸ್ಥೆ ಎಎನ್‌ಐ, “ಜಾರ್ಖಂಡ್‌ ಸರ್ಕಾರ ‘ಗುಂಪು ಹಿಂಸಾಚಾರ ಮತ್ತು ಗುಂಪು ಹತ್ಯೆ ತಡೆ ಮಸೂದೆ-2021’ ಕಾಯ್ದೆಯನ್ನು ಅಂಗೀಕರಿಸಿದೆ” ಎಂದು ವರದಿ ಮಾಡಿದೆ. ಮಾಧ್ಯಮ ವರದಿಗಳ ಪ್ರಕಾರ, ಮಸೂದೆಯು ಸಾಂವಿಧಾನಿಕ ಹಕ್ಕುಗಳ ಪರಿಣಾಮಕಾರಿ ರಕ್ಷಣೆ ಮತ್ತು ಗುಂಪು ಹಿಂಸಾಚಾರವನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ.

ಮಸೂದೆಯು ಗುಂಪು ಹಲ್ಲೆ ಅಥವಾ ಅದರಲ್ಲಿ ಭಾಗವಹಿಸಿದ ತಪ್ಪಿತಸ್ಥರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ಮತ್ತು 25 ಲಕ್ಷ ರೂಪಾಯಿ ದಂಡವನ್ನು ವಿಧಿಸುತ್ತದೆ ಎಂದು ವರದಿಗಳು ಉಲ್ಲೇಖಿಸಿವೆ. ಈ ಬೆಳವಣಿಗೆಯೊಂದಿಗೆ, ಗುಂಪು ಹಲ್ಲೆಯ ವಿರುದ್ದ ಮಸೂದೆ ಅಂಗೀಕರಿಸಿರುವ ಮೂರನೇ ರಾಜ್ಯವಾಗಿ ಜಾರ್ಖಂಡ್ ಹೊರ ಹೊಮ್ಮಿದೆ. ಈ ಹಿಂದೆ ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನ ರಾಜ್ಯಗಳು ಗುಂಪು ಹಿಂಸಾಚಾರ ವಿರೋಧಿ ಮಸೂದೆಯನ್ನು ಅಂಗೀಕರಿಸಿದ್ದವು.

ಇದನ್ನೂ ಓದಿ:Explainer: ವೋಟರ್ ಐಡಿಯೊಂದಿಗೆ ಆಧಾರ್ ಲಿಂಕ್ ಮಾಡುವ ಮಸೂದೆಯ ಸಾಧಕ-ಬಾಧಕಗಳು

ಉದ್ದೇಶಿತ ವಿಧೇಯಕವು ಲಿಂಚಿಂಗ್ ತಡೆಗಟ್ಟುವಿಕೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಮನ್ವಯಗೊಳಿಸಲು ನೋಡಲ್ ಅಧಿಕಾರಿ ಎಂದು ಕರೆಯಲಾಗುವ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೋಲೀಸ್ ಶ್ರೇಣಿಗಿಂತ ಕಡಿಮೆಯಿಲ್ಲದ ರಾಜ್ಯ ಸಂಯೋಜಕರನ್ನು ನೇಮಿಸಲು ಅವಕಾಶ ನೀಡುತ್ತದೆ. ಈ ನೋಡಲ್ ಅಧಿಕಾರಿಯನ್ನು ಪೊಲೀಸ್ ಮಹಾನಿರ್ದೇಶಕರು ನೇಮಿಸುತ್ತಾರೆ.

ಸಾಂವಿಧಾನಿಕ ನಿಯಮಗಳಿಗೆ ಅನುಸಾರವಾಗಿ ಕಾನೂನಾಗಲು ಈ ಮಸೂದೆಯನ್ನು ಈಗ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗುವುದು ಎನ್ನಲಾಗಿದೆ.

ಸದನದಲ್ಲಿ ಮಸೂದೆಯನ್ನು ಮಂಡಿಸಿದ ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅಲಂಗೀರ್ ಆಲಂ, “ಜನರಿಗೆ ಪರಿಣಾಮಕಾರಿ ಭದ್ರತೆ ಒದಗಿಸುವುದು, ಅವರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುವುದು ಮತ್ತು ಗುಂಪು ಹಿಂಸಾಚಾರವನ್ನು ತಡೆಯುವುದು ಇದರ ಮುಖ್ಯ ಉದ್ದೇಶವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಸಿ.ಬಿ.ಐ., ಇ.ಡಿ. ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ; ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

ಮಸೂದೆಯ ಮೇಲಿನ ಚರ್ಚೆಯ ಸಮಯದಲ್ಲಿ, ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ ಹಲವಾರು ತಿದ್ದುಪಡಿಗಳನ್ನು ಮಂಡಿಸಿತು. ಅದನ್ನು ಸರ್ಕಾರವು ಧ್ವನಿ ಮತದ ಮೂಲಕ ಬದಿಗಿಟ್ಟಿತು. ಅಲ್ಪಸಂಖ್ಯಾತರ ಓಲೈಕೆಗಾಗಿ ರಾಜ್ಯ ಸರ್ಕಾರ ತರಾತುರಿಯಲ್ಲಿ ಮಸೂದೆಯನ್ನು ತಂದಿದೆ ಎಂದು ಬಿಜೆಪಿ ನಾಯಕ ಸಿಪಿ ಸಿಂಗ್ ಆರೋಪಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಗುಂಪು ಹಿಂಸಾಚಾರದ ಅನೇಕ ಪ್ರಕರಣಗಳು ವರದಿಯಾಗಿವೆ. 2019 ರಲ್ಲಿ 24 ವರ್ಷದ ತಬ್ರೇಜ್ ಅನ್ಸಾರಿಯನ್ನು ಸೆರೈಕೆಲಾ ಖಾರ್ಸಾವನ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯ ಮೇಲೆ ಕಟ್ಟಿಹಾಕಿ ಥಳಿಸಿದಾಗ ರಾಜ್ಯದಲ್ಲಿ ಗುಂಪು ಹತ್ಯೆಯ ಘಟನೆಗಳು ಮುನ್ನೆಲೆಗೆ ಬಂದಿದ್ದವು. ಈ ಥಳಿತದಿಂದಾಗಿ ಅವರು ಸಾವನ್ನಪ್ಪಿದ್ದರು.

ಬುಡಕಟ್ಟು ರಾಜ್ಯವಾದ ಜಾರ್ಖಂಡ್‌ನಲ್ಲಿ ವಾಮಾಚಾರ ನಡೆಸುತ್ತಿದ್ದಾರೆ ಎಂದು ಶಂಕಿಸಿ ಗುಂಪು ಹತ್ಯೆ ಮಾಡಿದ ಘಟನೆಗಳೂ ನಡೆದಿವೆ. ರಾಜ್ಯದ ಮುಖ್ಯಮಂತ್ರಿ ಹೇಮಂತ್ ಸೊರೆನ್ ಗುಂಪು ಹಿಂಸಾಚಾರದ ಘಟನೆಗಳನ್ನು ಖಂಡಿಸಿ, ಅದರ ವಿರುದ್ಧ ಕಾನೂನು ತರುವುದಾಗಿ ಭರವಸೆ ನೀಡಿದ್ದರು.

ಇದನ್ನೂ ಓದಿ:ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ಮಂಡನೆಯಾಗಲಿವೆ 26 ಹೊಸ ಮಸೂದೆ: ಇಲ್ಲಿದೆ ಸಂಕ್ಷಿಪ್ತ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...