Homeಮುಖಪುಟಜಾರ್ಖಂಡ್: ಟ್ರ್ಯಾಕ್ಟರ್ ಹತ್ತಿಸಿ ಗರ್ಭಿಣಿ ಹತ್ಯೆಗೈದ ಫೈನಾನ್ಸ್ ಏಜೆಂಟ್

ಜಾರ್ಖಂಡ್: ಟ್ರ್ಯಾಕ್ಟರ್ ಹತ್ತಿಸಿ ಗರ್ಭಿಣಿ ಹತ್ಯೆಗೈದ ಫೈನಾನ್ಸ್ ಏಜೆಂಟ್

- Advertisement -
- Advertisement -

ಟ್ರಾಕ್ಟರ್ ಲೋನ್ ಕಟ್ಟದ ಕಾರಣಕ್ಕೆ ವಶಪಡಿಸಿಕೊಳ್ಳಲು ಬಂದಿದ್ದ ಮಹೀಂದ್ರ ಫೈನಾನ್ಸ್ ಏಜೆಂಟ್‌ಗಳು ಅಡ್ಡ ಬಂದ ಆದಿವಾಸಿ ಗರ್ಭಿಣಿ ಮಹಿಳೆ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆಗೈದಿರುವ ಧಾರುಣ ಘಟನೆ ಜಾರ್ಖಂಡ್‌ನಲ್ಲಿ ವರದಿಯಾಗಿದೆ.

ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಬರಿಯಾನಾಥ ಎಂಬ ಗ್ರಾಮದ ವಿಶೇಷಚೇತನ ರೈತ ಮಿಥಿಲೇಶ್ ಮೆಹ್ತಾ ಎಂಬುವವರು ಟ್ರ್ಯಾಕ್ಟರ್ ಖರೀದಿಸಲು ಸಾಲ ಪಡೆದಿದ್ದರು. ಆದರೆ ಬಾಕಿ ಮೊತ್ತ 1.3 ಲಕ್ಷ ಹಣ ಕಟ್ಟಿಲ್ಲವೆಂದು ಆರೋಪಿಸಿದ್ದ ಫೈನಾನ್ಸ್ ಏಜೆಂಟರುಗಳು ಟ್ರ್ಯಾಕ್ಟರ್ ವಶಪಡಿಸಿಕೊಳ್ಳಲು ಬಂದಾಗ ನಡೆದ ಗದ್ದಲದಲ್ಲಿ ಈ ಅನಾಹುತ ಸಂಭವಿಸಿದೆ.

ಫೈನಾನ್ಸ್ ಏಜೆಂಟರುಗಳ ಬಳಿ ರೈತ 1.2 ಲಕ್ಷ ಸಾಲ ತೀರಿಸುವುದಾಗಿ ಉಳಿದ ಸಾಲ ತೀರಿಸಲು ಸಮಯ ಕೊಡಿ ಎಂದು ಕೇಳಿಕೊಂಡರೂ ಅವರು ಒಪ್ಪದೇ ಟ್ರ್ಯಾಕ್ಟರ್ ತೆಗೆದುಕೊಂಡು ಹೋಗಲು ಮುಂದಾಗಿದ್ದಾರೆ. ಎನ್‌ಎನ್33 ರ ಬಳಿ ಟ್ರ್ಯಾಕ್ಟರ್ ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಅಡ್ಡಬಂದು ಪ್ರತಿಭಟಿಸಿದ ರೈತನ ಗರ್ಭಿಣಿ ಮಗಳ ಮೇಲೆ ಟ್ರ್ಯಾಕ್ಟರ್ ಹರಿದಿದೆ ಎನ್ನಲಾಗಿದೆ.

ಘಟನೆ ನಡೆದ ನಂತರ ತಕ್ಷಣೇ ಸಂತ್ರಸ್ತೆಯನ್ನು ಆಸ್ಪತ್ರೆಗೆ ಸೇರಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಇದರಿಂದ ಕ್ರೋಧಗೊಂಡ ಮೃತರ ಸಂಬಂಧಿಗಳು ಮತ್ತು ಗ್ರಾಮಸ್ಥರು ಹಜಾರಿಬಾಗ್ ಜಿಲ್ಲಾಧಿಕಾರಿ ಕಚೇರಿ ಎದುರು ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಹತ್ಯೆಗೆ ಕಾರಣನಾದ ಫೈನಾನ್ಸ್ ಏಜೆಂಟ್ ಮತ್ತು ಮ್ಯಾನೇಜರ್‌ಗಳನ್ನು ಬಂಧಿಸಬೇಕು, ಸಂತ್ರಸ್ತ ಕುಟುಂಬಕ್ಕೆ 20 ಲಕ್ಷ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಜಾರಿಬಾಗ್ ಜಿಲ್ಲಾಧಿಕಾರಿ ಮನೋಜ್ ರತನ್ ಚೋಥೆ, “ಫೈನಾನ್ಸ್ ಕಂಪನಿಯ ಏಜೆಂಟ್ ಮತ್ತು ಟ್ರ್ಯಾಕ್ಟರ್ ಮಾಲೀಕ ರೈತನ ಜೊತೆ ವಾಗ್ವಾದ ನಡೆದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಮಹೀಂದ್ರಾ ಫೈನಾನ್ಸ್ ಕಂಪನಿಯ ರಿಕವರಿ ಏಕೆಂಟ್ ಮತ್ತು ಮ್ಯಾನೇಜರ್ ಸೇರಿದಂತೆ ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ. ಶೀಘ್ರದಲ್ಲಿಯೇ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.

ಘಟನೆಯನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಖಂಡಿಸಿದ್ದು, “ಇದೊಂದು ಭೀಕರ ದುರಂತ. ಈ ದುಃಖದ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬದೊಂದಿಗೆ ನಿಲ್ಲುತ್ತೇವೆ” ಎಂದು ಟ್ವೀಟ್ ಮಾಡಿದ್ದಾರೆ.

ಘಟನೆ ಕುರಿತು ಕಂಪನಿಯ ಸಿಇಓ ಅನೀಶ್ ಶಾ ಹೇಳಿಕೆ ಬಿಡುಗಡೆ ಮಾಡಿದ್ದು, “ಒಬ್ಬರು ಸಾವನಪ್ಪಿರುವ ಹಜಾರಿಬಾಗ್ ಘಟನೆ ನಮ್ಮನ್ನು ತೀವ್ರವಾಗಿ ನೋಯಿಸಿದೆ ಮತ್ತು ಘಾಸಿಗೊಳಿಸಿದೆ. ಘಟನೆಯ ಕುರಿತು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತೇವೆ. ಅಲ್ಲದೆ ರಿಕವರಿ ನಡೆಸುವ ಮೂರನೇ ವ್ಯಕ್ತಿಗಳು ಅಸ್ತಿತ್ವದಲ್ಲಿರುವ ಕುರಿತು ಚರ್ಚಿಸುತ್ತೇವೆ. ಈ ದುರಂತ ಪ್ರಕರಣದಲ್ಲಿ ಪೊಲೀಸರು ನಡೆಸುವ ಎಲ್ಲಾ ರೀತಿಯ ತನಿಖೆಗಳಿಗೆ ಸಹಕಾರ ನೀಡುತ್ತೇವೆ. ಎಲ್ಲಕ್ಕಿಂತ ಹೆಚ್ಚಾಗಿ ನಾವು ದುಃಖದಲ್ಲಿರುವ ಕುಟುಂಬದೊಂದಿಗೆ ನಿಲ್ಲುತ್ತೇವೆ” ಎಂದು ತಿಳಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕದ ನಂತರ ಬಹಳಷ್ಟು ಜನರು ತಮ್ಮ ಸಾಲದ ಕಂತುಗಳನ್ನು ಕಟ್ಟುವಲ್ಲಿ ವಿಫಲರಾಗಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಈಗಾಗಲೇ ವಾಹನ ಸಾಲ ಪಡೆದು ಕಟ್ಟಲಾಗದ ಬಹಳಷ್ಟು ಜನರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಆದರೆ ಕೋವಿಡ್ ಸಾಂಕ್ರಾಮಿಕ ಹೊಡೆತವನ್ನು ಪರಿಗಣಿಸಿ ವಾಹನಗಳನ್ನೇ ನಂಬಿಕೊಂಡಿರುವ ಸಾಲ ಕಟ್ಟಲಾಗದ ಜನರ ಕುರಿತು ಫೈನಾನ್ಸ್ ಕಂಪನಿಗಳು ಮತ್ತು ಸರ್ಕಾರ ಮಾನವೀಯತೆಯಿಂದ ವರ್ತಿಸಬೇಕು ಎಂಬುದನ್ನು ಈ ಮೇಲಿನ ಘಟನೆ ತೋರಿಸುತ್ತದೆ. ನಮ್ಮ ಸರ್ಕಾರಗಳು ಎಚ್ಚೆತ್ತುಕೊಳ್ಳಲಿವೆಯೆ ಎಂದು ದೊಡ್ಡ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಭ್ರಷ್ಟ ಉದ್ಯಮಿಗಳ 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ: ಮೋದಿ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...