Homeಮುಖಪುಟಜಾರ್ಖಂಡ್ | ಖಾಸಗಿ ಕಂಪನಿಯಲ್ಲಿ ಸ್ಥಳೀಯರಿಗೆ 75% ಮೀಸಲಾತಿ ಕಾನೂನಿಗೆ ಹೈಕೋರ್ಟ್ ತಡೆ

ಜಾರ್ಖಂಡ್ | ಖಾಸಗಿ ಕಂಪನಿಯಲ್ಲಿ ಸ್ಥಳೀಯರಿಗೆ 75% ಮೀಸಲಾತಿ ಕಾನೂನಿಗೆ ಹೈಕೋರ್ಟ್ ತಡೆ

- Advertisement -
- Advertisement -

ಜಾರ್ಖಂಡ್‌ನ ಹೇಮಂತ್ ಸೊರೆನ್ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಜಾರ್ಖಂಡ್ ಹೈಕೋರ್ಟ್ ಬುಧವಾರ ರಾಜ್ಯದ ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ 75% ಮೀಸಲಾತಿ ಜಾರಿಗೆ ತಡೆಯಾಜ್ಞೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎಂ.ಎಸ್. ರಾಮಚಂದ್ರ ರಾವ್ ಮತ್ತು ನ್ಯಾಯಮೂರ್ತಿ ದೀಪಕ್ ರೋಷನ್ ಅವರಿದ್ದ ವಿಭಾಗೀಯ ಪೀಠವು ತೀರ್ಪು ನೀಡಿದ್ದು, ಈ ವಿಷಯದ ಬಗ್ಗೆ ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿದೆ.

ಜಾರ್ಖಂಡ್ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಅಜಯ್ ಪಚೇರಿವಾಲಾ ಅವರು ಖಾಸಗಿ ಕಂಪನಿಗಳಲ್ಲಿ ಸ್ಥಳೀಯ ನಿವಾಸಿಗಳಿಗೆ 75% ರಷ್ಟು ಮೀಸಲಾತಿ ನೀಡುವ ಸಂಬಂಧ ‘ಜಾರ್ಖಂಡ್ ರಾಜ್ಯ ಖಾಸಗಿ ವಲಯದ ಸ್ಥಳೀಯ ಅಭ್ಯರ್ಥಿಯ ಉದ್ಯೋಗ ಕಾಯಿದೆ-2021’ ಅನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ಅದನ್ನು ರದ್ದು ಮಾಡುವಂತೆ ಒತ್ತಾಯಿಸಿದ್ದರು.

75% ಹುದ್ದೆಗಳನ್ನು ಸ್ಥಳೀಯರಿಗೆ ಮೀಸಲಿಡಬೇಕೆಂಬ ಕಾನೂನು ಸಮಾನತೆ, ತಾರತಮ್ಯ ಮತ್ತು ವ್ಯವಹಾರ ನಡೆಸುವ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಪಚೇರಿವಾಲಾ ನ್ಯಾಯಾಲಯದಲ್ಲಿ ವಾದಿಸಿದ್ದು, ಕಾನೂನು ಅಸಂವಿಧಾನಿಕ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಹಿಂದೆ ಹರ್ಯಾಣ ಸರ್ಕಾರ ಜಾರಿಗೊಳಿಸಿದ ಇದೇ ರೀತಿಯ ಕಾನೂನನ್ನು ಪಂಜಾಬ್-ಹರಿಯಾಣ ಹೈಕೋರ್ಟ್ ರದ್ದುಗೊಳಿಸಿದೆ ಎಂದು ಅರ್ಜಿದಾರರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಖಾಸಗಿ ವಲಯದ ಸ್ಥಳೀಯ ಅಭ್ಯರ್ಥಿಗಳ ಜಾರ್ಖಂಡ್ ರಾಜ್ಯ ಉದ್ಯೋಗ ಮಸೂದೆ 2021 ಅನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಅಂಗೀಕರಿಸಲಾಗಿತ್ತು. ಇದರ ಅಡಿಯಲ್ಲಿ ಖಾಸಗಿ ವಲಯದಲ್ಲಿ ಮಾಸಿಕ 40,000 ರೂ.ವರೆಗಿನ ಉದ್ಯೋಗಗಳಲ್ಲಿ ಸ್ಥಳೀಯರಿಗೆ 75% ಮೀಸಲಾತಿಯನ್ನು ಖಾತ್ರಿಪಡಿಸಲಾಗುತ್ತದೆ. “ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಪ್ರಕ್ರಿಯೆಯಲ್ಲಿ, ಸಂಬಂಧಪಟ್ಟ ಸಂಸ್ಥೆಯ ಸ್ಥಾಪನೆ, ಸಂಬಂಧಪಟ್ಟ ಜಿಲ್ಲೆಯ ಸ್ಥಳೀಯ ಅಭ್ಯರ್ಥಿಗಳು ಮತ್ತು ಸಮಾಜದ ಎಲ್ಲಾ ವರ್ಗಗಳ ಪ್ರಾತಿನಿಧ್ಯಕ್ಕೆ ಗಮನ ನೀಡಲಾಗುವುದು” ಎಂದು ಕಾಯಿದೆಯು ಖಚಿತಪಡಿಸುತ್ತದೆ.

ಸ್ಥಳೀಯ ಶಾಸಕ, ಉಪ ಅಭಿವೃದ್ಧಿ ಆಯುಕ್ತ (ಡಿಡಿಸಿ) ಮತ್ತು ಸರ್ಕಲ್ ಆಫೀಸರ್ (ಸಿಒ) ಅವರನ್ನು ಒಳಗೊಂಡಿರುವ ಗೊತ್ತುಪಡಿಸಿದ ಅಧಿಕಾರಿಯ ನೇತೃತ್ವದ ಸಮಿತಿಯ ರಚನೆಗೆ ಸಹ ಅಧಿಕಾರ ಒದಗಿಸುತ್ತದೆ. ಈ ಸಮಿತಿ ಉದ್ಯೋಗದ ಕಾರ್ಯವಿಧಾನವನ್ನು ಮೇಲ್ವಿಚಾರಣೆ ಮಾಡಲು ಮತ್ತು ಸೂಕ್ತವಾದ ಉದ್ಯೋಗದಾತರಿಗೆ ನಿರ್ದೇಶನಗಳನ್ನು ನೀಡುತ್ತದೆ.

ಮಸೂದೆಯನ್ನು ಜಾರ್ಖಂಡ್ ವಿಧಾನಸಭೆಯ ಆಯ್ಕೆ ಸಮಿತಿಯು ಕೆಲವು ಬದಲಾವಣೆಗಳೊಂದಿಗೆ ಈ ಹಿಂದೆ ಅನುಮೋದಿಸಿತ್ತು. ಇದನ್ನು ಮಾರ್ಚ್ 2021 ರಲ್ಲಿ ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಯಿತು ಮತ್ತು ಸ್ಪೀಕರ್ ರವೀಂದ್ರ ನಾಥ್ ಮಹ್ತೋ ಅವರು ರಚಿಸಿದ ಆರು ಸದಸ್ಯರ ಆಯ್ಕೆ ಸಮಿತಿಗೆ ಪರಿಶೀಲನೆಗಾಗಿ ಉಲ್ಲೇಖಿಸಲಾಗಿತ್ತು.

ಕಾರ್ಮಿಕ ಸಚಿವ ಸತ್ಯಾನಂದ ಭೋಕ್ತಾ ಅವರ ಅಧ್ಯಕ್ಷತೆಯ ಸಮಿತಿಯು ತಿದ್ದುಪಡಿ ಮಸೂದೆಯಲ್ಲಿ “ಖಾಸಗಿ ವಲಯ” ಪದಗಳನ್ನು ಸೇರಿಸಿ, ಅದರ ಹೆಸರನ್ನು ‘ಜಾರ್ಖಂಡ್ ರಾಜ್ಯ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಮಸೂದೆ, 2021’ ಎಂಬ ಹೆಸರಿನಿಂದ ‘ಖಾಸಗಿ ವಲಯದ ಸ್ಥಳೀಯ ಅಭ್ಯರ್ಥಿಗಳ ಜಾರ್ಖಂಡ್ ರಾಜ್ಯ ಉದ್ಯೋಗ ಮಸೂದೆ, 2021’ ಎಂದು ಬದಲಾಯಿಸಿತ್ತು. ತಿದ್ದುಪಡಿ ಮಾಡಿದ ಮಸೂದೆಯು ವೇತನ ಮಿತಿಯನ್ನು ಈ ಹಿಂದೆ ಇದ್ದ 30,000 ರೂ.ಗಳಿಂದ 40,000 ರೂ.ಗೆ ಹೆಚ್ಚಿಸಿದೆ.

ಇದನ್ನೂ ಓದಿ: ‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

ಇದನ್ನೂ ಓದಿ: ‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

ಇದನ್ನೂ ಓದಿ: ‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

ಇದನ್ನೂ ಓದಿ: ‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...