Homeಮುಖಪುಟಜಾರ್ಖಂಡ್ | ಸೋರೆನ್ ವಿರುದ್ಧ ಅಪಪ್ರಚಾರಕ್ಕೆ ಬಿಜೆಪಿಯಿಂದ ₹500 ಕೋಟಿ ಖರ್ಚು - ಆರೋಪ

ಜಾರ್ಖಂಡ್ | ಸೋರೆನ್ ವಿರುದ್ಧ ಅಪಪ್ರಚಾರಕ್ಕೆ ಬಿಜೆಪಿಯಿಂದ ₹500 ಕೋಟಿ ಖರ್ಚು – ಆರೋಪ

- Advertisement -
- Advertisement -

ಜಾರ್ಖಂಡ್‌ನಲ್ಲಿ ದುರುದ್ದೇಶಪೂರಿತ ಅಪ್ರಚಾರಕ್ಕಾಗಿ ಬಿಜೆಪಿ 500 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ರಾಜ್ಯದ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮಂಗಳವಾರ ಆರೋಪಿಸಿದ್ದಾರೆ. ಜನರ ನಡುವೆ ದ್ವೇಷ ಹುಟ್ಟುಹಾಕಿ ಆ ಮೂಲಕ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಪೂರೈಸುವಲ್ಲಿ ಬಿಜೆಪಿ ನಿಪುಣತೆಯನ್ನು ಹೊಂದಿದೆ ಎಂದು ಸೋರೆನ್ ಆರೋಪಿಸಿದ್ದು, ಆದರೆ ಜಾರ್ಖಂಡ್‌ನ ಸಂಸ್ಕೃತಿಯು ಇಂತಹ “ದುರುದ್ದೇಶಪೂರಿತ ಅಪ್ರಚಾರಗಳನ್ನು” ಅನುಮತಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಜಾರ್ಖಂಡ್

“ದ್ವೇಷ ಭಾವನೆಗಳನ್ನು ಹುಟ್ಟುಹಾಕುವ ಮೂಲಕ ನಾಯಕರು ತಮ್ಮ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಈಡೇರಿಸುವುದು ತುಂಬಾ ಸುಲಭವಾದ ವಿಚಾರವಾಗಿದೆ. ಈ ರೀತಿಯ ಪ್ರಚಾರ ಅಭಿಯಾನವು ಅತ್ಯಂತ ಸುಲಭವಾಗಿದ್ದು, ಅದರಲ್ಲಿ ಬಿಜೆಪಿ ಪರಿಣತ. ಆದರೆ ನಾನು ಜಾರ್ಖಂಡ್‌ನವನು, ನಮ್ಮ ಸಂಸ್ಕೃತಿ ಇದಕ್ಕೆ ಅವಕಾಶ ನೀಡುವುದಿಲ್ಲ. ಇದನ್ನು ಎಂದಿಗೂ ಮಾಡಬೇಡಿ” ಎಂದು X ನ ಪೋಸ್ಟ್‌ನಲ್ಲಿ ಸೊರೆನ್ ಹೇಳಿದ್ದಾರೆ. ಜಾರ್ಖಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಒಂದು ಅಂದಾಜಿನ ಪ್ರಕಾರ, ನನ್ನ ವಿರುದ್ಧ ದ್ವೇಷ ಪ್ರಚಾರಕ್ಕಾಗಿ ಬಿಜೆಪಿ 500 ಕೋಟಿ ರೂ.ಗೂ ಹೆಚ್ಚು ಖರ್ಚು ಮಾಡಿದೆ” ಎಂದು ಅವರು ಆರೋಪಿಸಿದ್ದಾರೆ. ತನ್ನ ವಿರುದ್ಧ ಅಪಪ್ರಚಾರ ಮಾಡಲು ಬಿಹಾರ, ಛತ್ತೀಸ್‌ಗಢ, ಒಡಿಶಾ ಮತ್ತು ಬಂಗಾಳದಿಂದ ಬಿಜೆಪಿ ಜನರನ್ನು ಕರೆತಂದಿದೆ. ಅವರ ಮೂಲಕ ಚುನಾವಣಾ ವೇಳೆ ಮತದಾರರಲ್ಲಿ ಬಿಜೆಪಿ ಭಯ ಹುಟ್ಟುಹಾಕಿದೆ ಎಂದು ಸೋರೆನ್ ಆರೋಪಿಸಿದ್ದಾರೆ.

ಬಿಹಾರ, ಛತ್ತೀಸ್‌ಗಢ, ಒಡಿಶಾ, ಬಂಗಾಳದ ಜನರು ಚುನಾವಣೆ ನಡೆಯುವ ಕ್ಷೇತ್ರಗಳ ರಸ್ತೆ, ಸಂದಿಗಳಲ್ಲಿ ಚುನಾವಣೆ ಕುರಿತು ಚರ್ಚೆ ನಡೆಸುತ್ತಿರುವುದು ಕಂಡು ಬರುತ್ತಿದೆ. ಇದು ಬಿಜೆಪಿಯ ಹೊಸ ಗಿಮಿಕ್, ಇದನ್ನು ಪಿಸುಮಾತು ಪ್ರಚಾರ ಎಂದು ಕರೆಯಲಾಗುತ್ತದೆ. ಇದಕ್ಕಾಗಿ 1 ಕೋಟಿ ರೂ. ಪ್ರತಿ ಕ್ಷೇತ್ರದಲ್ಲಿ ಖರ್ಚು ಮಾಡಿದ್ದು, ಅವರು ಬಂದು ತಮ್ಮ ಕೆಲಸದ ಬಗ್ಗೆ ಮಾತನಾಡುವುದಿಲ್ಲ. ಬದಲಾಗಿ ಅವರು ನಿಮ್ಮನ್ನು ಸುಳ್ಳಿನ ಮೂಲಕ ಹೆದರಿಸುತ್ತಾರೆ ಎಂದು ಸೋರೆನ್ ಆಪಾದಿತ ಪ್ರಚಾರದ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

“ನಾವು ಚುನಾವಣಾ ಬಾಂಡ್‌ಗಳು, ನಕಲಿ ಔಷಧಿಗಳು ಅಥವಾ ನಕಲಿ ಲಸಿಕೆಗಳ ಮೂಲಕ ದೇಶದ ಜನರ ಜೀವನದ ಜೊತೆ ಆಟವಾಡುವ ಮೂಲಕ ದೇಣಿಗೆ ಸಂಗ್ರಹಿಸಿಲ್ಲ. ಆದ್ದರಿಂದ, ಜಾರ್ಖಂಡ್ ನಿವಾಸಿಗಳಾದ ನೀವೆಲ್ಲರೂ ಇಂದು ಮತ್ತು ನಾಳೆ ನನ್ನ ಪರವಾಗಿ ಬಹಿರಂಗವಾಗಿ ಪ್ರಚಾರ ಮಾಡುವಂತೆ ನಾನು ಮನವಿ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕುಕಿ ಬಂಡುಕೋರರ ವಿರುದ್ದ ‘ಬೃಹತ್ ಕಾರ್ಯಾಚರಣೆ’ ನಡೆಸಿ : ಕೇಂದ್ರಕ್ಕೆ ಅಗ್ರಹಿಸಿದ ಮಣಿಪುರ ಸರ್ಕಾರ

ಕುಕಿ ಬಂಡುಕೋರರ ವಿರುದ್ದ ‘ಬೃಹತ್ ಕಾರ್ಯಾಚರಣೆ’ ನಡೆಸಿ : ಕೇಂದ್ರಕ್ಕೆ ಅಗ್ರಹಿಸಿದ ಮಣಿಪುರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...