Homeಮುಖಪುಟಜಾರ್ಖಂಡ್ | ಸೋರೆನ್ ವಿರುದ್ಧ ಅಪಪ್ರಚಾರಕ್ಕೆ ಬಿಜೆಪಿಯಿಂದ ₹500 ಕೋಟಿ ಖರ್ಚು - ಆರೋಪ

ಜಾರ್ಖಂಡ್ | ಸೋರೆನ್ ವಿರುದ್ಧ ಅಪಪ್ರಚಾರಕ್ಕೆ ಬಿಜೆಪಿಯಿಂದ ₹500 ಕೋಟಿ ಖರ್ಚು – ಆರೋಪ

- Advertisement -
- Advertisement -

ಜಾರ್ಖಂಡ್‌ನಲ್ಲಿ ದುರುದ್ದೇಶಪೂರಿತ ಅಪ್ರಚಾರಕ್ಕಾಗಿ ಬಿಜೆಪಿ 500 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ರಾಜ್ಯದ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮಂಗಳವಾರ ಆರೋಪಿಸಿದ್ದಾರೆ. ಜನರ ನಡುವೆ ದ್ವೇಷ ಹುಟ್ಟುಹಾಕಿ ಆ ಮೂಲಕ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಪೂರೈಸುವಲ್ಲಿ ಬಿಜೆಪಿ ನಿಪುಣತೆಯನ್ನು ಹೊಂದಿದೆ ಎಂದು ಸೋರೆನ್ ಆರೋಪಿಸಿದ್ದು, ಆದರೆ ಜಾರ್ಖಂಡ್‌ನ ಸಂಸ್ಕೃತಿಯು ಇಂತಹ “ದುರುದ್ದೇಶಪೂರಿತ ಅಪ್ರಚಾರಗಳನ್ನು” ಅನುಮತಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಜಾರ್ಖಂಡ್

“ದ್ವೇಷ ಭಾವನೆಗಳನ್ನು ಹುಟ್ಟುಹಾಕುವ ಮೂಲಕ ನಾಯಕರು ತಮ್ಮ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಈಡೇರಿಸುವುದು ತುಂಬಾ ಸುಲಭವಾದ ವಿಚಾರವಾಗಿದೆ. ಈ ರೀತಿಯ ಪ್ರಚಾರ ಅಭಿಯಾನವು ಅತ್ಯಂತ ಸುಲಭವಾಗಿದ್ದು, ಅದರಲ್ಲಿ ಬಿಜೆಪಿ ಪರಿಣತ. ಆದರೆ ನಾನು ಜಾರ್ಖಂಡ್‌ನವನು, ನಮ್ಮ ಸಂಸ್ಕೃತಿ ಇದಕ್ಕೆ ಅವಕಾಶ ನೀಡುವುದಿಲ್ಲ. ಇದನ್ನು ಎಂದಿಗೂ ಮಾಡಬೇಡಿ” ಎಂದು X ನ ಪೋಸ್ಟ್‌ನಲ್ಲಿ ಸೊರೆನ್ ಹೇಳಿದ್ದಾರೆ. ಜಾರ್ಖಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಒಂದು ಅಂದಾಜಿನ ಪ್ರಕಾರ, ನನ್ನ ವಿರುದ್ಧ ದ್ವೇಷ ಪ್ರಚಾರಕ್ಕಾಗಿ ಬಿಜೆಪಿ 500 ಕೋಟಿ ರೂ.ಗೂ ಹೆಚ್ಚು ಖರ್ಚು ಮಾಡಿದೆ” ಎಂದು ಅವರು ಆರೋಪಿಸಿದ್ದಾರೆ. ತನ್ನ ವಿರುದ್ಧ ಅಪಪ್ರಚಾರ ಮಾಡಲು ಬಿಹಾರ, ಛತ್ತೀಸ್‌ಗಢ, ಒಡಿಶಾ ಮತ್ತು ಬಂಗಾಳದಿಂದ ಬಿಜೆಪಿ ಜನರನ್ನು ಕರೆತಂದಿದೆ. ಅವರ ಮೂಲಕ ಚುನಾವಣಾ ವೇಳೆ ಮತದಾರರಲ್ಲಿ ಬಿಜೆಪಿ ಭಯ ಹುಟ್ಟುಹಾಕಿದೆ ಎಂದು ಸೋರೆನ್ ಆರೋಪಿಸಿದ್ದಾರೆ.

ಬಿಹಾರ, ಛತ್ತೀಸ್‌ಗಢ, ಒಡಿಶಾ, ಬಂಗಾಳದ ಜನರು ಚುನಾವಣೆ ನಡೆಯುವ ಕ್ಷೇತ್ರಗಳ ರಸ್ತೆ, ಸಂದಿಗಳಲ್ಲಿ ಚುನಾವಣೆ ಕುರಿತು ಚರ್ಚೆ ನಡೆಸುತ್ತಿರುವುದು ಕಂಡು ಬರುತ್ತಿದೆ. ಇದು ಬಿಜೆಪಿಯ ಹೊಸ ಗಿಮಿಕ್, ಇದನ್ನು ಪಿಸುಮಾತು ಪ್ರಚಾರ ಎಂದು ಕರೆಯಲಾಗುತ್ತದೆ. ಇದಕ್ಕಾಗಿ 1 ಕೋಟಿ ರೂ. ಪ್ರತಿ ಕ್ಷೇತ್ರದಲ್ಲಿ ಖರ್ಚು ಮಾಡಿದ್ದು, ಅವರು ಬಂದು ತಮ್ಮ ಕೆಲಸದ ಬಗ್ಗೆ ಮಾತನಾಡುವುದಿಲ್ಲ. ಬದಲಾಗಿ ಅವರು ನಿಮ್ಮನ್ನು ಸುಳ್ಳಿನ ಮೂಲಕ ಹೆದರಿಸುತ್ತಾರೆ ಎಂದು ಸೋರೆನ್ ಆಪಾದಿತ ಪ್ರಚಾರದ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

“ನಾವು ಚುನಾವಣಾ ಬಾಂಡ್‌ಗಳು, ನಕಲಿ ಔಷಧಿಗಳು ಅಥವಾ ನಕಲಿ ಲಸಿಕೆಗಳ ಮೂಲಕ ದೇಶದ ಜನರ ಜೀವನದ ಜೊತೆ ಆಟವಾಡುವ ಮೂಲಕ ದೇಣಿಗೆ ಸಂಗ್ರಹಿಸಿಲ್ಲ. ಆದ್ದರಿಂದ, ಜಾರ್ಖಂಡ್ ನಿವಾಸಿಗಳಾದ ನೀವೆಲ್ಲರೂ ಇಂದು ಮತ್ತು ನಾಳೆ ನನ್ನ ಪರವಾಗಿ ಬಹಿರಂಗವಾಗಿ ಪ್ರಚಾರ ಮಾಡುವಂತೆ ನಾನು ಮನವಿ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕುಕಿ ಬಂಡುಕೋರರ ವಿರುದ್ದ ‘ಬೃಹತ್ ಕಾರ್ಯಾಚರಣೆ’ ನಡೆಸಿ : ಕೇಂದ್ರಕ್ಕೆ ಅಗ್ರಹಿಸಿದ ಮಣಿಪುರ ಸರ್ಕಾರ

ಕುಕಿ ಬಂಡುಕೋರರ ವಿರುದ್ದ ‘ಬೃಹತ್ ಕಾರ್ಯಾಚರಣೆ’ ನಡೆಸಿ : ಕೇಂದ್ರಕ್ಕೆ ಅಗ್ರಹಿಸಿದ ಮಣಿಪುರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...