Homeಮುಖಪುಟಜಾರ್ಖಂಡ್| ಜೆಪಿಎಸ್‌ಸಿ ಸುಧಾರಣೆಗೆ ಆಗ್ರಹಿಸಿ 13ನೇ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳ ಪ್ರತಿಭಟನೆ

ಜಾರ್ಖಂಡ್| ಜೆಪಿಎಸ್‌ಸಿ ಸುಧಾರಣೆಗೆ ಆಗ್ರಹಿಸಿ 13ನೇ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳ ಪ್ರತಿಭಟನೆ

- Advertisement -
- Advertisement -

ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್‌ಎಸ್‌ಸಿ) ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಮತ್ತು ಆಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆ ಗುರುವಾರ 13 ನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯಾದ್ಯಂತ ಹಲವಾರು ವಿದ್ಯಾರ್ಥಿ ಸಂಘಟನೆಗಳಿಂದ ಆಂದೋಲನಕ್ಕೆ ವ್ಯಾಪಕ ಬೆಂಬಲ ಸಿಗುತ್ತಿದೆ.

ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನೂರಾರು ವಿದ್ಯಾರ್ಥಿಗಳು ಪ್ರತಿಭಟನಾಕಾರರೊಂದಿಗೆ ತಮ್ಮ ಒಗ್ಗಟ್ಟು ವ್ಯಕ್ತಪಡಿಸಿದರು. ಪ್ರತಿಭಟನಾಕಾರರ ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆಗಳ ಬೇಡಿಕೆಗಳನ್ನು ಬೆಂಬಲಿಸಲು ಶುಕ್ರವಾರ ಬೆಳಿಗ್ಗೆ ಪ್ರತಿಭಟನಾ ಸ್ಥಳಕ್ಕೆ ಹೆಚ್ಚಿನ ವಿದ್ಯಾರ್ಥಿಗಳು ತಲುಪಿದ್ದರಿಂದ ಪ್ರತಿಭಟನೆ ಮತ್ತಷ್ಟು ಬಲ ಬಂದಿದೆ.

ಜೆಪಿಎಸ್‌ಸಿ ಆಕಾಂಕ್ಷಿಗಳ ನೇತೃತ್ವದಲ್ಲಿ ನಡೆದ ಚಳುವಳಿ ಕಳೆದ ಎರಡು ವಾರಗಳಿಂದ ತೀವ್ರಗೊಂಡಿದೆ. ರಾತ್ರಿಯಿಡೀ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹೊರತಾಗಿಯೂ, ಪ್ರತಿಭಟನಾಕಾರರು ಸ್ಥಳದಲ್ಲಿಯೇ ಇದ್ದರು. ಹೋರಾಟ ಹಿಂತೆಗೆದುಕೊಳ್ಳಲು ನಿರಾಕರಿಸಿದರು. ಸರ್ಕಾರವು ತಮ್ಮ ಬೇಡಿಕೆಗಳನ್ನು ಪರಿಹರಿಸುವವರೆಗೆ ತಮ್ಮ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಪುನರುಚ್ಚರಿಸಿದರು.

ವಿದ್ಯಾರ್ಥಿ ನಾಯಕ ದೇವೇಂದ್ರ ಮಹ್ತೊ ಕೂಡ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಮುಂದುವರೆಸಿದರು. ಪ್ರತಿಕೂಲ ಹವಾಮಾನದ ಹೊರತಾಗಿಯೂ ಪ್ರತಿಭಟನಾಕಾರರು ರಾತ್ರಿಯಿಡೀ ಹೋರಾಟದ ಸ್ಥಳದಲ್ಲಿಯೇ ಇದ್ದರು.

ಮಳೆಯು ತಮ್ಮ ದೃಢಸಂಕಲ್ಪವನ್ನು ದುರ್ಬಲಗೊಳಿಸುವುದಿಲ್ಲ ಎಂದು ವಿದ್ಯಾರ್ಥಿಗಳು ಸಮರ್ಥಿಸಿಕೊಂಡರು. ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಅರ್ಥಪೂರ್ಣ ಕ್ರಮ ಕೈಗೊಳ್ಳುವವರೆಗೆ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.

ವರದಿಗಾರರ ಜೊತೆಗೆ ಜೊತೆ ಮಾತನಾಡಿದ ಪ್ರತಿಭಟನಾ ನಿರತ ವಿದ್ಯಾರ್ಥಿಗಳಲ್ಲಿ ಒಬ್ಬರು, ರಾಜ್ಯದ ಶಿಕ್ಷಣ ಮತ್ತು ನೇಮಕಾತಿ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಆಳವಾಗಿ ಬೇರೂರಿದೆ ಎಂದು ಆರೋಪಿಸಿದರು.

“ಇಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಭ್ರಷ್ಟಾಚಾರ ಸಂಪೂರ್ಣವಾಗಿ ಆಕ್ರಮಿಸಿಕೊಂಡಿದೆ ಎಂದು ಅವರೆಲ್ಲರಿಗೂ ತಿಳಿದಿದೆ. ಇದು ಇಂದು ಪ್ರಾರಂಭವಾದದ್ದಲ್ಲ; ಇದು ಬಹಳ ದಿನಗಳಿಂದ ನಡೆಯುತ್ತಿದೆ. ಇದು ಭಗವಾನ್ ಬಿರ್ಸಾ ಮುಂಡಾ ಅವರ ಭೂಮಿ, ಅವರನ್ನು ನಾವು ಪೂಜಿಸುತ್ತೇವೆ ಮತ್ತು ಗೌರವಿಸುತ್ತೇವೆ. ದುರದೃಷ್ಟವಶಾತ್, ಈ ಪವಿತ್ರ ಮಣ್ಣಿನಲ್ಲಿ ಇಂತಹ ಭ್ರಷ್ಟಾಚಾರ ನಡೆಯುತ್ತಿದೆ. ಇದರಲ್ಲಿ ಭಾಗಿಯಾಗಿರುವವರು ಜಾರ್ಖಂಡ್‌ನವರೇ ಆಗಿದ್ದಾರೆ. ಅನೇಕರು ಮನೆಗಳನ್ನು ನಿರ್ಮಿಸಲು, ಕಾರುಗಳನ್ನು ಖರೀದಿಸಲು ಮತ್ತು ಸಂಪತ್ತನ್ನು ಸಂಗ್ರಹಿಸಲು ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ” ಎಂದು ವಿದ್ಯಾರ್ಥಿ ಹೇಳಿದರು.

ನೇಮಕಾತಿ ಪ್ರಕ್ರಿಯೆಯಲ್ಲಿ ಲಂಚವು ಸಾಮಾನ್ಯವಾಗಿದೆ ಎಂದು ಅವರು ಆರೋಪಿಸಿದರು.

“ಪ್ರತಿಯೊಂದು ಹುದ್ದೆಗೂ ಒಬ್ಬರು ಲಂಚ ನೀಡಬೇಕಾಗುತ್ತದೆ, ಆಗ ಮಾತ್ರ ಅವರು ಹುದ್ದೆಯನ್ನು ಪಡೆದುಕೊಳ್ಳುತ್ತಾರೆ. ಸಿಜಿಎಲ್ ಸೀಟನ್ನು 25 ಲಕ್ಷ ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ನಿಜಕ್ಕೂ ದುರದೃಷ್ಟಕರ” ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮತ್ತೊಬ್ಬ ವಿದ್ಯಾರ್ಥಿ ಮಾತನಾಡಿ, “ಶಿಕ್ಷಣ ವ್ಯವಸ್ಥೆಯು ಭಯಾನಕ ಸ್ಥಿತಿಯಲ್ಲಿರುವುದರಿಂದ ನಾವು ಈ ಪ್ರತಿಭಟನೆಗೆ ಸೇರಿಕೊಂಡಿದ್ದೇವೆ. ಸಾಧ್ಯವಾದಷ್ಟು ಬೇಗ ಸುಧಾರಣೆಗಳನ್ನು ಪರಿಚಯಿಸಬೇಕು, ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು, ನಮ್ಮ ಕಾಳಜಿಗಳು ಜಾರ್ಖಂಡ್ ಸರ್ಕಾರವನ್ನು ತಲುಪಬೇಕು ಎಂದು ನಾವು ಬಯಸುತ್ತೇವೆ. ಜಾರ್ಖಂಡ್‌ನಲ್ಲಿ ನಡೆಸುವ ಎಲ್ಲಾ ಪರೀಕ್ಷೆಗಳು ಪತ್ರಿಕೆ ಸೋರಿಕೆಯಿಂದ ಮುಕ್ತವಾಗಬೇಕೆಂದು ನಾವು ಬಯಸುತ್ತೇವೆ” ಎಂದು ಹೇಳಿದರು.

ಅನೇಕ ಆಕಾಂಕ್ಷಿಗಳು ಎದುರಿಸುತ್ತಿರುವ ಆರ್ಥಿಕ ಸವಾಲುಗಳ ಕುರಿತು ಮಾತನಾಡಿ, ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಲಭ್ಯವಿರುವ ಕೆಲವೇ ಅವಕಾಶಗಳಲ್ಲಿ ಸರ್ಕಾರಿ ಉದ್ಯೋಗವು ಒಂದಾಗಿದೆ ಎಂದು ಮತ್ತೊಬ್ಬ ಪ್ರತಿಭಟನಾಕಾರರು ಹೇಳಿದರು.

“ನಾವು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಂದ ಬಂದವರು; ಸರ್ಕಾರಿ ಉದ್ಯೋಗವು ಒಂದು ಆಯ್ಕೆಯಾಗಿ ಉಳಿದಿದೆ. ಅಂತಹ ಪರಿಸ್ಥಿತಿಯಲ್ಲಿ, ಇಲ್ಲಿಯೂ ಅಕ್ರಮಗಳಿದ್ದರೆ, ಯಾವುದೇ ಅರ್ಥವಿಲ್ಲ” ಎಂದು ವಿದ್ಯಾರ್ಥಿ ಹೇಳಿದರು.

ನೇಮಕಾತಿ ಪರೀಕ್ಷೆಗಳ ಸುತ್ತಲಿನ ಅನಿಶ್ಚಿತತೆಯು ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸಲು ವರ್ಷಗಳನ್ನು ಮೀಸಲಿಟ್ಟ ಸಾವಿರಾರು ಯುವಜನರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆಂದೋಲನದಲ್ಲಿ ಭಾಗವಹಿಸಿದ್ದ ಮತ್ತೊಬ್ಬ ವಿದ್ಯಾರ್ಥಿ ಹೇಳಿದರು.

“ಜಾರ್ಖಂಡ್ ಪೊಲೀಸ್, ವಾರ್ಡರ್ ಮತ್ತು ಇತರ ನೇಮಕಾತಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ನಾವೆಲ್ಲರೂ ಭವಿಷ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಪಡೆಯುವ ಭರವಸೆಯೊಂದಿಗೆ ಅಪಾರ ಶ್ರಮವಹಿಸುತ್ತೇವೆ ಎಂದು ನಾವು ಹೇಳಲು ಬಯಸುತ್ತೇವೆ. ನಮ್ಮಲ್ಲಿ ಅನೇಕರು ಆರ್ಥಿಕವಾಗಿ ದುರ್ಬಲ ಕುಟುಂಬಗಳಿಂದ ಬಂದವರು, ನಮ್ಮ ಪೋಷಕರು ನಮ್ಮ ಶಿಕ್ಷಣ ಮತ್ತು ತಯಾರಿಗಾಗಿ ದೊಡ್ಡ ತ್ಯಾಗಗಳನ್ನು ಮಾಡುತ್ತಾರೆ” ಎಂದು ಅವರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...

ಬಾಬಾ ಸಿದ್ದಿಕ್ ಕೊಲೆ ಆರೋಪಿಯಿಂದ ಶಾಸಕ ಜೀಶನ್ ಸಿದ್ದಿಕ್‌ಗೆ ಜೀವ ಬೆದರಿಕೆ: “ನಿನ್ನ ತಂದೆಯನ್ನು ಕೊಂದೆ, ಈಗ ನಿನ್ನ ಸರದಿ!” ಎಂಬ ಆಡಿಯೋ ವೈರಲ್ 

ಮುಂಬೈ: ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಪುತ್ರ ಹಾಗೂ ಎನ್‌ಸಿಪಿ (ಅಜಿತ್ ಪವಾರ್ ಬಣ) ಶಾಸಕ ಜೀಶನ್ ಸಿದ್ದಿಕ್ ಅವರಿಗೆ ವಿದೇಶದಿಂದ ಭೀಕರ ಜೀವ ಬೆದರಿಕೆ ಕರೆ ಮತ್ತು ಧ್ವನಿ ಸಂದೇಶ...

ಎಜುಕೇಶನ್ ಸ್ಟಾರ್ಟ್‌ಅಪ್‌ಗೆ ಭಯೋತ್ಪಾದನೆಯ ಲಿಂಕ್ : ಸ್ವಘೋಷಿತ ಝಿಯೋನಿಸ್ಟ್ ಆರಿಫ್ ಹುಸೇನ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

'ಎಕ್ಸ್ ಅಂಡ್ ವೈ ಲರ್ನಿಂಗ್' ಎಂಬ ಶಿಕ್ಷಣ ಸ್ಟಾರ್ಟ್‌ಅಪ್ ಅನ್ನು ಭಯೋತ್ಪಾದನೆಗೆ ಲಿಂಕ್ ಮಾಡಿದ, ಸಾಮಾಜಿಕ ಜಾಲತಾಣಗಳ ಮೂಲಕ ಸಂಸ್ಥೆಯ ವಿರುದ್ಧ ದ್ವೇಷ ಅಭಿಯಾನ ನಡೆಸಿದ ಆರೋಪ ಹೊತ್ತಿರುವ ಸ್ವಘೋಷಿತ ಎಕ್ಸ್ ಮುಸ್ಲಿಂ...

ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ...

‘ಅಂಬೇಡ್ಕರ್ ಅವರನ್ನು ಆಚರಿಸುವ ಬಿಜೆಪಿ, ‘ಹಿಂದೂ ರಾಷ್ಟ್ರ’ದ ಕುರಿತ ಅವರ ಎಚ್ಚರಿಕೆಯನ್ನೂ ಓದಲಿ’: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿ ‘ಹಿಂದೂ ರಾಷ್ಟ್ರ’ ನಿರ್ಮಾಣದ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಎಚ್ಚರಿಕೆಗಳನ್ನು ಓದಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಭಾರತ...

‘ಪರಿಶೀಲನೆ ಮಾನವ ಘನತೆಯನ್ನು ಬಲಿಪಡೆಯಬಾರದು’: ನಾಗಪುರ ಜೈಲಿನ ಅಮಾನವೀಯ ವಿವಸ್ತ್ರ ಪರಿಶೀಲನೆ ವಿರುದ್ಧ ಜೈಲಿನಲ್ಲಿರುವ ಕೇರಳ ಕಾರ್ಯಕರ್ತ ಆರೋಪ

ಬಂಧನದಲ್ಲಿರುವ ವ್ಯಕ್ತಿಗಳು ಅಥವಾ ಕೈದಿಗಳು ಜೈಲಿನ ಬಾಗಿಲು ಪ್ರವೇಶಿಸಿದ ತಕ್ಷಣ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಹಾಗೂ ಮಾನವ ಘನತೆಯನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದ 'ಅಂಡಾ ಸೆಲ್'ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ...

‘ಅದು ಪೊಲೀಸರೇ ನಡೆಸಿದ ಪೂರ್ವ ಯೋಜಿತ ಕೃತ್ಯ’: ಸಂಭಾಲ್ ಹಿಂಸಾಚಾರ ನ್ಯಾಯಾಂಗ ಆಯೋಗದ ವರದಿ ತಿರಸ್ಕರಿಸಿದ ಸಂಸದ ಜಿಯಾ-ಉರ್-ರೆಹಮಾನ್

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾಯಾಂಗ ಆಯೋಗದ ವರದಿಯನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಘಟನೆಯಲ್ಲಿ ನಾಲ್ವರು...

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...