Homeಮುಖಪುಟಜಾರ್ಖಂಡ್: ವಾಮಾಚಾರದ ಶಂಕೆಯಿಂದ ವೃದ್ಧೆಗೆ ಬೆಂಕಿ ಹಚ್ಚಿದ್ದ ಐವರ ಬಂಧನ

ಜಾರ್ಖಂಡ್: ವಾಮಾಚಾರದ ಶಂಕೆಯಿಂದ ವೃದ್ಧೆಗೆ ಬೆಂಕಿ ಹಚ್ಚಿದ್ದ ಐವರ ಬಂಧನ

- Advertisement -
- Advertisement -

ವಾಮಾಚಾರ ನಡೆಸಿ ಇನ್ನೊಬ್ಬ ಮಹಿಳೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಹಿರಿಯ ಮಹಿಳೆಯನ್ನು ಅಮಾನುಷವಾಗಿ ಥಳಿಸಿ, ಸಜೀವವಾಗಿ ಸುಟ್ಟು ಹಾಕಲು ಬೆಂಕಿ ಹಚ್ಚಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.

ಸಿಮ್ಡೆಗಾ ಸಮೀಪದ ಕುಡ್ಪಾನಿ ಹಳ್ಳಿಯಲ್ಲಿ ಕೆಲವು ಜನರು ಬುಧವಾರ ಸಂಜೆ ಹಿರಿಯ ಮಹಿಳೆಯನ್ನು ಅಮಾನುಷವಾಗಿ ಥಳಿಸಿ, ಒಣಹುಲ್ಲಿನ ಬಣವೆಯ ಮೇಲೆ ತಳ್ಳಿದ್ದಾರೆ. ಬಳಿಕ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು. ಮಹಿಳೆಯ ಆಕ್ರಂದನ ಕೇಳಿ ಸ್ಥಳಕ್ಕಾಗಮಿಸಿದ ಇತರ ಗ್ರಾಮಸ್ಥರು ಮಹಿಳೆಯನ್ನು ರಕ್ಷಿಸಿದ್ದಾರೆ.

ಥೇತೈತಂಗಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಡ್ಪಾನಿ ​​ಗ್ರಾಮದಲ್ಲಿ, ಫ್ಲಾರೆನ್ಸ್ ಡೆಂಗ್‌ಡುಂಗ್ ಎಂಬುವರ ಪತ್ನಿಯ ಮರಣದ ನಂತರ ಆಯೋಜಿಸಲಾದ ಔತಣಕೂಟಕ್ಕೆ ಮಹಿಳೆ ಜಾರಿಯೋ ದೇವಿ ಎಂಬುವರನ್ನು ಆಹ್ವಾನಿಸಲಾಗಿತ್ತು. ಆದರೆ, ಔತಣಕೂಟದಲ್ಲಿ ಫ್ಲಾರೆನ್ಸ್ ಡೆಂಗ್‌ಡುಂಗ್ ಪತ್ನಿಯ ಸಾವಿಗೆ ಆಕೆಯ ಕಾರಣರು ಎಂದು ಹೇಳಿ ಹಲ್ಲೆ ಮಾಡಲಾಗಿದೆ.

ಇದನ್ನೂ ಓದಿ: ವಾಮಾಚಾರ ಶಂಕೆ: ಸಾಫ್ಟ್‌ವೇರ್‌ ಇಂಜಿನಿಯರ್‌‌ನನ್ನು ಜೀವಂತ ಸುಟ್ಟ ಸಂಬಂಧಿಕರು!

“ಫ್ಲಾರೆನ್ಸ್ ಡೆಂಗ್‌ಡುಂಗ್ ಅವರ ಹೆಂಡತಿಯ ಮರಣದ ನಂತರ ಆಯೋಜಿಸಲಾದ ಔತಣಕೂಟಕ್ಕೆ ಹಾಜರಾಗಲು ನನ್ನ ಅತ್ತೆ ಮತ್ತು ಮಾವ ಅವರನ್ನು ಆಹ್ವಾನಿಸಲಾಗಿತ್ತು. ಔತಣಕ್ಕೆಂದು ಸ್ಥಳಕ್ಕೆ ಬಂದ ಆಕೆಯನ್ನು ಮಾಟಮಂತ್ರ ಮಾಡುತ್ತಿದ್ದಾರೆ ಎಂದೂ, ತನ್ನ ಪತ್ನಿಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆಕೆಯ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ ಎಂದು ಸಂತ್ರಸ್ತ ವೃದ್ಧೆಯ ಸೊಸೆ ತಿಳಿಸಿದ್ದಾರೆ.

“ನನ್ನ ಅತ್ತೆ ಅವರನ್ನು ವಿರೋಧಿಸಿದಾಗ, ಸುಮಾರು 8 ರಿಂದ 10 ಜನರು ಅವರನ್ನು ಒಣಹುಲ್ಲಿನ ಮೇಲೆ ಎಸೆದು ಬೆಂಕಿ ಹಚ್ಚಿದರು. ಗದ್ದಲವನ್ನು ಕೇಳಿದ ನಂತರ ಆಕೆಯ ಪತಿ ಮತ್ತು ಇತರ ಗ್ರಾಮಸ್ಥರು ಅಲ್ಲಿಗೆ ಆಗಮಿಸಿ ಬೆಂಕಿಯನ್ನು ನಂದಿಸಿ ವೃದ್ಧೆಯನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ನನ್ನ ಅತ್ತೆ ತೀವ್ರವಾಗಿ ಗಾಯಾಳುವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಜೀವಕ್ಕಾಗಿ ಹೋರಾಡುತ್ತಿದ್ದಾರೆ.” ಎಂದು ಜಾರಿಯೋ ದೇವಿಯ ಸೊಸೆ ಹೇಳಿದ್ದಾರೆ.

ಇದೇ ವೇಳೆ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. “ನಾವು ಫ್ಲಾರೆನ್ಸ್ ಡೆಂಗ್‌ಡುಂಗ್, ಸಿಲ್ಬಿಯಸ್ ಡೆಂಗ್‌ಡುಂಗ್, ರವಿ ಸೊರೆಂಗ್, ಹೇಮಂತ್ ತೆತೆ ಮತ್ತು ಜ್ಯೋತಿ ತೆತೆ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದೇವೆ” ಎಂದು ಥೇತೈತಂಗರ್ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ಇಂದ್ರೇಶ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ಎಮ್ಮೆ ಹಾಲು ಕೊಡುತ್ತಿಲ್ಲ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...