Homeಮುಖಪುಟಜಾರ್ಖಂಡ್: ವಾಮಾಚಾರದ ಶಂಕೆಯಿಂದ ವೃದ್ಧೆಗೆ ಬೆಂಕಿ ಹಚ್ಚಿದ್ದ ಐವರ ಬಂಧನ

ಜಾರ್ಖಂಡ್: ವಾಮಾಚಾರದ ಶಂಕೆಯಿಂದ ವೃದ್ಧೆಗೆ ಬೆಂಕಿ ಹಚ್ಚಿದ್ದ ಐವರ ಬಂಧನ

- Advertisement -
- Advertisement -

ವಾಮಾಚಾರ ನಡೆಸಿ ಇನ್ನೊಬ್ಬ ಮಹಿಳೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಹಿರಿಯ ಮಹಿಳೆಯನ್ನು ಅಮಾನುಷವಾಗಿ ಥಳಿಸಿ, ಸಜೀವವಾಗಿ ಸುಟ್ಟು ಹಾಕಲು ಬೆಂಕಿ ಹಚ್ಚಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.

ಸಿಮ್ಡೆಗಾ ಸಮೀಪದ ಕುಡ್ಪಾನಿ ಹಳ್ಳಿಯಲ್ಲಿ ಕೆಲವು ಜನರು ಬುಧವಾರ ಸಂಜೆ ಹಿರಿಯ ಮಹಿಳೆಯನ್ನು ಅಮಾನುಷವಾಗಿ ಥಳಿಸಿ, ಒಣಹುಲ್ಲಿನ ಬಣವೆಯ ಮೇಲೆ ತಳ್ಳಿದ್ದಾರೆ. ಬಳಿಕ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು. ಮಹಿಳೆಯ ಆಕ್ರಂದನ ಕೇಳಿ ಸ್ಥಳಕ್ಕಾಗಮಿಸಿದ ಇತರ ಗ್ರಾಮಸ್ಥರು ಮಹಿಳೆಯನ್ನು ರಕ್ಷಿಸಿದ್ದಾರೆ.

ಥೇತೈತಂಗಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಡ್ಪಾನಿ ​​ಗ್ರಾಮದಲ್ಲಿ, ಫ್ಲಾರೆನ್ಸ್ ಡೆಂಗ್‌ಡುಂಗ್ ಎಂಬುವರ ಪತ್ನಿಯ ಮರಣದ ನಂತರ ಆಯೋಜಿಸಲಾದ ಔತಣಕೂಟಕ್ಕೆ ಮಹಿಳೆ ಜಾರಿಯೋ ದೇವಿ ಎಂಬುವರನ್ನು ಆಹ್ವಾನಿಸಲಾಗಿತ್ತು. ಆದರೆ, ಔತಣಕೂಟದಲ್ಲಿ ಫ್ಲಾರೆನ್ಸ್ ಡೆಂಗ್‌ಡುಂಗ್ ಪತ್ನಿಯ ಸಾವಿಗೆ ಆಕೆಯ ಕಾರಣರು ಎಂದು ಹೇಳಿ ಹಲ್ಲೆ ಮಾಡಲಾಗಿದೆ.

ಇದನ್ನೂ ಓದಿ: ವಾಮಾಚಾರ ಶಂಕೆ: ಸಾಫ್ಟ್‌ವೇರ್‌ ಇಂಜಿನಿಯರ್‌‌ನನ್ನು ಜೀವಂತ ಸುಟ್ಟ ಸಂಬಂಧಿಕರು!

“ಫ್ಲಾರೆನ್ಸ್ ಡೆಂಗ್‌ಡುಂಗ್ ಅವರ ಹೆಂಡತಿಯ ಮರಣದ ನಂತರ ಆಯೋಜಿಸಲಾದ ಔತಣಕೂಟಕ್ಕೆ ಹಾಜರಾಗಲು ನನ್ನ ಅತ್ತೆ ಮತ್ತು ಮಾವ ಅವರನ್ನು ಆಹ್ವಾನಿಸಲಾಗಿತ್ತು. ಔತಣಕ್ಕೆಂದು ಸ್ಥಳಕ್ಕೆ ಬಂದ ಆಕೆಯನ್ನು ಮಾಟಮಂತ್ರ ಮಾಡುತ್ತಿದ್ದಾರೆ ಎಂದೂ, ತನ್ನ ಪತ್ನಿಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆಕೆಯ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ ಎಂದು ಸಂತ್ರಸ್ತ ವೃದ್ಧೆಯ ಸೊಸೆ ತಿಳಿಸಿದ್ದಾರೆ.

“ನನ್ನ ಅತ್ತೆ ಅವರನ್ನು ವಿರೋಧಿಸಿದಾಗ, ಸುಮಾರು 8 ರಿಂದ 10 ಜನರು ಅವರನ್ನು ಒಣಹುಲ್ಲಿನ ಮೇಲೆ ಎಸೆದು ಬೆಂಕಿ ಹಚ್ಚಿದರು. ಗದ್ದಲವನ್ನು ಕೇಳಿದ ನಂತರ ಆಕೆಯ ಪತಿ ಮತ್ತು ಇತರ ಗ್ರಾಮಸ್ಥರು ಅಲ್ಲಿಗೆ ಆಗಮಿಸಿ ಬೆಂಕಿಯನ್ನು ನಂದಿಸಿ ವೃದ್ಧೆಯನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ನನ್ನ ಅತ್ತೆ ತೀವ್ರವಾಗಿ ಗಾಯಾಳುವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಜೀವಕ್ಕಾಗಿ ಹೋರಾಡುತ್ತಿದ್ದಾರೆ.” ಎಂದು ಜಾರಿಯೋ ದೇವಿಯ ಸೊಸೆ ಹೇಳಿದ್ದಾರೆ.

ಇದೇ ವೇಳೆ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. “ನಾವು ಫ್ಲಾರೆನ್ಸ್ ಡೆಂಗ್‌ಡುಂಗ್, ಸಿಲ್ಬಿಯಸ್ ಡೆಂಗ್‌ಡುಂಗ್, ರವಿ ಸೊರೆಂಗ್, ಹೇಮಂತ್ ತೆತೆ ಮತ್ತು ಜ್ಯೋತಿ ತೆತೆ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದೇವೆ” ಎಂದು ಥೇತೈತಂಗರ್ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ಇಂದ್ರೇಶ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ಎಮ್ಮೆ ಹಾಲು ಕೊಡುತ್ತಿಲ್ಲ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...