Homeಚಳವಳಿಜಾರ್ಖಂಡ್‌: ಅರಣ್ಯ ಉಳಿಸಲು ’ಜಂಗಲ್ ಬಚಾವೋ’ ತಂಡ ರಚಿಸಿ ಬಿದಿರು ಕೋಲು ಹಿಡಿದ ದಿಟ್ಟ ಮಹಿಳೆಯರು

ಜಾರ್ಖಂಡ್‌: ಅರಣ್ಯ ಉಳಿಸಲು ’ಜಂಗಲ್ ಬಚಾವೋ’ ತಂಡ ರಚಿಸಿ ಬಿದಿರು ಕೋಲು ಹಿಡಿದ ದಿಟ್ಟ ಮಹಿಳೆಯರು

- Advertisement -
- Advertisement -

ಜಂಗಲ್ ಬಚಾವೋ (ಕಾಡನ್ನು ಉಳಿಸಿ) ಎಂಬುದು ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ 100 ಮಹಿಳೆಯರ ಧ್ಯೇಯವಾಕ್ಯ. ಆಧುನೀಕರಣದ ಹೆಸರಿನಲ್ಲಿ ನಡೆಯುತ್ತಿರುವ ಕ್ಷಿಪ್ರ ಅರಣ್ಯನಾಶದಿಂದ ಆತಂಕಕ್ಕೊಳಗಾಗಿರುವ ಈ ಮಹಿಳೆಯರು ತಮ್ಮ ಪ್ರದೇಶದಲ್ಲಿ ಸುಮಾರು ಒಂಬತ್ತು ಎಕರೆ ಅರಣ್ಯ ಭೂಮಿಯನ್ನು ರಕ್ಷಿಸಲು ಹೋರಾಟಕ್ಕಿಳಿದಿದ್ದಾರೆ.

ಈ ಮಹಿಳೆಯರು ತಮ್ಮ ಸುತ್ತಲಿನ ಪ್ರದೇಶಗಳಲ್ಲಿ ಮರಗಳನ್ನು ಕಡಿಯದಂತೆ, ಕಾಡನ್ನು ಉಳಿಸುವಂತೆ ಜಾಗೃತಿ ಅಭಿಯಾನವನ್ನು ಸಹ ನಡೆಸುತ್ತಿದ್ದಾರೆ. ಇದರಿಂದ, ಹೆಚ್ಚಿನ ಜನರು ಅವರೊಂದಿಗೆ ಸೇರಿಕೊಳ್ಳುತ್ತಿದ್ದಾರೆ. ಇದನ್ನು ಜಂಗಲ್ ಬಚಾವೋ ಅಭಿಯಾನ ಎಂದು ಕರೆಯಲಾಗುತ್ತದೆ.

ಏಳು ಸ್ವಸಹಾಯ ಗುಂಪುಗಳಿಗೆ (ಎಸ್‌ಎಚ್‌ಜಿ) ಸೇರಿದ ಒಟ್ಟು 104 ಮಹಿಳೆಯರು ಈ ಅಭಿಯಾನದ ಭಾಗವಾಗಿದ್ದಾರೆ. ಇವರೆಲ್ಲರೂ ಆನಂದಪುರ ಬ್ಲಾಕ್‌ನ ಮಹಿಷಗೆಡ ಗ್ರಾಮದವರು. ಇವರು ತಮ್ಮ ಆಂದೋಲನವನ್ನು ಜಾರ್ಖಂಡ್ ಸ್ಟೇಟ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿಯ ಜೊತೆಗೆ ನಡೆಸುತ್ತಿದ್ದಾರೆ.

ಕಾಡು ಮತ್ತು ಪರಿಸರವನ್ನು ರಕ್ಷಿಸುವುದು ಜಂಗಲ್ ಬಚಾವೋ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ನಾಲ್ಕು ತಂಡಗಳಾಗಿ ಕಾರ್ಯನಿರ್ವಹಿಸುತ್ತಿರುವ ಈ ಮಹಿಳೆಯರು ಬೆಳಿಗ್ಗೆ 6 ರಿಂದ 9 ರವರೆಗೆ ಮತ್ತು ಸಂಜೆ 4 ರಿಂದ 6 ರವರೆಗೆ ಕಾಡಿನಲ್ಲಿ ಕಾವಲು ಕಾಯುತ್ತಾರೆ. ಬಿದಿರಿನ ಕೋಲುಗಳಿಂದ ಶಸ್ತ್ರಸಜ್ಜಿತವಾದ ಅವರು ಮರಗಳ ಎಣಿಕೆಯನ್ನು ಇಟ್ಟುಕೊಂಡು ಮರಗಳನ್ನು ಕಡಿಯುವುದರ ಮೇಲೆ ನಿಗಾ ಇಡುತ್ತಾರೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ಮತ್ತೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಕಾಡಿನಲ್ಲಿ ಯಾರಾದರೂ ಮರಗಳನ್ನು ಕಡಿಯುವುದು ಅಥವಾ ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವಾಗ ಸಿಕ್ಕಿಬಿದ್ದರೆ, ಮಹಿಳೆಯರು ಅವರಿಗೆ ದಂಡ ವಿಧಿಸುತ್ತಾರೆ. ಹೀಗಾಗಿ, ಅನಗತ್ಯವಾಗಿ ಮರಗಳನ್ನು ಕಡಿಯುವುದು ಕಡಿಮೆಯಾಗುತ್ತಿದ್ದು, ಅವರ ಕೆಲಸ ಫಲಿತಾಂಶವನ್ನು ನೀಡುತ್ತಿದೆ.

’ನಾವು ಕಾಡಿನ ರಕ್ಷಣೆಗಾಗಿ ನಮ್ಮನ್ನು ತೊಡಗಿಸಿಕೊಂಡಿದ್ದೇವೆ. ಗ್ರಾಮದ ಬಳಿ ಮರಗಳನ್ನು ಮನಬಂದಂತೆ ಕಡಿಯುತ್ತಿರುವುದನ್ನು ನಾವು ಗಮನಿಸಿದೆವು. ನಂತರ, ಮರಗಳನ್ನು ಉಳಿಸುವುದಕ್ಕಾಗಿ ಈ ನಿರ್ಧಾರ ತೆಗೆದುಕೊಂಡೆವು” ಎಂದು ಅಭಿಯಾನದ ನೇತೃತ್ವ ವಹಿಸಿರುವ ಸರೋಜ್ ಸೂರಿನ್ ಹೇಳುತ್ತಾರೆ.

“ಆಶ್ಚರ್ಯಕರವಾಗಿ, ಅಭಿಯಾನ ಆರಂಭವಾದ ಒಂದು ವರ್ಷದಲ್ಲಿ, ಮರಗಳನ್ನು ಕಡಿಯುವುದನ್ನು ಬಹುತೇಕ ನಿಲ್ಲಿಸಲಾಗಿದೆ. ಏಕೆಂದರೆ, ಮರಗಳನ್ನು ಕಡಿಯುವದನ್ನು ತಡೆಯಲು ನಾವು ಇರುತ್ತೇವೆ ಎಂದು ಎಲ್ಲರೂ ಅರಿತುಕೊಂಡಿದ್ದಾರೆ. ಸಾಮಾನ್ಯವಾಗಿ, ನಾವು ವಿವಿಧ ಪಾಳಿಗಳಲ್ಲಿ 25 ಗುಂಪುಗಳಲ್ಲಿ ಕಾರ್ಯ ನಿರ್ವಹಿಸುತ್ತೇವೆ” ಎಂದು ಹೇಳಿದ್ದಾರೆ.

“ಮರ ಕಡಿಯುವವರಿಗೆ 5 ಸಾವಿರ ದಂಡ ವಿಧಿಸುತ್ತೇವೆ. ಆಂತರಿಕ ಶಿಸ್ತು ಕಾಪಾಡುವುದಕ್ಕಾಗಿ, ಅರಣ್ಯವನ್ನು ಕಾಯಲು ತಮ್ಮ ಸರದಿಯನ್ನು ಬಿಟ್ಟು ಬಿಡುವ ಮಹಿಳೆಯರಿಗೆ 200 ರೂಪಾಯಿ ದಂಡವನ್ನೂ ಸಹ ವಿಧಿಸಲು ನಾವು ಒಮ್ಮತದಿಂದ ನಿರ್ಧರಿಸಿದ್ದೇವೆ. ದಂಡದ ಮೂಲಕ ಸಂಗ್ರಹಿಸಿದ ಹಣವನ್ನು ಮರಗಳನ್ನು ನೆಡಲು ಬಳಸಲಾಗುತ್ತದೆ” ಎಂದು ಅಭಿಯಾನದ ಸದಸ್ಯೆ ಸಬೀನಾ ಕಂದುಲ್ನಾ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...