Homeಚಳವಳಿಜಾರ್ಖಂಡ್‌: ಅರಣ್ಯ ಉಳಿಸಲು ’ಜಂಗಲ್ ಬಚಾವೋ’ ತಂಡ ರಚಿಸಿ ಬಿದಿರು ಕೋಲು ಹಿಡಿದ ದಿಟ್ಟ ಮಹಿಳೆಯರು

ಜಾರ್ಖಂಡ್‌: ಅರಣ್ಯ ಉಳಿಸಲು ’ಜಂಗಲ್ ಬಚಾವೋ’ ತಂಡ ರಚಿಸಿ ಬಿದಿರು ಕೋಲು ಹಿಡಿದ ದಿಟ್ಟ ಮಹಿಳೆಯರು

- Advertisement -
- Advertisement -

ಜಂಗಲ್ ಬಚಾವೋ (ಕಾಡನ್ನು ಉಳಿಸಿ) ಎಂಬುದು ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ 100 ಮಹಿಳೆಯರ ಧ್ಯೇಯವಾಕ್ಯ. ಆಧುನೀಕರಣದ ಹೆಸರಿನಲ್ಲಿ ನಡೆಯುತ್ತಿರುವ ಕ್ಷಿಪ್ರ ಅರಣ್ಯನಾಶದಿಂದ ಆತಂಕಕ್ಕೊಳಗಾಗಿರುವ ಈ ಮಹಿಳೆಯರು ತಮ್ಮ ಪ್ರದೇಶದಲ್ಲಿ ಸುಮಾರು ಒಂಬತ್ತು ಎಕರೆ ಅರಣ್ಯ ಭೂಮಿಯನ್ನು ರಕ್ಷಿಸಲು ಹೋರಾಟಕ್ಕಿಳಿದಿದ್ದಾರೆ.

ಈ ಮಹಿಳೆಯರು ತಮ್ಮ ಸುತ್ತಲಿನ ಪ್ರದೇಶಗಳಲ್ಲಿ ಮರಗಳನ್ನು ಕಡಿಯದಂತೆ, ಕಾಡನ್ನು ಉಳಿಸುವಂತೆ ಜಾಗೃತಿ ಅಭಿಯಾನವನ್ನು ಸಹ ನಡೆಸುತ್ತಿದ್ದಾರೆ. ಇದರಿಂದ, ಹೆಚ್ಚಿನ ಜನರು ಅವರೊಂದಿಗೆ ಸೇರಿಕೊಳ್ಳುತ್ತಿದ್ದಾರೆ. ಇದನ್ನು ಜಂಗಲ್ ಬಚಾವೋ ಅಭಿಯಾನ ಎಂದು ಕರೆಯಲಾಗುತ್ತದೆ.

ಏಳು ಸ್ವಸಹಾಯ ಗುಂಪುಗಳಿಗೆ (ಎಸ್‌ಎಚ್‌ಜಿ) ಸೇರಿದ ಒಟ್ಟು 104 ಮಹಿಳೆಯರು ಈ ಅಭಿಯಾನದ ಭಾಗವಾಗಿದ್ದಾರೆ. ಇವರೆಲ್ಲರೂ ಆನಂದಪುರ ಬ್ಲಾಕ್‌ನ ಮಹಿಷಗೆಡ ಗ್ರಾಮದವರು. ಇವರು ತಮ್ಮ ಆಂದೋಲನವನ್ನು ಜಾರ್ಖಂಡ್ ಸ್ಟೇಟ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿಯ ಜೊತೆಗೆ ನಡೆಸುತ್ತಿದ್ದಾರೆ.

ಕಾಡು ಮತ್ತು ಪರಿಸರವನ್ನು ರಕ್ಷಿಸುವುದು ಜಂಗಲ್ ಬಚಾವೋ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ನಾಲ್ಕು ತಂಡಗಳಾಗಿ ಕಾರ್ಯನಿರ್ವಹಿಸುತ್ತಿರುವ ಈ ಮಹಿಳೆಯರು ಬೆಳಿಗ್ಗೆ 6 ರಿಂದ 9 ರವರೆಗೆ ಮತ್ತು ಸಂಜೆ 4 ರಿಂದ 6 ರವರೆಗೆ ಕಾಡಿನಲ್ಲಿ ಕಾವಲು ಕಾಯುತ್ತಾರೆ. ಬಿದಿರಿನ ಕೋಲುಗಳಿಂದ ಶಸ್ತ್ರಸಜ್ಜಿತವಾದ ಅವರು ಮರಗಳ ಎಣಿಕೆಯನ್ನು ಇಟ್ಟುಕೊಂಡು ಮರಗಳನ್ನು ಕಡಿಯುವುದರ ಮೇಲೆ ನಿಗಾ ಇಡುತ್ತಾರೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ಮತ್ತೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಕಾಡಿನಲ್ಲಿ ಯಾರಾದರೂ ಮರಗಳನ್ನು ಕಡಿಯುವುದು ಅಥವಾ ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವಾಗ ಸಿಕ್ಕಿಬಿದ್ದರೆ, ಮಹಿಳೆಯರು ಅವರಿಗೆ ದಂಡ ವಿಧಿಸುತ್ತಾರೆ. ಹೀಗಾಗಿ, ಅನಗತ್ಯವಾಗಿ ಮರಗಳನ್ನು ಕಡಿಯುವುದು ಕಡಿಮೆಯಾಗುತ್ತಿದ್ದು, ಅವರ ಕೆಲಸ ಫಲಿತಾಂಶವನ್ನು ನೀಡುತ್ತಿದೆ.

’ನಾವು ಕಾಡಿನ ರಕ್ಷಣೆಗಾಗಿ ನಮ್ಮನ್ನು ತೊಡಗಿಸಿಕೊಂಡಿದ್ದೇವೆ. ಗ್ರಾಮದ ಬಳಿ ಮರಗಳನ್ನು ಮನಬಂದಂತೆ ಕಡಿಯುತ್ತಿರುವುದನ್ನು ನಾವು ಗಮನಿಸಿದೆವು. ನಂತರ, ಮರಗಳನ್ನು ಉಳಿಸುವುದಕ್ಕಾಗಿ ಈ ನಿರ್ಧಾರ ತೆಗೆದುಕೊಂಡೆವು” ಎಂದು ಅಭಿಯಾನದ ನೇತೃತ್ವ ವಹಿಸಿರುವ ಸರೋಜ್ ಸೂರಿನ್ ಹೇಳುತ್ತಾರೆ.

“ಆಶ್ಚರ್ಯಕರವಾಗಿ, ಅಭಿಯಾನ ಆರಂಭವಾದ ಒಂದು ವರ್ಷದಲ್ಲಿ, ಮರಗಳನ್ನು ಕಡಿಯುವುದನ್ನು ಬಹುತೇಕ ನಿಲ್ಲಿಸಲಾಗಿದೆ. ಏಕೆಂದರೆ, ಮರಗಳನ್ನು ಕಡಿಯುವದನ್ನು ತಡೆಯಲು ನಾವು ಇರುತ್ತೇವೆ ಎಂದು ಎಲ್ಲರೂ ಅರಿತುಕೊಂಡಿದ್ದಾರೆ. ಸಾಮಾನ್ಯವಾಗಿ, ನಾವು ವಿವಿಧ ಪಾಳಿಗಳಲ್ಲಿ 25 ಗುಂಪುಗಳಲ್ಲಿ ಕಾರ್ಯ ನಿರ್ವಹಿಸುತ್ತೇವೆ” ಎಂದು ಹೇಳಿದ್ದಾರೆ.

“ಮರ ಕಡಿಯುವವರಿಗೆ 5 ಸಾವಿರ ದಂಡ ವಿಧಿಸುತ್ತೇವೆ. ಆಂತರಿಕ ಶಿಸ್ತು ಕಾಪಾಡುವುದಕ್ಕಾಗಿ, ಅರಣ್ಯವನ್ನು ಕಾಯಲು ತಮ್ಮ ಸರದಿಯನ್ನು ಬಿಟ್ಟು ಬಿಡುವ ಮಹಿಳೆಯರಿಗೆ 200 ರೂಪಾಯಿ ದಂಡವನ್ನೂ ಸಹ ವಿಧಿಸಲು ನಾವು ಒಮ್ಮತದಿಂದ ನಿರ್ಧರಿಸಿದ್ದೇವೆ. ದಂಡದ ಮೂಲಕ ಸಂಗ್ರಹಿಸಿದ ಹಣವನ್ನು ಮರಗಳನ್ನು ನೆಡಲು ಬಳಸಲಾಗುತ್ತದೆ” ಎಂದು ಅಭಿಯಾನದ ಸದಸ್ಯೆ ಸಬೀನಾ ಕಂದುಲ್ನಾ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...