Homeರಾಷ್ಟ್ರೀಯಜಿಗ್ನೇಶ್‌ ಮೇವಾನಿ ಮೇಲೆ ‘ಸುಳ್ಳು ಎಫ್‌ಐಆರ್‌’ ದಾಖಲಿಸಲಾಗಿದೆ: ಅಸ್ಸಾಂನ ಜಿಲ್ಲಾ ನ್ಯಾಯಾಲಯ ಹೇಳಿಕೆ

ಜಿಗ್ನೇಶ್‌ ಮೇವಾನಿ ಮೇಲೆ ‘ಸುಳ್ಳು ಎಫ್‌ಐಆರ್‌’ ದಾಖಲಿಸಲಾಗಿದೆ: ಅಸ್ಸಾಂನ ಜಿಲ್ಲಾ ನ್ಯಾಯಾಲಯ ಹೇಳಿಕೆ

ಕಷ್ಟಪಟ್ಟು ಗಳಿಸಿದ ಪ್ರಜಾಪ್ರಭುತ್ವವನ್ನು ಪೊಲೀಸ್ ರಾಜ್ಯವನ್ನಾಗಿ ಪರಿವರ್ತಿಸುವುದರ ವಿರುದ್ಧ ಅಸ್ಸಾಂ ಪೊಲೀಸರಿಗೆ ಕೋರ್ಟ್‌ ಎಚ್ಚರಿಕೆ ನೀಡಿದೆ.

- Advertisement -
- Advertisement -

ಕಸ್ಟಡಿಯಲ್ಲಿದ್ದಾಗ ಮಹಿಳಾ ಪೊಲೀಸ್‌‌ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ಬಂಧಿತರಾಗಿದ್ದ ಗುಜರಾತ್‌‌ ಶಾಸಕ ಜಿಗ್ನೇಶ್‌ ಮೇವಾನಿಗೆ ಅಸ್ಸಾಂನ ಬಾರ್ಪೇಟಾ ಜಿಲ್ಲೆಯ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಈ ವೇಳೆ ‘ಸುಳ್ಳು ಎಫ್‌ಐಆರ್’ ಮತ್ತು ‘ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದೆ’ ಎಂದು ರಾಜ್ಯ ಪೊಲೀಸರನ್ನು ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. “ಕಷ್ಟಪಟ್ಟು ಗಳಿಸಿದ ಪ್ರಜಾಪ್ರಭುತ್ವವನ್ನು ಪೊಲೀಸ್ ರಾಜ್ಯವನ್ನಾಗಿ ಪರಿವರ್ತಿಸುವುದರ” ವಿರುದ್ಧ ಅಸ್ಸಾಂ ಪೊಲೀಸರಿಗೆ ಅದು ಎಚ್ಚರಿಕೆ ನೀಡಿದೆ.

“ರಾಜ್ಯದಲ್ಲಿ ನಡೆಯುತ್ತಿರುವ ಮಿತಿಮೀರಿದ ಪೋಲೀಸ್‌ ದೌರ್ಜನ್ಯ”ವನ್ನು ಉಲ್ಲೇಖಿಸಿದ ಬಾರ್ಪೇಟಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅಪರೇಶ್ ಚಕ್ರವರ್ತಿ ಅವರು, “ಸ್ವತಃ ಸುಧಾರಿಸಿಕೊಳ್ಳಲು” ಪೊಲೀಸ್ ಪಡೆಗೆ ನಿರ್ದೇಶನ ನೀಡುವಂತೆ ಗೌಹಾಟಿ ಹೈಕೋರ್ಟ್‌ಗೆ ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಷ್ಟಪಟ್ಟು ಗಳಿಸಿದ ನಮ್ಮ ಪ್ರಜಾಪ್ರಭುತ್ವವನ್ನು ಪೊಲೀಸ್ ರಾಜ್ಯವಾಗಿ ಪರಿವರ್ತಿಸುತ್ತಿರುವುದನ್ನು ಸರಳವಾಗಿ ಯೋಚಿಸಲು ಸಾಧ್ಯವಿಲ್ಲ. ಅಸ್ಸಾಂ ಪೊಲೀಸರು ಕೂಡಾ ಅದೇ ವಿಚಾರದ ಬಗ್ಗೆ ಯೋಚಿಸುತ್ತಿದ್ದರೆ, ಅದುವೇ ವಿಕೃತ ಚಿಂತನೆ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು

ಏಪ್ರಿಲ್ 21 ರಂದು ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಸರ್ಕಾರಿ ವಾಹನದಲ್ಲಿ ಅವರನ್ನು ಕರೆದೊಯ್ಯುತ್ತಿದ್ದಾಗ ಜಿಗ್ನೇಶ್‌ ಮೇವಾನಿ ತನ್ನ ಮೇಲೆ, ‘ಆಕ್ಷೇಪಾರ್ಹ ಪದಗಳಿಂದ ನಿಂದಿಸಿದ್ದಾರೆ’, ‘ದೈಹಿಕವಾಗಿ ತಳ್ಳಿದ್ದಾರೆ’ ಎಂದು ಮಹಿಳಾ ಪೊಲೀಸ್ ಅಧಿಕಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಎಫ್‌ಐಆರ್ ಪ್ರಕಾರ, ವಾಹನದಲ್ಲಿ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಅದಾಗ್ಯೂ, ಮಹಿಳಾ ಅಧಿಕಾರಿಯ ಹೇಳಿಕೆಯನ್ನು ಎಫ್‌ಐಆರ್‌ನಲ್ಲಿ ಸೇರಿಸುವುದಿಲ್ಲ ಎಂದು ನ್ಯಾಯಾಲಯ ಶುಕ್ರವಾರ ಹೇಳಿದೆ. “ಇದು ಆರೋಪಿಯನ್ನು ದೀರ್ಘಕಾಲದವರೆಗೆ ಬಂಧನದಲ್ಲಿಡಲು, ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ತಯಾರಿಸಲ್ಪಟ್ಟಿದೆ” ಎಂದು ಅದು ಹೇಳಿದೆ.

“ಇಬ್ಬರು ಪುರುಷ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಗೌರವಕ್ಕೆ ಧಕ್ಕೆ ತರಲು ಯಾವುದೇ ವಿವೇಕಯುತ ವ್ಯಕ್ತಿ ಎಂದಿಗೂ ಪ್ರಯತ್ನಿಸುವುದಿಲ್ಲ. ಆರೋಪಿಯು ಹುಚ್ಚುತನದ ವ್ಯಕ್ತಿ ಎಂಬ ಯಾವ ದಾಖಲೆ ಕೂಡಾ ಇಲ್ಲ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಗುಜರಾತ್: ಶಾಸಕ ಜಿಗ್ನೇಶ್ ಮೇವಾನಿ ನೇತೃತ್ವದಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತರು

“ಕಾನೂನು ಮತ್ತು ಸುವ್ಯವಸ್ಥೆಯ ಕರ್ತವ್ಯದಲ್ಲಿ ತೊಡಗಿರುವ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೆ ಬಾಡಿ ಕ್ಯಾಮೆರಾಗಳನ್ನು ಧರಿಸುವಂತೆ, ಆರೋಪಿಯನ್ನು ಬಂಧಿಸುವಾಗ ಅಥವಾ ಆರೋಪಿಯನ್ನು ಕೆಲವು ಸ್ಥಳಕ್ಕೆ ಕರೆದುಕೊಂಡು ಹೋಗಲು ಅಥವಾ ಇತರ ಕಾರಣಗಳಿಗಾಗಿ ಸರಕು ವಸೂಲಿ ಮಾಡುವಾಗ ವಾಹನಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಮತ್ತು ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು” ಎಂಬ ನಿರ್ದೇಶನವನ್ನು ಹೈಕೋರ್ಟ್‌ ನೀಡಬೇಕು ಎಂದು ನ್ಯಾಯಾಲಯ ಹೇಳಿದೆ.

“ಈಗಿನಂತೆ ಸುಳ್ಳು ಎಫ್‌ಐಆರ್ ದಾಖಲು ಮಾಡುವುದನ್ನು ತಡೆಗಟ್ಟಲು, ಆರೋಪಿಗಳ ಬಂಧನ ಮತ್ತು ಆರೋಪಿಗಳು ಮಧ್ಯರಾತ್ರಿಯಲ್ಲಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಹಾಗೂ ಈಗೀಗ ರಾಜ್ಯದಲ್ಲಿ ದಿನ ನಿತ್ಯದ ವಿದ್ಯಾಮಾನವಾಗಿರುವ ಆರೋಪಿಯು ಪೊಲೀಸ್ ಸಿಬ್ಬಂದಿಯಿಂದ ತಪ್ಪಿಸಲು ಪ್ರಯತ್ನಿಸುತ್ತಿರುವಾಗ ಪೊಲೀಸ್ ಸಿಬ್ಬಂದಿ ಗುಂಡು ಹಾರಿಸಿ ಕೊಲ್ಲುವುದು ಅಥವಾ ಗಾಯಗೊಳಿಸುವುದು ಮುಂತಾದ ಘಟನೆಗಳಲ್ಲಿ ಪೊಲೀಸರ ಹೇಳಿಕೆಗಳಿಗೆ ವಿಶ್ವಾಸಾರ್ಹತೆಯನ್ನು ನೀಡಲು” ಈ ಕ್ರಮಗಳನ್ನು ಪರಿಗಣಿಸಬೇಕು ಎಂದು ಕೋರ್ಟ್‌ ಹೇಳಿದೆ.

“ಈ ಎಲ್ಲಾ ಅಂಶವನ್ನು ಪರಿಶೀಲಿಸಲು ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಪೋಲೀಸರ ಮಿತಿಮೀರಿದ ದೌರ್ಜನ್ಯಗಳನ್ನು ತಡೆಯಲು ಈ ವಿಷಯದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಾಗಿ (ಪಿಐಎಲ್) ತೆಗೆದುಕೊಳ್ಳಬಹುದೇ” ಎಂದು ಆದೇಶದ ಪ್ರತಿಯನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಇಡಲು ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಕಳುಹಿಸುವಂತೆ ನ್ಯಾಯಾಲಯ ಸೂಚಿಸಿದೆ.

ಇದನ್ನೂ ಓದಿ: 5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

ಕಳೆದ ತಿಂಗಳು ಅಸ್ಸಾಂ ಅಸೆಂಬ್ಲಿಯಲ್ಲಿ ಹಂಚಿಕೊಂಡ ಮಾಹಿತಿಯ ಪ್ರಕಾರ, 2021ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅಧಿಕಾರ ವಹಿಸಿಕೊಂಡಾಗಿನಿಂದ 29 ಜನರು ಪೊಲೀಸ್ ಫೈರಿಂಗ್‌ನಲ್ಲಿ ಸಾವನ್ನಪ್ಪಿದ್ದಾರೆ ಮತ್ತು 96 ಜನರು ಗಾಯಗೊಂಡಿದ್ದಾರೆ.

“1,000 ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಲಾಗಿದೆ. ಕೆಲವು ಔಪಚಾರಿಕ ಕ್ರಮಗಳು ಉಳಿದಿದ್ದು, ಅದಕ್ಕಾಗಿ ಅವರನ್ನು ಕೊಕ್ರಜಾರ್‌ಗೆ ಕರೆದೊಯ್ಯಬೇಕಾಗಿದೆ. ಆದ್ದರಿಂದ ಅವರನ್ನು ನಾಳೆ ಬಿಡುಗಡೆ ಮಾಡಲಾಗುತ್ತದೆ” ಎಂದು ಮೇವಾನಿ ಅವರ ವಕೀಲ ಅಂಗ್‌ಶುಮನ್ ಬೋರಾ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ನ್ಯಾಯಾಲಯವು “ಗಟ್ಟಿಯಾದ” ತೀರ್ಪು ನೀಡಿದೆ ಎಂದು ಅವರು ಹೇಳಿದ್ದಾರೆ. “ಇದೊಂದು ಸುಳ್ಳು ಪ್ರಕರಣ. ಅವರ ಬಂಧನ ಕಾನೂನುಬಾಹಿರ ಮತ್ತು ಕಾನೂನಿನ ಕಾರ್ಯವಿಧಾನವನ್ನು ಅನುಸರಿಸುವುದಿಲ್ಲ ಎಂದು ನಾನು ನ್ಯಾಯಾಲಯದ ಮುಂದೆ ವಾದಿಸಿದ್ದೆ. ಇದನ್ನು ನ್ಯಾಯಾಲಯ ಒಪ್ಪಿಕೊಂಡಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

ಕಳೆದ ಸೆಪ್ಟೆಂಬರ್‌ನಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಹೇಳಿದ್ದ ಸ್ವತಂತ್ರ ಶಾಸಕ ಮೇವಾನಿ ಅವರನ್ನು, ಗುಜರಾತ್‌ನ ಬನಸ್ಕಾಂತ ಜಿಲ್ಲೆಯಿಂದ ಅಸ್ಸಾಂ ಪೊಲೀಸರು ಏಪ್ರಿಲ್ 20 ರಂದು ತಡರಾತ್ರಿ ಬಂಧಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಮಾಡಿದ್ದಾರೆ ಎಂದು ಕೊಕ್ರಜಾರ್ ಜಿಲ್ಲೆಯ ಬಿಜೆಪಿ ನಾಯಕರೊಬ್ಬರು ನೀಡಿದ ದೂರಿನ ಮೇರೆಗೆ ಈ ಬಂಧನ ನಡೆದಿತ್ತು.

ಅಸ್ಸಾಂ ಪೊಲೀಸರು ಬಂಧನದ ಮರುದಿನ ಬೆಳಗ್ಗೆ ಅವರನ್ನು ಗುವಾಹಟಿಗೆ ಕರೆದೊಯ್ದಿದ್ದರು. ಏಪ್ರಿಲ್ 25 ರಂದು, ಕೊಕ್ರಜಾರ್ ನ್ಯಾಯಾಲಯದಿಂದ ಮೇವಾನಿ ಅವರಿಗೆ ಜಾಮೀನು ನೀಡಲಾಗಿತ್ತು. ಆದರೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ದೂರಿನ ಆಧಾರದ ಮೇಲೆ ಬಾರ್ಪೇಟಾ ಜಿಲ್ಲೆಯಲ್ಲಿ ದಾಖಲಾದ ಹೊಸ ಪ್ರಕರಣದ ಅಡಿಯಲ್ಲಿ ಅವರನ್ನು ಮತ್ತೆ ಅರೆಸ್ಟ್ ಮಾಡಲಾಗಿತ್ತು. ಜಿಗ್ನೇಶ್ ಮೇವಾನಿ ತನ್ನ ಮೇಲೆ ‘ಹಲ್ಲೆ’ ಮಾಡಿದ್ದು, ‘ಘನತೆಗೆ ಧಕ್ಕೆ ತಂದಿದ್ದಾರೆ’ ಎಂದು ಆರೋಪಿಸಿದ್ದರು.

ತನ್ನ ಬಂಧನವು ಪ್ರಧಾನ ಮಂತ್ರಿ ಕಚೇರಿಯಲ್ಲಿ ಯೋಜಿಸಲಾದ ‘ಪಿತೂರಿ’ ಎಂದು ಮೇವಾನಿ ಆರೋಪಿಸಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ. “ನನಗೆ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆಯಿದೆ. ಈ ನಂಬಿಕೆ ನನಗೆ ಹಿಂದೆಯೂ ಇದೆ, ಭವಿಷ್ಯದಲ್ಲೂ ಇರಲಿದೆ. ಇವತ್ತಲ್ಲದಿದ್ದರೆ ನಾಳೆ ನನಗೆ ಖಂಡಿತಾ ಜಾಮೀನು ಸಿಗುತ್ತಿತ್ತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೇಶ ಮತ್ತು ಸಂವಿಧಾನ ಪ್ರೀತಿಸುವ ಪ್ರತಿಯೊಬ್ಬರು ಜಿಗ್ನೇಶ್ ಮೇವಾನಿ ಜೊತೆಗಿದ್ದಾರೆ: ಸಿದ್ದರಾಮಯ್ಯ

“ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ನೀರವ್ ಮೋದಿ, ಮೆಹುಲ್ ಚೋಕ್ಸಿ ಅಥವಾ ವಿಜಯ್ ಮಲ್ಯ ಅವರನ್ನು ಬಂಧಿಸಲು ಸಾಧ್ಯವಾಗಲಿಲ್ಲ. ಆದರೆ ಒಂದು ಟ್ವೀಟ್‌ಗಾಗಿ ಜಿಗ್ನೇಶ್ ಮೇವಾನಿ ಅವರನ್ನು ಬಂಧಿಸಿ ಗುಜರಾತ್‌ನಿಂದ ಸಾವಿರಾರು ಕಿಲೋಮೀಟರ್‌ಗಳಷ್ಟು ಅಸ್ಸಾಂನ ಜೈಲಿಗೆ ಕರೆತಂದಿದ್ದಾರೆ. ಈ ಮೂಲಕ ಅವರು ನೀಡಲು ಪ್ರಯತ್ನಿಸುತ್ತಿರುವ ಸಂದೇಶ ಏನು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಮತ್ತು ಗೋಡ್ಸೆ ಬಗ್ಗೆ ಟ್ವೀಟ್‌ ಮಾಡಿದ್ದಕ್ಕಾಗಿ ಗುಜರಾತ್‌ ಶಾಸಕ, ಹೋರಾಟಗಾರ ಜಿಗ್ನೇಶ್‌ ಮೇವಾನಿಯ ಬಂಧನ

“ಚಂದ್ರಶೇಖರ್ ಆಜಾದ್, ಅಖಿಲ್ ಗೊಗೋಯ್, ಹಾರ್ದಿಕ್ ಪಟೇಲ್, ಕನ್ಹಯ್ಯಾ ಕುಮಾರ್ ಮತ್ತು ಇತರ ಯುವ ನಾಯಕರಂತೆಯೆ ನಾನು ಕೂಡಾ ಬಿಜೆಪಿಯ ಗುರಿಯಾಗಿದ್ದೇನೆ. ಆದರೆ ನಾವು ಯಾರೂ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಮಾತನಾಡುವುದನ್ನು ನಿಲ್ಲಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಕಿರಿಯ ಅಧಿಕಾರಿಯೊಂದಿಗೆ ಜಗಳವಾಡುವುದರಿಂದ ನಾನು ಏನು ಸಾಧಿಸುತ್ತೇನೆ? ಪೊಲೀಸರು ನನ್ನನ್ನು ಕಸ್ಟಡಿಗೆ ತೆಗೆದುಕೊಂಡರು ಮತ್ತು ನನ್ನನ್ನು ವಿಚಾರಣೆ ಮಾಡುವುದು ಅವರ ಕೆಲಸ ಮತ್ತು ನಾನು ಅವರಿಗೆ ಸಹಕರಿಸಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸತ್ಯ ಸಂಗತಿ ನ್ಯಾಯಾಲಯಕ್ಕೆ ಮನವರಿಕೆ ಆಗಿರುವುದು ಸ್ವಾಗತಾರ್ಹ.

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....