Homeಮುಖಪುಟಜಿಗ್ನೇಶ್ ಮೆವಾನಿ ಮೇಲಿನ ಪ್ರಕರಣ: 'ಕಾನೂನಿನ ದುರ್ಬಳಕೆ' ಎಂದ ಗುಜರಾತ್ ಕೋರ್ಟ್

ಜಿಗ್ನೇಶ್ ಮೆವಾನಿ ಮೇಲಿನ ಪ್ರಕರಣ: ‘ಕಾನೂನಿನ ದುರ್ಬಳಕೆ’ ಎಂದ ಗುಜರಾತ್ ಕೋರ್ಟ್

- Advertisement -
- Advertisement -

ಗುಜರಾತ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಇತರ ಒಂಬತ್ತು ಜನರ ವಿರುದ್ಧ ಅನುಮತಿ ಇಲ್ಲದೇ ಸಾರ್ವಜನಿಕ ರ್ಯಾಲಿ ನಡೆಸಿದ್ದರು ಎಂಬ ಆರೋಪದ ಮೇಲೆ ಅವರ ವಿರುದ್ಧ ಜುಲೈ 2017ರಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಕಳೆದ ವರ್ಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದೀಗ ಆ ಪ್ರಕರಣದಲ್ಲಿ ಅವರನ್ನು ಮೆಹ್ಸಾನಾ ಸೆಷನ್ಸ್ ನ್ಯಾಯಾಲಯವು ಖುಲಾಸೆಗೊಳಿಸಿದೆ.

ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಹಿಂದಿನ ತೀರ್ಪನ್ನು ರದ್ದುಗೊಳಿಸಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಿ.ಎಂ. ಪವಾರ್ ಅವರು, ”ಸಂವಿಧಾನದ 19ನೇ ವಿಧಿಯ ಅಡಿಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವುದು ಅವರ ಹಕ್ಕು ಎಂದು ಹೇಳುವ ಮೂಲಕ ಈ ಪ್ರಕರಣವನ್ನು “ಆಧಾರರಹಿತ” ಎಂದು ಕರೆದಿದ್ದಾರೆ” ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

”ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದನ್ನು ಮತ್ತು ಶಾಂತಿಯುತ ಪ್ರತಿಭಟನೆಯನ್ನು ಅಪರಾಧ ಎಂದು ಬ್ರಾಂಡ್ ಮಾಡಿದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ವಾತಂತ್ರ್ಯದ ಹಕ್ಕಿಗೆ ಬೆಲೆ ಇರುವುದಿಲ್ಲ” ಎಂದು ನ್ಯಾಯಾಧೀಶ ಪವಾರ್ ಹೇಳಿದರು.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ”ಸರ್ಕಾರ ಮತ್ತು ಅದರ ನೀತಿಗಳ ವಿರುದ್ಧ ಟೀಕೆ, ಚರ್ಚೆ ಮತ್ತು ಪ್ರಾಮಾಣಿಕ ಭಿನ್ನಾಭಿಪ್ರಾಯಗಳು ವ್ಯಕ್ತವಾಗಲು ಬಿಡಬೇಕು ಅದು ಪ್ರಜಾಪ್ರಭುತ್ವಕ್ಕೆ ಅತ್ಯಗತ್ಯ” ಎಂದು ಪವಾರ್ ಹೇಳಿದರು.

ಇದನ್ನೂ ಓದಿ: ಬಿಲ್ಕಿಸ್ ಬಾನೊ ಅತ್ಯಾಚಾರಿ ಬಿಜೆಪಿ ಶಾಸಕರೊಂದಿಗೆ ಗುಜರಾತ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿ

”ಜನರ ಧ್ವನಿಯನ್ನು ಹತ್ತಿಕ್ಕಲು ಅಧಿಕಾರ ಮತ್ತು ಕಾನೂನಿನ ಪ್ರಕ್ರಿಯೆಯ ದುರುಪಯೋಗವು ಪ್ರಜಾಪ್ರಭುತ್ವ ವ್ಯವಸ್ಥೆಗಳಲ್ಲಿ ನಡೆಯಬಾರದು ಮತ್ತು ಯಾವುದೇ ಟೀಕೆಗಳ ಭಯವಿಲ್ಲದೆ ಜನರ ಸ್ವಾತಂತ್ರ್ಯವನ್ನು ರಕ್ಷಿಸುವುದು ಪ್ರತಿ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿನ ಸರ್ಕಾರದ ಕರ್ತವ್ಯವಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾಯಿತ ನಾಯಕರು ಜನರ ಮೇಲೆ ಆಡಳಿತ ನಡೆಸುವುದಕ್ಕಾಗಿ ಅಲ್ಲ, ಬದಲಿಗೆ ಅವರ ಸೇವೆ ಮಾಡಲು ಇದ್ದಾರೆ ಎಂದು ಪವಾರ್ ಹೇಳಿದರು.

ತೀರ್ಪಿನ ನಂತರ ಮೆವಾನಿ ಅವರು ಟ್ವಿಟರ್‌ ಮಾಡಿದ್ದು, ”ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದನ್ನು ಮತ್ತು ಶಾಂತಿಯುತ ಪ್ರತಿಭಟನೆ ಮಾಡುವ ಹಕ್ಕನ್ನು ಮೆಹ್ಸಾನಾ ಸೆಷನ್ಸ್ ನ್ಯಾಯಾಲಯ ಎತ್ತಿಹಿಡಿದಿದೆ ಮತ್ತು ಆಧಾರರಹಿತ ಪ್ರಕರಣ ಎಂದು ಹೇಳುವ ಮೂಲಕ ಮೆಹ್ಸಾನಾದ ಸೆಷನ್ ನ್ಯಾಯಾಲಯವು 2017ರ ಕ್ಷುಲ್ಲಕ ಪ್ರಕರಣದಲ್ಲಿ ಇಂದು ನಮ್ಮನ್ನು ಖುಲಾಸೆಗೊಳಿಸಿದೆ. ಸತ್ಯಮೇವ ಜಯತೆ [ಸತ್ಯವೊಂದೇ ಜಯಿಸುತ್ತದೆ]!” ಎಂದು ಟ್ವೀಟ್ ಮಾಡಿದ್ದಾರೆ.

2016ರಲ್ಲಿ ಸತ್ತ ಹಸುವಿನ ಚರ್ಮ ಸುಲಿದ ಆರೋಪದ ಮೇಲೆ ಗೋರಕ್ಷಕರು ಉನಾದಲ್ಲಿ ದಲಿತರ ಮೇಲೆ ಸಾರ್ವಜನಿಕವಾಗಿ ಥಳಿಸುವುದಕ್ಕೆ ಸಂಬಂಧಿಸಿದಂತೆ ರ್ಯಾಲಿಯನ್ನು ಆಯೋಜಿಸಿದ್ದರು. ಆ ಕಾರಣಕ್ಕಾಗಿ ಮೇವಾನಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಅಧಿಕಾರಿಗಳು ಆರಂಭದಲ್ಲಿ ಈ ರ್ಯಾಲಿಗೆ ಅನುಮತಿ ನೀಡಿದರು. ಸಂಘಟಕರು ರ್ಯಾಲಿಯೊಂದಿಗೆ ಮುಂದೆ ಹೋದರು. ಆ ನಂತರ ಸಾರ್ವಜನಿಕ ಅವ್ಯವಸ್ಥೆಯನ್ನು ಉಲ್ಲೇಖಿಸಿ ರ್ಯಾಲಿಗೆ ಅನುಮತಿಯನ್ನು ರದ್ದುಗೊಳಿಸಿ  ಅವರ ವಿರುದ್ಧ ಪ್ರಕರಣ ದಾಖಲಿಸಲಾಯಿತು.

ಮೇನಲ್ಲಿ ಶಿಕ್ಷೆಯಾಗುವ ಕೆಲವು ದಿನಗಳ ಮೊದಲು, ಅಸ್ಸಾಂ ಪೊಲೀಸರು ಮೇವಾನಿಯನ್ನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್‌ಗಳಿಗಾಗಿ ಬಂಧಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...