Homeಮುಖಪುಟಜಿಗ್ನೇಶ್ ಮೆವಾನಿ ಮೇಲಿನ ಪ್ರಕರಣ: 'ಕಾನೂನಿನ ದುರ್ಬಳಕೆ' ಎಂದ ಗುಜರಾತ್ ಕೋರ್ಟ್

ಜಿಗ್ನೇಶ್ ಮೆವಾನಿ ಮೇಲಿನ ಪ್ರಕರಣ: ‘ಕಾನೂನಿನ ದುರ್ಬಳಕೆ’ ಎಂದ ಗುಜರಾತ್ ಕೋರ್ಟ್

- Advertisement -
- Advertisement -

ಗುಜರಾತ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಇತರ ಒಂಬತ್ತು ಜನರ ವಿರುದ್ಧ ಅನುಮತಿ ಇಲ್ಲದೇ ಸಾರ್ವಜನಿಕ ರ್ಯಾಲಿ ನಡೆಸಿದ್ದರು ಎಂಬ ಆರೋಪದ ಮೇಲೆ ಅವರ ವಿರುದ್ಧ ಜುಲೈ 2017ರಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಕಳೆದ ವರ್ಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದೀಗ ಆ ಪ್ರಕರಣದಲ್ಲಿ ಅವರನ್ನು ಮೆಹ್ಸಾನಾ ಸೆಷನ್ಸ್ ನ್ಯಾಯಾಲಯವು ಖುಲಾಸೆಗೊಳಿಸಿದೆ.

ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಹಿಂದಿನ ತೀರ್ಪನ್ನು ರದ್ದುಗೊಳಿಸಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಿ.ಎಂ. ಪವಾರ್ ಅವರು, ”ಸಂವಿಧಾನದ 19ನೇ ವಿಧಿಯ ಅಡಿಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವುದು ಅವರ ಹಕ್ಕು ಎಂದು ಹೇಳುವ ಮೂಲಕ ಈ ಪ್ರಕರಣವನ್ನು “ಆಧಾರರಹಿತ” ಎಂದು ಕರೆದಿದ್ದಾರೆ” ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

”ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದನ್ನು ಮತ್ತು ಶಾಂತಿಯುತ ಪ್ರತಿಭಟನೆಯನ್ನು ಅಪರಾಧ ಎಂದು ಬ್ರಾಂಡ್ ಮಾಡಿದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ವಾತಂತ್ರ್ಯದ ಹಕ್ಕಿಗೆ ಬೆಲೆ ಇರುವುದಿಲ್ಲ” ಎಂದು ನ್ಯಾಯಾಧೀಶ ಪವಾರ್ ಹೇಳಿದರು.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ”ಸರ್ಕಾರ ಮತ್ತು ಅದರ ನೀತಿಗಳ ವಿರುದ್ಧ ಟೀಕೆ, ಚರ್ಚೆ ಮತ್ತು ಪ್ರಾಮಾಣಿಕ ಭಿನ್ನಾಭಿಪ್ರಾಯಗಳು ವ್ಯಕ್ತವಾಗಲು ಬಿಡಬೇಕು ಅದು ಪ್ರಜಾಪ್ರಭುತ್ವಕ್ಕೆ ಅತ್ಯಗತ್ಯ” ಎಂದು ಪವಾರ್ ಹೇಳಿದರು.

ಇದನ್ನೂ ಓದಿ: ಬಿಲ್ಕಿಸ್ ಬಾನೊ ಅತ್ಯಾಚಾರಿ ಬಿಜೆಪಿ ಶಾಸಕರೊಂದಿಗೆ ಗುಜರಾತ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿ

”ಜನರ ಧ್ವನಿಯನ್ನು ಹತ್ತಿಕ್ಕಲು ಅಧಿಕಾರ ಮತ್ತು ಕಾನೂನಿನ ಪ್ರಕ್ರಿಯೆಯ ದುರುಪಯೋಗವು ಪ್ರಜಾಪ್ರಭುತ್ವ ವ್ಯವಸ್ಥೆಗಳಲ್ಲಿ ನಡೆಯಬಾರದು ಮತ್ತು ಯಾವುದೇ ಟೀಕೆಗಳ ಭಯವಿಲ್ಲದೆ ಜನರ ಸ್ವಾತಂತ್ರ್ಯವನ್ನು ರಕ್ಷಿಸುವುದು ಪ್ರತಿ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿನ ಸರ್ಕಾರದ ಕರ್ತವ್ಯವಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾಯಿತ ನಾಯಕರು ಜನರ ಮೇಲೆ ಆಡಳಿತ ನಡೆಸುವುದಕ್ಕಾಗಿ ಅಲ್ಲ, ಬದಲಿಗೆ ಅವರ ಸೇವೆ ಮಾಡಲು ಇದ್ದಾರೆ ಎಂದು ಪವಾರ್ ಹೇಳಿದರು.

ತೀರ್ಪಿನ ನಂತರ ಮೆವಾನಿ ಅವರು ಟ್ವಿಟರ್‌ ಮಾಡಿದ್ದು, ”ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದನ್ನು ಮತ್ತು ಶಾಂತಿಯುತ ಪ್ರತಿಭಟನೆ ಮಾಡುವ ಹಕ್ಕನ್ನು ಮೆಹ್ಸಾನಾ ಸೆಷನ್ಸ್ ನ್ಯಾಯಾಲಯ ಎತ್ತಿಹಿಡಿದಿದೆ ಮತ್ತು ಆಧಾರರಹಿತ ಪ್ರಕರಣ ಎಂದು ಹೇಳುವ ಮೂಲಕ ಮೆಹ್ಸಾನಾದ ಸೆಷನ್ ನ್ಯಾಯಾಲಯವು 2017ರ ಕ್ಷುಲ್ಲಕ ಪ್ರಕರಣದಲ್ಲಿ ಇಂದು ನಮ್ಮನ್ನು ಖುಲಾಸೆಗೊಳಿಸಿದೆ. ಸತ್ಯಮೇವ ಜಯತೆ [ಸತ್ಯವೊಂದೇ ಜಯಿಸುತ್ತದೆ]!” ಎಂದು ಟ್ವೀಟ್ ಮಾಡಿದ್ದಾರೆ.

2016ರಲ್ಲಿ ಸತ್ತ ಹಸುವಿನ ಚರ್ಮ ಸುಲಿದ ಆರೋಪದ ಮೇಲೆ ಗೋರಕ್ಷಕರು ಉನಾದಲ್ಲಿ ದಲಿತರ ಮೇಲೆ ಸಾರ್ವಜನಿಕವಾಗಿ ಥಳಿಸುವುದಕ್ಕೆ ಸಂಬಂಧಿಸಿದಂತೆ ರ್ಯಾಲಿಯನ್ನು ಆಯೋಜಿಸಿದ್ದರು. ಆ ಕಾರಣಕ್ಕಾಗಿ ಮೇವಾನಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಅಧಿಕಾರಿಗಳು ಆರಂಭದಲ್ಲಿ ಈ ರ್ಯಾಲಿಗೆ ಅನುಮತಿ ನೀಡಿದರು. ಸಂಘಟಕರು ರ್ಯಾಲಿಯೊಂದಿಗೆ ಮುಂದೆ ಹೋದರು. ಆ ನಂತರ ಸಾರ್ವಜನಿಕ ಅವ್ಯವಸ್ಥೆಯನ್ನು ಉಲ್ಲೇಖಿಸಿ ರ್ಯಾಲಿಗೆ ಅನುಮತಿಯನ್ನು ರದ್ದುಗೊಳಿಸಿ  ಅವರ ವಿರುದ್ಧ ಪ್ರಕರಣ ದಾಖಲಿಸಲಾಯಿತು.

ಮೇನಲ್ಲಿ ಶಿಕ್ಷೆಯಾಗುವ ಕೆಲವು ದಿನಗಳ ಮೊದಲು, ಅಸ್ಸಾಂ ಪೊಲೀಸರು ಮೇವಾನಿಯನ್ನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್‌ಗಳಿಗಾಗಿ ಬಂಧಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...