Homeಮುಖಪುಟ5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

- Advertisement -
- Advertisement -

ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರನ್ನು ಮಂಗಳವಾರ ಅಸ್ಸಾಂ ನ್ಯಾಯಾಲಯವು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಧಾನಿ ಮೋದಿಯವರನ್ನು ಟೀಕಿಸಿದ ಟ್ವೀಟ್‌ಗೆ ಸಂಬಂಧಿಸಿದಂತೆ ಬಂಧನಕ್ಕೊಳಕ್ಕಾಗಿದ್ದ ಮೇವಾನಿಯವರು ಸೋಮವಾರ ಜಾಮೀನು ಪಡೆದ ಬೆನ್ನಲ್ಲೇ ಮತ್ತೆ ಬಂಧನಕ್ಕೊಳಗಾಗಿದ್ದರು. ತಕ್ಷಣಕ್ಕೆ ಕಾರಣ ತಿಳಿದುಬಂದಿರಲಿಲ್ಲ.

ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮತ್ತೆ ಮೇವಾನಿಯವರನ್ನು ಬಂಧಿಸಲಾಗಿದೆ. ಮೇವಾನಿ ವಿರುದ್ಧ ಈ (ಎರಡನೇ) ಪ್ರಕರಣವನ್ನು ಏಪ್ರಿಲ್ 21ರಂದು ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 353 (ಸಾರ್ವಜನಿಕ ಸೇವೆಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲು ಹಲ್ಲೆ), 354 (ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಫೋರ್ಸ್ ಬಳಸುವುದು) ‌ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಮಹಿಳಾ ಅಧಿಕಾರಿಯೊಬ್ಬರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ದೂರುದಾರ ಅಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳು ಏಪ್ರಿಲ್ 21ರಂದು ಮಧ್ಯಾಹ್ನ ಮೇವಾನಿ ಅವರನ್ನು ಸರ್ಕಾರಿ ವಾಹನದಲ್ಲಿ ಕರೆತರುತ್ತಿದ್ದರು. ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಬರಲಾಗುತ್ತಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. “ಅನುಚಿತವಾಗಿ ವರ್ತಿಸಿರುವ ಮೇವಾನಿ ನಮ್ಮ ಮೇಲೆ ಕೋಪಗೊಂಡರು. ಹೆಚ್ಚು ಕೆಟ್ಟ ಪದಗಳನ್ನು ಬಳಸಿದರು” ಎಂದು ಅಧಿಕಾರಿ ಆರೋಪಿಸಿದ್ದಾರೆ.

ಮೇವಾನಿ ನನ್ನ ಕಡೆಗೆ ಬೆರಳು ತೋರಿಸಿ ಬಲವಂತವಾಗಿ ಸೀಟ್‌ ಮೇಲೆ ತಳ್ಳಿದರು. “ನನ್ನ ಕಾನೂನು ಕರ್ತವ್ಯವನ್ನು ನಿರ್ವಹಿಸುವ ಸಮಯದಲ್ಲಿ ಆಕ್ರಮಣ ಮಾಡಲಾಗಿದೆ. ತಳ್ಳುವಾಗ ಅನುಚಿತವಾಗಿ ನನ್ನನ್ನು ಸ್ಪರ್ಶಿಸಿದ್ದಾರೆ” ಎಂದು ದೂರಿದ್ದಾರೆ.

ಇದರ ನಡುವೆ ಮೇವಾನಿ ಅವರ ವಕೀಲ ಅಂಗ್‌ಶುಮನ್ ಬೋರಾ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯೆ ನೀಡಿದ್ದು, “ಇದು ಸಂಪೂರ್ಣವಾಗಿ ಸುಳ್ಳು ಮತ್ತು ಕಟ್ಟುಕಥೆಯ ಪ್ರಕರಣ” ಎಂದು ಸ್ಪಷ್ಟಪಡಿಸಿದ್ದಾರೆ.

ಮೇವಾನಿ ಅವರನ್ನು ಮಂಗಳವಾರ ಬಾರ್‌ಪೇಟಾ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ ಬೋರಾ, ಈಗ ಅಲ್ಲಿಗೆ ಜಾಮೀನಿಗೆ ತೆರಳುವುದಾಗಿ ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಬಂಧಿಸಿದ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಜಿಗ್ನೇಶ್ ಮೇವಾನಿ ಅವರನ್ನು ಬಂಧಿಸಿಲಾಗಿತ್ತು. ಅಸ್ಸಾಂ ನ್ಯಾಯಾಲಯವು ಜಾಮೀನು ನೀಡಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಜಿಗ್ನೇಶ್ ಅವರನ್ನು ಮತ್ತೊಂದು ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಮೊದಲು ಏಪ್ರಿಲ್ 20 ರಂದು ಗುಜರಾತ್‌ನಲ್ಲಿ ಬಂಧಿಸಿದ್ದರು.

ಜಿಗ್ನೇಶ್ ಒಡನಾಡಿಗಳ ಮೇಲೂ ಪೊಲೀಸ್ ಕಾರ್ಯಾಚರಣೆ

ದಲಿತ ಹೋರಾಟಗಾರರು ಹಾಗೂ ಜಿಗ್ನೇಶ್‌ ಒಡನಾಡಿಗಳ ಮೇಲೂ ಪೊಲೀಸ್ ಕಾರ್ಯಾಚರಣೆ ನಡೆಯುತ್ತಿದೆ.

ಮೆವಾನಿಯ ಆಪ್ತ ಸಹಾಯಕ ಮತ್ತು ಆರ್‌ಡಿಎಎಂ ಸದಸ್ಯ ಕಮಲೇಶ್ ಕಟಾರಿಯಾ ಅವರನ್ನು ಯಶೋದಾನಗರದಲ್ಲಿ ನಡೆದ ಪ್ರತಿಭಟನೆಯ ನಡುವೆ ಅಹಮದಾಬಾದ್ ಕ್ರೈಂ ಬ್ರಾಂಚ್ ವಶಕ್ಕೆ ಪಡೆದಿತ್ತು. ಅದೇ ಸಮಯದಲ್ಲಿ, ಅಹಮದಾಬಾದ್‌ನ ರಾಖಿಯಾಲ್‌ನಲ್ಲಿರುವ ಕಮಲೇಶ್‌ ಅವರ ಮನೆಯನ್ನು ಪೊಲೀಸರ ತಂಡ ಶೋಧಿಸಿದೆ.

“ಮಧ್ಯಾಹ್ನ 3.30ರ ಸುಮಾರಿಗೆ ನನ್ನ ಮನೆಗೆ ಪೊಲೀಸರು ಬಂದಿದ್ದಾರೆ ಎಂದು ನನ್ನ ಹೆಂಡತಿ ಕರೆ ಮಾಡಿ ನನಗೆ ತಿಳಿಸಿದಳು. ಆದರೆ ನಾನು ಮನೆಗೆ ತಲುಪುವ ಮೊದಲೇ ನನ್ನನ್ನು ಪೋಲೀಸರು ಅಸರ್ವಾ ಬಳಿ ಕರೆದೊಯ್ದರು. ಅದೇ ರಾತ್ರಿ ನನ್ನನ್ನು ಬಿಡುಗಡೆ ಮಾಡಲಾಯಿತು. ನನ್ನ ಸುರಕ್ಷತೆಯನ್ನು ನೆನೆಸಿಕೊಂಡು ನನ್ನ ಮನೆಯವರು ಹೆದರುತ್ತಿದ್ದರು. ಪೊಲೀಸರು ನನ್ನ ಮನೆಯ ಪ್ರತಿಯೊಂದು ಮೂಲೆಯನ್ನು ಪರಿಶೀಲಿಸಿದ್ದಾರೆ ಎಂದು ನನಗೆ ತಿಳಿಸಲಾಯಿತು. ಗೋಡೆಗಳು ಟೊಳ್ಳಾಗಿವೆಯೇ ಎಂದು ಪರೀಕ್ಷಿಸಲು ಅವರು ಗೋಡೆಗಳನ್ನು ಬಡಿದರು, ಹಾಸಿಗೆಯನ್ನು ಹೊರತೆಗೆದರು. ಸ್ನಾನಗೃಹ, ಪಾತ್ರೆಗಳು ಮತ್ತು ನಮ್ಮ ಮಕ್ಕಳ ಶಾಲಾ ಬ್ಯಾಗ್‌ಗಳನ್ನು ಸಹ ಬಿಡದೆ ಪರಿಶೀಲಿಸಿದರು” ಎಂದು ಕಮಲೇಶ್ ಕಟಾರಿಯಾ ‘ನ್ಯೂಸ್‌ಕ್ಲಿಕ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

ಜಗದೀಶ್ ಚಾವ್ಡಾ ಮಾತನಾಡಿದ್ದು, “ನಾನು ಕೆಲವು ಕೆಲಸದ ನಿಮಿತ್ತ ನೆರೆಹೊರೆಯಲ್ಲಿದ್ದೆ. ನಮ್ಮ ಮನೆಗೆ ಸುಮಾರು 18 ರಿಂದ 20 ಪೊಲೀಸ್ ಸಿಬ್ಬಂದಿ ಬಂದಿದ್ದಾರೆ ಎಂದು ನನ್ನ ಸಹೋದರ ನಮಗೆ ತಿಳಿಸಲು ಕರೆ ಮಾಡಿದ. ನನ್ನ ಮನೆಗೆ ಬರುವ ಪೊಲೀಸರ ದೊಡ್ಡ ಸಂಖ್ಯೆಯನ್ನು ನೋಡಿ ನನ್ನ ಕುಟುಂಬ ಮತ್ತು ನೆರೆಹೊರೆಯವರು ಭಯಗೊಂಡರು. ಪೊಲೀಸರು ನನ್ನ ಮನೆಯಲ್ಲಿ ಹುಡುಕಾಟ ನಡೆಸಿದರು. ಸುಮಾರು 40 ನಿಮಿಷಗಳ ಕಾಲ ನಾವು ಕೇಳಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಜಿಗ್ನೇಶ್ ಮೇವಾನಿ, ಕಮಲೇಶ್ ಕಟಾರಿಯಾ ಮತ್ತು ನನ್ನ ಹೆಸರನ್ನು ಹೊಂದಿರುವ ಸರ್ಚ್‌ ಆರ್ಡರ್‌‌ ಮಾತ್ರ ನನಗೆ ತೋರಿಸಲಾಯಿತು. ಅವರು ನನ್ನ ಚಂದ್‌ಖೇಡಾದ ಮನೆಯ ಪ್ರತಿಯೊಂದು ಮೂಲೆಯನ್ನು ಹುಡುಕಿದರು. ಕಂಪ್ಯೂಟರ್ ವಶಪಡಿಸಿಕೊಂಡರು” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...