Homeಮುಖಪುಟ5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

- Advertisement -
- Advertisement -

ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರನ್ನು ಮಂಗಳವಾರ ಅಸ್ಸಾಂ ನ್ಯಾಯಾಲಯವು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಧಾನಿ ಮೋದಿಯವರನ್ನು ಟೀಕಿಸಿದ ಟ್ವೀಟ್‌ಗೆ ಸಂಬಂಧಿಸಿದಂತೆ ಬಂಧನಕ್ಕೊಳಕ್ಕಾಗಿದ್ದ ಮೇವಾನಿಯವರು ಸೋಮವಾರ ಜಾಮೀನು ಪಡೆದ ಬೆನ್ನಲ್ಲೇ ಮತ್ತೆ ಬಂಧನಕ್ಕೊಳಗಾಗಿದ್ದರು. ತಕ್ಷಣಕ್ಕೆ ಕಾರಣ ತಿಳಿದುಬಂದಿರಲಿಲ್ಲ.

ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮತ್ತೆ ಮೇವಾನಿಯವರನ್ನು ಬಂಧಿಸಲಾಗಿದೆ. ಮೇವಾನಿ ವಿರುದ್ಧ ಈ (ಎರಡನೇ) ಪ್ರಕರಣವನ್ನು ಏಪ್ರಿಲ್ 21ರಂದು ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 353 (ಸಾರ್ವಜನಿಕ ಸೇವೆಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲು ಹಲ್ಲೆ), 354 (ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಫೋರ್ಸ್ ಬಳಸುವುದು) ‌ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಮಹಿಳಾ ಅಧಿಕಾರಿಯೊಬ್ಬರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ದೂರುದಾರ ಅಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳು ಏಪ್ರಿಲ್ 21ರಂದು ಮಧ್ಯಾಹ್ನ ಮೇವಾನಿ ಅವರನ್ನು ಸರ್ಕಾರಿ ವಾಹನದಲ್ಲಿ ಕರೆತರುತ್ತಿದ್ದರು. ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಬರಲಾಗುತ್ತಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. “ಅನುಚಿತವಾಗಿ ವರ್ತಿಸಿರುವ ಮೇವಾನಿ ನಮ್ಮ ಮೇಲೆ ಕೋಪಗೊಂಡರು. ಹೆಚ್ಚು ಕೆಟ್ಟ ಪದಗಳನ್ನು ಬಳಸಿದರು” ಎಂದು ಅಧಿಕಾರಿ ಆರೋಪಿಸಿದ್ದಾರೆ.

ಮೇವಾನಿ ನನ್ನ ಕಡೆಗೆ ಬೆರಳು ತೋರಿಸಿ ಬಲವಂತವಾಗಿ ಸೀಟ್‌ ಮೇಲೆ ತಳ್ಳಿದರು. “ನನ್ನ ಕಾನೂನು ಕರ್ತವ್ಯವನ್ನು ನಿರ್ವಹಿಸುವ ಸಮಯದಲ್ಲಿ ಆಕ್ರಮಣ ಮಾಡಲಾಗಿದೆ. ತಳ್ಳುವಾಗ ಅನುಚಿತವಾಗಿ ನನ್ನನ್ನು ಸ್ಪರ್ಶಿಸಿದ್ದಾರೆ” ಎಂದು ದೂರಿದ್ದಾರೆ.

ಇದರ ನಡುವೆ ಮೇವಾನಿ ಅವರ ವಕೀಲ ಅಂಗ್‌ಶುಮನ್ ಬೋರಾ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯೆ ನೀಡಿದ್ದು, “ಇದು ಸಂಪೂರ್ಣವಾಗಿ ಸುಳ್ಳು ಮತ್ತು ಕಟ್ಟುಕಥೆಯ ಪ್ರಕರಣ” ಎಂದು ಸ್ಪಷ್ಟಪಡಿಸಿದ್ದಾರೆ.

ಮೇವಾನಿ ಅವರನ್ನು ಮಂಗಳವಾರ ಬಾರ್‌ಪೇಟಾ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ ಬೋರಾ, ಈಗ ಅಲ್ಲಿಗೆ ಜಾಮೀನಿಗೆ ತೆರಳುವುದಾಗಿ ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಬಂಧಿಸಿದ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಜಿಗ್ನೇಶ್ ಮೇವಾನಿ ಅವರನ್ನು ಬಂಧಿಸಿಲಾಗಿತ್ತು. ಅಸ್ಸಾಂ ನ್ಯಾಯಾಲಯವು ಜಾಮೀನು ನೀಡಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಜಿಗ್ನೇಶ್ ಅವರನ್ನು ಮತ್ತೊಂದು ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಮೊದಲು ಏಪ್ರಿಲ್ 20 ರಂದು ಗುಜರಾತ್‌ನಲ್ಲಿ ಬಂಧಿಸಿದ್ದರು.

ಜಿಗ್ನೇಶ್ ಒಡನಾಡಿಗಳ ಮೇಲೂ ಪೊಲೀಸ್ ಕಾರ್ಯಾಚರಣೆ

ದಲಿತ ಹೋರಾಟಗಾರರು ಹಾಗೂ ಜಿಗ್ನೇಶ್‌ ಒಡನಾಡಿಗಳ ಮೇಲೂ ಪೊಲೀಸ್ ಕಾರ್ಯಾಚರಣೆ ನಡೆಯುತ್ತಿದೆ.

ಮೆವಾನಿಯ ಆಪ್ತ ಸಹಾಯಕ ಮತ್ತು ಆರ್‌ಡಿಎಎಂ ಸದಸ್ಯ ಕಮಲೇಶ್ ಕಟಾರಿಯಾ ಅವರನ್ನು ಯಶೋದಾನಗರದಲ್ಲಿ ನಡೆದ ಪ್ರತಿಭಟನೆಯ ನಡುವೆ ಅಹಮದಾಬಾದ್ ಕ್ರೈಂ ಬ್ರಾಂಚ್ ವಶಕ್ಕೆ ಪಡೆದಿತ್ತು. ಅದೇ ಸಮಯದಲ್ಲಿ, ಅಹಮದಾಬಾದ್‌ನ ರಾಖಿಯಾಲ್‌ನಲ್ಲಿರುವ ಕಮಲೇಶ್‌ ಅವರ ಮನೆಯನ್ನು ಪೊಲೀಸರ ತಂಡ ಶೋಧಿಸಿದೆ.

“ಮಧ್ಯಾಹ್ನ 3.30ರ ಸುಮಾರಿಗೆ ನನ್ನ ಮನೆಗೆ ಪೊಲೀಸರು ಬಂದಿದ್ದಾರೆ ಎಂದು ನನ್ನ ಹೆಂಡತಿ ಕರೆ ಮಾಡಿ ನನಗೆ ತಿಳಿಸಿದಳು. ಆದರೆ ನಾನು ಮನೆಗೆ ತಲುಪುವ ಮೊದಲೇ ನನ್ನನ್ನು ಪೋಲೀಸರು ಅಸರ್ವಾ ಬಳಿ ಕರೆದೊಯ್ದರು. ಅದೇ ರಾತ್ರಿ ನನ್ನನ್ನು ಬಿಡುಗಡೆ ಮಾಡಲಾಯಿತು. ನನ್ನ ಸುರಕ್ಷತೆಯನ್ನು ನೆನೆಸಿಕೊಂಡು ನನ್ನ ಮನೆಯವರು ಹೆದರುತ್ತಿದ್ದರು. ಪೊಲೀಸರು ನನ್ನ ಮನೆಯ ಪ್ರತಿಯೊಂದು ಮೂಲೆಯನ್ನು ಪರಿಶೀಲಿಸಿದ್ದಾರೆ ಎಂದು ನನಗೆ ತಿಳಿಸಲಾಯಿತು. ಗೋಡೆಗಳು ಟೊಳ್ಳಾಗಿವೆಯೇ ಎಂದು ಪರೀಕ್ಷಿಸಲು ಅವರು ಗೋಡೆಗಳನ್ನು ಬಡಿದರು, ಹಾಸಿಗೆಯನ್ನು ಹೊರತೆಗೆದರು. ಸ್ನಾನಗೃಹ, ಪಾತ್ರೆಗಳು ಮತ್ತು ನಮ್ಮ ಮಕ್ಕಳ ಶಾಲಾ ಬ್ಯಾಗ್‌ಗಳನ್ನು ಸಹ ಬಿಡದೆ ಪರಿಶೀಲಿಸಿದರು” ಎಂದು ಕಮಲೇಶ್ ಕಟಾರಿಯಾ ‘ನ್ಯೂಸ್‌ಕ್ಲಿಕ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

ಜಗದೀಶ್ ಚಾವ್ಡಾ ಮಾತನಾಡಿದ್ದು, “ನಾನು ಕೆಲವು ಕೆಲಸದ ನಿಮಿತ್ತ ನೆರೆಹೊರೆಯಲ್ಲಿದ್ದೆ. ನಮ್ಮ ಮನೆಗೆ ಸುಮಾರು 18 ರಿಂದ 20 ಪೊಲೀಸ್ ಸಿಬ್ಬಂದಿ ಬಂದಿದ್ದಾರೆ ಎಂದು ನನ್ನ ಸಹೋದರ ನಮಗೆ ತಿಳಿಸಲು ಕರೆ ಮಾಡಿದ. ನನ್ನ ಮನೆಗೆ ಬರುವ ಪೊಲೀಸರ ದೊಡ್ಡ ಸಂಖ್ಯೆಯನ್ನು ನೋಡಿ ನನ್ನ ಕುಟುಂಬ ಮತ್ತು ನೆರೆಹೊರೆಯವರು ಭಯಗೊಂಡರು. ಪೊಲೀಸರು ನನ್ನ ಮನೆಯಲ್ಲಿ ಹುಡುಕಾಟ ನಡೆಸಿದರು. ಸುಮಾರು 40 ನಿಮಿಷಗಳ ಕಾಲ ನಾವು ಕೇಳಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಜಿಗ್ನೇಶ್ ಮೇವಾನಿ, ಕಮಲೇಶ್ ಕಟಾರಿಯಾ ಮತ್ತು ನನ್ನ ಹೆಸರನ್ನು ಹೊಂದಿರುವ ಸರ್ಚ್‌ ಆರ್ಡರ್‌‌ ಮಾತ್ರ ನನಗೆ ತೋರಿಸಲಾಯಿತು. ಅವರು ನನ್ನ ಚಂದ್‌ಖೇಡಾದ ಮನೆಯ ಪ್ರತಿಯೊಂದು ಮೂಲೆಯನ್ನು ಹುಡುಕಿದರು. ಕಂಪ್ಯೂಟರ್ ವಶಪಡಿಸಿಕೊಂಡರು” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...