Homeಮುಖಪುಟ5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

- Advertisement -
- Advertisement -

ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರನ್ನು ಮಂಗಳವಾರ ಅಸ್ಸಾಂ ನ್ಯಾಯಾಲಯವು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಧಾನಿ ಮೋದಿಯವರನ್ನು ಟೀಕಿಸಿದ ಟ್ವೀಟ್‌ಗೆ ಸಂಬಂಧಿಸಿದಂತೆ ಬಂಧನಕ್ಕೊಳಕ್ಕಾಗಿದ್ದ ಮೇವಾನಿಯವರು ಸೋಮವಾರ ಜಾಮೀನು ಪಡೆದ ಬೆನ್ನಲ್ಲೇ ಮತ್ತೆ ಬಂಧನಕ್ಕೊಳಗಾಗಿದ್ದರು. ತಕ್ಷಣಕ್ಕೆ ಕಾರಣ ತಿಳಿದುಬಂದಿರಲಿಲ್ಲ.

ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮತ್ತೆ ಮೇವಾನಿಯವರನ್ನು ಬಂಧಿಸಲಾಗಿದೆ. ಮೇವಾನಿ ವಿರುದ್ಧ ಈ (ಎರಡನೇ) ಪ್ರಕರಣವನ್ನು ಏಪ್ರಿಲ್ 21ರಂದು ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 353 (ಸಾರ್ವಜನಿಕ ಸೇವೆಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲು ಹಲ್ಲೆ), 354 (ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಫೋರ್ಸ್ ಬಳಸುವುದು) ‌ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಮಹಿಳಾ ಅಧಿಕಾರಿಯೊಬ್ಬರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ದೂರುದಾರ ಅಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳು ಏಪ್ರಿಲ್ 21ರಂದು ಮಧ್ಯಾಹ್ನ ಮೇವಾನಿ ಅವರನ್ನು ಸರ್ಕಾರಿ ವಾಹನದಲ್ಲಿ ಕರೆತರುತ್ತಿದ್ದರು. ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಬರಲಾಗುತ್ತಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. “ಅನುಚಿತವಾಗಿ ವರ್ತಿಸಿರುವ ಮೇವಾನಿ ನಮ್ಮ ಮೇಲೆ ಕೋಪಗೊಂಡರು. ಹೆಚ್ಚು ಕೆಟ್ಟ ಪದಗಳನ್ನು ಬಳಸಿದರು” ಎಂದು ಅಧಿಕಾರಿ ಆರೋಪಿಸಿದ್ದಾರೆ.

ಮೇವಾನಿ ನನ್ನ ಕಡೆಗೆ ಬೆರಳು ತೋರಿಸಿ ಬಲವಂತವಾಗಿ ಸೀಟ್‌ ಮೇಲೆ ತಳ್ಳಿದರು. “ನನ್ನ ಕಾನೂನು ಕರ್ತವ್ಯವನ್ನು ನಿರ್ವಹಿಸುವ ಸಮಯದಲ್ಲಿ ಆಕ್ರಮಣ ಮಾಡಲಾಗಿದೆ. ತಳ್ಳುವಾಗ ಅನುಚಿತವಾಗಿ ನನ್ನನ್ನು ಸ್ಪರ್ಶಿಸಿದ್ದಾರೆ” ಎಂದು ದೂರಿದ್ದಾರೆ.

ಇದರ ನಡುವೆ ಮೇವಾನಿ ಅವರ ವಕೀಲ ಅಂಗ್‌ಶುಮನ್ ಬೋರಾ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯೆ ನೀಡಿದ್ದು, “ಇದು ಸಂಪೂರ್ಣವಾಗಿ ಸುಳ್ಳು ಮತ್ತು ಕಟ್ಟುಕಥೆಯ ಪ್ರಕರಣ” ಎಂದು ಸ್ಪಷ್ಟಪಡಿಸಿದ್ದಾರೆ.

ಮೇವಾನಿ ಅವರನ್ನು ಮಂಗಳವಾರ ಬಾರ್‌ಪೇಟಾ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ ಬೋರಾ, ಈಗ ಅಲ್ಲಿಗೆ ಜಾಮೀನಿಗೆ ತೆರಳುವುದಾಗಿ ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಬಂಧಿಸಿದ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಜಿಗ್ನೇಶ್ ಮೇವಾನಿ ಅವರನ್ನು ಬಂಧಿಸಿಲಾಗಿತ್ತು. ಅಸ್ಸಾಂ ನ್ಯಾಯಾಲಯವು ಜಾಮೀನು ನೀಡಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಜಿಗ್ನೇಶ್ ಅವರನ್ನು ಮತ್ತೊಂದು ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಮೊದಲು ಏಪ್ರಿಲ್ 20 ರಂದು ಗುಜರಾತ್‌ನಲ್ಲಿ ಬಂಧಿಸಿದ್ದರು.

ಜಿಗ್ನೇಶ್ ಒಡನಾಡಿಗಳ ಮೇಲೂ ಪೊಲೀಸ್ ಕಾರ್ಯಾಚರಣೆ

ದಲಿತ ಹೋರಾಟಗಾರರು ಹಾಗೂ ಜಿಗ್ನೇಶ್‌ ಒಡನಾಡಿಗಳ ಮೇಲೂ ಪೊಲೀಸ್ ಕಾರ್ಯಾಚರಣೆ ನಡೆಯುತ್ತಿದೆ.

ಮೆವಾನಿಯ ಆಪ್ತ ಸಹಾಯಕ ಮತ್ತು ಆರ್‌ಡಿಎಎಂ ಸದಸ್ಯ ಕಮಲೇಶ್ ಕಟಾರಿಯಾ ಅವರನ್ನು ಯಶೋದಾನಗರದಲ್ಲಿ ನಡೆದ ಪ್ರತಿಭಟನೆಯ ನಡುವೆ ಅಹಮದಾಬಾದ್ ಕ್ರೈಂ ಬ್ರಾಂಚ್ ವಶಕ್ಕೆ ಪಡೆದಿತ್ತು. ಅದೇ ಸಮಯದಲ್ಲಿ, ಅಹಮದಾಬಾದ್‌ನ ರಾಖಿಯಾಲ್‌ನಲ್ಲಿರುವ ಕಮಲೇಶ್‌ ಅವರ ಮನೆಯನ್ನು ಪೊಲೀಸರ ತಂಡ ಶೋಧಿಸಿದೆ.

“ಮಧ್ಯಾಹ್ನ 3.30ರ ಸುಮಾರಿಗೆ ನನ್ನ ಮನೆಗೆ ಪೊಲೀಸರು ಬಂದಿದ್ದಾರೆ ಎಂದು ನನ್ನ ಹೆಂಡತಿ ಕರೆ ಮಾಡಿ ನನಗೆ ತಿಳಿಸಿದಳು. ಆದರೆ ನಾನು ಮನೆಗೆ ತಲುಪುವ ಮೊದಲೇ ನನ್ನನ್ನು ಪೋಲೀಸರು ಅಸರ್ವಾ ಬಳಿ ಕರೆದೊಯ್ದರು. ಅದೇ ರಾತ್ರಿ ನನ್ನನ್ನು ಬಿಡುಗಡೆ ಮಾಡಲಾಯಿತು. ನನ್ನ ಸುರಕ್ಷತೆಯನ್ನು ನೆನೆಸಿಕೊಂಡು ನನ್ನ ಮನೆಯವರು ಹೆದರುತ್ತಿದ್ದರು. ಪೊಲೀಸರು ನನ್ನ ಮನೆಯ ಪ್ರತಿಯೊಂದು ಮೂಲೆಯನ್ನು ಪರಿಶೀಲಿಸಿದ್ದಾರೆ ಎಂದು ನನಗೆ ತಿಳಿಸಲಾಯಿತು. ಗೋಡೆಗಳು ಟೊಳ್ಳಾಗಿವೆಯೇ ಎಂದು ಪರೀಕ್ಷಿಸಲು ಅವರು ಗೋಡೆಗಳನ್ನು ಬಡಿದರು, ಹಾಸಿಗೆಯನ್ನು ಹೊರತೆಗೆದರು. ಸ್ನಾನಗೃಹ, ಪಾತ್ರೆಗಳು ಮತ್ತು ನಮ್ಮ ಮಕ್ಕಳ ಶಾಲಾ ಬ್ಯಾಗ್‌ಗಳನ್ನು ಸಹ ಬಿಡದೆ ಪರಿಶೀಲಿಸಿದರು” ಎಂದು ಕಮಲೇಶ್ ಕಟಾರಿಯಾ ‘ನ್ಯೂಸ್‌ಕ್ಲಿಕ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

ಜಗದೀಶ್ ಚಾವ್ಡಾ ಮಾತನಾಡಿದ್ದು, “ನಾನು ಕೆಲವು ಕೆಲಸದ ನಿಮಿತ್ತ ನೆರೆಹೊರೆಯಲ್ಲಿದ್ದೆ. ನಮ್ಮ ಮನೆಗೆ ಸುಮಾರು 18 ರಿಂದ 20 ಪೊಲೀಸ್ ಸಿಬ್ಬಂದಿ ಬಂದಿದ್ದಾರೆ ಎಂದು ನನ್ನ ಸಹೋದರ ನಮಗೆ ತಿಳಿಸಲು ಕರೆ ಮಾಡಿದ. ನನ್ನ ಮನೆಗೆ ಬರುವ ಪೊಲೀಸರ ದೊಡ್ಡ ಸಂಖ್ಯೆಯನ್ನು ನೋಡಿ ನನ್ನ ಕುಟುಂಬ ಮತ್ತು ನೆರೆಹೊರೆಯವರು ಭಯಗೊಂಡರು. ಪೊಲೀಸರು ನನ್ನ ಮನೆಯಲ್ಲಿ ಹುಡುಕಾಟ ನಡೆಸಿದರು. ಸುಮಾರು 40 ನಿಮಿಷಗಳ ಕಾಲ ನಾವು ಕೇಳಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಜಿಗ್ನೇಶ್ ಮೇವಾನಿ, ಕಮಲೇಶ್ ಕಟಾರಿಯಾ ಮತ್ತು ನನ್ನ ಹೆಸರನ್ನು ಹೊಂದಿರುವ ಸರ್ಚ್‌ ಆರ್ಡರ್‌‌ ಮಾತ್ರ ನನಗೆ ತೋರಿಸಲಾಯಿತು. ಅವರು ನನ್ನ ಚಂದ್‌ಖೇಡಾದ ಮನೆಯ ಪ್ರತಿಯೊಂದು ಮೂಲೆಯನ್ನು ಹುಡುಕಿದರು. ಕಂಪ್ಯೂಟರ್ ವಶಪಡಿಸಿಕೊಂಡರು” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...