Homeಮುಖಪುಟ5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

- Advertisement -
- Advertisement -

ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರನ್ನು ಮಂಗಳವಾರ ಅಸ್ಸಾಂ ನ್ಯಾಯಾಲಯವು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಧಾನಿ ಮೋದಿಯವರನ್ನು ಟೀಕಿಸಿದ ಟ್ವೀಟ್‌ಗೆ ಸಂಬಂಧಿಸಿದಂತೆ ಬಂಧನಕ್ಕೊಳಕ್ಕಾಗಿದ್ದ ಮೇವಾನಿಯವರು ಸೋಮವಾರ ಜಾಮೀನು ಪಡೆದ ಬೆನ್ನಲ್ಲೇ ಮತ್ತೆ ಬಂಧನಕ್ಕೊಳಗಾಗಿದ್ದರು. ತಕ್ಷಣಕ್ಕೆ ಕಾರಣ ತಿಳಿದುಬಂದಿರಲಿಲ್ಲ.

ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮತ್ತೆ ಮೇವಾನಿಯವರನ್ನು ಬಂಧಿಸಲಾಗಿದೆ. ಮೇವಾನಿ ವಿರುದ್ಧ ಈ (ಎರಡನೇ) ಪ್ರಕರಣವನ್ನು ಏಪ್ರಿಲ್ 21ರಂದು ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 353 (ಸಾರ್ವಜನಿಕ ಸೇವೆಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲು ಹಲ್ಲೆ), 354 (ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಫೋರ್ಸ್ ಬಳಸುವುದು) ‌ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಮಹಿಳಾ ಅಧಿಕಾರಿಯೊಬ್ಬರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ದೂರುದಾರ ಅಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳು ಏಪ್ರಿಲ್ 21ರಂದು ಮಧ್ಯಾಹ್ನ ಮೇವಾನಿ ಅವರನ್ನು ಸರ್ಕಾರಿ ವಾಹನದಲ್ಲಿ ಕರೆತರುತ್ತಿದ್ದರು. ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಬರಲಾಗುತ್ತಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. “ಅನುಚಿತವಾಗಿ ವರ್ತಿಸಿರುವ ಮೇವಾನಿ ನಮ್ಮ ಮೇಲೆ ಕೋಪಗೊಂಡರು. ಹೆಚ್ಚು ಕೆಟ್ಟ ಪದಗಳನ್ನು ಬಳಸಿದರು” ಎಂದು ಅಧಿಕಾರಿ ಆರೋಪಿಸಿದ್ದಾರೆ.

ಮೇವಾನಿ ನನ್ನ ಕಡೆಗೆ ಬೆರಳು ತೋರಿಸಿ ಬಲವಂತವಾಗಿ ಸೀಟ್‌ ಮೇಲೆ ತಳ್ಳಿದರು. “ನನ್ನ ಕಾನೂನು ಕರ್ತವ್ಯವನ್ನು ನಿರ್ವಹಿಸುವ ಸಮಯದಲ್ಲಿ ಆಕ್ರಮಣ ಮಾಡಲಾಗಿದೆ. ತಳ್ಳುವಾಗ ಅನುಚಿತವಾಗಿ ನನ್ನನ್ನು ಸ್ಪರ್ಶಿಸಿದ್ದಾರೆ” ಎಂದು ದೂರಿದ್ದಾರೆ.

ಇದರ ನಡುವೆ ಮೇವಾನಿ ಅವರ ವಕೀಲ ಅಂಗ್‌ಶುಮನ್ ಬೋರಾ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯೆ ನೀಡಿದ್ದು, “ಇದು ಸಂಪೂರ್ಣವಾಗಿ ಸುಳ್ಳು ಮತ್ತು ಕಟ್ಟುಕಥೆಯ ಪ್ರಕರಣ” ಎಂದು ಸ್ಪಷ್ಟಪಡಿಸಿದ್ದಾರೆ.

ಮೇವಾನಿ ಅವರನ್ನು ಮಂಗಳವಾರ ಬಾರ್‌ಪೇಟಾ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ ಬೋರಾ, ಈಗ ಅಲ್ಲಿಗೆ ಜಾಮೀನಿಗೆ ತೆರಳುವುದಾಗಿ ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಬಂಧಿಸಿದ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಜಿಗ್ನೇಶ್ ಮೇವಾನಿ ಅವರನ್ನು ಬಂಧಿಸಿಲಾಗಿತ್ತು. ಅಸ್ಸಾಂ ನ್ಯಾಯಾಲಯವು ಜಾಮೀನು ನೀಡಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಜಿಗ್ನೇಶ್ ಅವರನ್ನು ಮತ್ತೊಂದು ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಮೊದಲು ಏಪ್ರಿಲ್ 20 ರಂದು ಗುಜರಾತ್‌ನಲ್ಲಿ ಬಂಧಿಸಿದ್ದರು.

ಜಿಗ್ನೇಶ್ ಒಡನಾಡಿಗಳ ಮೇಲೂ ಪೊಲೀಸ್ ಕಾರ್ಯಾಚರಣೆ

ದಲಿತ ಹೋರಾಟಗಾರರು ಹಾಗೂ ಜಿಗ್ನೇಶ್‌ ಒಡನಾಡಿಗಳ ಮೇಲೂ ಪೊಲೀಸ್ ಕಾರ್ಯಾಚರಣೆ ನಡೆಯುತ್ತಿದೆ.

ಮೆವಾನಿಯ ಆಪ್ತ ಸಹಾಯಕ ಮತ್ತು ಆರ್‌ಡಿಎಎಂ ಸದಸ್ಯ ಕಮಲೇಶ್ ಕಟಾರಿಯಾ ಅವರನ್ನು ಯಶೋದಾನಗರದಲ್ಲಿ ನಡೆದ ಪ್ರತಿಭಟನೆಯ ನಡುವೆ ಅಹಮದಾಬಾದ್ ಕ್ರೈಂ ಬ್ರಾಂಚ್ ವಶಕ್ಕೆ ಪಡೆದಿತ್ತು. ಅದೇ ಸಮಯದಲ್ಲಿ, ಅಹಮದಾಬಾದ್‌ನ ರಾಖಿಯಾಲ್‌ನಲ್ಲಿರುವ ಕಮಲೇಶ್‌ ಅವರ ಮನೆಯನ್ನು ಪೊಲೀಸರ ತಂಡ ಶೋಧಿಸಿದೆ.

“ಮಧ್ಯಾಹ್ನ 3.30ರ ಸುಮಾರಿಗೆ ನನ್ನ ಮನೆಗೆ ಪೊಲೀಸರು ಬಂದಿದ್ದಾರೆ ಎಂದು ನನ್ನ ಹೆಂಡತಿ ಕರೆ ಮಾಡಿ ನನಗೆ ತಿಳಿಸಿದಳು. ಆದರೆ ನಾನು ಮನೆಗೆ ತಲುಪುವ ಮೊದಲೇ ನನ್ನನ್ನು ಪೋಲೀಸರು ಅಸರ್ವಾ ಬಳಿ ಕರೆದೊಯ್ದರು. ಅದೇ ರಾತ್ರಿ ನನ್ನನ್ನು ಬಿಡುಗಡೆ ಮಾಡಲಾಯಿತು. ನನ್ನ ಸುರಕ್ಷತೆಯನ್ನು ನೆನೆಸಿಕೊಂಡು ನನ್ನ ಮನೆಯವರು ಹೆದರುತ್ತಿದ್ದರು. ಪೊಲೀಸರು ನನ್ನ ಮನೆಯ ಪ್ರತಿಯೊಂದು ಮೂಲೆಯನ್ನು ಪರಿಶೀಲಿಸಿದ್ದಾರೆ ಎಂದು ನನಗೆ ತಿಳಿಸಲಾಯಿತು. ಗೋಡೆಗಳು ಟೊಳ್ಳಾಗಿವೆಯೇ ಎಂದು ಪರೀಕ್ಷಿಸಲು ಅವರು ಗೋಡೆಗಳನ್ನು ಬಡಿದರು, ಹಾಸಿಗೆಯನ್ನು ಹೊರತೆಗೆದರು. ಸ್ನಾನಗೃಹ, ಪಾತ್ರೆಗಳು ಮತ್ತು ನಮ್ಮ ಮಕ್ಕಳ ಶಾಲಾ ಬ್ಯಾಗ್‌ಗಳನ್ನು ಸಹ ಬಿಡದೆ ಪರಿಶೀಲಿಸಿದರು” ಎಂದು ಕಮಲೇಶ್ ಕಟಾರಿಯಾ ‘ನ್ಯೂಸ್‌ಕ್ಲಿಕ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

ಜಗದೀಶ್ ಚಾವ್ಡಾ ಮಾತನಾಡಿದ್ದು, “ನಾನು ಕೆಲವು ಕೆಲಸದ ನಿಮಿತ್ತ ನೆರೆಹೊರೆಯಲ್ಲಿದ್ದೆ. ನಮ್ಮ ಮನೆಗೆ ಸುಮಾರು 18 ರಿಂದ 20 ಪೊಲೀಸ್ ಸಿಬ್ಬಂದಿ ಬಂದಿದ್ದಾರೆ ಎಂದು ನನ್ನ ಸಹೋದರ ನಮಗೆ ತಿಳಿಸಲು ಕರೆ ಮಾಡಿದ. ನನ್ನ ಮನೆಗೆ ಬರುವ ಪೊಲೀಸರ ದೊಡ್ಡ ಸಂಖ್ಯೆಯನ್ನು ನೋಡಿ ನನ್ನ ಕುಟುಂಬ ಮತ್ತು ನೆರೆಹೊರೆಯವರು ಭಯಗೊಂಡರು. ಪೊಲೀಸರು ನನ್ನ ಮನೆಯಲ್ಲಿ ಹುಡುಕಾಟ ನಡೆಸಿದರು. ಸುಮಾರು 40 ನಿಮಿಷಗಳ ಕಾಲ ನಾವು ಕೇಳಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಜಿಗ್ನೇಶ್ ಮೇವಾನಿ, ಕಮಲೇಶ್ ಕಟಾರಿಯಾ ಮತ್ತು ನನ್ನ ಹೆಸರನ್ನು ಹೊಂದಿರುವ ಸರ್ಚ್‌ ಆರ್ಡರ್‌‌ ಮಾತ್ರ ನನಗೆ ತೋರಿಸಲಾಯಿತು. ಅವರು ನನ್ನ ಚಂದ್‌ಖೇಡಾದ ಮನೆಯ ಪ್ರತಿಯೊಂದು ಮೂಲೆಯನ್ನು ಹುಡುಕಿದರು. ಕಂಪ್ಯೂಟರ್ ವಶಪಡಿಸಿಕೊಂಡರು” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....