Homeಕರೋನಾ ತಲ್ಲಣ490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

ನಮ್ಮ ದಿನದ ಸಂಬಳದ ಭಾಗವಾಗಿ ಪಿಎಂ ಕೇರ್ ಫಂಡ್‌ಗೆ ಕೊರೊನಾ ಪರಿಹಾರಕ್ಕೆಂದು 100 ಕೋಟಿ ಕಳುಹಿಸಲಾಗಿತ್ತು. ಆದರೆ ಇಂದು ನಮ್ಮ ಕಷ್ಟ ಕೇಳುವವರೇ ಇಲ್ಲ ಎಂದು ಜಿಂದಾಲ್ ಉದ್ಯೋಗಿಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

- Advertisement -
- Advertisement -

ಕೊರೊನಾ ಮತ್ತು ಲಾಕ್ ಡೌನ್ ನೆಪಹೇಳಿ ಜೆ ಡಬ್ಲ್ಯೂ ಎಸ್ (ಜಿಂದಾಲ್) ಕಂಪನಿ ಸುಮಾರು 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ್ದನ್ನು ವಿರೋಧಿಸಿ ಹಲವಾರು ಉದ್ಯೋಗಿಗಳು ಮತ್ತು ವಿವಿಧ ಸಂಘಟನೆಗಳು ಸೋಮವಾರ ಬಳ್ಳಾರಿಯ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಆಗಸ್ಟ್ 31 ರೊಳಗೆ ಸ್ವಯಂ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ, ಮೊದಲ ಹಂತದಲ್ಲಿ ಸುಮಾರು 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ಉದ್ಯೋಗಿಗಳು ದೂರಿದ್ದಾರೆ.

ಇದನ್ನೂ ಓದಿ: ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಕಂಪನಿಯವರ ಬೆದರಿಕೆಗೆ ಮಣಿದು ರಾಜಿನಾಮೆ ನೀಡಿದ ಜಾಹ್ನವಿ ಎಂಬ ಉದ್ಯೋಗಿ ನಾನುಗೌರಿ.ಕಾಂ ಜೊತೆ ಮಾತನಾಡಿ, “ಲಾಕ್ ಡೌನ್ ಮುಕ್ತಾಯವಾಗುವ ಹಿಂದಿನ ರಾತ್ರಿ ಎಚ್ ಆರ್ ನನಗೆ ಫೋನ್ ಮಾಡಿದರು. ಕೊರೊನಾ ಕಾರಣದಿಂದ ಕಂಪನಿಗೆ ನಷ್ಟವಾಗಿದೆ. ಹಾಗಾಗಿ ನೀವು ಸ್ವಯಂ ರಾಜಿನಾಮೆ ಕೊಡಬೇಕು ಇಲ್ಲದಿದ್ದರೆ ನಿಮ್ಮನ್ನ ಟರ್ಮಿನೇಟ್ ಮಾಡಲಾಗುತ್ತದೆ ಎಂದು ನೇರವಾಗಿ ಹೇಳಿದರು” ಎಂದು ಅಳಲು ತೋಡಿಕೊಂಡಿದ್ದಾರೆ.

“ಎಷ್ಟು ಬೇಡಿಕೊಂಡರೂ ನಮ್ಮ ಮನವಿಗೆ ಮಣಿಯದೆ, ಇದು ಉನ್ನತ ಮಟ್ಟದ ನಿರ್ಧಾರ ಎಂದು ಹೇಳಿ ನನ್ನಿಂದ ರಾಜಿನಾಮೆ ಪಡೆದುಕೊಂಡರು. ನಮ್ಮದು ಸಾಮಾನ್ಯ ವರ್ಗದ ಕುಟುಂಬವಾಗಿದ್ದು, ನನಗೆ ಈ ಕೆಲಸ ಬಿಟ್ಟರೆ ಬೇರೆ ಆಧಾರವಿಲ್ಲ” ಎಂದು ಕಳೆದ ಹನ್ನೊಂದು ವರ್ಷಗಳಿಂದ ಜಿಂದಾಲ್ ಕಂಪನಿಯಲ್ಲಿ ಮ್ಯಾನೇಜರ್ ಆಗಿರುವ ಜಾಹ್ನವಿ ಹೇಳಿದರು.

“ಈ ಕುರಿತು ಉನ್ನತ ಮಟ್ಟದ ಅಧಿಕಾರಿಗಳನ್ನೇ ಪ್ರಶ್ನಿಸಿದಾಗ, ‘You are Non Performer’ ಎಂದು ಹೇಳಿದರು. ಹನ್ನೊಂದು ವರ್ಷದಿಂದ ಇದು ಇವರಿಗೆ ತಿಳಿದಿರಲಿಲ್ಲವೇ?. ಆದರೆ ಈಗ ಈ ಕಾರಣ ನೀಡುತ್ತಿದ್ದಾರೆ. ನನ್ನ ರೀತಿ ಕಳೆದ 20-25 ವರ್ಷ ಜಿಂದಾಲ್‌ಗಾಗಿ ಕೆಲಸ ಮಾಡಿರುವವರನ್ನೂ ಉದ್ಯೋಗದಿಂದ ತೆಗೆಯಲಾಗುತ್ತಿದೆ. ಈಗ ನಾವೆಲ್ಲ ಎಲ್ಲಿಗೆ ಹೋಗಬೇಕು” ಎಂದು ಪ್ರಶ್ನಿಸಿದ್ದಾರೆ.

“ನಮ್ಮ ಕಂಪನಿಯಿಂದಲೇ ನಮ್ಮ ದಿನದ ಸಂಬಳದ ಭಾಗವಾಗಿ ಪಿಎಂ ಕೇರ್ ಫಂಡ್‌ಗೆ ಕೊರೊನಾ ಪರಿಹಾರಕ್ಕೆಂದು 100 ಕೋಟಿ ಕಳುಹಿಸಲಾಗಿತ್ತು. ಆದರೆ ಇಂದು ನಮ್ಮ ಕಷ್ಟ ಕೇಳುವವರೇ ಇಲ್ಲ. ಯಾವ ರಾಜಕಾರಣಿಗಳು ಇದಕ್ಕೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಕೊರೊನಾ ಸಂಕಷ್ಟದ ಸಮಯದಲ್ಲಿ ಯಾರನ್ನೂ ಕೆಲಸದಿಂದ ತೆಗೆಯಬೇಡಿ ಎಂದು ಪ್ರಧಾನಿಯವರೇ ಹೇಳಿದ್ದಾರೆ. ಆದರೂ ನಮ್ಮನ್ನು ಕೆಲಸದಿಂದ ತೆಗೆಯಲಾಗುತ್ತಿದೆ. ಇದರ ಬಗ್ಗೆ ನಾವು ರಾಜ್ಯ ಮಟ್ಟದಲ್ಲಿ ಪ್ರತಿಭಟನೆ ಕೈಗೊಳ್ಳಲಿದ್ದೇವೆ. ಹಾಗಾಗಿ ನಮಗೆ ಎಲ್ಲರೂ ಸಹಕರಿಸಿ” ಎಂದು ಕೇಳಿಕೊಂಡರು.

ಈ ಕುರಿತು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕರಿಯಪ್ಪ ಗುಡಿಮನಿ ನಾನುಗೌರಿ.ಕಾಂ ಗೆ ಪ್ರತಿಕ್ರಿಯಿಸಿ, “ಕೊರೊನಾ ಕಾರಣದಿಂದ ಕಂಪನಿಯಲ್ಲಿ ಉತ್ಪಾದನೆ ಕಡಿಮೆಯಾಗಿದೆ ಎಂಬ ನೆಪ ಹೇಳಿ 40 ವರ್ಷಕ್ಕೆ ಮೇಲ್ಪಟ್ಟ 400ಕ್ಕೂ ಹೆಚ್ಚು ಜನರನ್ನು ಕೆಲಸದಿಂದ ತೆಗೆಯಲಾಗಿದೆ. ಕೆಲಸಕ್ಕೆ ಸ್ವಯಂ ಸ್ವಯಂ ರಾಜಿನಾಮೆ ನೀಡುವಂತೆ ಕಂಪನಿಯೊಳಗೆ ಕೆಲವು ಗೂಂಡಾಗಳಿಂದ ಬೆದರಿಕೆ ಹಾಕಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ಅವರಿಗೆ ಸಿಗಬೇಕಾದ ಹಣದ ಸೌಲಭ್ಯಗಳನ್ನು ಒದಗಿಸಿಕೊಡುತ್ತೇವೆ ಎಂಬುದಾಗಿ ಜಿಂದಾಲ್ ಮಾಲಿಕರಾದ ಸಜ್ಜನ್ ಜಿಂದಾಲ್ ಹೇಳಿದ್ದಾರೆ. ಆದರೆ ಅದನ್ನು ಮಾಡುತ್ತಾರೆ ಎಂದು ಕಾರ್ಮಿಕರಿಗೆ ನಂಬಿಕೆಯಿಲ್ಲ. ಅಲ್ಲದೇ ಏಕಾಏಕಿ ಕೆಲಸ ಕಳೆದುಕೊಂಡವರು ಈಗ ಎಲ್ಲಿಗೆ ಹೋಗಬೇಕು” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...